Homeಕರ್ನಾಟಕಪಠ್ಯದಲ್ಲಿ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು: ದೇವನೂರ ಮಹಾದೇವ

ಪಠ್ಯದಲ್ಲಿ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು: ದೇವನೂರ ಮಹಾದೇವ

- Advertisement -
- Advertisement -

ರಾಜ್ಯ ಸರಕಾರ ಪಠ್ಯದಲ್ಲಿ ಸಾಹಿತಿ ದೇವನೂರ ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಪಠ್ಯದಲ್ಲಿ ಸೇರ್ಪಡೆ ಮಾಡಿ, ಆದೇಶ ಹೊರಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಆಗ್ರಹಿಸಿತ್ತು. ಇದಕ್ಕೆ ದೇವನೂರ ಮಾಹದೇವ ಅವರೇ ಪ್ರತಿಕ್ರಿಯಿಸಿದ್ದಾರೆ.

”ಯಾವುದೇ ಪಠ್ಯಪುಸ್ತಕಕ್ಕೆ ಪುಟಗಳ ಇತಿಮಿತಿಯ ಹಿನ್ನೆಲೆಯನ್ನೂ ನಾವು ಅರ್ಥ ಮಾಡಿಕೊಳ್ಳಬೇಕು ಹಾಗೂ ಪಠ್ಯ ಆಯ್ಕೆ ಸಮಿತಿಯ ಅಭಿರುಚಿಯನ್ನೂ ನಾವು ಗೌರವಿಸಬೇಕು. ಇಂದಿನ ದಿನಗಳಲ್ಲಿ ನಾವು ನೋಡಬೇಕಾದ್ದು ಇಷ್ಟೆ: ಸಂವಿಧಾನ ವಿರೋಧಿಯಾದ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ಆಶಯದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು. ಬದಲಿಗೆ ಸಂವಿಧಾನದ ಆಶಯಗಳಿಗೆ ಪೂರಕವಾದ ವಿಶಾಲ ಹಿಂದೂ ಧರ್ಮಗಳ ಸಮತ್ವದ ನೋಟ ಇರುವಂತೆ ನೋಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

”ಈ ಲೋಕದ ಎಲ್ಲಾ ಧರ್ಮ, ಪಂಥ, ಮತಗಳಲ್ಲಿ ಚಿಗುರಿರುವ ಐಕ್ಯತೆ, ಸಮಾನತೆ, ಮಾನವೀಯ ಅಂಶಗಳನ್ನೂ ನಾವು ಒಳಗೊಳ್ಳಬೇಕಾಗಿದೆ. ಜೊತೆಗೆ ಜ್ಞಾನದೊಳಕ್ಕು ಮೌಢ್ಯ ನುಸುಳುತ್ತಿರುವುದನ್ನು ಎಚ್ಚರಿಕೆಯಿಂದ ತಡೆಗಟ್ಟಬೇಕು. ಬಹುಶಃ ಇದಿಷ್ಟೆ. ಇದನ್ನು ನಾವು ನೋಡದೆ, ‘ನನಗೆ ಇಷ್ಟವಾಗುವ ಪಠ್ಯ ಇರಲಿ, ಇಷ್ಟವಾಗುವವರ ಪಠ್ಯ ಇರಲಿ ಅಥವಾ ನನಗೆ ಒಪ್ಪಿತ ಐಡಿಯಾಲಜಿ ಪಠ್ಯ ಇರಲಿ’ ಎಂದುಕೊಂಡರೆ, ಪಠ್ಯ ಪುಸ್ತಕ ರಚನೆಯೇ ಮುಗಿಯದ ಕತೆಯಾಗಿ ಬಿಡುತ್ತದೆ. ಇದನ್ನು ಎಸ್‍ಎಫ್‍ಐ ಸಂಘಟನೆಯ ಗೆಳೆಯರು ದಯವಿಟ್ಟು ಗಮನಿಸಲಿ” ಎಂದು ತಿಳಿಸಿದ್ದಾರೆ.

ಪಠ್ಯದಲ್ಲಿ ದೇವನೂರರ ‘ಎದೆಗೆ ಬಿದ್ದ ಅಕ್ಷರ’ ಪಾಠ ಸೇರ್ಪಡೆ ಎಸ್‌ಎಫ್‌ಐ ಒತ್ತಾಯ

ರಾಜ್ಯ ಸರಕಾರದ ಪಠ್ಯದಲ್ಲಿ ದೇವನೂರ ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಸೇರ್ಪಡೆ ಮಾಡಿ, ಆದೇಶ ಹೊರಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಆಗ್ರಹಿಸಿದೆ.

