Homeಕರ್ನಾಟಕಬಿಜೆಪಿಯವರು ಅದೆಷ್ಟೇ ಷಡ್ಯಂತ್ರ ನಡೆಸಿದರೂ ಅನ್ನಭಾಗ್ಯದ ಅಕ್ಕಿ 10 ಕೆಜಿಗೆ ಏರಿಸುವುದು ನಿಶ್ಚಿತ: ಕಾಂಗ್ರೆಸ್ ವಾಗ್ದಾನ

ಬಿಜೆಪಿಯವರು ಅದೆಷ್ಟೇ ಷಡ್ಯಂತ್ರ ನಡೆಸಿದರೂ ಅನ್ನಭಾಗ್ಯದ ಅಕ್ಕಿ 10 ಕೆಜಿಗೆ ಏರಿಸುವುದು ನಿಶ್ಚಿತ: ಕಾಂಗ್ರೆಸ್ ವಾಗ್ದಾನ

- Advertisement -
- Advertisement -

ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಎಂದೇ ಕರೆಸಿಕೊಳ್ಳುವ ”ಅನ್ನಭಾಗ್ಯ” ಯೋಜನೆಗೆ ಇದೀಗ ಕತ್ತರಿ ಹಾಕಲಾಗುತ್ತದೆ ಎಂದು ಎನ್ನುವ ವಿಚಾರ ಚರ್ಚೆಯಾಗುತ್ತಿದೆ. ಈ ಕುರಿತು ಕಾಂಗ್ರೆಸ್ ಕಿಡಿಕಾರಿದ್ದು, ”ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ನಾಯಕರು ಅದೆಷ್ಟೇ ಷಡ್ಯಂತ್ರ ನಡೆಸಿದರೂ ನಾವು ಅನ್ನಭಾಗ್ಯದ ಅಕ್ಕಿಯನ್ನು 10 ಕೆಜಿಗೆ ಏರಿಸುವುದು ನಿಶ್ಚಿತ” ಎಂದು ಹೇಳಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ”ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ನಾಯಕರು ಅದೆಷ್ಟೇ ಷಡ್ಯಂತ್ರ ನಡೆಸಿದರೂ ನಾವು ಅನ್ನಭಾಗ್ಯದ ಅಕ್ಕಿಯನ್ನು 10 ಕೆಜಿಗೆ ಏರಿಸುವುದು ನಿಶ್ಚಿತ. ಬಸವಣ್ಣನ ಅನುಭವ ಮಂಟಪದ ದಾಸೋಹಕ್ಕೂ ವಿರೋಧಿಗಳು ಇಂತಹದ್ದೇ ಅಡೆತಡೆಗಳನ್ನು ಸೃಷ್ಟಿಸಿದ್ದರು. ನಮ್ಮ ಅನ್ನಭಾಗ್ಯದ ದಾಸೋಹವನ್ನು ಬಿಜೆಪಿಗರ ಯಾವ ಕುತಂತ್ರವೂ ತಡೆಯಲು ಸಾಧ್ಯವಿಲ್ಲ” ಎಂದು ಖಡಕ್ ಸಂದೇಶ ನೀಡಿದ್ದಾರೆ.

”ಕೇಂದ್ರ ಸರ್ಕಾರ ಸ್ಪಷ್ಟವಾಗಿ ಆಹಾರ ಹಕ್ಕು ಕಾಯ್ದೆಯನ್ನು ಉಲ್ಲಂಘಿಸುತ್ತಿದೆ. 7 ಲಕ್ಷ ಟನ್ ಅಕ್ಕಿ ಸಂಗ್ರಹವಿದ್ದರೂ ರಾಜ್ಯಗಳಿಗೆ FCI ಅಕ್ಕಿ ಮಾರಾಟ ಮಾಡುವುದನ್ನು ನಿರಾಕರಿಸುವ ಮೂಲಕ ಕನ್ನಡಿಗರ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ ಮೋದಿ. ಖಾಸಗಿಯವರಿಗೆ ಮಾರಾಟ ಮಾಡುವ ಅವಕಾಶವಿರುವಾಗ ರಾಜ್ಯ ಸರ್ಕಾರಕ್ಕೆ ಏಕೆ ಈ ನಿರಾಕರಣೆ. ಇದು ದುರುದ್ದೇಶವಲ್ಲದೆ ಇನ್ನೇನು?” ಎಂದು ಪ್ರಶ್ನೆ ಮಾಡಿದೆ.

”ಕಳೆದ ವರ್ಷ ಸರ್ಕಾರಿ ದಾಸ್ತಾನಿನಲ್ಲಿದ್ದ ಅಪಾರ ಪ್ರಮಾಣದ ದವಸ ಧಾನ್ಯದ ಹಾಳಾಗಿ ಹೋಗಿದ್ದ ವರದಿಯಾಗಿತ್ತು. ಈಗಲೂ 7 ಲಕ್ಷ ಟನ್ ಅಕ್ಕಿಯನ್ನು ಗೋದಾಮಿನಲ್ಲಿಟ್ಟು ಕೊಳೆಸುತ್ತಿದೆ ಕೇಂದ್ರ ಸರ್ಕಾರ. ರಾಜ್ಯ ಸರ್ಕಾರ ಹಣ ಕೊಟ್ಟರೂ ಅಕ್ಕಿ ಕೊಡಲೊಪ್ಪದ್ದು ಜನವಿರೋಧಿ ನಡೆಯಲ್ಲವೇ? ಬಡವರ ಅನ್ನ ಕಿತ್ತೂಕೊಳ್ಳಲು ಬಿಜೆಪಿ ನಾನಾ ಮಾರ್ಗ ಹುಡುಕುತ್ತಿದೆ!” ಎಂದು ಟೀಕೆ ಮಾಡಿದೆ.

