Homeಮುಖಪುಟಟ್ವಿಟರ್‌ಗೆ ಮೋದಿ ಸರ್ಕಾರ ಬೆದರಿಕೆ ಹಾಕಿದ ವಿಚಾರ: ದಾಖಲೆ ಸಮೇತ ಮಾಹಿತಿ ಹಂಚಿಕೊಂಡ ಟಿಎಂಸಿ ವಕ್ತಾರ

ಟ್ವಿಟರ್‌ಗೆ ಮೋದಿ ಸರ್ಕಾರ ಬೆದರಿಕೆ ಹಾಕಿದ ವಿಚಾರ: ದಾಖಲೆ ಸಮೇತ ಮಾಹಿತಿ ಹಂಚಿಕೊಂಡ ಟಿಎಂಸಿ ವಕ್ತಾರ

- Advertisement -
- Advertisement -

ಟ್ವಿಟರ್ ಮಾಜಿ ಸಿಇಒ ಜಾಕ್ ಡೋರ್ಸೆ ಅವರು ಭಾರತದಲ್ಲಿ ಟ್ವಿಟರ್ ಕಚೇರಿಯನ್ನು ಸ್ಥಗಿತಗೊಳಿಸುವುದಾಗಿ ಭಾರತ ಸರ್ಕಾರ ಬೆದರಿಕೆ ಹಾಕಿತ್ತು ಎಂದು ಸಂದರ್ಶನವೊಂದರಲ್ಲಿ ಹೇಳಿದ್ದರು. ಈ ಬಗ್ಗೆ ಟಿಎಂಸಿ ನಾಯಕ, ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಅವರು ಸರಣಿ ಟ್ವಿಟ್ ಮಾಡಿದ್ದು, ಟ್ವಿಟರ್ ಬಳಿ ಕೇಂದ್ರ ಸರ್ಕಾರ ಹಲವು ಖಾತೆಗಳ ಮಾಹಿತಿಯನ್ನು ಕೇಳಿತ್ತು ಎಂಬುವುದನ್ನು ಸೂಚಿಸುವ ದಾಖಲೆಯನ್ನು ಹಂಚಿಕೊಂಡಿದ್ದಾರೆ.

ಜಾಕ್ ಡೋರ್ಸೆ ಅವರ ಬೇಹುಗಾರಿಕೆ ಹಾಗೂ ಸೆನ್ಸಾರ್‌ಶಿಪ್ ಆರೋಪಗಳನ್ನು ಮೋದಿ ಸರ್ಕಾರವು ಸುಳ್ಳು ಎಂದು ಹೇಳಿ ನಿರಾಕರಿಸಿದೆ. ಆದರೆ, ಟ್ವಿಟರ್ ನ ಪಾರದರ್ಶಕತೆ ವರದಿಗಳ ಡೇಟಾವನ್ನು ಆಧರಿಸಿದ ಸತ್ಯ ಇಲ್ಲಿದೆ ಎಂದು ಸಿಎಎ ವಿರೋಧಿ ಪ್ರತಿಭಟನೆ, ರೈತರ ಪ್ರತಿಭಟನೆ ಹಾಗೂ ಕೋವಿಡ್ ಸಂದರ್ಭದಲ್ಲಿ ಸಾವಿರಾರು ಟ್ವಿಟರ್ ಬಳಕೆದಾರರ ಮಾಹಿತಿಯನ್ನು ಮೋದಿ ಸರ್ಕಾರವು ಟ್ವಿಟರ್ ಬಳಿ ಕೇಳಿತ್ತು ಎಂದು ಸಂಬಂಧಪಟ್ಟ ದಾಖಲೆಗಳೊಂದಿಗೆ ಸಾಕೇತ್ ಗೋಖಲೆ ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಈ ದೇಶದ ಪ್ರಧಾನಿಗೆ ಯಾಕೆ ಇಷ್ಟೊಂದು ಹೇಡಿತನ?: ಟ್ವಿಟರ್‌ನ ಮಾಜಿ ಸಿಇಒ ಹೇಳಿಕೆ ಹಿನ್ನೆಲೆ ಕಾಂಗ್ರೆಸ್ ಪ್ರಶ್ನೆ

