Homeಮುಖಪುಟಪಠ್ಯಪುಸ್ತಕಗಳಲ್ಲಿ ನಮ್ಮ ಹೆಸರು ಕೈಬಿಡಿ: ಎನ್‌ಸಿಇಆರ್‌ಟಿಗೆ ಪತ್ರ ಬರೆದ 33 ತಜ್ಞರು

ಪಠ್ಯಪುಸ್ತಕಗಳಲ್ಲಿ ನಮ್ಮ ಹೆಸರು ಕೈಬಿಡಿ: ಎನ್‌ಸಿಇಆರ್‌ಟಿಗೆ ಪತ್ರ ಬರೆದ 33 ತಜ್ಞರು

- Advertisement -
- Advertisement -

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎನ್‌ಸಿಇಆರ್‌ಟಿ) ರಾಜ್ಯಶಾಸ್ತ್ರದ ಪಠ್ಯಗಳನ್ನು “ಗುರುತಿಸಲಾಗದಷ್ಟು ವಿರೂಪಗೊಳಿಸಲಾಗಿದೆ” ಹಾಗಾಗಿ ತಮ್ಮ ಹೆಸರನ್ನು ಕೈಬಿಡುವಂತೆ ದೇಶದ ಪ್ರತಿಷ್ಠಿತ ವಿವಿಗಳ 33 ವಿದ್ವಾಂಸರ ಗುಂಪು ಒತ್ತಾಯಿಸಿದೆ.

ಇತ್ತೀಚೆಗೆ ತಾನೇ ಮುಖ್ಯ ಸಲಹೆಗಾರರ ಮಂಡಳಿಯಿಂದ ಕೈಬಿಡುವಂತೆ ಶಿಕ್ಷಣ ತಜ್ಞ ಸುಹಾಸ್ ಪಾಲ್ಶಿಕರ್ ಮತ್ತು ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಸಹ ಒತ್ತಾಯಿಸಿದ್ದರು. ಸದ್ಯ ಪತ್ರ ಬರೆದ 33 ಶಿಕ್ಷಣ ತಜ್ಞರಲ್ಲಿ ಮೈಸೂರು ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಮುಜಾಫರ್ ಅಸ್ಸಾದಿ, ಮಂಗಳೂರಿನ ನಿಟ್ಟೆ ವಿಶ್ವವಿದ್ಯಾಲಯದ ಶೈಕ್ಷಣಿಕ ನಿರ್ದೇಶಕ ಸಂದೀಪ್‌ ಶಾಸ್ತ್ರಿ ಕೂಡ ಸೇರಿದ್ದಾರೆ.

‘ವಿಭಿನ್ನ ದೃಷ್ಟಿಕೋನಗಳ ಹೊರತಾಗಿಯೂ ನಾವೆಲ್ಲರೂ ಶಾಲಾ ಪಠ್ಯಪುಸ್ತಕಗಳ ರಾಜಕೀಯ ಶಾಸ್ತ್ರದಲ್ಲಿ ಗಮನಾರ್ಹವಾದ ಪಠ್ಯ ರಚಿಸುವಿಕೆಗೆ ಒಟ್ಟಾಗಿ ಕೆಲಸ ಮಾಡಿದ್ದೇವೆ. ಆದಾಗ್ಯೂ, ಎನ್‌ಸಿಇಆರ್‌ಟಿ ಈಗ ಈ ಪಠ್ಯಪುಸ್ತಕಗಳಲ್ಲಿ ಹಲವು ನಿರ್ಣಾಯಕ ಬದಲಾವಣೆಗಳನ್ನು, ತಿರುಚುವಿಕೆ ಮತ್ತು ಅಳಿಸುವಿಕೆಗಳನ್ನು ಮಾಡಿದೆ. ಇವುಗಳು ಯಾವುದೂ ಸ್ವೀಕಾರಾರ್ಹವಲ್ಲ ಮತ್ತು ಅಪೇಕ್ಷಣೀಯ ವಿಷಯಗಳನ್ನು ಯಾವುದೇ ಪ್ರಮುಖ ಕಾರಣ ನೀಡದೆ ಮುದ್ರಿಸಲಾಗಿದೆ. ಇವು ಶೈಕ್ಷಣಿಕ ಜ್ಞಾನ ಉತ್ಪಾದನೆಗೆ ಆಧಾರವಾಗಿರುವ ಪಾರದರ್ಶಕತೆಯನ್ನು ಉಲ್ಲಂಘಿಸುವುದರ ಜೊತೆ ವಿವಾದವನ್ನು ಸೃಷ್ಟಿಸುತ್ತದೆ’ ಎಂದು ಪತ್ರದಲ್ಲಿ ವಿವರಿಸಲಾಗಿದೆ.

