Homeಕರ್ನಾಟಕಅನ್ನಭಾಗ್ಯ: ಕೇಂದ್ರೀಯ ಸಂಸ್ಥೆಗಳಿಂದಲೇ ಅಗತ್ಯವಿರುವ ಅಕ್ಕಿ ಖರೀದಿಗೆ ಪ್ರಯತ್ನ; ಸಿಎಂ ಸಿದ್ದರಾಮಯ್ಯ

ಅನ್ನಭಾಗ್ಯ: ಕೇಂದ್ರೀಯ ಸಂಸ್ಥೆಗಳಿಂದಲೇ ಅಗತ್ಯವಿರುವ ಅಕ್ಕಿ ಖರೀದಿಗೆ ಪ್ರಯತ್ನ; ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಛತ್ತೀಸ್‌ಗಢ ರಾಜ್ಯದಲ್ಲಿ 1.5 ಲಕ್ಷ ಟನ್ ಅಕ್ಕಿಯ ದಾಸ್ತಾನು ಇದೆ ಆದರೆ ಅದು ಸಾಕಾಗುವುದಿಲ್ಲ ಹಾಗಾಗಿ ಕೇಂದ್ರೀಯ ಸಂಸ್ಥೆಗಳಿಂದಲೇ ಅಗತ್ಯವಿರುವ ಅಕ್ಕಿ ಖರೀದಿಗೆ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಈ ಬಗ್ಗೆ ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ”ರಾಷ್ಟ್ರೀಯ ಗ್ರಾಹಕರ ಸಹಕಾರ ಒಕ್ಕೂಟ (ಎನ್ ಸಿಸಿಎಫ್), ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (ನಾಫೆಡ್) ಮತ್ತು ಭಾರತೀಯ ಆಹಾರ ನಿಗಮ (ಎಫ್ ಸಿಐ) ಸೇರಿದಂತೆ ಕೇಂದ್ರೀಯ ಸಂಸ್ಥೆಗಳಿಂದಲೇ ಅನ್ನ ಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿ ಖರೀದಿಗೆ ಪ್ರಯತ್ನ ಮಾಡಲಾಗುವುದು” ಎಂದು ತಿಳಿಸಿದರು.

”ಭಾರತೀಯ ಆಹಾರ ನಿಗಮ (ಎಫ್ ಸಿಐ) ಪ್ರತಿ ಕೆ.ಜಿ.ಗೆ 34ರೂ.ನಂತೆ ಅಕ್ಕಿ ಒದಗಿಸುತ್ತದೆ. 2.60ರೂ. ಸಾಗಾಣಿಕೆ ವೆಚ್ಚ ಸೇರಿದರೆ ಪ್ರತಿ ಕೆ.ಜಿ.ಗೆ ‍36.60ರೂ. ವೆಚ್ಚವಾಗುತ್ತದೆ. ಈಗ ಮೂರೂ ಸಂಸ್ಥೆಗಳಿಂದ ದರ ಪಟ್ಟಿ ಅಹ್ವಾನಿಸಿ, ಟೆಂಡರ್ ಮೂಲಕ ಅಕ್ಕಿ ಖರೀದಿಸಲು ಕ್ರಮ ಕೈಗೊಳ್ಳಲಾಗುವುದು” ಎಂದರು.

”ಸಧ್ಯಕ್ಕೆ ಅನ್ನ ಭಾಗ್ಯ ಯೋಜನೆಯಡಿ ಬಿಪಿಎಲ್ ಕುಟುಂಬಗಳ ಪ್ರತಿ ಸದಸ್ಯರಿಗೆ ತಲಾ ಐದು ಕೆ.ಜಿ. ಅಕ್ಕಿ ವಿತರಿಸಲಾಗುತ್ತಿದೆ. ಹೆಚ್ಚುವರಿಯಾಗಿ ಜೋಳ, ರಾಗಿ ವಿತರಿಸುವ ಕುರಿತು ಚರ್ಚೆ ನಡೆದಿದೆ. ಆದರೆ, ತಲಾ ಎರಡು ಕೆ.ಜಿ. ಜೋಳ ಅಥವಾ ರಾಗಿ ವಿತರಿಸಿದರೂ ಆರು ತಿಂಗಳಿಗೆ ಸಾಕಾಗುವಷ್ಟು ದಾಸ್ತಾನು ಮಾತ್ರ ಇದೆ. ಬಾಕಿ ಉಳಿದ ಮೂರು ಕೆ.ಜಿ. ಅಕ್ಕಿಯನ್ನು ಖರೀದಿಸಲೇಬೇಕಾಗುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ಕರ್ನಾಟಕದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸಲು ಮುಂದಾದ ಪಂಜಾಬ್ ಸಿಎಂ ಭಗವಂತ್ ಮಾನ್

