Homeಕರ್ನಾಟಕ'ಅನ್ನಭಾಗ್ಯ'ಕ್ಕೆ ಕೇಂದ್ರ ಕತ್ತರಿ: ಕೊಟ್ಟ ಮಾತು ಉಳಿಸಿಕೊಳ್ಳಲು ಸಿದ್ದು ಸರ್ಕಾರ ಕಸರತ್ತು; ಇಂದು ಉನ್ನತ ಮಟ್ಟದ...

‘ಅನ್ನಭಾಗ್ಯ’ಕ್ಕೆ ಕೇಂದ್ರ ಕತ್ತರಿ: ಕೊಟ್ಟ ಮಾತು ಉಳಿಸಿಕೊಳ್ಳಲು ಸಿದ್ದು ಸರ್ಕಾರ ಕಸರತ್ತು; ಇಂದು ಉನ್ನತ ಮಟ್ಟದ ಸಭೆ

- Advertisement -
- Advertisement -

‘ಅನ್ನ ಭಾಗ್ಯ’ ಯೋಜನೆಗೆ ಕೇಂದ್ರ ಸರ್ಕಾರ ಕತ್ತರಿ ಹಾಕಿದ್ದು, ಇದೀಗ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಕ್ಕಿ ಖರೀದಿಗೆ ಕಸರತ್ತು ಮುಂದುವರಿಸಿದ್ದು, ಅನ್ಯ ರಾಜ್ಯಗಳ ಪ್ರತಿಕ್ರಿಯೆಗಾಗಿ ಕಾಯುತ್ತಿದೆ. ಅಕ್ಕಿ ಖರೀದಿ ನಿರ್ಧಾರ ಅಂತಿಮಗೊಳಿಸಲು ಇಂದು (ಸೋಮವಾರ) ಉನ್ನತ ಮಟ್ಟದ ಸಭೆ ನಡೆಯಲಿದೆ.

ಹೆಚ್ಚುವರಿ ತಲಾ 5 ಕೆ.ಜಿ ಅಕ್ಕಿ ವಿತರಣೆಗಾಗಿ ತಿಂಗಳಿಗೆ 2.28 ಲಕ್ಷ ಟನ್ ಅಕ್ಕಿ ನೀಡಲು ಒಪ್ಪಿದ್ದ ಭಾರತೀಯ ಆಹಾರ ನಿಗಮ ಈಗ ಹಿಂದೇಟು ಹಾಕಿದೆ. ಹಾಗಾಗಿ ತೆಲಂಗಾಣದಿಂದ ಅಕ್ಕಿ ಖರೀದಿಸಲು ಸರ್ಕಾರ ಮುಂದಾಗಿತ್ತು. ಆದರೆ, ಅಲ್ಲಿ ದಾಸ್ತಾನು ಇಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಹೇಳಿದ್ದಾರೆ.

ಇನ್ನು ಛತ್ತೀಸಗಢದಲ್ಲಿ 1.5 ಲಕ್ಷ ಟನ್ ಅಕ್ಕಿ ದಾಸ್ತಾನಿದೆ. ಅದನ್ನು ಪೂರೈಸಲು ಅಲ್ಲಿನ ರಾಜ್ಯ ಸರ್ಕಾರದ ಒಪ್ಪಿಗೆಗಾಗಿ ರಾಜ್ಯದ ಅಧಿಕಾರಿಗಳು ಕಾಯುತ್ತಿದ್ದಾರೆ ಎನ್ನುವ ಮಾಹಿತಿ ಬಂದಿದೆ.

ಅಕ್ಕಿ ಖರೀದಿಗೆ ಸಂಬಂಧಿಸಿದ ಪ್ರಕ್ರಿಯೆಯಲ್ಲಿ ನಿರತರಾಗಿರುವ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ”ಛತ್ತೀಸಗಢದಿಂದ ಅಕ್ಕಿ ಖರೀದಿಸುವ ಕುರಿತು ಶನಿವಾರದಿಂದಲೂ ಮಾತುಕತೆ ನಡೆಯುತ್ತಿದೆ. ತನ್ನ ಬಳಿ ದಾಸ್ತಾನು ಇರುವ ಅಕ್ಕಿಯನ್ನು ಮಾರಾಟ ಮಾಡಲು ಅಲ್ಲಿನ ಸರ್ಕಾರ ಅಧಿಕೃತವಾಗಿ ಒಪ್ಪಿಗೆ ನೀಡಿದ ಬಳಿಕವಷ್ಟೇ ಮುಂದಿನ ನಿರ್ಧಾರ ಕೈಗೊಳ್ಳಲು ಸಾಧ್ಯ. ಅಕ್ಕಿಯ ದರ, ಸಾಗಣೆ ವೆಚ್ಚ ಸೇರಿದಂತೆ ಹಲವು ವಿಷಯಗಳಲ್ಲಿ ಇನ್ನಷ್ಟೇ ತೀರ್ಮಾನವಾಗಬೇಕಿದೆ” ಎಂದು ತಿಳಿಸಿದ್ದಾರೆ.