‘ಮೂಲ ಪಠ್ಯಗಳಲ್ಲಿ ಹಲವಾರು ವಿಷಯಾಧಾರಿತ ಪರಿಷ್ಕರಣೆಗಳು ಇರುವುದರಿಂದ, ಅವುಗಳನ್ನು ವಿಭಿನ್ನ ಪುಸ್ತಕಗಳಾಗಿ ಮಾಡುವುದರಿಂದ ನಾವು ತಯಾರಿಸಿದ ಪುಸ್ತಕಗಳು ಎಂದು ಹೇಳಿಕೊಳ್ಳುವುದು ಮತ್ತು ನಮ್ಮ ಹೆಸರನ್ನು ಅವುಗಳೊಂದಿಗೆ ಸಂಯೋಜಿಸುವುದು ನಮಗೆ ಕಷ್ಟಕರವಾಗಿದೆ. ಬದಲಾವಣೆಯಿಂದ ಪಠ್ಯಪುಸ್ತಕಗಳನ್ನು ಗುರುತಿಸಲಾಗದಷ್ಟು ವಿರೂಪಗೊಳಿಸಲಾಗಿದೆ ಮತ್ತು ಅವುಗಳನ್ನು ಶೈಕ್ಷಣಿಕವಾಗಿ ನಿಷ್ಕ್ರಿಯಗೊಳಿಸಲಾಗಿದೆ. ಈಗ ಕೈಗೊಂಡಿರುವ ಸೃಜನಾತ್ಮಕ ಸಾಮೂಹಿಕ ಪ್ರಯತ್ನವು ಅಪಾಯದಲ್ಲಿದೆ ಎಂದು ನಾವು ಈಗ ನಂಬುತ್ತೇವೆ’ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸ್ವರಾಜ್ ಅಭಿಯಾನದ ರಾಜಕೀಯ ಪಕ್ಷದ ಸಂಸ್ಥಾಪಕರಾದ ಪಾಲ್ಶಿಕರ್ ಮತ್ತು ಯಾದವ್ ಅವರನ್ನು 9 ರಿಂದ 12 ನೇ ತರಗತಿಯ NCERT ಯ ರಾಜ್ಯಶಾಸ್ತ್ರ ಪಠ್ಯಪುಸ್ತಕಗಳಿಗೆ ಮುಖ್ಯ ಸಲಹೆಗಾರರಾಗಿ ಹೆಸರು ಸೇರಿಸಲಾಗಿದೆ.

ಕರೋನವೈರಸ್ ಸಾಂಕ್ರಾಮಿಕ ರೋಗದಿಂದ ಮಕ್ಕಳಿಗೆ ಪಠ್ಯ ಹೊರೆಯಾಗಬಾರದೆಂದು ಕಡಿಮೆ ಮಾಡುವು ಉದ್ದೇಶದಿಂದ ಎನ್‌ಸಿಇಆರ್‌ಟಿಯು ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ. ಆದರೆ ಆ ಸಂದರ್ಭದಲ್ಲಿ ಭಾರತದ ಇತಿಹಾಸದ ಪ್ರಮುಖ ವಿವರಗಳನ್ನು ಕೈಬಿಟ್ಟಿದೆ.

ಮೋಹನ್‌ದಾಸ್ ಕರಮಚಂದ್ ಗಾಂಧಿ ಅವರನ್ನು ಹತ್ಯೆ ಮಾಡಲು ಹಿಂದೂ ಉಗ್ರಗಾಮಿಗಳು ನಡೆಸಿದ ಪ್ರಯತ್ನಗಳು ಮತ್ತು ಅವರ ಹತ್ಯೆಯ ನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ವಿಧಿಸಲಾದ ನಿಷೇಧದ ಪ್ಯಾರಾಗಳನ್ನು ಎನ್‌ಸಿಇಆರ್‌ಟಿ ಪಠ್ಯದಿಂದ ಕೈಬಿಡಲಾಗಿದೆ.