”ಈಗ ಕೆಳಗಿನ ಟ್ವೀಟ್‌ಗಳಲ್ಲಿ ಸಿಎಎ ವಿರೋಧಿ ಪ್ರತಿಭಟನೆಗಳು ಮತ್ತು ರೈತ ಪ್ರತಿಭಟನೆಗಳ (2020-2021) ಅವಧಿಯ ಡೇಟಾ ಇಲ್ಲಿದೆ. 👇

CAA ವಿರೋಧಿ ಮತ್ತು ರೈತರ ಪ್ರತಿಭಟನೆಯ ಅವಧಿಯಲ್ಲಿ ಭಾರತ ಸರ್ಕಾರವು ಜಾಗತಿಕವಾಗಿ ಅತಿ ಹೆಚ್ಚು ಮಾಹಿತಿಗಳನ್ನು ಕೇಳಿದ ಸರ್ಕಾರವಾಗಿದೆ.

ಈ ಅವಧಿಯಲ್ಲಿ ಜಾಗತಿಕವಾಗಿ ಸಲ್ಲಿಸಿದ ವಿನಂತಿಗಳಲ್ಲಿ 25% ವಿನಂತಿಗಳನ್ನು ಭಾರತ ಸರ್ಕಾರವೇ ಸಲ್ಲಿಸಿದೆ” ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

2019ರ ಜನವರಿ ಮತ್ತು ಡಿಸೆಂಬರ್ ನಡುವಿನ ಅವಧಿಯಲ್ಲಿ 1,057 ಖಾತೆದಾರರ ಮಾಹಿತಿ ಹಾಗೂ ವಿವರಗಳನ್ನು ಭಾರತ ಸರ್ಕಾರ ಕೇಳಿದೆ.

2020 ರ ಜನವರಿ ಹಾಗೂ ಡಿಸೆಂಬರ್ ಅವಧಿಯಲ್ಲಿ ಮೋದಿ ಸರ್ಕಾರವು 5,830 ಟ್ವಿಟರ್ ಬಳಕೆದಾರರ ಮಾಹಿತಿ ಹಾಗೂ ವಿವರಗಳನ್ನು ನೀಡುವಂತೆ ಟ್ವಿಟರ್ ಸಂಸ್ಥೆಯನ್ನು ಒತ್ತಾಯಿಸಿದೆ ಎಂದು ದತ್ತಾಂಶಗಳೊಡನೆ ಸಾಕೇತ್ ಗೋಖಲೆ ಹೇಳಿದ್ದಾರೆ.

👉ತದನಂತರ, 2020 ರ ಜನವರಿ ಹಾಗೂ ಡಿಸೆಂಬರ್ ಅವಧಿಯಲ್ಲಿ ಸಿಎಎ ಮತ್ತು ರೈತ ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ, ಮೋದಿ ಸರ್ಕಾರವು 5830 ಖಾತೆಗಳಿಗೆ ಮಾಹಿತಿ ಮತ್ತು ಬಳಕೆದಾರರ ವಿವರಗಳನ್ನು ಕೋರಿತು.

ಇದು 452% ರಷ್ಟು ಹೆಚ್ಚಳವಾಗಿದೆ!”

2021 (ಕೋವಿಡ್) ಕಾಲದಲ್ಲಿ ಬಳಕೆದಾರರ ವಿವರಗಳಿಗಾಗಿ ಸಲ್ಲಿಕೆಯಾದ ಒಟ್ಟು ಜಾಗತಿಕ ವಿನಂತಿಗಳಲ್ಲಿ 19% ವಿನಂತಿಗಳನ್ನು ಭಾರತ ಸರ್ಕಾರವೇ ಮಾಡಿದೆ. ಇದೇ ಅವಧಿಯಲ್ಲಿ ಯುನೈಟೆಡ್ ಕಿಂಗ್‌ಡಂ 4% ವಿನಂತಿಗಳನ್ನು ಮಾಡಿದ್ದರೆ, ಜರ್ಮನಿ 6%, ಬ್ರೆಝಿಲ್ 2% ವಿನಂತಿಗಳನ್ನಷ್ಟೇ ಮಾಡಿತ್ತು. ಪಾಕಿಸ್ತಾನ ಕೇವಲ 1% ಕಡಿಮೆ ವಿನಂತಿ ಮಾಡಿದೆ ಎಂದು ಸಾಕೇತ್ ಗೋಖಲೆ ಟ್ವಿಟರ್ ನೀಡಿರುವ ವರದಿಯನ್ನು ಉಲ್ಲೇಖಿಸಿ ತಿಳಿಸಿದ್ದಾರೆ.

