Homeಕರ್ನಾಟಕಕರ್ನಾಟಕದಲ್ಲಿ ನೆರೆಯಿಂದಾದ ಕೃಷಿ ನಷ್ಟ ಎಷ್ಟು?

ಕರ್ನಾಟಕದಲ್ಲಿ ನೆರೆಯಿಂದಾದ ಕೃಷಿ ನಷ್ಟ ಎಷ್ಟು?

- Advertisement -
- Advertisement -

ಈ ಬಾರಿಯ ಮಳೆ ಮತ್ತು ಪ್ರವಾಹಕ್ಕೆ ರಾಜ್ಯದ 2/3 ಜಿಲ್ಲೆ ಮತ್ತು ತಾಲೂಕುಗಳು ಬಲಿಯಾಗಿವೆ. ನೇರವಾಗಿ ಮಳೆ ಬಿದ್ದು ಅದರಿಂದುಂಟಾದ ಪ್ರವಾಹಕ್ಕೆ ತುತ್ತಾದ ತಾಲೂಕುಗಳು ಒಂದೆಡೆಯಾದರೆ, ಅಂಥಾ ಅನಾಹುತಕಾರಿ ಮಳೆ ಇಲ್ಲದೆಯೂ, ಮಲೆನಾಡು ಮತ್ತು ನೆರೆಯ ಮಹಾರಾಷ್ಟ್ರದಲ್ಲಿ ಸುರಿದ ಕುಂಭದ್ರೋಣ ಮಳೆಯಿಂದಾಗಿ ಸುರಿದ ನೀರು ಹರಿಯಬಿಟ್ಟ ಕಾರಣ ಉಂಟಾದ ನೆರೆಗೆ ಬಲಿಯಾದ ತಾಲೂಕುಗಳು ಇನ್ನೊಂದೆಡೆ. ರಸ್ತೆ, ಸೇತುವೆ ಮುಂತಾದವುಗಳು ಕೊಚ್ಚಿಹೋದ ಕಾರಣಕ್ಕುಂಟಾದ ಮೂಲ ಸಂರಚನೆಯ ನಷ್ಟ, ಖಾಸಗಿ ಮನೆ ಮಠ, ಪಂಪ್‍ಸೆಟ್ ಇತ್ಯಾದಿಗಳ ನಷ್ಟ ಸಾವಿರಾರು ಕೋಟಿ ರೂಪಾಯಿಗಳು. ಇದಕ್ಕಿಂತಲೂ ಘೋರವೆಂದರೆ ಲಕ್ಷಾಂತರ ಎಕರೆಗಳಲ್ಲಿ ಸಾಗುವಳಿ ಆದ ಬೆಳೆ ನಾಶ. ಪ್ರವಾಹ ಮತ್ತು ಕುಂಭದ್ರೋಣ ಮಳೆಗೆ ತುತ್ತಾದ ಜಿಲ್ಲೆಗಳ ಸಾಗುವಳಿ ಜಮೀನಿನ ಪ್ರಮಾಣ ನೋಡಿ. ಇದರಲ್ಲಿ ಶೇ. 50-70ರಷ್ಟು ಬೆಳೆ ನಾಶವಾಗುವುದು ಖಂಡಿತ. ಕೃಷಿ ವಿಜ್ಞಾನಿಗಳು ಹೇಳಿದ ಹಾಗೆ ಒಂದು ವಾರ ಬಿಡಿ; ಕೇವಲ ಮೂರು ದಿನ ನೀರು ನಿಂತರೆ ಭತ್ತ ಮತ್ತು ಸ್ವಲ್ಪಮಟ್ಟಿಗೆ ರಾಗಿ ಮಾತ್ರ ತಾಳಿಕೊಳ್ಳಬಲ್ಲುದು. ಉಳಿದ ಬೆಳೆಗಳು ಪೋಷಕಾಂಶ ಹೀರಲಾಗದೇ ನಲುಗುತ್ತವೆ. ಅದೇರೀತಿ ಮೋಡ ಮುಸುಕಿದ ವಾತಾವರಣ ವಾರ ಕಾಲ ಇದ್ದರೆ ದ್ಯುತಿ ಸಂಶ್ಲೇಷಣೆ ಮಾಡಲಾಗದೇ ಗಿಡಗಳು ಸೊರಗುತ್ತವೆ. ಈ ಕಾರಣಕ್ಕೇ ಇಳುವರಿ ಶೇ.50-70ರಷ್ಟು ನಷ್ಟವಾಗುತ್ತದೆ.

