Homeಮುಖಪುಟಇದ್ರೀಸ್ ಪಾಶ ಹತ್ಯೆ ಸಮರ್ಥಿಸಿಕೊಂಡ ಕೊಲೆ ಆರೋಪಿಗಳು: ಆಡಿಯೋ ವೈರಲ್

ಇದ್ರೀಸ್ ಪಾಶ ಹತ್ಯೆ ಸಮರ್ಥಿಸಿಕೊಂಡ ಕೊಲೆ ಆರೋಪಿಗಳು: ಆಡಿಯೋ ವೈರಲ್

ಒಂದಲ್ಲ, 10 ವರ್ಷ ಜೈಲಿಗೆ ಹಾಕಿದರೂ ಗೋವು ಕಡಿಯುವವರನ್ನು ಮತ್ತೆ ಕೊಲ್ತೀವಿ ಎಂದು ಇದ್ರೀಸ್ ಪಾಶ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ ಗೋಪಿಗೌಡ ಹೇಳಿದ್ದಾನೆ.

- Advertisement -
- Advertisement -

ದನ ಕುಯ್ಯೋದು ತಪ್ಪಲ್ವ? ಕರ್ನಾಟಕದಲ್ಲಿ ಯಾವುದೇ ಸರ್ಕಾರ ಬರಲಿ, ಕಣ್ಮುಂದೆ ದನ ಕಡಿಯುವುದು ಕಂಡರೆ ಅವನನ್ನು ಮೊದಲು ಕಡಿತ್ತೀವಿ. ಒಂದಲ್ಲ 10 ವರ್ಷ ಜೈಲಿಗೆ ಹಾಕಿದರೂ ಗೋವು ಕಡಿಯುವವರನ್ನು ಮತ್ತೆ ಕೊಲ್ತೀವಿ ಎಂದು ಇದ್ರೀಸ್ ಪಾಶ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ ಗೋಪಿಗೌಡ ಎಂಬುವವನು ಮಾತನಾಡಿರುವ ಆಡಿಯೋ ಒಂದು ವೈರಲ್ ಆಗಿದೆ.

ಹಿಂದುತ್ವ ಎನ್ನುವುದು ನಮ್ಮ ರಕ್ತದಲ್ಲಿ ಬಂದಿದೆ. ದನ ತಿನ್ನಬೇಡಿ, ಮುಸ್ಲಿಮರಿಗೆ ಸಪೋರ್ಟ್ ಮಾಡಬೇಡಿ. ನಮ್ಮಂತವರು ಸತ್ತರೆ ಸಾವಿರ ಜನ ಕೆಲಸ ಮಾಡುತ್ತಾರೆ ಎಂದು ಅಹೋರಾತ್ರ ಎಂಬುವವರಿಗೆ ಫೋನ್ ಮಾತನಾಡಿರುವ ಆಡಿಯೋವನ್ನು ಅವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಇದ್ರೀಸ್ ಪಾಶನನ್ನು ಏಕೆ ಕೊಂದಿರಿ? ನೀವು ಪೊಲೀಸರಿಗೆ ಹಿಡಿದುಕೊಟ್ಟಿದ್ದರೆ ಸಾಕಿರಲಿಲ್ವ? ಕಾನೂನು ಮೀರಿದ್ದು ಏಕೆ ಎಂದು ಅಹೋರಾತ್ರ ಪ್ರಶ್ನಿಸಿದ್ದಕ್ಕೆ, “ದನ ಕಡಿಯೋದು ತಪ್ಪಲ್ವ? ದನ ಕಡಿಯುವವರನ್ನು ನಾವು ಕಡಿಯುತ್ತೇವೆ” ಎಂದು ಹೇಳುವ ಮೂಲಕ ಇದ್ರೀಸ್ ಪಾಶ ಹತ್ಯೆಯನ್ನು ಸಮರ್ಥಿಸಿಕೊಂಡಿರುವುದು ಆಡಿಯೋದಲ್ಲಿ ದಾಖಲಾಗಿದೆ.

ಕಾಂಗ್ರೆಸ್‌ನವರು ಗೆದ್ದುಬಿಟ್ಟಿದ್ದಾರೆ, ಹಾಗಾಗಿ ನಾವು ಸುಮ್ಮನಾಗಿಬಿಟ್ಟಿದ್ದಾರೆ ಎಂದು ಕೆಲವರು ಅಂದುಕೊಂಡಿರಬಹುದು. ಆದರೆ ನಾವು ಗೋವುಗಳ ರಕ್ಷಣೆ ಮಾಡಿಯೇ ಮಾಡುತ್ತೇವೆ ಎಂದು ಇದ್ರೀಸ್ ಪಾಶ ಹತ್ಯೆಯ ಆರೋಪಿಗಳಾದ ಪವನ್ ಮತ್ತು ಅಂಬಿಗಾರ್ ಎಂಬುವವರು ಮಾತನಾಡಿದ್ದಾರೆ.

