Homeಮುಖಪುಟಮುಂದುವರೆದ ಮಣಿಪುರ ಹಿಂಸಾಚಾರ: ಸಚಿವೆ ಮನೆಗೆ ಬೆಂಕಿ; ಭುಗಿಲೆದ್ದ ಆಕ್ರೋಶ

ಮುಂದುವರೆದ ಮಣಿಪುರ ಹಿಂಸಾಚಾರ: ಸಚಿವೆ ಮನೆಗೆ ಬೆಂಕಿ; ಭುಗಿಲೆದ್ದ ಆಕ್ರೋಶ

- Advertisement -
- Advertisement -

ಮಣಿಪುರದಲ್ಲಿ ಕೆಲ ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರ ಮುಂದುವರೆದಿದ್ದು, ಪಶ್ಚಿಮ ಇಂಫಾಲ ಜಿಲ್ಲೆಯ ಲಾಂಫೀಲ್‌ನಲ್ಲಿರುವ ಮಣಿಪುರದ ಸಚಿವೆ ನೆಮ್ಯಾ ಕಿಪ್‌ಗೆನ್ ಅವರ ಅಧಿಕೃತ ನಿವಾಸಕ್ಕೆ ಬುಧವಾರ ರಾತ್ರಿ ಅಪರಿಚಿತರು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಪೂರ್ವ ಇಂಫಾಲದ ಖಾಮೆಲಾಕ್‌ ಗ್ರಾಮದಲ್ಲಿ ಬುಧವಾರ ಶಂಕಿತ ಉಗ್ರರು ನಡೆಸಿದ ದಾಳಿ ವೇಳೆ 9 ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಘಟನೆ ಬೆನ್ನಲ್ಲೇ ಸಚಿವರ ನಿವಾಸಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ತಿಂಗಳು ಲೋಕೋಪಯೋಗಿ ಸಚಿವರ ಮನೆಯ ಮೇಲೆ ಇದೇ ರೀತಿ ದಾಳಿ ಮಾಡಲಾಗಿತ್ತು.

ಕೈಗಾರಿಕಾ ಸಚಿವೆ ನೆಮ್ಚಾ ಕಿಪ್‌ಗೆನ್‌ ಅವರಿಗೆ ಸೇರಿದ ಲಾಂಫೀಲ್‌ ಪ್ರದೇಶದಲ್ಲಿರುವ ಸರ್ಕಾರಿ ನಿವಾಸಕ್ಕೆ ಬುಧವಾರ ರಾತ್ರಿ ಬೆಂಕಿ ಹಚ್ಚಲಾಗಿದೆ. ಸಚಿವೆ ಕಿಪ್‌ಗೆನ್‌ ಕುಕಿ ಸಮುದಾಯದ ನಾಯಕಿಯಾಗಿದ್ದಾರೆ. ಈ ಕೃತ್ಯ ನಡೆದ ವೇಳೆ ಸಚಿವೆ ಮನೆಯಲ್ಲಿ ಇರಲಿಲ್ಲ. ಅಧಿಕೃತ ಪ್ರವಾಸದ ಕಾರಣದಿಂದ ಹೊರಗಿದ್ದರು. ಈ ವೇಳೆ ಈ ದುಷ್ಕೃತ್ಯ ನಡೆಸಲಾಗಿದೆ. ಮನೆಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿದ್ದು ಅಪಾರ ಪ್ರಮಾಣದ ನಷ್ಟವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಯಾವುದೇ ಸಂಘಟನೆ ಘಟನೆಯ ಹೊಣೆ ಹೊತ್ತುಕೊಂಡಿಲ್ಲ.

