Homeಮುಖಪುಟಕಾಶ್ಮಿರದ ವಸ್ತುಸ್ಥಿತಿ: ಭಾರತದ ಮಾಧ್ಯಮದ ವರದಿಗೆ ವಿರುದ್ಧವಾಗಿ ಅಂತರಾಷ್ಟ್ರೀಯ ಮಾಧ್ಯಮದ ವರದಿಗಳು

ಕಾಶ್ಮಿರದ ವಸ್ತುಸ್ಥಿತಿ: ಭಾರತದ ಮಾಧ್ಯಮದ ವರದಿಗೆ ವಿರುದ್ಧವಾಗಿ ಅಂತರಾಷ್ಟ್ರೀಯ ಮಾಧ್ಯಮದ ವರದಿಗಳು

- Advertisement -
- Advertisement -

ಗೃಹ ಸಚಿವ ಅಮಿತ್ ಶಾ 370ನೇ ವಿಧಿಯ ರದ್ದು ಮಾಡಿ ಎಂಟ್ಹತ್ತು ದಿನಗಳು ಕಳೆದಿವೆ. ‘ಇದೊಂದು ಐತಿಹಾಸಿಕ ನಿರ್ಧಾರ’ ಎಂದು ದೇಶಾದ್ಯಂತ ಸಂಭ್ರಮವಿದೆ ಎಂದು ನಮ್ಮ ಮುಖ್ಯವಾಹಿನಿ ಮಾಧ್ಯಮಗಳು ವರದಿ ಮಾಡಿದವಷ್ಟೇ. ಆದರೆ ಕಾಶ್ಮೀರದ ನಿವಾಸಿಗಳು ಮತ್ತು ಹೊರಗಡೆ ಇರುವ ಕಾಶ್ಮೀರಿಗಳ ಧ್ವನಿ, ಅಭಿಪ್ರಾಯಗಳ ಸುದ್ದಿ ಕಾಣಲೇ ಇಲ್ಲ, ಕೇಳಿಸಲೇ ಇಲ್ಲ. ಕಾಶ್ಮೀರದಲ್ಲಿನ ಸಂಪರ್ಕ ವ್ಯವಸ್ಥೆಯನ್ನೇ ಬರಖಾಸ್ತು ಮಾಡಲಾಗಿತ್ತು. ಮೊಬೈಲ್, ಲ್ಯಾಂಡ್‍ಲೈನ್, ಇಂಟರ್‍ನೆಟ್ ಸಂಪರ್ಕಗಳನ್ನೆಲ್ಲ ಕಡಿತಗೊಳಿಸಲಾಗಿತ್ತು. ಮೊದಲೇ ವಿಶ್ವದ ಅತಿದೊಡ್ಡ ಮಿಲಿಟರಿ ಪ್ರದೇಶವೆಂದು ಗುರುತಿಸಲ್ಪಟ್ಟ ಕಾಶ್ಮೀರದೊಳಕ್ಕೆ, 370 ವಿಧಿ ರದ್ದು ಘೋಷಿಸುವ ಪೂರ್ವದಲ್ಲಿ ಮತ್ತೆ 46 ಸಾವಿರ ಸೈನಿಕರನ್ನು ನುಗ್ಗಿಸಿ ಪಹರೆಗೆ ಬಿಡಲಾಯಿತು.

