Homeಮುಖಪುಟಬ್ರಿಟನ್: ನಶೆಯಲ್ಲಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗೆ ಆರು ವರ್ಷಗಳ...

ಬ್ರಿಟನ್: ನಶೆಯಲ್ಲಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗೆ ಆರು ವರ್ಷಗಳ ಜೈಲು ಶಿಕ್ಷೆ

- Advertisement -
- Advertisement -

ಅರೆಪ್ರಜ್ಞಾವಸ್ಥೆಯಲ್ಲಿದ್ದ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬನನ್ನು ಬ್ರಿಟನ್‌ನಲ್ಲಿ ಬಂಧಿಸಲಾಗಿದೆ ಎಂದು ಬಿಬಿಸಿ ಶನಿವಾರ ವರದಿ ಮಾಡಿದೆ.

20 ವರ್ಷದ ಪ್ರೀತ್ ವಿಕಲ್ ಆರೋಪಿ ಎಂದು ಗುರುತಿಸಲಾಗಿದ್ದು, ಯುವ ಅಪರಾಧಿಗಳ ಸಂಸ್ಥೆಯಲ್ಲಿ ಆರು ವರ್ಷ ಒಂಬತ್ತು ತಿಂಗಳು ಶಿಕ್ಷೆ ವಿಧಿಸಲಾಗಿದೆ.

ಕಳೆದ ವರ್ಷ ಜೂನ್‌ನಲ್ಲಿ ಪ್ರೀತ್ ಮತ್ತು ಮಹಿಳೆ ಪ್ರತ್ಯೇಕ ಸ್ನೇಹಿತರ ಗುಂಪುಗಳೊಂದಿಗೆ ಕಾರ್ಡಿಫ್‌ನಲ್ಲಿ ರಾತ್ರಿಯ ವಿಹಾರಕ್ಕೆ ಹೋಗಿದ್ದರು, ಅಲ್ಲಿ ಅವರು ಪರಸ್ಪರ ಭೇಟಿಯಾದರು.

”ಸಂತ್ರಸ್ತ ಮಹಿಳೆ ಮಿತಿಮೀರಿ ಕುಡಿದಿದ್ದರು ಮತ್ತು ರಾತ್ರಿಯ ಅಂತ್ಯದ ವೇಳೆಗೆ ಅರೆಪ್ರಜ್ಞಾವಸ್ಥೆಯಲ್ಲಿದ್ದರು. ಮಹಿಳೆಯು ಕ್ಲಬ್‌ನ ಹೊರಗೆ ಹೊರಟಿದ್ದಳು ಆಗ ಪ್ರೀತ್ ವಿಕಲ್‌ನನ್ನು ೆದುರಾದರು. ಇಬ್ಬರು ಸಂಭಾಷಣೆಯಲ್ಲಿ ತೊಡಗಿದ್ದರು ಮತ್ತು ಅವರ ಗುಂಪುಗಳಿಂದ ದೂರ ಇದ್ದರು” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

”ಸಂತ್ರಸ್ತ ಮಹಿಳೆ ಅತಿಯಾಗಿ ಕುಡಿದಿದ್ದರು ಮತ್ತು ರಾತ್ರಿಯ ವೇಳೆಗೆ ಸಂಪೂರ್ಣವಾಗಿ ನಶೆಯಲ್ಲಿದ್ದರು” ಎಂದು ಅಪರಿಚಿತ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಸಿಸಿ ಟಿವಿ ದೃಶ್ಯಾವಳಿ ಪ್ರಕಾರ, ”ಮಹಿಳೆಯು ಕ್ಲಬ್‌ನ ಹೊರಗೆ ಹೊರಟಿದ್ದಳು ಆಗ ಪ್ರೀತ್ ವಿಕಲ್‌ ಎದುರಾರದರು. ಇಬ್ಬರೂ ಸಂಭಾಷಣೆಯಲ್ಲಿ ತೊಡಗಿದರು ಮತ್ತು ಅವರ ಗುಂಪುಗಳಿಂದ ದೂರ ಹೋದರು. ಆ ಬಳಿಕ ವಿಕಲ್ ಮಹಿಳೆಯನ್ನು ತನ್ನ ಭುಜದ ಮೇಲೆ ಹೊತ್ತುಕೊಂಡು ತನ್ನ ನಿವಾಸಕ್ಕೆ ಹೋಗಿರುವ ದೃಶ್ಯ ಸೆರೆಯಾಗಿದೆ. ಅಲ್ಲಿ ಅವನು ಅವಳ ಮೇಲೆ ಅತ್ಯಾಚಾರ ಮಾಡಿದ್ದಾನೆ. ಅಲ್ಲದೇ ಮಹಿಳೆಯ ಭಾವಚಿತ್ರ ತೆಗೆದು ತನ್ನ ಸ್ನೇಹಿತರಿಗೆ ಕಳುಹಿಸಿದ್ದಾನೆ’.