ಇನ್ನು, ಟ್ವಿಟರ್ ಖಾತೆಯನ್ನು ಅಮಾನತು ಮಾಡುವುದು ಮತ್ತು ವಿಷಯಗಳನ್ನು ಡಿಲಿಟ್ ಮಾಡುವಂತೆಯೂ ಭಾರತ ಸರ್ಕಾರ ನೀಡಿದ ಆದೇಶಗಳ ಮಾಹಿತಿಯನ್ನು ಟ್ವಿಟರ್ ನೀಡಿದೆ. ಅದರಲ್ಲಿ ಕೋರ್ಟ್‌ ನಿರ್ದೇಶನದ ಪ್ರಕಾರ ಸರ್ಕಾರ ನೀಡಿದ ಆದೇಶಗಳು ಹಾಗೂ ಲೀಗಲ್ ನೋಟಿಸ್ ಇಲ್ಲದೆ ಪೊಲೀಸ್ ಹಾಗೂ ಸರ್ಕಾರಿ ಏಜನ್ಸಿಗಳು ನೀಡಿದ ಆದೇಶಗಳು ಎಂದು ಎರಡು ವಿಭಾಗ ಮಾಡಬಹುದು. 2020 ರಲ್ಲಿ, ವಿಷಯವನ್ನು ತೆಗೆದುಹಾಕುವಿಕೆ ಹಾಗೂ ಖಾತೆಗಳ ಅಮಾನತು ಸೇರಿದಂತೆ 9,724 ಆದೇಶಗಳನ್ನು ಮೋದಿ ಸರ್ಕಾರ ನೀಡಿದೆ. ಅದರಲ್ಲಿ ಕೇವಲ 19 ಮಾತ್ರ ಕೋರ್ಟ್ ನಿರ್ದೇಶನದಂತೆ ಆದೇಶಿಸಲಾಗಿದೆ. ಉಳಿದ ಎಲ್ಲವನ್ನೂ ಮೋದಿ ಸರ್ಕಾರವೇ ಆದೇಶಿಸಿದೆ. 2021 ರಲ್ಲಿ 8,863 ಆದೇಶಗಳನ್ನು ಮೋದಿ ಸರ್ಕಾರ ನೀಡಿದರೆ, ಅದರಲ್ಲಿ ಕೇವಲ 32 ಮಾತ್ರ ಕೋರ್ಟ್ ಆದೇಶಗಳಾಗಿತ್ತು ಎಂದು ಗೋಖಲೆ ಟ್ವಿಟ್ ನಲ್ಲಿ ಹೇಳಿದ್ದಾರೆ.

ಭಾರತ ಸರ್ಕಾರವು 12,916 ಟ್ವಿಟರ್ ಖಾತೆಗಳನ್ನು ನಿಷ್ಕ್ರಿಯಗೊಳಿಸಲು 3,992 ಆದೇಶಗಳನ್ನು ನೀಡಿದ್ದು, ಇದು ಜಾಗತಿಕವಾಗಿ 8% ಆಗಿದೆ. ಅದೇ ವೇಳೆ UK ಕೇವಲ 16 ಆದೇಶ ನೀಡಿದ್ದರೆ, ಅಮೇರಿಕ 32 ಆದೇಶಗಳನ್ನು, ಇಸ್ರೇಲ್ 7 ಆದೇಶಗಳನ್ನು ಮಾತ್ರ ನೀಡಿದೆ. ಇವೆಲ್ಲವೂ ಜಾಗತಿಕ ಆದೇಶಗಳ 1% ವೂ ಇಲ್ಲ. ನೆರೆಯ ಪಾಕಿಸ್ತಾನ 489 ಆದೇಶಗಳನ್ನು ನೀಡಿದ್ದು, ಜಾಗತಿಕವಾಗಿ 1% ಆದೇಶಗಳನ್ನು ನೀಡಿದೆ. ಬಾಂಗ್ಲಾದೇಶ ಟ್ವಿಟರ್ ಖಾತೆ ಅಮಾನತು ಹಾಗೂ ವಿಷಯ ತೆಗೆದುಹಾಕುವಿಕೆ ಕುರಿತಂತೆ ಯಾವುದೇ ಆದೇಶವನ್ನೂ ನೀಡಿಲ್ಲ. ಅದೇ ವೇಳೆ, ಭಾರತ ಸರ್ಕಾರವು 12,919 ಖಾತೆಗಳನ್ನು ನಿಷ್ಕ್ರಿಯಗೊಳಿಸಲು ಆದೇಶಿಸಿದೆ ಎಂದು ಸಾಕೇತ್ ಗೋಖಲೆ ತಿಳಿಸಿದ್ದಾರೆ.

