Homeಮುಖಪುಟಚುನಾವಣೆಗೆ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಹೇಳಿದ್ದು ನಿಜವಾಗಿದೆ: ಅಕ್ಕಿ ಕಡಿತದ ಕುರಿತು...

ಚುನಾವಣೆಗೆ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಹೇಳಿದ್ದು ನಿಜವಾಗಿದೆ: ಅಕ್ಕಿ ಕಡಿತದ ಕುರಿತು ಡಿಕೆಶಿ ಪ್ರತಿಕ್ರಿಯೆ

- Advertisement -
- Advertisement -

ಕೇಂದ್ರ ಸರ್ಕಾರ ಎಫ್‌ಸಿಐ ಮೂಲಕ ಅಕ್ಕಿ ನೀಡಲು ಹಿಂದೇಟು ಹಾಕುತ್ತಿದೆ ಎಂದು ಸಿಎಂ ಸಿದ್ದರಾಮಯ್ಯನವರು ಆರೋಪಿಸಿದ ಬೆನ್ನಲ್ಲೇ, ಚುನಾವಣೆಗೆ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಹೇಳಿದ್ದು ನಿಜವಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

“ಚುನಾವಣೆಗೆ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ದಾವರು ‘ರಾಜ್ಯದಲ್ಲಿ ಬಿಜೆಪಿ ಸೋತರೆ ಕೇಂದ್ರದಿಂದ ಬರುವ ಎಲ್ಲಾ ಯೋಜನೆಗಳನ್ನು ಕಡಿತಗೊಳಿಸಲಾಗುವುದು’ ಎಂದು ಹೇಳಿದ್ದರು. ಈಗ ಅದನ್ನೇ ಮಾಡುತ್ತಿದ್ದಾರೆ. ಇದನ್ನು ರಾಜಕೀಯ ಎಂದು ನಾನು ಈಗ ವ್ಯಾಖ್ಯಾನ ಮಾಡಲು ಹೋಗುವುದಿಲ್ಲ. ಬಿಜೆಪಿಯವರು ನಮ್ಮ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಅವರು ಟೀಕೆ ಮಾಡಲಿ. ಅದಕ್ಕೂ ಮುನ್ನ ಬಿಜೆಪಿ ನಾಯಕರು ನಡ್ಡಾ ಅವರ ಹೇಳಿಕೆ ಬಗ್ಗೆ ಉತ್ತರ ನೀಡಲಿ” ಎಂದು ಡಿಕೆಶಿ ಹೇಳಿದ್ದಾರೆ.