ಈ ಬಗ್ಗೆ ಟ್ವೀಟ್ ಮಾಡಿರುವ ಸೌತ್ ವೇಲ್ಸ್ ಪೊಲೀಸ್ ಕಾರ್ಡಿಫ್, ”ಕಾರ್ಡಿಫ್‌ನಲ್ಲಿರುವ ನಿವಾಸದ ಸಭಾಂಗಣದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ಒಬ್ಬ ವ್ಯಕ್ತಿಯನ್ನು ಜೈಲಿಗೆ ಹಾಕಲಾಗಿದೆ. ಪ್ರೀತ್ ವಿಕಲ್ ಮಹಿಳೆಯನ್ನು ತನ್ನ ತೋಳುಗಳಲ್ಲಿ ಮತ್ತು ನಂತರ ತನ್ನ ಭುಜದ ಮೇಲೆ ಹೊತ್ತುಕೊಂಡು ಸಿಟಿ ಸೆಂಟರ್‌ನಿಂದ ಹೊರಕ್ಕೆ ಸಾಗಿಸುತ್ತಿರುವುದನ್ನು ಸಿಸಿಟಿವಿ ತೋರಿಸಿದೆ” ಎಂದು ಸೌತ್ ವೇಲ್ಸ್ ಪೊಲೀಸ್ ಕಾರ್ಡಿಫ್ ಟ್ವೀಟ್ ಮಾಡಿದೆ.

“ಕಾರ್ಡಿಫ್‌ನಲ್ಲಿ ಇಂತಹ ದಾಳಿಗಳು ಅತ್ಯಂತ ಅಸಾಮಾನ್ಯವಾಗಿವೆ. ಪ್ರೀತ್ ವಿಕಾಲ್‌ನಂತಹ ಅಪಾಯಕಾರಿ ವ್ಯಕ್ತಿ ಇದ್ದಿದ್ದರಿಂದ ಈ ಘಟನೆ ನಡೆದಿದೆ. ಪ್ರೀತ್ ವಿಕಾಲ್‌ ತನ್ನ ಸ್ನೇಹಿತರಿಂದ ದೂರ ಉಳಿದು, ನಶೆಯಲ್ಲಿದ್ದ ಯುವತಿಯ ಲಾಭವನ್ನು ಪಡೆದರು” ಎಂದು ಅವರು ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮಹಿಳೆಯನ್ನು ಮನೆಗೆ ಕರೆದೊಯ್ದ ನಂತರ ಪ್ರೀತ್ ಆಕೆಯೊಂದಿಗೆ ಫೋಟೋ ತೆಗೆದುಕೊಂಡು ತನ್ನ ಸ್ನೇಹಿತರಿಗೆ ಕಳುಹಿಸಿದ್ದಾನೆ ಎಂದು ವರದಿಗಳು ತಿಳಿಸಿವೆ.

ಮಹಿಳೆ ಧೈರ್ಯದಿಂದ ನಡೆದ ಘಟನೆಯ ವಿವರವನ್ನು ಅಧಿಕಾರಿಗಳಿಗೆ ನೀಡಿದರು. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಮಹಿಳೆಯೊಂದಿಗೆ Instagram ಸಂದೇಶ ವಿನಿಮಯವು ಪೊಲೀಸರಿಗೆ ಪ್ರೀತ್ ವಿಕಲ್ ಅನ್ನು ಗುರುತಿಸಲು ಸಹಾಯ ಮಾಡಿತು.

ಇದನ್ನೂ ಓದಿ: ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದೇ RSS ಶಾಖೆಯ ನಿತ್ಯ ಪಾಠವೇ?: ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...