Homeಮುಖಪುಟಝೊಮಾಟೊ ಡೆಲಿವರಿ ಹುಡುಗರ ಮುಷ್ಕರಕ್ಕೂ ಆಹಾರ ಮತ್ತು ಧರ್ಮಕ್ಕೂ ಸಂಬಂಧವಿಲ್ಲ: ಸ್ಥಾಪಕ ದೀಪಿಂದರ್ ಗೋಯಲ್

ಝೊಮಾಟೊ ಡೆಲಿವರಿ ಹುಡುಗರ ಮುಷ್ಕರಕ್ಕೂ ಆಹಾರ ಮತ್ತು ಧರ್ಮಕ್ಕೂ ಸಂಬಂಧವಿಲ್ಲ: ಸ್ಥಾಪಕ ದೀಪಿಂದರ್ ಗೋಯಲ್

ಇಡೀ ಪ್ರದೇಶದಲ್ಲಿ ಕಳೆದ ಮೂರು ತಿಂಗಳಲ್ಲಿ ಪೋರ್ಕಿಗೆ ಒಂದೇ ಒಂದು ಬೇಡಿಕೆ ಬಂದಿಲ್ಲ. ಬೀಫಿಗೆ ಒಂದೇ ಒಂದು ಬೇಡಿಕೆ ಬಂದಿದ್ದು, ಆ ಗ್ರಾಹಕರು ಕೂಡಾ ಆಹಾರ ಡೆಲಿವರಿ ಮಾಡುವ ಮೊದಲೇ ಅದನ್ನು ರದ್ದುಪಡಿಸಿದ್ದರು" ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳದ ಹೌರಾದಲ್ಲಿ ಝೊಮಾಟೊ ಡೆಲಿವರಿ ನೌಕರರ ಮುಷ್ಕರಕ್ಕೂ ಆಹಾರ, ಧರ್ಮ ಅಥವಾ ನಂಬಿಕೆಗೂ ಯಾವುದೇ ಸಂಬಂಧ ಇಲ್ಲ ಎಂದು ಕಂಪನಿಯ ಸ್ಥಾಪಕರು ತನ್ನ ಸಿಬ್ಬಂದಿ ವರ್ಗಕ್ಕೆ ಕಳುಹಿಸಿರುವ ಇ-ಮೈಲ್‌ನಲ್ಲಿ ಹೇಳಿದ್ದು, ಅರ್ಥಪೂರ್ಣ ಉದ್ಯೋಗ ಮತ್ತು ಜೀವನ ನಿರ್ವಹಣೆಯ ಅವಕಾಶವನ್ನು ಧರ್ಮ ಮತ್ತು ವೈಯಕ್ತಿಕ ಆಹಾರದ ಆಯ್ಕೆಯ ಜೊತೆಗೆ ತಳಕುಹಾಕಲಾಗುತ್ತಿರುವ ಬಗ್ಗೆ ಎಚ್ಚರದಿಂದಿರಬೇಕು ಎಂದು ತಿಳಿಸಿದ್ದಾರೆ.

“ಗದ್ದಲವನ್ನು ಕಡೆಗಣಿಸಿ; ಅದರಿಂದ ವಿಚಲಿತರಾಗದಿರಿ ಎಂದು ಎಂದು ಸಂಸ್ಥೆಯ ಸ್ಥಾಪಕ ದೀಪಿಂದರ್ ಗೋಯಲ್ ಸಿಬ್ಬಂದಿ ವರ್ಗಕ್ಕೆ ಕಳುಹಿಸಿರುವ ಇ-ಮೈಲ್‌ನಲ್ಲಿ ಒತ್ತಾಯಿಸಿದ್ದಾರೆ. ಈ “ಪ್ರತಿಭಟನೆ”ಯು ಕೋಲ್ಕತ್ತಾದ ಹೌರಾ ಪ್ರದೇಶದ ಕೆಲವೇ ಡೆಲಿವರಿ ಪಾಲುದಾರರಿಗೆ ಸೀಮಿತವಾಗಿದ್ದು, ಕೆಲವು ತೀರಾ ಉತ್ಪ್ರೇಕ್ಷಿತ ವರದಿಗಳಲ್ಲಿ ಕಾಣಿಸಲಾಗಿರುವಂತೆ ಇಡೀ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ. ಈ ಪ್ರಶ್ನೆಯು ಮೂಲತಃ ದರಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದ್ದಾಗಿದ್ದು, ಅದನ್ನು ನಾವು ಆಗಾಗ ಮಾಡುತ್ತಿರುತ್ತೇವೆ ಎಂದವರು ಹೇಳಿದ್ದಾರೆ.