ಈ ಮಳೆ ಹಾನಿಗೊಳಗಾದ ಭೂಪ್ರದೇಶದಲ್ಲಿ ಮೂರು ವಿಧವಿದೆ.
1. ಮಲೆನಾಡಿನ ವ್ಯಾಪಾರಿ ಬೆಳೆಗಳಾದ ಅಡಿಕೆ, ಕಾಫಿ ಬೆಳೆಯುವ ಪ್ರದೇಶ; ಇಲ್ಲಿ ಕಡುಬೇಸಿಗೆಯಿಂದಲೇ ಕಾಫಿ ಮತ್ತು ಅಡಿಕೆ ನಲುಗಿದ್ದು, ಈಗಿನ ಮಳೆಯಿಂದಾಗಿ ಕೊಳೆರೋಗ ಸಹಿತ ತೀವ್ರ ರೋಗ ಬಾಧೆಗೆ ತುತ್ತಾಗಿ ಬೆಳೆ ನಷ್ಟವಾಗುವ ಸಾಧ್ಯತೆ ದಟ್ಟವಾಗಿದೆ. ಈ ಪ್ರದೇಶದ ಸಾವಿರಾರು ಎಕರೆಗಳಲ್ಲಿ ಬಡ ಸಣ್ಣರೈತರು ಉಣ್ಣುವ ಸಲುವಾಗಿಯೇ ಮಳೆಆಶ್ರಿತ ಭತ್ತ ಬೆಳೆಯುತ್ತಾರೆ. (ಭತ್ತ ಬಿಟ್ಟು ಬೇರೆ ಯಾವ ಧಾನ್ಯವನ್ನೂ ಇವರು ಬೆಳೆಯುವುದಿಲ್ಲ) ಆರಂಭದಲ್ಲಿ ಮಳೆ ಇಲ್ಲದ ಕಾರಣ ಈ ರೈತರ ಭತ್ತದ ನಾಟಿ ಈ ಬಾರಿ ತಡವಾಗಿದೆ. ಈಗ ಭೀಷಣ ಮಳೆಯಿಂದಾಗಿ ಭತ್ತದ ಇಳುವರಿ ಕುಂಠಿತ/ ನಾಶವಾಗಲಿದೆ.

2. ಭೀಕರ ಮಳೆ ಮತ್ತು ಪ್ರವಾಹ ಎರಡಕ್ಕೂ ತುತ್ತಾದ ಪ್ರದೇಶಗಳು: ಬೆಳಗಾವಿ, ಗದಗ, ಭಾಗಶಃ ಶಿವಮೊಗ್ಗ, ಬಾಗಲಕೋಟೆಯಂಥಾ ಪ್ರದೇಶಗಳು ಪ್ರವಾಹ ಮತ್ತು ಹನಿ ಕಡಿಯದ ಮಲೇ ಎರಡರಿಂದಲೂ ಬಾಧೆ ಅನುಭವಿಸಿವೆ. ಇಲ್ಲಿನ ಬೆಳೆಗಳು ನಾನು ಮೇಲೆ ಹೇಳಿದ ಎರಡೂ ಕಾರಣಗಳಿಂದ ನಾಶವಾಗಲಿವೆ.

3. ಮಳೆ ಇಲ್ಲದಿದ್ದರೂ ತುಂಗೆ, ಭೀಮಾ, ಮಲಪ್ರಭ, ಕೃಷ್ಣಾಗಳ ಭರಪೂರ ನೀರಿನ ಪ್ರವಾಹದಿಂದ ನಲುಗಿದ ಜಿಲ್ಲೆಗಳಲ್ಲೂ ಬೆಳೆ ಸಂಪೂರ್ಣ ನಾಶವಾಗುವ ಸಾಧ್ಯತೆ ಇದೆ.

ಸುಮ್ಮನೆ ಲೆಕ್ಕ ಹಾಕಿ, ಈ ಕೃಷಿ ಪ್ರದೇಶ ಕರ್ನಾಟಕದ ಒಟ್ಟಾರೆ ಕೃಷಿ ಪ್ರದೇಶದ ಶೇ..70ರಷ್ಟಿದೆ. ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದ ಹಾಗೆ 40 ಲಕ್ಷ ಹೆಕ್ಟೇರ್ ಜಮೀನು ಬಾಧೆಗೊಳಗಾಗಿದೆ ಎಂದೇ ಇಟ್ಟುಕೊಂಡು; ಹೆಕ್ಟೇರಿಗೆ ಕನಿಷ್ಠ 25 ಸಾವಿರ ನಷ್ಟದಂತೆ ಅಂದಾಜು ಮಾಡಿದರೂ, ಒಟ್ಟಾರೆ ನಷ್ಟ 15 ಸಾವಿರ ಕೋಟಿ ಮೀರಲಿದೆ.

