Homeಕರ್ನಾಟಕಅನ್ನಭಾಗ್ಯ: ಕೇಂದ್ರೀಯ ಸಂಸ್ಥೆಗಳಿಂದಲೇ ಅಗತ್ಯವಿರುವ ಅಕ್ಕಿ ಖರೀದಿಗೆ ಪ್ರಯತ್ನ; ಸಿಎಂ ಸಿದ್ದರಾಮಯ್ಯ

ಅನ್ನಭಾಗ್ಯ: ಕೇಂದ್ರೀಯ ಸಂಸ್ಥೆಗಳಿಂದಲೇ ಅಗತ್ಯವಿರುವ ಅಕ್ಕಿ ಖರೀದಿಗೆ ಪ್ರಯತ್ನ; ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಛತ್ತೀಸ್‌ಗಢ ರಾಜ್ಯದಲ್ಲಿ 1.5 ಲಕ್ಷ ಟನ್ ಅಕ್ಕಿಯ ದಾಸ್ತಾನು ಇದೆ ಆದರೆ ಅದು ಸಾಕಾಗುವುದಿಲ್ಲ ಹಾಗಾಗಿ ಕೇಂದ್ರೀಯ ಸಂಸ್ಥೆಗಳಿಂದಲೇ ಅಗತ್ಯವಿರುವ ಅಕ್ಕಿ ಖರೀದಿಗೆ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಈ ಬಗ್ಗೆ ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ”ರಾಷ್ಟ್ರೀಯ ಗ್ರಾಹಕರ ಸಹಕಾರ ಒಕ್ಕೂಟ (ಎನ್ ಸಿಸಿಎಫ್), ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (ನಾಫೆಡ್) ಮತ್ತು ಭಾರತೀಯ ಆಹಾರ ನಿಗಮ (ಎಫ್ ಸಿಐ) ಸೇರಿದಂತೆ ಕೇಂದ್ರೀಯ ಸಂಸ್ಥೆಗಳಿಂದಲೇ ಅನ್ನ ಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿ ಖರೀದಿಗೆ ಪ್ರಯತ್ನ ಮಾಡಲಾಗುವುದು” ಎಂದು ತಿಳಿಸಿದರು.

”ಭಾರತೀಯ ಆಹಾರ ನಿಗಮ (ಎಫ್ ಸಿಐ) ಪ್ರತಿ ಕೆ.ಜಿ.ಗೆ 34ರೂ.ನಂತೆ ಅಕ್ಕಿ ಒದಗಿಸುತ್ತದೆ. 2.60ರೂ. ಸಾಗಾಣಿಕೆ ವೆಚ್ಚ ಸೇರಿದರೆ ಪ್ರತಿ ಕೆ.ಜಿ.ಗೆ ‍36.60ರೂ. ವೆಚ್ಚವಾಗುತ್ತದೆ. ಈಗ ಮೂರೂ ಸಂಸ್ಥೆಗಳಿಂದ ದರ ಪಟ್ಟಿ ಅಹ್ವಾನಿಸಿ, ಟೆಂಡರ್ ಮೂಲಕ ಅಕ್ಕಿ ಖರೀದಿಸಲು ಕ್ರಮ ಕೈಗೊಳ್ಳಲಾಗುವುದು” ಎಂದರು.

”ಸಧ್ಯಕ್ಕೆ ಅನ್ನ ಭಾಗ್ಯ ಯೋಜನೆಯಡಿ ಬಿಪಿಎಲ್ ಕುಟುಂಬಗಳ ಪ್ರತಿ ಸದಸ್ಯರಿಗೆ ತಲಾ ಐದು ಕೆ.ಜಿ. ಅಕ್ಕಿ ವಿತರಿಸಲಾಗುತ್ತಿದೆ. ಹೆಚ್ಚುವರಿಯಾಗಿ ಜೋಳ, ರಾಗಿ ವಿತರಿಸುವ ಕುರಿತು ಚರ್ಚೆ ನಡೆದಿದೆ. ಆದರೆ, ತಲಾ ಎರಡು ಕೆ.ಜಿ. ಜೋಳ ಅಥವಾ ರಾಗಿ ವಿತರಿಸಿದರೂ ಆರು ತಿಂಗಳಿಗೆ ಸಾಕಾಗುವಷ್ಟು ದಾಸ್ತಾನು ಮಾತ್ರ ಇದೆ. ಬಾಕಿ ಉಳಿದ ಮೂರು ಕೆ.ಜಿ. ಅಕ್ಕಿಯನ್ನು ಖರೀದಿಸಲೇಬೇಕಾಗುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ಕರ್ನಾಟಕದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸಲು ಮುಂದಾದ ಪಂಜಾಬ್ ಸಿಎಂ ಭಗವಂತ್ ಮಾನ್