ಫೋನ್ ಕರೆಯಲ್ಲಿ ಅಹೋರಾತ್ರ ಮಾತನಾಡಿ, “ಸೂಲಿಬೆಲೆ ನಿಮ್ಮನ್ನು ಹೊರಗೆ ಕರೆಸಿಕೊಂಡು, ನಿಮಗೆ ಊಟ ಹಾಕಿದ್ದು ಏಕೆ? ನಾಗರಕಟ್ಟೆಯ ಅಶ್ವಥ ಮರ ಕಡಿದಿದ್ದಕ್ಕೆ ಅನುಭವಿಸಿದರಿ. ಯಾರನ್ನು ಕೊಂದರು ಅಧರ್ಮ. ಜಗತ್ತಿನ ಯಾವ ಧರ್ಮವೂ ಕೊಲ್ಲು ಎಂದು ಹೇಳಿಕೊಡುವುದಿಲ್ಲ. ನೀವು ಇದ್ರೀಸ್ ಪಾಶನಿಗೆ ಏಕೆ ಎಲೆಕ್ಟ್ರಿಕ್ ಶಾಕ್ ಕೊಟ್ಟಿದ್ದು” ಎಂದು ಪ್ರಶ್ನಿಸಿದ್ದಾರೆ. ಆದರೆ ಆರೋಪಿಗಳು ಕೊಲ್ಲಲು ನೀನೆ ಹೇಳಿದ್ದು, ನೀನೆ ಮಾಡಿದ್ದು ಎಂದಿದ್ದಾರೆ. ಯಾರಾದರೂ ಸಾಬರು ನಿನಗೆ ಹೊಡೆಯಲು ಬಂದರೆ ನಮ್ಮನ್ನು ಕರಿ ಬರುತ್ತೇವೆ, ನಿನ್ನನ್ನು ಉಳಿಸುತ್ತೇವೆ ಎಂದಿದ್ದಾರೆ.

ನೀನು ನನಗೆ ಜಾಮೀನು ಕೊಡಿಸುತ್ತೀಯಾ? ಸಪೋರ್ಟ್ ಮಾಡ್ತೀಯ ಎಂದು ನಂಬಿದ್ದೇವು. ಆದರೆ ನೀನು ಮುಂಬೈಗೆ ಕರೆದು ಕೊನೆಗೆ ಫೋನ್ ಸ್ವಿಚ್ ಆಫ್ ಮಾಡಿಕೊಂಡೆ ಎಂದು ಅಹೋರಾತ್ರ ವಿರುದ್ಧ ಆರೋಪಿಸಿದ್ದಾರೆ.

ಆನಂತರ ಆಹೋರಾತ್ರ ಸಾತನೂರು ಪೊಲೀಸ್ ಠಾಣೆಗೆ ಫೋನ್ ಮಾಡಿ ಪುನೀತ್ ಕೆರೆಹಳ್ಳಿ ಜೊತೆಗಿದ್ದ ಆರೋಪಿಗಳು ಫೋನ್ ಮಾಡಿ ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಆನಂತರ ಕನಕಪುರ ಇನ್ಸ್‌ಪೆಕ್ಟರ್‌ರವರಿಗೆ ಫೋನ್ ಮಾಡಿ, “ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳು ಫೋನ್ ಮಾಡಿ ಮಾತನಾಡಿದ್ದಾರೆ ಎಂದು ದೂರಿದ್ದಾರೆ. ಇನ್ಸ್‌ಪೆಕ್ಟರ್‌ ದೂರು ದಾಖಲಿಸಿ ಎಂದಾಗ ನಾನು ಬಾಂಬೆಯಲ್ಲಿದ್ದೇನೆ, ನಿಮಗೆ ವಾಟ್ಸಾಪ್‌ ಮೂಲಕ ಆಡಿಯೋ ಕಳಿಸುತ್ತೇವೆ” ಎಂದಿದ್ದಾರೆ. ಈ ವೇಳೆ ಪೊಲೀಸರು ನಾವು ಶೀಘ್ರದಲ್ಲಿಯೇ ಚಾರ್ಜ್‌ಶೀಟ್‌ ಸಲ್ಲಿಸುತ್ತೇವೆ ಎಂದು ಹೇಳಿರುವುದು ದಾಖಲಾಗಿದೆ.

