Homeಮುಖಪುಟಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ; ಒಂದೇ ರಾತ್ರಿ 9 ಜನರ ಕಗ್ಗೊಲೆ

ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ; ಒಂದೇ ರಾತ್ರಿ 9 ಜನರ ಕಗ್ಗೊಲೆ

- Advertisement -
- Advertisement -

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಮುಂದುವರಿದಿದ್ದು, ಮಂಗಳವಾರ ರಾತ್ರಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಐಗಿಜಾಂಗ್ ಗ್ರಾಮದಲ್ಲಿ ಗುಂಡಿನ ದಾಳಿ ಮತ್ತು ಬೆಂಕಿ ಹಚ್ಚಿದ ಘಟನೆಯ ಕಾರಣ ಈ ಸಾವುಗಳು ಸಂಭವಿಸಿದೆ.

‘ದಿ ಹಿಂದೂ’ ಪತ್ರಿಕೆಯ ವರದಿ ಪ್ರಕಾರ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

“ಮಂಗಳವಾರ ರಾತ್ರಿ 10:30ರ ಸುಮಾರಿಗೆ ಈ ಘಟನೆ ನಡೆದಿದೆ” ಎಂದು ಇಂಫಾಲ್ ಪೂರ್ವದ ಪೊಲೀಸ್ ಅಧೀಕ್ಷಕರು ತಿಳಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಐಗಿಜಾಂಗ್ ಗ್ರಾಮವು ಕುಕಿ ಸಮುದಾಯದ ಬಾಹುಳ್ಯವನ್ನು ಹೊಂದಿದೆ. ಆದರೆ ವಶಪಡಿಸಿಕೊಂಡ ಒಂಬತ್ತು ಮೃತದೇಹಗಳು ಮೈತೇಯಿ ಸಮುದಾಯದ ಪುರುಷದ್ದಾಗಿವೆ ಎಂದು ವರದಿಯಾಗಿದೆ.

ಸಾವಿಗೀಡಾದವರು ‘ಸ್ಥಳೀಯ ಸ್ವಯಂಸೇವಕರು’ ಎಂದು ಪೊಲೀಸರು ಹೇಳಿದ್ದಾರೆ. ಐಗ್ಜಾಂಗ್ ಪ್ರದೇಶವು ಕಾಂಗ್ಕೋಪಿ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳ ಗಡಿಯಲ್ಲಿದೆ. ಕಳೆದ ಹಲವು ದಿನಗಳಿಂದ ಹಿಂಸಾಚಾರ ಮುಂದುವರಿದಂತೆ, ಈ ಗಡಿ ಪ್ರದೇಶದ ಮೈತೇಯಿ ಪ್ರಾಬಲ್ಯದ ಭಾಗಗಳನ್ನು ‘ರಕ್ಷಿಸಲು’ ಅನೇಕ ಮೈತೇಯಿ ಪುರುಷರು ಹತ್ತಿರದ ಪ್ರದೇಶಗಳಿಂದ ಇಲ್ಲಿಗೆ ಬಂದಿದ್ದಾರೆ ಎಂದು ವರದಿಯಾಗಿದೆ.

“ರಾತ್ರಿ 10:30ರ ಸುಮಾರಿಗೆ ಗ್ರಾಮದಲ್ಲಿ ಗುಂಡಿನ ದಾಳಿ ನಡೆಯಿತು. ಒಂಬತ್ತು ಜನರು ಸಾವನ್ನಪ್ಪಿದರು. 10 ಜನರು ಗಾಯಗೊಂಡರು. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ” ಎಂದು ಇಂಫಾಲ್ ಪೂರ್ವ ಪೊಲೀಸ್ ವರಿಷ್ಠಾಧಿಕಾರಿ ಕೆ. ಶಿವಕಾಂತ ಸಿಂಗ್ ತಿಳಿಸಿದ್ದಾರೆ.

ಮಂಗಳವಾರ ತಡರಾತ್ರಿ ಖಮೆನ್‌ಲೋಕ್‌ನಲ್ಲಿ ಕುಕಿ ಉಗ್ರಗಾಮಿಗಳು ಹಲವಾರು ಬಾಂಬ್‌ಗಳನ್ನು ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆಂದು ‘ದಿ ಹಿಂದೂ’ ವರದಿ ತಿಳಿಸಿದೆ.

ಇದನ್ನೂ ಓದಿರಿ: ಇ.ಡಿ. ವಶಕ್ಕೆ ತಮಿಳುನಾಡು ಸಚಿವ ಬಾಲಾಜಿ; ದುರುದ್ದೇಶಪೂರಿತ ಎಂದ ಡಿಎಂಕೆ, ಕಾಂಗ್ರೆಸ್

“ಕುಕಿ ಬುಡಕಟ್ಟು ಉಗ್ರಗಾಮಿಗಳು ಮತ್ತು ಬುಡಕಟ್ಟು ಅಲ್ಲದ ಮೈತೇಯಿಗಳಿಗೆ ಖಮೆನ್‌ಲೋಕ್ ಮುಖ್ಯ ಯುದ್ಧಭೂಮಿಯಾಗಿ ಮಾರ್ಪಟ್ಟಿದೆ. ಹಲವಾರು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಉಗ್ರಗಾಮಿ ಗುಂಪುಗಳೊಂದಿಗೆ ಕೆಲವು ದಿನಗಳಿಂದ ನಡೆಯುತ್ತಿರುವ ಘರ್ಷಣೆಯಲ್ಲಿ ಅನೇಕರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ” ಎಂದು ವರದಿ ತಿಳಿಸಿದೆ.

ಮಣಿಪುರದಲ್ಲಿ ಮೇ 3 ರಂದು ಪ್ರಾರಂಭವಾದ ಜನಾಂಗೀಯ ಹಿಂಸಾಚಾರದಿಂದಾಗಿ 115 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 40,000 ಜನರು ತಮ್ಮ ನಿವಾಸಗಳನ್ನು ತೊರೆದು ಸ್ಥಳಾಂತರಗೊಂಡಿದ್ದಾರೆ. ಬಹುಸಂಖ್ಯಾತ ಮೈತೇಯಿ ಸಮುದಾಯವು ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕೆ ಬೇಡಿಕೆ ಇಟ್ಟ ನಂತರ ರಾಜ್ಯದಲ್ಲಿ ಉದ್ವಿಗ್ನತೆ ಸೃಷ್ಟಿಯಾಯಿತು. ಗುಡ್ಡಗಾಡು ಬುಡಕಟ್ಟು ಸಮುದಾಯಗಳು, ಮುಖ್ಯವಾಗಿ ಕುಕಿಗಳು ಈ ಬೇಡಿಕೆಯನ್ನು ವಿರೋಧಿಸುತ್ತಾ ಬಂದಿದ್ದಾರೆ.

ಸೋಮವಾರದಂದು 22 ವರ್ಷದ ಮುಅನ್ಸಾಂಗ್ ನೌಲಕ್ ಎಂಬವರನ್ನು ಟೋರ್ಬಂಗ್‌ನ ಲೋಕಲೈಫೈ ಗ್ರಾಮದಲ್ಲಿ ಗುಂಪೊಂದು ಗುಂಡಿಕ್ಕಿ ಕೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...