ಕಳೆದ ವರ್ಷ, NCERT 2002ರ ಗುಜರಾತ್ ಗಲಭೆಗಳು, ಭಾರತದಲ್ಲಿ ಮೊಘಲ್ ಆಳ್ವಿಕೆ ಮತ್ತು 1975ರಲ್ಲಿ ಹೇರಲಾದ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿಗೆ ಸಂಬಂಧಿಸಿದ ವಿಷಯವನ್ನು ಸಹ ಕೈಬಿಟ್ಟಿತು. ಈಗ NCERT ಪಠ್ಯಪುಸ್ತಕದಲ್ಲಿ ಗುಜರಾತ್ ಗಲಭೆಯ ಬಗ್ಗೆ ಯಾವುದೇ ಉಲ್ಲೇಖಗಳು ಇಲ್ಲದಂತಾಗಿದೆ.

ಎನ್‌ಸಿಇಆರ್‌ಟಿ ನಿರ್ದೇಶಕ ದಿನೇಶ್ ಸಕ್ಲಾನಿ ಅವರಿಗೆ ಗುರುವಾರ ಪಾಲ್ಶಿಕರ್ ಮತ್ತು ಯಾದವ್ ಅವರು ಪತ್ರ ಬರೆದಿದ್ದು, ”ತಮ್ಮ ಜೊತೆ ಯಾವುದೇ ಚರ್ಚೆನಡೆಸದೇ ಅಥವಾ ಪಠ್ಯ ಕೈಬಿಡುವ ವಿಚಾರ ತಿಳಿಸಿಲ್ಲ” ಎಂದು ಅವರು ಹೇಳಿದರು.

ಎನ್‌ಸಿಇಆರ್‌ಟಿಯು ಈ ರೀತಿ ಪಠ್ಯ ಕೈಬಿಡುವುದರ ಹಿಂದೆ ಯಾವುದೇ ಶೈಕ್ಷಣಿಕ ತಾರ್ಕಿಕತೆಯನ್ನು ನೋಡಲಾಗಿಲ್ಲ ಎಂದು ಪಾಲ್ಶಿಕರ್ ಮತ್ತು ಯಾದವ್ ಅವರು ಹೇಳಿದ್ದಾರೆ.

”ಪಠ್ಯಪುಸ್ತಕಗಳು ಪಕ್ಷಪಾತದ ರೀತಿಯಲ್ಲಿ ರೂಪಿಸಬಾರದು ಮತ್ತು ಸಮಾಜ ವಿಜ್ಞಾನದ ವಿದ್ಯಾರ್ಥಿಗಳಲ್ಲಿ ವಿಮರ್ಶೆ ಮತ್ತು ಪ್ರಶ್ನಿಸುವ ಮನೋಭಾವವನ್ನು ತಗ್ಗಿಸಬಾರದು” ಎಂದು ಪತ್ರದಲ್ಲಿ ಸೇರಿಸಲಾಗಿದೆ.

“ವಿರೂಪಗೊಂಡ ಮತ್ತು ಶೈಕ್ಷಣಿಕವಾಗಿ ಕಾರ್ಯನಿರ್ವಹಿಸದ ಪಠ್ಯಪುಸ್ತಕಗಳಿಗೆ” ತಮ್ಮ ಹೆಸರುಗಳನ್ನು ಮುಖ್ಯ ಸಲಹೆಗಾರರಾಗಿ ಉಲ್ಲೇಖಿಸಿರುವುದು “ಮುಜುಗರ” ಎಂದು ಶಿಕ್ಷಣತಜ್ಞ ಮತ್ತು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

ಇದನ್ನೂ ಓದಿ; ಸಿಎಎ, ಎನ್‌ಆರ್‌ಸಿ ಟೀಕಿಸಿ ನಾಟಕ ಪ್ರದರ್ಶನ: ಬೀದರ್‌ನ ಶಾಹೀನ್ ಶಾಲೆಯ ವಿರುದ್ಧದ ದೇಶದ್ರೋಹ ಪ್ರಕರಣ… ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...