”ಅನ್ನಭಾಗ್ಯ ಯೋಜನೆಯಡಿ ತಲಾ ಹತ್ತು ಕೆ.ಜಿ. ಅಕ್ಕಿ ವಿತರಿಸಲು ತಿಂಗಳಿಗೆ 1842 ಕೋಟಿ ವೆಚ್ಚವಾಗುತ್ತದೆ. ವರ್ಷಕ್ಕೆ 710,092 ಕೋಟಿ ಬೇಕಾಗುತ್ತದೆ” ಎಂದು ಸಿದ್ದರಾಮಯ್ಯ ಅಂಕಿಅಂಶಗಳ ಮಾಹಿತಿ ನೀಡಿದರು.

”ಕೇಂದ್ರ ಸರ್ಕಾರದ ಸ್ವಾಮ್ಯದ ಎಫ್ ಸಿಐ ಬಳಿ ಅಕ್ಕಿಯ ದಾಸ್ತಾನು ಇದೆ. ಒಕ್ಕೂಟ ವ್ಯವಸ್ಥೆಯಲ್ಲಿ ಸಹಕಾರ ನೀಡಬೇಕಾದ ಕೇಂದ್ರ ಸರ್ಕಾರ ಬಡವರ ಪರ ಯೋಜನೆ ವಿಚಾರದಲ್ಲಿ ದ್ವೇಷದ ರಾಜಕೀಯ ಮಾಡುತ್ತಿದೆ” ಎಂದು ದೂರಿದರು.

”ಛತ್ತೀಸ್ ಗಢ ರಾಜ್ಯದಲ್ಲಿ 1.5 ಲಕ್ಷ ಟನ್ ಅಕ್ಕಿಯ ದಾಸ್ತಾನು ಇದೆ, ಆದರೆ ಅದು ಸಾಕಾಗುವುದಿಲ್ಲ. ಆದ್ದರಿಂದ ಪಂಜಾಬ್ ರಾಜ್ಯದಿಂದ ಅಕ್ಕಿ ಖರೀದಿಗೆ ಪ್ರಯತ್ನ ನಡೆಯುತ್ತಿದೆ. ಮುಖ್ಯ ಕಾರ್ಯದದರ್ಶಿಯವರು ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಜತೆ ಚರ್ಚಿಸುತ್ತಿದ್ದಾರೆ ಎಂದು ತಿಳಿಸಿದರು.

ಮತ್ತೊಂದೆಡೆ ಕರ್ನಾಟಕದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸಲು ಪಂಜಾಬ್ ಸಿಎಂ ಭಗವಂತ್ ಮಾನ್ ನೇತೃತ್ವದ ಸರ್ಕಾರ ಸಿದ್ದವಿದೆ ಎಂದು ಸಿಎಂ ಸಿದ್ದರಾಮಯ್ಯನವರಿಗೆ ಕರ್ನಾಟಕ ಆಪ್ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಪತ್ರ ಬರೆದಿದ್ದಾರೆ.

ನಮ್ಮ ರಾಜ್ಯದ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ನಿನ್ನೆ, ನಾನು ಪಂಜಾಬ್ ಮುಖ್ಯಮಂತ್ರಿ ಶ್ರೀ ಭಗವಂತ್ ಮಾನ್ ಅವರೊಂದಿಗೆ ಈ ವಿಷಯದ ಬಗ್ಗೆ ವಿವರವಾದ ಚರ್ಚೆ ನಡೆಸಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ರಾಜ್ಯದಲ್ಲಿನ ಅಕ್ಕಿ ಕೊರತೆಯನ್ನು ಪಂಜಾಬ್ ನಿಂದ ಪೂರೈಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...