Homeಕರ್ನಾಟಕಕೋಮುದ್ವೇಷದಿಂದ ಸಾವು: ಬಿಜೆಪಿ ಸರ್ಕಾರದಲ್ಲಿ ತಾರತಮ್ಯಕ್ಕೆ ಒಳಗಾಗಿದ್ದ 4 ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಕೋಮುದ್ವೇಷದಿಂದ ಸಾವು: ಬಿಜೆಪಿ ಸರ್ಕಾರದಲ್ಲಿ ತಾರತಮ್ಯಕ್ಕೆ ಒಳಗಾಗಿದ್ದ 4 ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ದಕ್ಷಿಣ ಕನ್ನಡ ಜಿಲ್ಲೆಯ ಮಸೂದ್, ಫಾಝಿಲ್, ಜಲೀಲ್, ದೀಪಕ್ ರಾವ್ ಕುಟುಂಬಗಳಿಗೆ ನೂತನ ಕಾಂಗ್ರೆಸ್ ಸರ್ಕಾರ ತಲಾ 25 ಲಕ್ಷ ರೂಗಳ ಪರಿಹಾರ ಘೋಷಿಸಿದೆ.

- Advertisement -
- Advertisement -

ಬಿಜೆಪಿ ಆಡಳಿತದಲ್ಲಿ ಕೋಮು ದ್ವೇಷದಿಂದ ಕೊಲೆಗೀಡಾಗಿ, ಆಗಿನ ಸರ್ಕಾರದ ತಾರತಮ್ಯದಿಂದ ಪರಿಹಾರ ವಂಚಿತರಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಸೂದ್, ಫಾಝಿಲ್, ಜಲೀಲ್, ದೀಪಕ್ ರಾವ್ ಕುಟುಂಬಗಳಿಗೆ ನೂತನ ಕಾಂಗ್ರೆಸ್ ಸರ್ಕಾರ ತಲಾ 25 ಲಕ್ಷ ರೂಗಳ ಪರಿಹಾರ ಘೋಷಿಸಿದೆ.

ಕಳೆದ 5 ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ ಕೋಮು ದ್ವೇ‍ಷದಿಂದಾಗಿ ಪ್ರಾಣ ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ನೀಡಬೇಕೆಂದು ಸಿಎಂ ಸಿದ್ದರಾಮಯ್ಯನವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಬೆಳ್ಳಾರೆಯ ಮಹಮ್ಮದ್ ಮಸೂದ್, ಸುರತ್ಕಲ್‌ನ ಮೊಹಮ್ಮದ್ ಫಾಝಿಲ್, ಕಾಟಿಪಳ್ಳದ ಅಬ್ದುಲ್ ಜಲೀಲ್ ಮತ್ತು ಕಾಟಿಪಳ್ಳದ ದೀಪಕ್ ರಾವ್ ಅವರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ 19 ಜುಲೈ 2022ರಂದು ಮಸೂದ್ ಎಂಬ ಮುಸ್ಲಿಂ ಯುವಕನನ್ನು ಕೊಲೆ ಮಾಡಲಾಯಿತು. ಕ್ಷುಲ್ಲಕ ಕಾರಣಕ್ಕೆ ಮಸೂದ್ (18) ಮೇಲೆ ಕೆಲವರು ಹಲ್ಲೆ ನಡೆಸಿ ಕೊಂದಿದ್ದರು. ನಂತರ ಅದೇ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಎಂಬ ಯುವಕನನ್ನು 26 ಜುಲೈ 2022ರಂದು ದುಷ್ಕರ್ಮಿಗಳು ಹತ್ಯೆ ಮಾಡಿದರು. ಇಷ್ಟಕ್ಕೆ ನಿಲ್ಲದೆ ಒಂದು ದಿನದ ನಂತರದಲ್ಲಿ ಮಂಗಳೂರಿನ ಸುರತ್ಕಲ್‌ನಲ್ಲಿ 28 ಜುಲೈ 2022ರಂದು ಫಾಝಿಲ್‌ ಎಂಬ ಅಮಾಯಕನನ್ನು ಕೊಲ್ಲಲಾಯಿತು. ಈ ಪ್ರಕರಣಗಳ ಹಿಂದೆ ಕೋಮುದ್ವೇಷ ಕೆಲಸ ಮಾಡಿತ್ತು.

