Homeಕ್ರೀಡೆಕ್ರಿಕೆಟ್ಕೊನೆಯ ಒಂದು ಎಸೆತದಲ್ಲಿ 18ರನ್ ಬಿಟ್ಟುಕೊಟ್ಟ ಬೌಲರ್!: ಇತಿಹಾಸ ನಿರ್ಮಿಸಿದ ತಮಿಳುನಾಡು ಪ್ರೀಮಿಯರ್ ಲೀಗ್

ಕೊನೆಯ ಒಂದು ಎಸೆತದಲ್ಲಿ 18ರನ್ ಬಿಟ್ಟುಕೊಟ್ಟ ಬೌಲರ್!: ಇತಿಹಾಸ ನಿರ್ಮಿಸಿದ ತಮಿಳುನಾಡು ಪ್ರೀಮಿಯರ್ ಲೀಗ್

- Advertisement -
- Advertisement -

ತಮಿಳುನಾಡು ಪ್ರೀಮಿಯರ್ ಲೀಗ್ (ಟಿಎನ್‌ಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕೊನೆಯ ಎಸೆತದಲ್ಲಿ 18 ರನ್ ಬಿಟ್ಟುಕೊಟ್ಟಿರುವ ಬೌಲರ್ ಅಪಖ್ಯಾತಿಗೆ ಒಳಗಾಗಿದ್ದಾರೆ. ತಮಿಳುನಾಡು ಪ್ರೀಮಿಯರ್ ಲೀಗ್‌ ನ ಚೆಪಾಕ್ ಸೂಪರ್ ಗಿಲ್ಲಿಸ್ ಮತ್ತು ಸೇಲಂ ಸ್ಪಾರ್ಟನ್ಸ್  ತಂಡಗಳ ನಡುವಿನ ಪಂದ್ಯದಲ್ಲಿ ಈ ಇತಿಹಾಸ ನಿರ್ಮಿಸಿದೆ.

ಸ್ಪಾರ್ಟನ್ಸ್ ತಂಡದ ನಾಯಕ ಅಭಿಷೇಕ್ ತನ್ವರ್ ಅವರು ಇನ್ನಿಂಗ್ಸ್‌ನ 20ನೇ ಓವರ್‌ನ ಕೊನೆಯ ಎಸೆತದಲ್ಲಿ 18 ರನ್‌ಗಳನ್ನು ಬಿಟ್ಟುಕೊಟ್ಟರು. ಇದೀಗ ಅವರು ಕೊನೆಯ ಎಸೆತದಲ್ಲಿ ಅತಿ ಹೆಚ್ಚು ರನ್ ಬಿಟ್ಟುಕೊಟ್ಟ ಅಪಖ್ಯಾತಿಗೆ ಒಳಗಾಗಿದ್ದಾರೆ.

ತಮಿಳುನಾಡು ಪ್ರೀಮಿಯರ್ ಲೀಗ್ (ಟಿಎನ್‌ಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ತನ್ವರ್ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು. ಆದರೆ ಸೂಪರ್ ಗಿಲ್ಲಿಸ್ ವಿರುದ್ಧದ ಪಂದ್ಯದಲ್ಲಿ ತಮ್ಮ ಲಯವನ್ನು ಕಂಡುಕೊಳ್ಳಲು ಹೆಣಗಾಡಿದರು. ಕೊನೆಯ ಎಸೆತದಲ್ಲಿ 18 ರನ್‌ಗಳ ಪರಿಣಾಮವಾಗಿ, ಎದುರಾಳಿ ತಂಡವು 217/5 ಬೃಹತ್ ಮೊತ್ತವನ್ನು ಕಲೆಹಾಕಿತು, ಕೊನೆಯ ಓವರ್‌ನಲ್ಲಿ 26 ರನ್ ಗಳಿಸಿತು.

ಅದೇ ಓವರ್‌ನ ಮೊದಲ ಐದು ಎಸೆತಗಳಲ್ಲಿ ಎಂಟು ರನ್ ಬಿಟ್ಟುಕೊಟ್ಟಿರುವ ತನ್ವರ್‌ ಅಂತಿಮವಾಗಿ ಒಟ್ಟು 26 ರನ್ ನೀಡಿದರು.

ತನ್ನ‌ ಅಂತಿಮ ಓವರ್‌ನ ಕೊನೆಯ ಎಸೆತ ಹೀಗಿತ್ತು: NB, NB + 6, NB + 2, WD, 6

1 ಬಾಲ್‌ಗೆ 18 ರನ್ ಗಳಿಕೆಗೆ ಕಾರಣವಾದ ಘಟನೆಗಳ ಅನುಕ್ರಮ ಇಲ್ಲಿದೆ:

– ಮೊದಲಿಗೆ ಬೌಲ್ಡ್ ಮಾಡಿದರು, ಆದರೆ ಅದು ನೋ-ಬಾಲ್ ಆಗಿತ್ತು ಒಂದು ರನ್ ಬಂದಿತು.

– ಆನಂತರದ ಎಸೆತವೂ ನೋ-ಬಾಲ್‌ ಆಯಿತು. ಅದನ್ನು ಸಿಕ್ಸರ್‌ಗೆ ಹೊಡೆದು ಒಟ್ಟು 8 ರನ್‌ಗಳಿಗೆ ತೆಗೆದುಕೊಂಡರು.

– ಮುಂದಿನ ಎಸೆತವೂ ನೋ-ಬಾಲ್ ಆಗಿತ್ತು, ಬ್ಯಾಟರ್‌ಗಳು 2 ರನ್ ಗಳಿಸಿದರು, ಒಟ್ಟು 11 ರನ್ ಗಳಿಸಿದರು.

– ಮತ್ತೆ ಬಾಲ್ ಎಸೆದಾಗ ವೈಡ್ ಆಯಿತು, ಒಟ್ಟು 12 ರನ್‌ಗಳು ಬಂದವು.

– ಕೊನೆಯ ಎಸೆತದಲ್ಲಿ ಸಿಕ್ಸರ್‌ಗೆ ಹೊಡೆದು ಒಟ್ಟಾರೆ ಮೊತ್ತ 18 ರನ್‌ಗಳು ಬಂದವು.

”ಕೊನೆಯ ಓವರ್‌ನ ಹೊಣೆಯನ್ನು ನಾನು ತೆಗೆದುಕೊಳ್ಳಬೇಕಾಗಿದೆ. ಅನುಭವಿ ಬೌಲರ್ ಆಗಿದ್ದರೂ ಕೊನೆಯ ಎಸೆತದಲ್ಲಿ ನಾಲ್ಕು ನೋ-ಬಾಲ್‌ಗಳನ್ನು ಎಸೆದದ್ದು ತುಂಬಾ ಬೇಸರವಾಗಿದೆ” ಎಂದು ಸೇಲಂ ಸ್ಪಾರ್ಟನ್ಸ್ ನಾಯಕ ತನ್ವರ್ ಪಂದ್ಯದ ನಂತರ ಹೇಳಿದರು.

ಸ್ಪಾರ್ಟನ್ನರು ಕೇವಲ 165/9 ಸ್ಕೋರ್ ಮಾಡಿ,  52 ರನ್‌ಗಳ ಭಾರಿ ಅಂತರದಿಂದ ಸೋತರು.

ಇದನ್ನೂ ಓದಿ: ಕ್ರಿಕೆಟ್ ಬೆನ್ನು ಹತ್ತಿದ ರೂಢಿಗಳು, ನಂಬಿಕೆ-ಆಚರಣೆ ಮತ್ತು ಮೂಢನಂಬಿಕೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...