ನಮ್ಮ ಸರ್ಕಾರದ ಅನ್ನಭಾಗ್ಯ ಯೋಜನೆಗಾಗಿ ಹೆಚ್ಚುವರಿ ತಲಾ 5 ಕೆ.ಜಿ ಅಕ್ಕಿ ವಿತರಣೆಗಾಗಿ ತಿಂಗಳಿಗೆ 2.28 ಲಕ್ಷ ಟನ್ ಅಕ್ಕಿ ನೀಡಲು ಒಪ್ಪಿದ್ದ ಭಾರತೀಯ ಆಹಾರ ನಿಗಮ ಈಗ ಹಿಂದೇಟು ಹಾಕಿದೆ. ನರೇಂದ್ರ ಮೋದಿ
ನೇತೃತ್ವದ ಭಾರತ ಸರ್ಕಾರವು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿಯಲ್ಲಿ ರಾಜ್ಯಕ್ಕೆ ಅಕ್ಕಿ ಮಾರಾಟವನ್ನು ನಿಲ್ಲಿಸಲು ಎಫ್‌ಸಿಐಗೆ ಪತ್ರ ಬರೆದಿದೆ. ಇದಕ್ಕೆ ಬಿಜೆಪಿಯ ಬಡವರ ವಿರೋಧಿ ಧೋರಣೆಯೇ ಕಾರಣ. ಈ ಸಂಬಂಧ ಕೇಂದ್ರಕ್ಕೆ ಪ್ರತಿಭಟನಾ ಪತ್ರ ಬರೆಯಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಬಿಜೆಪಿಯನ್ನು ಅಧಿಕಾರಕ್ಕೆ ತರದಿದ್ದರೆ ಎಲ್ಲಾ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಬಿಜೆಪಿ ನಾಯಕರು ಚುನಾವಣಾ ಸಮಯದಲ್ಲಿ ಕನ್ನಡಿಗರಿಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದರು. ಎಫ್‌ಸಿಐಗೆ ಈ ಪತ್ರವು ಅದರ ಫಲಿತಾಂಶವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರವು ಜೂನ್ 9, 2023 ರಂದು ರಾಜ್ಯಕ್ಕೆ 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅಗತ್ಯವಿದೆ ಎಂದು ಭಾರತೀಯ ಆಹಾರ ನಿಗಮದ ಉಪ ಪ್ರಧಾನ ವ್ಯವಸ್ಥಾಪಕರಿಗೆ ಪತ್ರ ಬರೆದಿತ್ತು. ಭಾರತೀಯ ಆಹಾರ ನಿಗಮವು ರಾಜ್ಯದ ಮನವಿಯನ್ನು ಸ್ವೀಕರಿಸಿದೆ ಮತ್ತು ಜೂನ್ 12, 2023 ರ ದಿನಾಂಕದ ಪತ್ರದಲ್ಲಿ ರೂ. 3400/- ಪ್ರತಿ ಕ್ವಿಂಟಲ್ ದರದಲ್ಲಿ ಅಕ್ಕಿ ನೀಡಲು ಒಪ್ಪಿಗೆ ನೀಡಿತ್ತು. ಆದರೆ ಜೂನ್ 13 ರಂದು ಕೇಂದ್ರ ಸರ್ಕಾರ ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿ ಉಳಿದ ರಾಜ್ಯಗಳಿಗೆ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಮಾರದಂತೆ ನಿರ್ಬಂಧ ಹೇರಿದೆ ಎಂದು ಕಿಡಿಕಾರಿದ್ದಾರೆ.

”ಭಾರತೀಯ ಆಹಾರ ನಿಗಮವು 7 ಲಕ್ಷ ಟನ್ ಅಕ್ಕಿ ಇಟ್ಟುಕೊಂಡು ಕೊಡುವುದಿಲ್ಲ ಎನ್ನುತ್ತಿದೆ. ಅನ್ನಭಾಗ್ಯ ಯೋಜನೆಯಿಂದ ಕಾಂಗ್ರೆಸ್‌ಗೆ ಒಳ್ಳೆಯ ಹೆಸರು ಬರುತ್ತದೆ. ಬಡವರ ಕಲ್ಯಾಣ ಆಗುತ್ತದೆ. ಅದನ್ನು ತಪ್ಪಿಸಬೇಕು ಎಂದೇ ಕೇಂದ್ರ ಸರ್ಕಾರ ರಾಜಕಾರಣ ಮಾಡುತ್ತಿದೆ” ಎಂದು ಹೇಳಿದರು.

ನಿಗಮವು ನಮಗೆ ಅಕ್ಕಿ ಕೊಡುವುದಾಗಿ ತಿಳಿಸಿದ್ದರಿಂದಲೇ ನಾವು ಜುಲೈ 1 ರಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ದಾರರಿಗೆ ತಲಾ 10 ಕೆ.ಜಿ ಅಕ್ಕಿ ಕೊಡುವುದಾಗಿ ಹೇಳಿದ್ದೆವು. ಈಗ ಕೊಡುವುದಿಲ್ಲ ಎನ್ನುತ್ತಿದೆ. ಬೇರೆ ರಾಜ್ಯಗಳಿಂದ ಖರೀದಿಸಬೇಕಾಗಿದೆ. ತಮ್ಮ ಬಳಿ ಅಕ್ಕಿ ಇಲ್ಲ ಎಂದು ಪಂಜಾಬ್ ಹೇಳಿದೆ. ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ನೋಡೋಣ ಎಂದಿದ್ದಾರೆ. ಆ ರಾಜ್ಯಗಳ ಜತೆ ಮಾತುಕತೆಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ಅಲ್ಲಿಗೆ ತೆರಳಲಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...