ಈ ಬಗ್ಗೆ ಭಾರತ ವಿದ್ಯಾರ್ಥಿ ಫೆಡರೇಶನ್ ರಾಜ್ಯಾಧ್ಯಕ್ಷ ಅಮರೇಶ ಕಡಗದ ಪ್ರಕಟನೆ ಹೊರಡಿಸಿದ್ದು, ”ರಾಜ್ಯ ಸರಕಾರವು ಆರರಿಂದ ಹತ್ತನೇ ತರಗತಿವರೆಗಿನ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಕೆಲವು ಪಾಠಗಳನ್ನು ಸೇರ್ಪಡೆ ಮಾಡಲು ತಿದ್ದುಪಡಿ ಮತ್ತು ಸೇರ್ಪಡೆಗೊಳಿಸಲು ಆದೇಶ ಮಾಡಿರುವುದು ಸ್ವಾಗತಾರ್ಹವಾಗಿದೆ. ಹಾಗೆಯೇ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಸೇರಿಸಲು ಸಂಘಟನೆ ಆಗ್ರಹಿಸಿದೆ. ಹಿಂದಿನ ವರ್ಷ ಬಿಜೆಪಿ ಸರಕಾರ ಆರರಿಂದ ಹತ್ತನೇ ತರಗತಿವರೆಗೆ ಕೆಲವು ಪಾಠಗಳನ್ನು ತಿದ್ದುಪಡಿ, ಸೇರ್ಪಡೆ ಮಾಡುವುದರ ಮೂಲಕ ಪಠ್ಯ ಪರಿಷ್ಕರಣೆ ಮಾಡಿ ವಿದ್ಯಾರ್ಥಿಗಳ ಮನಸ್ಸಿನೊಳಗೆ ಕೋಮು ಭಾವನೆಯ ವಿಷ ಬೀಜ ಬಿತ್ತಲು ಪ್ರಯತ್ನಿಸಿತ್ತು. ಮಹಿಳೆಯರು ಕೇವಲ ಭೋಗದ ವಸ್ತು ಹಾಗೂ ಮನೆ ಕೆಲಸಕ್ಕೆ ಸೀಮಿತ ಎಂಬ ಅರ್ಥದಲ್ಲಿ ಇರುವಂತ ಕೆಲವು ಪಾಠವನ್ನು ಸೇರಿಸಿತ್ತು. ಇದನ್ನು ಸರಿಪಡಿಸಿ, ಸುತ್ತೋಲೆ ಹೋರಡಿಸಿರುವುದು ಸ್ವಾಗತಾರ್ಹ” ಎಂದು ಸಂಘಟನೆ ತಿಳಿಸಿದೆ.

”ಬಿಜೆಪಿ ಸರಕಾರ ಕೈ ಬಿಟ್ಟಿರುವ ಬಹುತೇಕ ಎಲ್ಲ ಪಾಠಗಳನ್ನು ಇಂದಿನ ಕಾಂಗ್ರೆಸ್ ಸರಕಾರ ಮರುಸೇರ್ಪಡೆ ಮಾಡಿದೆ. ಆದರೆ 10ನೇ ತರಗತಿ ಪ್ರಥಮ ಭಾಷೆಯಾದ ಕನ್ನಡ ಗದ್ಯ ಭಾಗದಲ್ಲಿ ರಾಜ್ಯದ ಹಿರಿಯ ಸಾಹಿತಿ ದೇವನೂರು ಮಹಾದೇವರ ಎದೆಗೆ ಬಿದ್ದ ಅಕ್ಷರ ಎಂಬ ಪಾಠವು ರಾಜ್ಯ ಸರಕಾರ ಬಿಡುಗಡೆ ಮಾಡಿರುವ ತಿದ್ದೋಲೆಯಲ್ಲಿ ಇಲ್ಲದಿರುವುದು ನೋವಿನ ವಿಷಯ ಆಗಿದೆ” ಎಂದು ಸಂಘಟನೆ ಹೇಳಿದೆ.

ಎದೆಗೆ ಬಿದ್ದ ಅಕ್ಷರ ಪಾಠವು ಅನೇಕ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ ಹಿಂದೆ ಬಿಜೆಪಿ ಸರಕಾರದ ಕೋಮುವಾದದ ವಿರುದ್ಧ ದೇವನೂರು ಮಹಾದೇವ ಬಹಿರಂಗವಾಗಿ ಪ್ರತಿಭಟನೆಯನ್ನು ಮಾಡಿದ್ದರು. ತಮ್ಮ ಪುಸ್ತಕವಾದ ಎದೆಗೆ ಬಿದ್ದ ಅಕ್ಷರ ಭಾಗವನ್ನು ಗದ್ಯಭಾಗದಲ್ಲು ಪ್ರಕಟಿಸಲು ನೀಡಿದ್ದ ಅನುಮತಿ ವಾಪಸ್ ಪಡೆದಿದ್ದರು.

ಕೂಡಲೇ ರಾಜ್ಯದ ಮುಖ್ಯಮಂತ್ರಿಯವರು ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಸಚಿವರು ಗಮನಹರಿಸಿ 10ನೇ ತರಗತಿ ಕನ್ನಡ ಪ್ರಥಮ ಭಾಷೆ ವಿಷಯದಲ್ಲಿ ಸೇರ್ಪಡೆ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್ ರಾಜ್ಯಾಧ್ಯಕ್ಷ ಅಮರೇಶ ಕಡಗದ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...