ಅಕ್ಕಿ ಮಾರಟಕ್ಕೆ ಛತ್ತೀಸಗಢ ಸರ್ಕಾರ ಒಪ್ಪಿದರೆ ಸಾಗಣೆ ಹೇಗೆ ಮಾಡಬೇಕು ಎನ್ನುವ ಬಗ್ಗೆ ಯೋಜನೆ ರೂಪಿಸಬೇಕಿದೆ. ಅಲ್ಲಿಂದ ರಾಜ್ಯಕ್ಕೆ ಅಕ್ಕಿ ಸಾಗಿಸಲು ದೀರ್ಘ ಸಮಯ ಬೇಕಾಗುತ್ತದೆ. ಅದಕ್ಕೆ ತಕ್ಕಂತೆ ಅನ್ನಭಾಗ್ಯ ಯೋಜನೆ ಅನುಷ್ಠಾನದ ವೇಳಾಪಟ್ಟಿಯನ್ನು ಹೊಂದಾಣಿಕೆ ಮಾಡಬೇಕಾಗುತ್ತದೆ. ಛತ್ತೀಸಗಢ ಸರ್ಕಾರ 1.5 ಲಕ್ಷ ಟನ್ ಅಕ್ಕಿ ಪೂರೈಸಲು ಒಪ್ಪಿಕೊಂಡರೂ ಪೂರ್ಣ ಪ್ರಮಾಣದ ಬೇಡಿಕೆ ಈಡೇರಿದಂತಾಗುವುದಿಲ್ಲ. ಉಳಿದಂತೆ ಕೊರತೆಯಾಗುವ ಅಕ್ಕಿಯನ್ನು ಯಾವ ಮೂಲದಿಂದ ಖರೀದಿಸಬೇಕು ಎಂಬ ನಿರ್ಧಾರ ಆಗಬೇಕಾಗುತ್ತದೆ. ಹಾಗಾಗಿ ಈ ಎಲ್ಲ ವಿಚಾರವಾಗಿ ಸೋಮವಾರದ ಸಭೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಬಿಜೆಪಿಯವರು ಅದೆಷ್ಟೇ ಷಡ್ಯಂತ್ರ ನಡೆಸಿದರೂ ಅನ್ನಭಾಗ್ಯದ ಅಕ್ಕಿ 10 ಕೆಜಿಗೆ ಏರಿಸುವುದು ನಿಶ್ಚಿತ: ಕಾಂಗ್ರೆಸ್ ವಾಗ್ದಾನ

ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರು, ಹಲವು ರಾಜ್ಯಗಳ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ, ರಾಜ್ಯಕ್ಕೆ ಅಕ್ಕಿ ಒದಗಿಸುವಂತೆ ಮನವಿ ಮಾಡಿದ್ದಾರೆ. ಸೋಮವಾರ ಕೆಲವು ರಾಜ್ಯಗಳಿಂದ ಪ್ರತಿಕ್ರಿಯೆ ಬರಬಹುದು ಎನ್ನುವ ನಿರೀಕ್ಷೆಯಲ್ಲಿ ಇದ್ದಾರೆ.

ರಾಜ್ಯದ ಅನ್ನಭಾಗ್ಯಕ್ಕೆ ಕೇಂದ್ರ ಬಿಜೆಪಿ ಸರ್ಕಾರ ಅಡ್ಡಗಾಲು

”ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

”ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿಮಾಡಿದ್ದು, ಜುಲೈ 1 ರಂದು ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಮೆ.ಟನ್ ಅಗತ್ಯವಿದೆ ಎಂದು ಕೋರಿ ಜೂನ್‌ 9 ರಂದು ಪತ್ರ ಬರೆಯಲಾಗಿತ್ತು. ಇದಕ್ಕೆ ಜೂನ್‌ 12 ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್‌ ಗೆ 3400 ರೂ. ದರದಲ್ಲಿ ಅಕ್ಕಿ ಪೂರೈಕೆ ಮಾಡವುದಾಗಿ ಪತ್ರ ಬರೆದಿತ್ತು. ಇದಾದ ನಂತರ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ” ಎಂದು ತಿಳಿಸಿದರು.

”ಭಾರತೀಯ ಆಹಾರ ನಿಗಮದ ಒಪ್ಪಿಗೆ ಪತ್ರದ ಆಧಾರದ ಮೇಲೆ ಜುಲೈ 1 ರಿಂದ ತಲಾ 10ಕೆ.ಜಿ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜಾರಿ ಮಾಡಲಾಗುವುದು ಎಂದು ಘೋಷಿಸಿದೆವು. ಎಫ್.ಸಿ.ಐ ನ ಪ್ರಧಾನ ವ್ಯವಸ್ಥಾಪಕ ಹರೀಶ್ ಎಂಬುವವರು 7 ಲಕ್ಷ ಟನ್ ಅಕ್ಕಿ ಸಂಗ್ರಹ ಇದೆ ಎಂದು ತಿಳಿಸಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮವನ್ನು ಜಾರಿಗೊಳಿಸದೇ ಇರುವಂತೆ ಅಡ್ಡಿಪಡಿಸುವುದು ಇದರ ಹಿಂದಿನ ಉದ್ದೇಶ” ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...