ಇವತ್ತಿಗೆ (ಮಂಗಳವಾರ) ಅಲ್ಲಿ ಸ್ಥಳಿಯ ಸುದ್ದಿ ಪತ್ರಿಕೆಗಳು ಬಿಡುಗಡೆ ಆಗದೇ 10 ದಿನ ಕಳೆದವು. ಕೊನೆಯ ಬಾರಿ ಅಲ್ಲಿ ಸ್ಥಳೀಯ ಪತ್ರಿಕೆ ಪ್ರಕಟವಾಗಿದ್ದು ಆಗಸ್ಟ್ 4ರಂದು. ಸರ್ಕಾರ ನೀಡಿದ ಪ್ರಕಟಣೆಗಳಷ್ಟೇ ಕಾಶ್ಮೀರದಲ್ಲಿ ಎಲ್ಲ ಸರಿಯಾಗಿದೆ ಎಂಬ ವಿವರ ನೀಡುತ್ತಿದ್ದವು. ಆ ಪ್ರದೇಶದಲ್ಲಿರುವ ಭಾರತೀಯ ಪತ್ರಕರ್ತರಿಗೂ ಫೋಟೋ ತೆಗೆಯಲೂ ಅವಕಾಶ ನೀಡಿರಲಿಲ್ಲ. ಆದರೆ ಪರಿಸ್ಥಿತಿಯ ಚರ್ಚೆ ಕಡಿಮೆ ಆಗತೊಡಗಿದಂತೆ ಹಲವು ಮಾಧ್ಯಮ ಧ್ವನಿಗಳು ಸತ್ಯ ಹೇಳತೊಡಗಿದವು. ಆಗ ಗೊತ್ತಾಗಿದ್ದು ಕೇಂದ್ರ ಸರ್ಕಾರ ಮಾತ್ತು ಭಾರತದ ಮುಖ್ಯವಾಹಿನಿಗಳು ಹೇಳಿದಂತೆ ಪರಿಸ್ಥಿತಿ ನಾರ್ಮಲ್ ಆಗಿರಲೇ ಇಲ್ಲ! ಸತ್ಯ ಏನಾಗಿತ್ತೆಂದರೆ, ಜನರಲ್ಲಿ ಆಕ್ರೋಶ ತುಂಬಿತ್ತು, ಆಹಾರ ಮತ್ತು ಔಷಧಿಗಳ ಕೊರತೆಯಾಗಿತ್ತು, ತುರ್ತು ಚಿಕಿತ್ಸೆಯ ನೆರವೂ ಸಿಗದೇ ಜನ ಪ್ರಾಣಾಪಾಯ ಎದುರಿಸಿದರು, ಕೆಲವು ಕಿಲೋಮೀಟರ್ ಪ್ರಯಾಣಿಸಲೂ ಸಾರಿಗೆ ವ್ಯವಸ್ಥೆ ಇಲ್ಲದೇ ಜನ ಗಂಟೆಗಟ್ಟಲೇ ಕಾದಿದ್ದರು….ಆದರೆ, ಸರ್ಕಾರಿ ವಾಹನಗಳು ಸಂಚರಿಸುತ್ತಿದ್ದ ಕೆಲವೇ ಕೆಲವು ರಸ್ತೆಗಳನ್ನು ತೋರಿಸಿದ ಮುಖ್ಯ ವಾಹಿನಿ ಮಾಧ್ಯಮಗಳು ಕಾಶ್ಮೀರದಲ್ಲಿ ಎಲ್ಲವೂ ಸಹಜವಾಗಿದೆ ಎಂಬಂತೆ ತೋರಿಸುವ ಮೂಲಕ ಆತ್ಮವಂಚನೆ ಮಾಡಿಕೊಂಡು , ವೃತ್ತಿದ್ರೋಹವನ್ನೂ ಎಸಗಿದ್ದವು.

370ನೇ ವಿಧಿ ರದ್ದಾದ ಎರಡು ದಿನಗಳ ನಂತರ ರಕ್ಷಣಾ ಸಲಹೆಗಾರ ಅಜಿತ್ ದೋವಲಲ್ ಕಾಶ್ಮೀರಕ್ಕೆ ಹೋಗಿ ಕೆಲವು ಜನರ ಜೊತೆ ಬಿರ್ಯಾನಿ ತಿನ್ನುವ ಫೋಟೋ ಮತ್ತು ವಿಡಿಯೋಗಳನ್ನು ತೋರಿಸಿದ ಮಾಧ್ಯಮಗಳು, ‘ನೋಡಿ ಕಾಶ್ಮೀರದಲ್ಲಿ ಎಲ್ಲವೂ ಶಾಂತವಾಗಿದೆ. 370ನೇ ವಿಧಿ ರದ್ಧತಿಯ ನಂತರವೂ ಜನತೆ ಯಾವ ಪ್ರತಿರೋಧ ಮಾಡದೇ ಸಮ್ಮತಿಸಿದ್ದಾರೆ’ ಎಂಬ ಚಿತ್ರಣ ಕೊಡಲು ನಮ್ಮ ಮಾಧ್ಯಮಗಳು ಯತ್ನಿಸಿದವು.