ನೆನಪಿಡಿ. ಇದು ಈ ಮುಂಗಾರು ಬೆಳೆಯ ನಷ್ಟ. ನೆನಪಿಡಬೇಕಾದ್ದು ಈ ಬಾರಿ ಮುಂಗಾರು ಕೈಕೊಟ್ಟ ಕಾರಣ ರೈತರು ಎರಡೆರಡು ಬಾರಿ ಬಿತ್ತನೆ ಮಾಡಿದ್ದಿದೆ. ಮಳೆಯಿಲ್ಲದೇ ಆದ ನಷ್ಟ ಮತ್ತು ಅತಿವೃಷ್ಟಿಯಿಂದಾದ ನಷ್ಟ ಲೆಕ್ಕ ಹಾಕಿದರೆ ತಲೆ ತಿರುಗುತ್ತದೆ.

ಈ ಮಳೆ ಈಗ ಒಮ್ಮೆ ಕಮ್ಮಿ ಆಗಿ ಮತ್ತೆ ಶುರು ಹಚ್ಚಿಕೊಂಡು, ನಾಡಿದ್ದು ಹಿಂಗಾರಿನಲ್ಲಿ ಒಂದೆರಡು ಅಧಿಕ ಮಳೆ ಬಂದರೂ ಹಿಂಗಾರು ಬೆಳೆಯೂ ಕೈಗೆ ದಕ್ಕುವುದು ಕಷ್ಟ. ತೀವ್ರ ನೀರು ನಿಂತಾಗ ಮಣ್ಣಿನ ಜೈವಿಕ ಚಟುವಟಿಕೆ ಬಂದ್ ಆಗಿ ಮಣ್ಣಿನ ಸ್ವರೂಪವೇ ಬದಲಾಗುತ್ತದೆ. ಇದು ಮೊದಲಿನ ಮಟ್ಟಕ್ಕೆ ಬರಲು ಎರಡು ವರ್ಷ ಬೇಕು.

ಮೂರು R – Relief, Rehabilitation and Reconstruction ಎಂಬ ಸೂತ್ರ ಇದೆ. ನಮ್ಮ ಸರ್ಕಾರ ಮೊದಲನೆಯದ್ದನ್ನು ನಿಭಾಯಿಸೀತು. ಎರಡನೆಯದಕ್ಕೆ ಗಮನಾರ್ಹ ಹಣ ಬೇಕು. ಮತ್ತು ಇದನ್ನು ಕಾಲಮಿತಿಯಲ್ಲಿ ಮಾಡಬೇಕು.

ಮೂರನೆಯ- ಪುನರ್ರಚನೆ ಎಂಬುದು ಒಟ್ಟಾರೆ ಕೃಷಿಯನ್ನು ಸುಸ್ಥಿರಗೊಳಿಸಲು ಬೇಕಾದ ದೀರ್ಘಕಾಲೀನ ಮಾರ್ಗೋಪಾಯಗಳ ಬಗ್ಗೆ. ಈ ಕುರಿತಂತೆ ಸರ್ಕಾರದ ಮಿದುಳು ಸಂಪೂರ್ಣ ಖಾಲಿಯಾಗಿರುವುದು ಈಗಾಗಲೇ ಬಂದಿರುವ ನೀತಿ ಪತ್ರಗಳಲ್ಲಿ ಗೋಚರಿಸುವ ಕಾರಣ ಆ ಬಗ್ಗೆ ಹೆಚ್ಚೇನು ನಿರೀಕ್ಷಿಸುವಂತಿಲ್ಲ. ಆದರೆ ಹವಾಮಾನ ಬದಲಾವಣೆ ಈಗ ಮನೆ ಬಾಗಿಲು ತಟ್ಟುತ್ತಿರುವ ಮಾರಿ ಎಂಬುದು ಸರ್ಕಾರಕ್ಕೆ ಗೊತ್ತಾದರೆ ಆಮೂಲಾಗ್ರವಾಗಿ ಹೊಸ ಕಾರ್ಯಸೂಚಿಗೆ ಅದು ತಯಾರಾಗಬೇಕು. ಹವಾಮಾನ ಬದಲಾವಣೆ ಎಂದರೆ ವಯಸ್ಸಾದಂತೆ ಚಳಿಯಾಗುವ ಸಂಗತಿ ಎಂದು ಭಾವಿಸುವ ಪ್ರಧಾನಿ ಇರುವಾಗ ನಮ್ಮ ನಾಯಕರು ಇನ್ನೇನು ಯೋಚಿಸಿಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...