ಇನ್ನೊಂದೆಡೆ ಇದ್ರೀಸ್ ಪಾಶ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾನೆ. ಅದರಲ್ಲಿ “ಇದ್ರೀಸ್ ಪಾಶ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಹೇಗೆ 25 ಲಕ್ಷ ಪರಿಹಾರ ನೀಡಿದ್ದೀರಿ” ಎಂದು ಮನಬಂದಂತೆ ಮಾತನಾಡಿದ್ದಾನೆ.

ಟ್ರಕ್ ಚಾಲಕ ಇದ್ರೀಸ್ ಪಾಶ ಹತ್ಯೆಯಲ್ಲಿ ಪೊಲೀಸರ ಕರ್ತವ್ಯ ಲೋಪ ಕಂಡುಬಂದಿದೆ. ವಿಷಯ ತಿಳಿದ ತಕ್ಷಣ ಪೊಲೀಸರು ನಕಲಿ ಗೋರಕ್ಷಕರಿಗೆ ಎಚ್ಚರಿಕೆ ನೀಡಿ, ವಶಕ್ಕೆ ಪಡೆದಿದ್ದಲ್ಲಿ ಹತ್ಯೆಯನ್ನು ತಡೆಗಟ್ಟಬಹುದಿತ್ತು ಎಂದು ಸತ್ಯ ಶೋಧನಾ ವರದಿ ತಿಳಿಸಿದೆ.

ವಕೀಲ ಶಿವಮಾನಿತನ್, ಸಿದ್ಧಾರ್ಥ್ ಕೆ.ಜಿ, ಡಾ. ಸಿಲ್ವಿಯಾ ಕರ್ಪಗಂ, ಖಾಸಿಂ ಶೋಯೆಬ್ ಖುರೇಷಿ ಮತ್ತು ಅಖಿಲ ಭಾರತ ಜಮೈತುಲ್ ಖುರೇಷ್ (ಕರ್ನಾಟಕ) ಸದಸ್ಯರ ಸತ್ಯಶೋಧನಾ ತಂಡವು ಇದ್ರೀಸ್ ಪಾಶ ಹತ್ಯೆ ಪ್ರಕರಣದ ಸತ್ಯಶೋಧನಾ ವರದಿಯನ್ನು ಪ್ರಕಟಿಸಿದ್ದು, ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಶಿಫಾರಸ್ಸುಗಳನ್ನು ಸಲ್ಲಿಸಿದ್ದಾರೆ.

ಹಣ ಸುಲಿಗೆ ಮಾಡುವ ಹಾಗೂ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ, ದಾಳಿ ನಡೆಸುವ ಉದ್ದೇಶದಿಂದ ಸಮಾಜ-ವಿರೋಧಿ ಗುಂಪುಗಳು ಬಹಿರಂಗವಾಗಿ ಕಾನೂನನ್ನು ಕೈಗೆತ್ತಿಕೊಂಡಿವೆ. ಪೊಲೀಸರ ಯಾವುದೇ ಭಯವಿಲ್ಲದೆ ಪೊಲೀಸ್ ಠಾಣೆಯ ಹತ್ತಿರವೇ ಮೂರು ಜನ ನಾಗರೀಕರ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ. ಆದರೆ ಪೊಲೀಸರು ತಕ್ಷಣವೇ ಈ ದಾಳಿಕೋರರನ್ನು ಬಂಧಿಸುವ ಬದಲು ಇನ್ನುಳಿದ ಸಂತ್ರಸ್ಥರನ್ನು ಹುಡುಕಲು ದಾಳಿಕೋರರನ್ನು ಬಿಟ್ಟಿದ್ದಾರೆ. ಪೊಲೀಸ್ ಠಾಣೆಯ ಸಿಬ್ಬಂಧಿಯೊಬ್ಬರು ಸಂತ್ರಸ್ಥರ ಮೇಲೆ ನಡೆಯುತ್ತಿದ್ದ ಹಲ್ಲೆಯನ್ನು ಕಣ್ಣಾರೆ ಕಂಡ ನಂತರ ಹಾಗೂ ಪೊಲೀಸ್ ಠಾಣೆ ಹೊರಗೆ ಸ್ವತಃ ದಾಳಿಕೋರರೇ ಫೇಸ್‌ಬುಕ್ ಲೈವ್ ಮಾಡಿದರೂ ಸಹ ದಾಳಿಕೋರರನ್ನು ಬಂಧಿಸಿರುವುದಿಲ್ಲ. ಇದರಿಂದಾಗಿಯೇ ಇದ್ರೀಸ್ ಪಾಶರವರ ಹತ್ಯೆಯಾಗಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ; ಇದ್ರೀಸ್ ಪಾಶ ಹತ್ಯೆಗೆ ಪೊಲೀಸರ ಕರ್ತವ್ಯ ಲೋಪವೂ ಕಾರಣ: ಸತ್ಯಶೋಧನಾ ವರದಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...