ಈ ಡೇಟಾಗಳ ಪ್ರಕಾರ ಸಿಎಎ ವಿರೋಧಿ ಹಾಗೂ ರೈತರ ಆಂದೋಲನದ ಸಂದರ್ಭದಲ್ಲಿ ಮೋದಿ ಸರ್ಕಾರವು ಟ್ವಿಟರ್ ಖಾತೆದಾರರ ಮಾಹಿತಿ ನೀಡುವಂತೆ ಹಾಗೂ ಖಾತೆಗಳ ನಿಷೇಧಕ್ಕೆ ಒತ್ತಡ ಹೇರಿದೆ ಎನ್ನುವುದು ಖಚಿತವಾಗಿದೆ. ಕೋಮುವಾದಿ ದ್ವೇಷ ಹರಡುವಿಕೆ, ಮಹಿಳಾ ಖಾತೆದಾರರ ಮೇಲೆ ಸೈಬರ್ ನಿಂದನೆ ದಾಳಿ, ಬಿಜೆಪಿ ಐಟಿ ಸೆಲ್ ಗಳು ಮುಕ್ತವಾಗಿ ಸುಳ್ಳು ಸುದ್ದಿ ಹರಡುತ್ತಿರುವ ಸಂದರ್ಭದಲ್ಲೇ ಮೋದಿ ಸರ್ಕಾರವು ಇಷ್ಟೆಲ್ಲಾ ಆದೇಶಗಳನ್ನು ನೀಡಿದೆ. ಬಿಜೆಪಿ ನಾಯಕರ ಟ್ವಿಟ್‌ಗಳನ್ನು ‘ತಿರುಚಿದ ಸುದ್ದಿ’ ಎಂದು ಸ್ವತಃ ಟ್ವಿಟರ್ ಫ್ಲ್ಯಾಗ್ ಮಾಡಿದ್ದರೂ ಸಹ ಅವುಗಳನ್ನು ತೆಗೆದುಹಾಕಿರಲಿಲ್ಲ. ಮೋದಿ ಸರಕಾರ ಟೀಕೆಗಳನ್ನು ಹತ್ತಿಕ್ಕುತ್ತದೆ ಎಂಬುದು ಈ ಅಂಕಿಅಂಶಗಳಿಂದ ಸ್ಪಷ್ಟವಾಗಿದೆ. ಈ ಅಧಿಕೃತ ಡೇಟಾವನ್ನು ನಿರಾಕರಿಸುವ ಮತ್ತು ಆರೋಪಗಳನ್ನು “ಸುಳ್ಳು” ಮತ್ತು “ವಿದೇಶಿ ಪಿತೂರಿ” ಎಂದು ಹೇಳುವ ಧೈರ್ಯವನ್ನು ಮೋದಿ ಸರ್ಕಾರ ಹೊಂದಿದೆಯೇ? ಸಚಿವ ರಾಜೀವ್ ಅವರೇ ನಿಮ್ಮ ಉತ್ತರಕ್ಕಾಗಿ ಕಾಯುತ್ತಿದ್ದೇನೆ ಏಕೆಂದರೆ ಈಗ ನೀವು ಸುಳ್ಳು ಹೇಳಲು ಸಾಧ್ಯವಿಲ್ಲ ಎಂದು ಸಾಕೇತ್ ಗೋಖಲೆ ಟ್ವಿಟ್ ನಲ್ಲಿ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...