”ಕಳೆದ 6 ವರ್ಷದಲ್ಲಿ 25,000 ಮೆಟ್ರಿಕ್ ಟನ್ ದವಸ ಧಾನ್ಯಗಳು ಕೇಂದ್ರದ ಗೋದಾಮಿನಲ್ಲಿ ನಷ್ಟವಾಗಿದೆ. ಮೈತುಂಬ ದ್ವೇಷ ರಾಜಕಾರಣವನ್ನೇ ತುಂಬಿಕೊಂಡಿರುವ ಮೋದಿಯವರಿಗೆ ದವಸಧಾನ್ಯಗಳನ್ನು ಜನರ ಹಸಿವು ನೀಗಿಸಲು ನೀಡುವುದಕ್ಕಿಂತ ಇಲಿ ಹೆಗ್ಗಣಗಳ ಹೊಟ್ಟೆ ತುಂಬಿಸುವಲ್ಲಿಯೇ ಹೆಚ್ಚಿನ ಆಸಕ್ತಿ ಇದ್ದಂತಿದೆ. ಆಹಾರ ಹಕ್ಕನ್ನು ನಿರಾಕರಿಸುವುದು ಸಂವಿಧಾನ ವಿರೋಧಿ ನಡೆ” ಎಂದು ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ಬಿಜೆಪಿ ನಾಯಕರ ವಿರುದ್ದ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ಈ ಬಗ್ಗೆ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ”ಹೆಚ್ಚುವರಿ ತಲಾ 5 ಕೆ.ಜಿ ಅಕ್ಕಿ ವಿತರಣೆಗಾಗಿ ತಿಂಗಳಿಗೆ 2.28 ಲಕ್ಷ ಟನ್ ಅಕ್ಕಿ ನೀಡಲು ಒಪ್ಪಿದ್ದ ಭಾರತೀಯ ಆಹಾರ ನಿಗಮ ಈಗ ಹಿಂದೇಟು ಹಾಕಿದೆ. ಇದಕ್ಕೆ ಬಿಜೆಪಿಯ ಬಡವರ ವಿರೋಧಿ ಧೋರಣೆಯೇ ಕಾರಣ. ಈ ಸಂಬಂಧ ಕೇಂದ್ರಕ್ಕೆ ಪ್ರತಿಭಟನಾ ಪತ್ರ ಬರೆಯಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

”ಭಾರತೀಯ ಆಹಾರ ನಿಗಮವು 7 ಲಕ್ಷ ಟನ್ ಅಕ್ಕಿ ಇಟ್ಟುಕೊಂಡು ಕೊಡುವುದಿಲ್ಲ ಎನ್ನುತ್ತಿದೆ. ಅನ್ನಭಾಗ್ಯ ಯೋಜನೆಯಿಂದ ಕಾಂಗ್ರೆಸ್‌ಗೆ ಒಳ್ಳೆಯ ಹೆಸರು ಬರುತ್ತದೆ. ಬಡವರ ಕಲ್ಯಾಣ ಆಗುತ್ತದೆ. ಅದನ್ನು ತಪ್ಪಿಸಬೇಕು ಎಂದೇ ಕೇಂದ್ರ ಸರ್ಕಾರ ರಾಜಕಾರಣ ಮಾಡುತ್ತಿದೆ” ಎಂದು ಹೇಳಿದರು.

”ನಿಗಮವು ನಮಗೆ ಅಕ್ಕಿ ಕೊಡುವುದಾಗಿ ತಿಳಿಸಿದ್ದರಿಂದಲೇ ನಾವು ಜುಲೈ 1 ರಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ದಾರರಿಗೆ ತಲಾ 10 ಕೆ.ಜಿ ಅಕ್ಕಿ ಕೊಡುವುದಾಗಿ ಹೇಳಿದ್ದೆವು. ಈಗ ಕೊಡುವುದಿಲ್ಲ ಎನ್ನುತ್ತಿದೆ. ಬೇರೆ ರಾಜ್ಯಗಳಿಂದ ಖರೀದಿಸಬೇಕಾಗಿದೆ. ತಮ್ಮ ಬಳಿ ಅಕ್ಕಿ ಇಲ್ಲ ಎಂದು ಪಂಜಾಬ್ ಹೇಳಿದೆ. ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ನೋಡೋಣ ಎಂದಿದ್ದಾರೆ. ಆ ರಾಜ್ಯಗಳ ಜತೆ ಮಾತುಕತೆಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ಅಲ್ಲಿಗೆ ತೆರಳಲಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅನ್ನಭಾಗ್ಯಕ್ಕೆ ಕತ್ತರಿ ಹಾಕಲು ಮುಂದಾದ ಕೇಂದ್ರ: ಪ್ರತಿಭಟನಾ ಪತ್ರ ಬರೆಯುವ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...