”ಅನ್ನಭಾಗ್ಯ ಯೋಜನೆಯಡಿ ತಲಾ ಹತ್ತು ಕೆ.ಜಿ. ಅಕ್ಕಿ ವಿತರಿಸಲು ತಿಂಗಳಿಗೆ 1842 ಕೋಟಿ ವೆಚ್ಚವಾಗುತ್ತದೆ. ವರ್ಷಕ್ಕೆ 710,092 ಕೋಟಿ ಬೇಕಾಗುತ್ತದೆ” ಎಂದು ಸಿದ್ದರಾಮಯ್ಯ ಅಂಕಿಅಂಶಗಳ ಮಾಹಿತಿ ನೀಡಿದರು.

”ಕೇಂದ್ರ ಸರ್ಕಾರದ ಸ್ವಾಮ್ಯದ ಎಫ್ ಸಿಐ ಬಳಿ ಅಕ್ಕಿಯ ದಾಸ್ತಾನು ಇದೆ. ಒಕ್ಕೂಟ ವ್ಯವಸ್ಥೆಯಲ್ಲಿ ಸಹಕಾರ ನೀಡಬೇಕಾದ ಕೇಂದ್ರ ಸರ್ಕಾರ ಬಡವರ ಪರ ಯೋಜನೆ ವಿಚಾರದಲ್ಲಿ ದ್ವೇಷದ ರಾಜಕೀಯ ಮಾಡುತ್ತಿದೆ” ಎಂದು ದೂರಿದರು.

”ಛತ್ತೀಸ್ ಗಢ ರಾಜ್ಯದಲ್ಲಿ 1.5 ಲಕ್ಷ ಟನ್ ಅಕ್ಕಿಯ ದಾಸ್ತಾನು ಇದೆ, ಆದರೆ ಅದು ಸಾಕಾಗುವುದಿಲ್ಲ. ಆದ್ದರಿಂದ ಪಂಜಾಬ್ ರಾಜ್ಯದಿಂದ ಅಕ್ಕಿ ಖರೀದಿಗೆ ಪ್ರಯತ್ನ ನಡೆಯುತ್ತಿದೆ. ಮುಖ್ಯ ಕಾರ್ಯದದರ್ಶಿಯವರು ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಜತೆ ಚರ್ಚಿಸುತ್ತಿದ್ದಾರೆ ಎಂದು ತಿಳಿಸಿದರು.

ಮತ್ತೊಂದೆಡೆ ಕರ್ನಾಟಕದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸಲು ಪಂಜಾಬ್ ಸಿಎಂ ಭಗವಂತ್ ಮಾನ್ ನೇತೃತ್ವದ ಸರ್ಕಾರ ಸಿದ್ದವಿದೆ ಎಂದು ಸಿಎಂ ಸಿದ್ದರಾಮಯ್ಯನವರಿಗೆ ಕರ್ನಾಟಕ ಆಪ್ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಪತ್ರ ಬರೆದಿದ್ದಾರೆ.

ನಮ್ಮ ರಾಜ್ಯದ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ನಿನ್ನೆ, ನಾನು ಪಂಜಾಬ್ ಮುಖ್ಯಮಂತ್ರಿ ಶ್ರೀ ಭಗವಂತ್ ಮಾನ್ ಅವರೊಂದಿಗೆ ಈ ವಿಷಯದ ಬಗ್ಗೆ ವಿವರವಾದ ಚರ್ಚೆ ನಡೆಸಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ರಾಜ್ಯದಲ್ಲಿನ ಅಕ್ಕಿ ಕೊರತೆಯನ್ನು ಪಂಜಾಬ್ ನಿಂದ ಪೂರೈಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...