ಪ್ರವೀಣ್‌ ಮನೆಗೆ ಬಿಜೆಪಿಯ ಜನಪ್ರತಿನಿಧಿಗಳು ಭೇಟಿ ನೀಡಿದರು. ಸಿಎಂ ತೆರಳಿ 25 ಲಕ್ಷ ರೂ ಪರಿಹಾರ ಘೋಷಿಸಿದರು. ಆದರೆ ಅದೇ ಸಂದರ್ಭದಲ್ಲಿ ಕೊಲೆಯಾದ ಮಸೂದ್‌ಗಾಗಲೀ, ಫಾಝಿಲ್‌ಗಾಗಲೀ ಸರ್ಕಾರ ಪರಿಹಾರವನ್ನು ಘೋಷಿಸಲಿಲ್ಲ. ಅಮಾಯಕರಾದ ಮಸೂದ್‌, ಫಾಝಿಲ್‌ ಕುಟುಂಬವನ್ನು ಭೇಟಿ ಮಾಡಿ ಕನಿಷ್ಠ ಸಂತ್ವಾನವನ್ನು ಹೇಳುವ ಸೌಜನ್ಯವನ್ನೂ ತೋರಲಿಲ್ಲ. ಸಂವಿಧಾನವನ್ನು ಪಾಲಿಸುವುದಾಗಿ, ಯಾವುದೇ ಜಾತಿ, ಮತದ ಆಧಾರದಲ್ಲಿ ಅಧಿಕಾರ ನಡೆಸುವುದಿಲ್ಲವೆಂದು ಪ್ರಮಾಣ ವಚನ ಸ್ವೀಕರಿಸಿದ ಸಿಎಂ ವರ್ತನೆ ಅತ್ಯಂತ ಬಾಲಿಶವಾಗಿತ್ತು. ಈ ಕೊಲೆಗಳಿಂದ ಜರ್ಜರಿತವಾದ ಪೋಷಕರ ನೋವಿಗೆ ಧರ್ಮ, ಜಾತಿಯ ಸೋಂಕು ಇರುವುದಿಲ್ಲ ಎಂಬ ಕನಿಷ್ಠ ಅಂತಃಕರಣವೂ ರಾಜ್ಯವನ್ನಾಳುವ ಪಕ್ಷಕ್ಕೆ ಇಲ್ಲವೇ ಎಂಬ ಪ್ರಶ್ನೆ ಎದುರಾಗಿತ್ತು.

ಮಂಗಳೂರಿನ ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ 2022ರ ಡಿಸೆಂಬರ್ 24ರಂದು ಅಬ್ದುಲ್ ಜಲೀಲ್‌ ಎಂಬುವವರನ್ನು ಧರ್ಮದ್ವೇಷದ ಕಾರಣಕ್ಕಾಗಿ ಕೊಲ್ಲಲಾಗಿತ್ತು.

ಜನವರಿ 3 2018 ರಂದು ದೀಪಕ್‌ ರಾವ್ ಎಂಬ ಯುವಕ ಕೊಲ್ಲಲ್ಪಟ್ಟರು. ಆ ಸಮಯದಲ್ಲಿ ದೀಪಕ್ ಬಜರಂಗದಳ ಮತ್ತು ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹೇಳಿತ್ತು. ಆಗಿನ್ನೂ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದರು. ಅವರು ಸಂತ್ರಸ್ತರ ಮನೆಗೆ ಭೇಟಿ ನೀಡಿದ್ದರು.

ಇದನ್ನೂ ಓದಿ: ಮತೀಯ ಗೂಂಡಾಗಿರಿಯಿಂದ ಹಿಡಿದು ಶಾಲಾ ಕೊಠಡಿಯ ಕೇಸರಿ ಬಣ್ಣದವರೆಗೆ: ಬೊಮ್ಮಾಯಿ ಸರ್ಕಾರದ ಕೋಮು ರಾಜಕಾರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...