ಕೋಲ್ಕತ್ತಾದ ಹೊರಭಾಗದಲ್ಲಿರುವ ಹೌರಾದ ನೌಕರರ ವಿಭಾವೊಂದು ತಾವು ಬೀಫ್ ಮತ್ತು ಪೋರ್ಕ್ (ದನ ಮತ್ತು ಹಂದಿ ಮಾಂಸ) ಇರುವ ಆಹಾರವನ್ನು ಡೆಲಿವರಿ ಮಾಡುವುದಿಲ್ಲ ಎಂದು ಕಳೆದೊಂದು ವಾರದಿಂದ ಮುಷ್ಕರ ನಡೆಸುತ್ತಿದ್ದಾರೆ.

“ಕಂಪನಿಯು ನಮ್ಮ ಬೇಡಿಕೆಗಳನ್ನು ಕೇಳುತ್ತಿಲ್ಲ. ನಮ್ಮ ಇಚ್ಛೆಗೆ ವಿರುದ್ಧವಾಗಿ ಬೀಫ್ ಮತ್ತು ಪೋರ್ಕ್ ಡೆಲಿವರಿ ಮಾಡುವಂತೆ ಒತ್ತಾಯಿಸಲಾಗುತ್ತದೆ. ಹಿಂದೂಗಳು ಬೀಫ್ ಡೆಲಿವರಿ ಮಾಡಲು ಒಪ್ಪುತ್ತಿಲ್ಲ ಮತ್ತು ಮುಸ್ಲಿಮರು ಪೋರ್ಕ್ ಡೆಲಿವರಿ ಮಾಡಲು ಬಯಸುತ್ತಿಲ್ಲ ಎಂದು ಮೌಸಿನ್ ಅಕ್ತರ್ ಎಂಬ ನೌಕರ ಟಿವಿ ವಾಹಿನಿಯೊಂದಕ್ಕೆ ಹೇಳಿದ್ದಾಗಿ ವರದಿಯಾಗಿದೆ.

ಆದರೆ, ನೌಕರರ ಅಸಮಾಧಾನವು ಬೇಡಿಕೆಯ ಪ್ರಮಾಣಕ್ಕೆ ಅನುಗುಣವಾಗಿ ಡೆಲಿವರಿ ಪಾಲುದಾರರಿಗೆ ಆಹಾರ ದರಪಟ್ಟಿಯನ್ನು ಪರಿಷ್ಕರಿಸುವ ವ್ಯವಸ್ಥೆಗೆ ಸಂಬಂಧಿಸಿದ್ದಾಗಿದೆ ಎಂದು ಗೋಯಲ್ ತನ್ನ ಇ-ಮೈಲ್‌ನಲ್ಲಿ ತಿಳಿಸಿದ್ದಾರೆ.

“ದರ ಪರಿಷ್ಕರಣೆಯ ಬಳಿಕ ನಮ್ಮ ಡೆಲಿವರಿ ಪಾಲುದಾರರು ಅಷ್ಟೇ ಪ್ರಮಾಣದಲ್ಲಿ ಅಷ್ಟೇ ಪ್ರಮಾಣದಲ್ಲಿ ಹಣ ಗಳಿಸುತ್ತಾರೆ. ಇದರಿಂದ ನಮ್ಮ ಘಟಕಗಳ ಆರ್ಥಿಕತೆ ಸುಧಾರಿಸುತ್ತದೆ ಮತ್ತು ವ್ಯಾಪಾರವು ಹೆಚ್ಚು ಕಾರ್ಯಸಾಧುವಾಗುತ್ತದೆ. ಇದು ನಮ್ಮ ವಹಿವಾಟಿನ ವಿಸ್ತರಣೆಗೆ ಅವಕಾಶ ಮಾಡಿಕೊಟ್ಟು ಹೆಚ್ಚುಹೆಚ್ಚು ಡೆಲಿವರಿ ಪಾಲುದಾರರಿಗೆ ಉದ್ಯೋಗಾವಕಾಶ ಒದಗಿಸಲು ಸಾಧ್ಯವಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಕೆಲವೊಂದು ಡೆಲಿವರಿ ಹುಡುಗರಿಗೆ ದರಪಟ್ಟಿ ಪರಿಷ್ಕರಣೆ ಅರ್ಥವಾಗುವುದಿಲ್ಲ. ಅವರು ಬದಲಾವಣೆಯ ವಿರುದ್ಧ ಪ್ರತಿಭಟಿಸುತ್ತಾರೆ. ಹೌರಾದ ಈ ಪ್ರಕರಣದಲ್ಲಿ ಡೆಲಿವರಿ ಹುಡುಗರು ಸಂಸ್ಥೆಯ ಪ್ರತಿನಿಧಿಗಳ ಜೊತೆಗೆ ರಚನಾತ್ಮಕ ಮಾತುಕತೆಯಲ್ಲಿ ತೊಡಗುವುದು ಬಿಟ್ಟು ಸ್ಥಳೀಯ ರಾಜಕಾರಣಿಯೊಬ್ಬರ ಜೊತೆ ಸೇರಿಕೊಂಡು ಸಮಸ್ಯೆಯನ್ನು ತಪ್ಪಾಗಿ ಪ್ರತಿಬಿಂಬಿಸಿದರು” ಎಂದು ಗೋಯಲ್ ವಿವರಿಸಿದ್ದಾರೆ.