ಕಾಶ್ಮೀರದ ಈ ‘ಸಹಜ’ ಪರಿಸ್ಥಿತಿಯನ್ನು ಮತ್ತು ‘ಸಂತೋಷ’ವಾಗಿರುವ ಕಾಶ್ಮೀರಿಗಳನ್ನು ಖುದ್ದಾಗಿ ನೋಡಿ ಅನುಭವಿಸಉ ಹೊರಟ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿಯನ್ನು ಶ್ರೀನಗರದ ವಿಮಾನ ನಿಲ್ದಾಣದಲ್ಲೇ ತಡೆದು ದಹಲಿಗೆ ವಾಪಸ್ ಕಳಿಸಲಾಯಿತು. ಮರುದಿನ ಸಿಪಿಎಂನ ಸೀತಾರಾಂ ಯೆಚೂರಿ ಮತ್ತು ಡಿ. ರಾಜಾ ಇಂಥದ್ದೇ ಪ್ರಯತ್ನ ಮಾಡಿದಾಗ ಅವರನ್ನು ಶ್ರೀನಗರ ಪ್ರವೇಶಿಸದಂತೆ ತಡೆದು ದೆಹಲಿಗೆ ವಾಪಸ್ ಕಳಿಸಲಾಯಿತು.

ಪ್ರತಿದಿನವೂ ದೆಹಲಿಯಿಂದ ಬಿಡುಗಡೆಗೊಳ್ಳುತ್ತಿದ್ದ ಜನರಿರುವ ಮಾರ್ಕೆಟ್‍ಗಳು, ಜನ ತುಂಬಿರುವ ರಸ್ತೆಗಳು, ಹಬ್ಬಕ್ಕೂ ಮೊದಲೇ ತೆರೆದ ಮಸೀದಿಗಳ ಚಿತ್ರ ಮತ್ತು ವಿಡಿಯೋಗಳನ್ನೇ ಸತ್ಯ ಎಂಬಂತೆ ಚಾನೆಲ್‍ಗಳು ಪ್ರಸಾರ ಮಾಡಿದವು. ಕೆಲವು ಮಾಧ್ಯಮಗಳಂತೂ ಅಲ್ಲಿ 144ನೇ ಸೆಕ್ಷನ್ ಅನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಸುಳ್ಳು ವರದಿ ಮಾಡಿಬಿಟ್ಟವೂ ಕೂಡ.

ಕಾಶ್ಮೀರದಲ್ಲಿ ‘ಎಲ್ಲವೂ ಸರಿಯಿದೆ’; ಆದರೆ ನಿಜವಾಗಿಯೂ ಅಲ್ಲ….

ಆಗಸ್ಟ್ 8ರಂದು ದಿ ವೈರ್ ಸುದ್ದಿ ಪೋರ್ಟಲ್‍ನ ಸಂಪಾದಕ ಸಿದ್ದಾರ್ಥ ವರದರಾಜನ್ ಕಾಶ್ಮೀರದ ಕೆಲವು ಫೂಟೇಜ್‍ಗಳನ್ನು ಬಿಡುಗಡೆ ಮಾಡುವ ಮೂಲಕ ಸತ್ಯದ ದರ್ಶನ ಮಾಡಿಸಿದರು. ಪೆಲೆಟ್ ಗುಂಡುಗಳಿಂದ ಕಣ್ಣುಗಳಿಗೆ ಗಾಯ ಮಾಡಿಕೊಂಡು ಆಸ್ಪತ್ರೆಯಲ್ಲಿದ್ದ ಹಲವರೊಂದಿಗೆ ಸಿದ್ದಾರ್ಥರು ಮಾತಾಡಿದ್ದರು. ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಭಟಿಸಿದ್ದಕ್ಕೆ ಈ ಗತಿ ಎಂದು ಕೆಲವರು ಹೇಳಿದರೆ, ಸುಮ್ಮನೇ ಇದ್ದ ನಮ್ಮ ಮೇಲೂ ಮಿಲಿಟರಿಯವರು ದಬ್ಬಾಳಿಕೆ ನಡೆಸಿದ್ದಾರೆ ಎಂದು ಹೇಳಿದ್ದರು. ಮರುದಿನ ಆಗಸ್ಟ್ 8ರಂದು ಎನ್‍ಡಿಟಿವಿ ಪ್ರಸಾರ ಮಾಡಿದ ಪ್ರತ್ಯಕ್ಷ ವರದಿಯ ಪ್ರಕಾರ, ಕಾರ್ಗಿಲ್ ಪ್ರದೇಶದಲ್ಲಿ 370 ವಿಧಿ ರದ್ದತಿ ವಿರೋಧಿಸಿ ಹಲವು ಪ್ರತಿಭಟನೆಗಳು ನಡೆದಿದ್ದವು ಮತ್ತು ಬಹುಪಾಲು ಪ್ರದೇಶದಲ್ಲಿ ಕಫ್ರ್ಯೂ ಇನ್ನೂ ಜಾರಿಯಲ್ಲಿತ್ತು.

