Homeಮುಖಪುಟಮತೀಯ ಗೂಂಡಾಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭ

ಮತೀಯ ಗೂಂಡಾಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭ

- Advertisement -
- Advertisement -

ರಾಜ್ಯದ ಕರಾವಳಿಯಲ್ಲಿ ಮತೀಯ ಗೂಂಡಾಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭವಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್​ ಜೈನ್ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬೆನ್ನಲ್ಲೇ ಮತೀಯ ಗೂಂಡಾಗಿರಿಗಳಿಗೆ ಕಡಿವಾಣ ಹಾಕಲು ಆ್ಯಂಟಿ ಕಮ್ಯುನಲ್ ವಿಂಗ್ ಆರಂಭಿಸುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದರು. ಮಂಗಳೂರು ಕಮಿಷನರೆಟ್ ವ್ಯಾಪ್ತಿಯಲ್ಲಿ ನೂತನ ಪಡೆಯಾದ ಆ್ಯಂಟಿ ಕಮ್ಯೂನಲ್ ವಿಂಗ್ ಸ್ಥಾಪಿಸುವ ಅಗತ್ಯವಿದೆ ಎಂದು ಮಂಗಳೂರಿಗೆ ಭೇಟಿ ನೀಡಿದ ವೇಳೆ ಹೇಳಿದ್ದರು. ಅದೀಗ ಕಾರ್ಯರೂಪಕ್ಕೆ ಬಂದಾಂತಾಗಿದೆ.

ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಮಂಗಳೂರು ಕಮಿಷನರೆಟ್ ವ್ಯಾಪ್ತಿಯಲ್ಲಿ ಕೆಲಸ ಮಾಡಲಿದ್ದು, ಸಿಎಸ್​ವಿ ಇನ್ಸ್​ಪೆಕ್ಟರ್ ಸೇರಿದಂತೆ ಐವರು ಸಿಬ್ಬಂದಿಯೊಂದಿಗೆ ಆ್ಯಂಟಿ ಕಮ್ಯೂನಲ್ ವಿಂಗ್ ಕಾರ್ಯಾಚರಣೆ ನಡೆಸಲಿದೆ ಎಂದು ಕುಲದೀಪ್ ಕುಮಾರ್​ ಜೈನ್ ಹೇಳಿದ್ದಾರೆ.

“ಮಂಗಳೂರು ನಗರದ ಸಿಸಿಬಿ ಎಸಿಪಿ ಉಸ್ತುವಾರಿಯಲ್ಲಿ “ಆ್ಯಂಟಿ‌ ಕಮ್ಯುನಲ್ ವಿಂಗ್” ತಂಡ ರಚನೆ ಮಾಡಲಾಗಿದ್ದು, ನಗರದಲ್ಲಿ ನಡೆಯಬಹುದಾದ ಅನೈತಿಕ ಪೊಲೀಸ್‌ಗಿರಿ ಸಮಸ್ಯೆಯನ್ನು ನಿಭಾಯಿಸುವುದು ಇದರ ಕರ್ತವ್ಯವಾಗಿದೆ” ಎಂದು ಅವರು ಹೇಳಿದ್ದಾರೆ.

“ಈ ಹಿಂದೆ ವರದಿಯಾಗಿರುವ ಕೋಮು ವಿಚಾರಕ್ಕೆ ಸಂಬಂಧಿಸಿದ ಎಲ್ಲ ಕೊಲೆ, ಕೊಲೆ ಪ್ರಯತ್ನ, ದೊಂಬಿ ಪ್ರಕರಣಗಳು, ನೈತಿಕ ಪೊಲೀಸ್‌ಗಿರಿ ಮತ್ತು ಗೋವುಗಳ ಕಳ್ಳತನ, ಅಕ್ರಮ ಗೋ-ಸಾಗಾಟ, ಗೋ-ವಧೆ ಮುಂತಾದ ಪ್ರಕರಣಗಳನ್ನು ಈ ವಿಂಗ್‌ ಪರಿಶೀಲನೆ ನಡೆಸಲಿದೆ. ಅವುಗಳಲ್ಲಿನ ಆರೋಪಿತರ ಚಲನವಲನಗಳ ಬಗ್ಗೆ ನಿತ್ಯ ನಿಗಾವಹಿಸುವುದು, ಅವರ ವಿರುದ್ಧ ಭದ್ರತಾ ಕಾಯ್ದೆಯಡಿ ಮುಚ್ಚಳಿಕೆ ಪಡೆದುಕೊಳ್ಳುವುದು, ಕೋಮು ವಿಚಾರಕ್ಕೆ ಸಂಬಂಧಪಟ್ಟಂತೆ ಕಾರ್ಯಾಚರಿಸುತ್ತಿರುವ ಎಲ್ಲ ಸಂಘಟನೆಗಳ ಬಗ್ಗೆ ಮಾಹಿತಿಯನ್ನು ಆ್ಯಂಟಿ‌ ಕಮ್ಯುನಲ್ ವಿಂಗ್ ಸಂಗ್ರಹ ಮಾಡಲಿದೆ” ಎಂದು ಅವರು ಮಾಹಿತಿ ನೀಡಿದರು.

ಬೊಮ್ಮಾಯಿಯವರು ಸಿಎಂ ಆಗಿದ್ದಾಗ ಕ್ರಿಯೆಗೆ ಪ್ರತಿಕ್ರಿಯೆ ಇದ್ದೆ ಇರುತ್ತದೆ ಎಂದು ಹೇಳುವ ಮೂಲಕ ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿಕೊಂಡಿದ್ದರು. ಅದಾದ ನಂತರ ಸಾಲು ಸಾಲು ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳು ಕರಾವಳಿಯಲ್ಲಿ ವರದಿಯಾಗಿದ್ದವು. ಆ ಹಿನ್ನೆಲೆಯಲ್ಲಿ ಅವುಗಳಿಗೆ ಕಡಿವಾಣ ಹಾಕಬೇಕೆಂಬ ಕೂಗು ಜೋರಾಗಿ ಕೇಳಿಬಂದಿತ್ತು. ಆ ಹಿನ್ನೆಲೆಯಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಇದನ್ನೂ ಓದಿ; ದಕ್ಷಿಣ ಕನ್ನಡದಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಯುವಕನನ್ನು ಅರೆಬೆತ್ತಲೆಗೊಳಿಸಿ ತೀವ್ರ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...