“ಇದು ನಮಗೆ ಗೊತ್ತಾದುದು ಹೇಗೆಂದರೆ ನಾವು ನಮ್ಮ ಡೆಲಿವರಿ ಡಾಟಾಬೇಸನ್ನು ಪರಿಶೀಲಿಸಿದಾಗ ಇಡೀ ಪ್ರದೇಶದಲ್ಲಿ ಕಳೆದ ಮೂರು ತಿಂಗಳಲ್ಲಿ ಪೋರ್ಕಿಗೆ ಒಂದೇ ಒಂದು ಬೇಡಿಕೆ ಬಂದಿಲ್ಲ. ಬೀಫಿಗೆ ಒಂದೇ ಒಂದು ಬೇಡಿಕೆ ಬಂದಿದ್ದು, ಆ ಗ್ರಾಹಕರು ಕೂಡಾ ಆಹಾರ ಡೆಲಿವರಿ ಮಾಡುವ ಮೊದಲೇ ಅದನ್ನು ರದ್ದುಪಡಿಸಿದ್ದರು” ಎಂದು ಅವರು ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ಬಿಜೆಪಿಯ ಉತ್ತರ ಹೌರಾ ಮಂಡಲದ ಬಿಜೆಪಿ ಕಾರ್ಯದರ್ಶಿ, ಸದಸ್ಯತ್ವ ಅಭಿಯಾನದ ಉಸ್ತುವಾರಿ ಎಂದು ಹೇಳಿಕೊಂಡಿರುವ ಸಂಜೀವ ಕುಮಾರ್ ಶುಕ್ಲಾ ಎಂಬ ಸ್ಥಳೀಯ ರಾಜಕಾರಣಿಯೊಬ್ಬ ಈ ಪ್ರಕರಣದಲ್ಲಿ ಶಾಮೀಲಾದ ಬಳಿಕ ಅದು ಪ್ರಚಾರ ಪಡೆದುಕೊಂಡಿತು. ಹೌರಾದಲ್ಲಿ ಝೊಮಾಟೊದ ಹೊಟೇಲುಗಳ ಸರಣಿಯಲ್ಲಿ ಅಲ್ಲಿನ ಬೀಫ್ ಬಿರಿಯಾನಿ ಹೊಟೇಲೊಂದನ್ನು ಸೇರಿಸಿಕೊಳ್ಳಲಾಗುತ್ತಿದೆ ಎಂಬ ವದಂತಿಯ ಬಳಿಕ ಈ ಪ್ರತಿಭಟನೆ ಜೀವತಳೆಯಿತು.

ಇತ್ತೀಚೆಗಷ್ಟೇ ಮತಾಂಧನೊಬ್ಬ ಮುಸ್ಲಿಮ್ ವ್ಯಕ್ತಿಯೊಬ್ಬ ತಂದ ಆಹಾರವನ್ನು ಸ್ವೀಕರಿಸಲು ನಿರಾಕರಿಸಿದ್ದಾಗಿ ಫೇಸ್‌ಬುಕ್‌ನಲ್ಲಿ ಪ್ರಚಾರ ಮಾಡಿದಾಗ ಝೊಮಾಟೊ ಸುದ್ದಿ ಮಾಡಿತ್ತು. “ಆಹಾರಕ್ಕೆ ಧರ್ಮವಿಲ್ಲ; ಆಹಾರವೇ ಧರ್ಮ” ಎಂದು ಪ್ರತಿಕ್ರಿಯೆ ನೀಡುವ ಮೂಲಕ ಝೊಮಾಟೊ ಮೆಚ್ಚುಗೆಗೆ ಪಾತ್ರವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....