 

 

 

 

 

ಮೊನ್ನೆ ಶುಕ್ರವಾರದ ಪ್ರಾರ್ಥನೆಯ ನಂತರ ಸಾವಿರ ಸಾವಿರ ಸಂಖ್ಯೆಯಲ್ಲಿ ಜನರು ಶ್ರೀನಗರದ ರಸ್ತೆಗಳಲ್ಲಿ ಕಾಶ್ಮೀರದ ಧ್ವಜಗಳನ್ನು ಹಿಡಿದು, ಸ್ವಾತಂತ್ರ್ಯದ ಘೋಷಣೆಗಳನ್ನು ಕೂಗುತ್ತ ಶಾಂತಿಯುತ ಪ್ರತಿಭಟನೆಯಲ್ಲಿ ಸಾಗುವಾಗ ಭಾರತೀಯ ಸೇನೆ ಅವರತ್ತ ಗುಂಡು ಹಾರಿಸಿತು ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

 

ಶುಕ್ರವಾರದ ಪ್ರಾರ್ಥನೆಯ ನಂತರ ಶ್ರೀನಗರ ಸೇರಿ ಹಲವು ಕಡೆ ವಿಧಿ ರದ್ದತಿ ವಿರೋಧಿಸಿ ಬೃಹತ್ ಪ್ತಿಭಟನೆಗಳು ಜರುಗಿದ ಫೂಟೇಜ್‍ಗಳನ್ನು ಮರುದಿನ ಬಿಬಿಸಿ ಪ್ರಸಾರ ಮಾಡಿತು. ಶುಕ್ರವಾರದ ಪ್ರಾರ್ಥನೆಯ ನಂತರ ಬೃಹತ್ ಪ್ರತಿಭಟನೆಗಳು ನಡೆದಿದ್ದನ್ನು, ಪ್ರತಿಭಟನಾಕಾರರನ್ನು ಚದುರಿಸಲು ಟಿಯರ್ ಗ್ಯಾಸ್ ಸಿಡಿಸಿದ್ದನ್ನು ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದನ್ನು ಫೋಟೊ ಮತ್ತು ವಿಡಿಯೋಗಳ ಮೂಲಕ ಅಲ್ ಜಝೀರಾ, ವಾಶಿಂಗ್ಟನ್ ಪೋಸ್ಟ್, ರ್ಯೂಟರ್ಸ್ ಸುದ್ದಿಸಂಸ್ಥೆಗಳು ಮಾಡಿದವು. ಬಿಬಿಸಿ, ಅಲ್ ಜಝೀರಾ, ರ್ಯೂಟರ್ಸ್‍ಗಳ ಸುದ್ದಿಗಳನ್ನು ಅಲ್ಲಗಳೆದ ಕೇಂದ್ರ ಸರ್ಕಾರ ನಂತರದಲ್ಲಿ, ಕೆಲವು ಕಲ್ಲು ತೂರುವ ಘಟನೆಗಳು ಸಂಭವಿಸಿವೆ , ಆದರೆ ಅವರ ಮೇಲೆ ಬಲ ಪ್ರಯೋಗಿಸಿಲ್ಲ ಎಂದು ಹೇಳಿಕೆ ಬಿಡುಗಡೆ ಮಾಡಿದೆ. ಕಾಶ್ಮೀರ ಕಣಿವೆಯ ಮೂಲೆಮೂಲೆಯಲ್ಲೂ ಅಪಾರ ಸಂಖ್ಯೆಯಲ್ಲಿ ಸೇನೆಯನ್ನು ನಿಯೋಜಿಸಲಾಗಿದೆ, ಪುಟ್ಟ ಹಳ್ಳಿಗಳ ಪ್ರತಿ ಮನೆಯ ಮುಂದೆಯೂ ಒಬ್ಬೊಬ್ಬ ಸೈನಿಕನನ್ನು ಪಹರೆಗೆ ನಿಲ್ಲಿಸಲಾಗಿದೆ ಎಂದು ವರದಿ ಮಾಡಿರುವ ನ್ಯೂಯಾರ್ಕ್ ಟೈಮ್ಸ್, ಬಹಳಷ್ಟು ಕಡೆ ಕಲ್ಲು ತೂರಾಟದ ಮೂಲಕ ಆಕ್ರೋಶ ವ್ಯಕ್ತವಾಗುತ್ತಲೇ ಇದೆ ಮತ್ತು ಕಾಶ್ಮೀರದ ಜನರಲ್ಲಿ ಈಗ ದೊಡ್ಡ ಅಸಹನೆ ತುಂಬಿದೆ ಎಂಬುದನ್ನು ಹಲವು ಸೈನಿಕರೇ ಒಪ್ಪಿಕೊಂಡಿರುವುದನ್ನು ನಿರೂಪಿಸಿದೆ.