ಇದನ್ನೂ ಓದಿ: ಮಣಿಪುರ ಹಿಂಸಾಚಾರದಲ್ಲಿ 253 ಚರ್ಚ್‌ಗಳಿಗೆ ಬೆಂಕಿ; ಜ್ಞಾಪಕ ಪತ್ರ ಸಲ್ಲಿಕೆ

ಮಣಿಪುರದಲ್ಲಿ ನಡೆದಿರುವ ಹಿಂಸಾಚಾರದ ಭಾಗವಾಗಿ ಕೆಲವು ಸಂಘಟನೆಗಳು ಸಚಿವೆ ಮನೆಯನ್ನು ಗುರಿಯಾಗಿರಿಸಿಕೊಂಡಿದ್ದರು. ಬುಧವಾರ ಸಂಜೆ ನಂತರ ಜಮಾಯಿಸಿದ ಕೆಲವರು ಬೆಂಕಿ ಹಚ್ಚಿದ್ದಾರೆ. ಭದ್ರತಾ ಸಿಬ್ಬಂದಿ ನೋಡುವಷ್ಟರಲ್ಲಿ ಘಟನೆ ನಡೆದಿದ್ದು, ದುಷ್ಕೃತ್ಯ ಎಸಗಿದವರ ಪತ್ತೆಗೆ ಬಲೆ ಬೀಸಲಾಗಿದೆ.

ಮಣಿಪುರದಲ್ಲಿ ಮೈತಿ ಮತ್ತು ಕುಕಿ ಸಮುದಾಯದ ನಡುವೆ ಒಂದು ತಿಂಗಳಿಂದ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ 100 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 310 ಜನರು ಗಾಯಗೊಂಡಿದ್ದಾರೆ. ರಾಜ್ಯದಲ್ಲಿ ಶಾಂತಿ ಸ್ಥಾಪಿಸಲು ಸೇನೆ ಮತ್ತು ಅರೆ ಪಡೆಗಳನ್ನು ನಿಯೋಜಿಸಲಾಗಿದೆ.

ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈತೇಯಿ ಸಮುದಾಯ ಮೇ 3ರಂದು ಮೆರವಣಿಗೆ ಆಯೋಜಿಸಿತ್ತು. ಆ ಬಳಿಕ ಮಣಿಪುರದಲ್ಲಿ ಘರ್ಷಣೆಗಳು ಭುಗಿಲೆದ್ದಿವೆ.

ಮಣಿಪುರದ ಜನಸಂಖ್ಯೆಯ ಶೇಕಡ 53 ರಷ್ಟಿರುವ ಮೈತಿ ಸಮುದಾಯ, ಇಂಫಾಲದ ಕಣಿವೆಗಳಲ್ಲಿ ಹೆಚ್ಚಾಗಿ ನೆಲಿಸಿವೆ. ಬುಡಕಟ್ಟು ಜನಾಂಗಗಳಾದ ನಾಗಾಗಳು ಮತ್ತು ಕುಕಿಗಳು ಶೇಕಡಾ 40 ರಷ್ಟಿದ್ದು, ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

ಕಳೆದ 24 ಗಂಟೆಯಲ್ಲಿ ನಡದಿರುವ ಹಿಂಸಾಚಾರಗಳಲ್ಲಿ ಒಬ್ಬ ಮಹಿಳೆಯೂ ಸೇರಿ 9 ಜನ ಮೃತಪಟ್ಟಿದ್ದಾರೆ. ಹಲವರು ಗುಂಡೇಟಿನಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಖಮೇನ್‌ ಲೋಕ್‌ ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಜೀವ ಕಳೆದುಕೊಂಡಿದ್ದರು. ಕೆಲ ದಿನಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮೂರು ದಿನ ಮಣಿಪುರದಲ್ಲಿಯೇ ಬೀಡು ಬಿಟ್ಟು ಶಾಂತಿ ಸ್ಥಾಪನೆಗೆ ಹಲವು ಸುತ್ತಿನ ಸಭೆಗಳನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಆದಿವಾಸಿ ಸಮುದಾಯಗಳ ಪ್ರಮುಖರೊಂದಿಗೆ ನಡೆಸಿದ್ದರು. ಮಣಿಪುರದಲ್ಲಿ ಮತ್ತೆಶುರುವಾಗಿರುವ ಹಿಂಸಾಚಾರ ಪ್ರಕರಣಗಳು ಶಾಂತಿ ಮರುಸ್ಥಾಪಿಸುವ ಪ್ರಯತ್ನಕ್ಕೆ ಹಿನ್ನಡೆ ತಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...