ಆದರೆ, ಇದೇ ಹೊತ್ತಲ್ಲಿ ಭಾರತೀಯ ಮಾಧ್ಯಮಗಳು ವಿಷಯಾಂತರ ಮಾಡಿ, ಪಾಕಿಸ್ತಾನದ ಕೋಪಿತ ನಡವಳಿಕೆಯ ಕುರಿತು ಸುದ್ದಿ ಮಾಡುತ್ತ, ಭಾರತ ತಕ್ಷಣದ ಸಂಭಾವ್ಯ ಯುದ್ಧಕ್ಕೆ ಸಿದ್ಧವಾಗಿರಬೇಕು ಎಂದು ಸುದ್ದಿ ಮಾಡುತ್ತಿದ್ದವು. ‘ಸೇನೆ ಎಂತಹ ಪರಿಸ್ಥಿತಿಯನ್ನೂ ಎದುರಿಸಲು ಸನ್ನದ್ಧವಾಗಿದೆ ಎಂದು ಮೇಜರ್ ಜನರಲ್ ಬಿಪಿನ್ ರಾವತ್ ಹೇಳುವ ವಿಡಿಯೋವನ್ನು ರಿಪಬ್ಲಿಕ್ ಟಿವಿ ಪ್ರಸಾರ ಮಾಡಿತು. ಜೀ ನ್ಯೂಸ್, ಆಜ್‍ತಕ್ ಮತ್ತು ರಿಪಬ್ಲಿಕ್ ಟಿವಿಗಳು ಸೈನಿಕರನ್ನು ಮಾತಾಡಿಸಿ, ‘ನೋಡಿ ಜೋಶ್ ಹೇಗಿದೆ’ ಎಂದೆಲ್ಲ ಅಪ್ರಬುದ್ಧ ವರದಿಗಳನ್ನು ಮಾಡುತ್ತಿವೆ. ಇದೊಂದು ಭಾರತೀಯ ಮೀಡಿಯಾದ ಸಹಜ ಹುಚ್ಚಾಟದ ಪ್ರದರ್ಶನದಂತಿದೆ: ಸರ್ಕಾರದ ವಕ್ತಾರರಂತೆ ಕೆಲಸ ಮಾಡಲು ಸುಳ್ಳನ್ನು ಹರಡುವುದು, ಅದು ಬಯಲಾದಾಗ ವಿಷಯಾಂತರ ಮಾಡಿ ಜನರ ಗಮನವನ್ನು ಬೇರೆಡೆ ಸೆಳೆಯುವುದು….

ಮೊದಲೇ ಸಮಸ್ಯಾತ್ಮಕವಾಗಿದ್ದ ಪ್ರದೇಶದಲ್ಲಿ ಭಾರತ ಸರ್ಕಾರವು ಈಗ ಬೆಂಕಿಯನ್ನು ಹಾಕಿದೆ. ಕಾಲವಷ್ಟೇ ಉತ್ತರ ಹೇಳಲಿದೆ: ಇದು ಐತಿಹಾಸಿಕ ಜಯವೋ ಅಥವಾ ಐತಿಹಾಸಿಕ ಪ್ರಮಾದವೋ ಎಂಬುದನ್ನು. ಆದರೆ ಸದ್ಯದ ಪ್ರತಿಭಟನೆ, ಪ್ರತಿರೋಧಗಳನ್ನು ನೋಡಿದರೆ, ಕಾಶ್ಮೀರ ನನ್ನ ಪ್ರದೇಶ, ಆದರೆ ಅಲ್ಲಿನ ಜನ ನಮ್ಮವರಲ್ಲ ಎಂಬ ಭಾವ ಪ್ರದರ್ಶಿಸುತ್ತಿರುವ ದೇಶವು ಕಾಶ್ಮೀರದಲ್ಲಿ ಮುಳ್ಳಿನ ಹಾದಿಯನ್ನು ಸವೆಸಬೇಕಾಗಲಿದೆ. ಈಗ ಮಾತುಕತೆ ಮತ್ತು ಸಹನೆಯ ಅಗತ್ಯತೆಯ ಕಾಲ, ‘ಜೋಶ್’ನ ಕಾಲವಲ್ಲ. ಏಕೆಂದರೆ, ಜೋಶ್‍ನಲ್ಲಿ ಜೀವಗಳು ಮತ್ತು ಹಕ್ಕುಗಳು ಮರಣಕ್ಕೀಡಾಗುತ್ತವೆ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...