Homeಮುಖಪುಟಇದ್ರೀಸ್ ಪಾಶ ಹತ್ಯೆ ಸಮರ್ಥಿಸಿಕೊಂಡ ಕೊಲೆ ಆರೋಪಿಗಳು: ಆಡಿಯೋ ವೈರಲ್

ಇದ್ರೀಸ್ ಪಾಶ ಹತ್ಯೆ ಸಮರ್ಥಿಸಿಕೊಂಡ ಕೊಲೆ ಆರೋಪಿಗಳು: ಆಡಿಯೋ ವೈರಲ್

ಒಂದಲ್ಲ, 10 ವರ್ಷ ಜೈಲಿಗೆ ಹಾಕಿದರೂ ಗೋವು ಕಡಿಯುವವರನ್ನು ಮತ್ತೆ ಕೊಲ್ತೀವಿ ಎಂದು ಇದ್ರೀಸ್ ಪಾಶ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ ಗೋಪಿಗೌಡ ಹೇಳಿದ್ದಾನೆ.

- Advertisement -
- Advertisement -

ದನ ಕುಯ್ಯೋದು ತಪ್ಪಲ್ವ? ಕರ್ನಾಟಕದಲ್ಲಿ ಯಾವುದೇ ಸರ್ಕಾರ ಬರಲಿ, ಕಣ್ಮುಂದೆ ದನ ಕಡಿಯುವುದು ಕಂಡರೆ ಅವನನ್ನು ಮೊದಲು ಕಡಿತ್ತೀವಿ. ಒಂದಲ್ಲ 10 ವರ್ಷ ಜೈಲಿಗೆ ಹಾಕಿದರೂ ಗೋವು ಕಡಿಯುವವರನ್ನು ಮತ್ತೆ ಕೊಲ್ತೀವಿ ಎಂದು ಇದ್ರೀಸ್ ಪಾಶ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ ಗೋಪಿಗೌಡ ಎಂಬುವವನು ಮಾತನಾಡಿರುವ ಆಡಿಯೋ ಒಂದು ವೈರಲ್ ಆಗಿದೆ.

ಹಿಂದುತ್ವ ಎನ್ನುವುದು ನಮ್ಮ ರಕ್ತದಲ್ಲಿ ಬಂದಿದೆ. ದನ ತಿನ್ನಬೇಡಿ, ಮುಸ್ಲಿಮರಿಗೆ ಸಪೋರ್ಟ್ ಮಾಡಬೇಡಿ. ನಮ್ಮಂತವರು ಸತ್ತರೆ ಸಾವಿರ ಜನ ಕೆಲಸ ಮಾಡುತ್ತಾರೆ ಎಂದು ಅಹೋರಾತ್ರ ಎಂಬುವವರಿಗೆ ಫೋನ್ ಮಾತನಾಡಿರುವ ಆಡಿಯೋವನ್ನು ಅವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಇದ್ರೀಸ್ ಪಾಶನನ್ನು ಏಕೆ ಕೊಂದಿರಿ? ನೀವು ಪೊಲೀಸರಿಗೆ ಹಿಡಿದುಕೊಟ್ಟಿದ್ದರೆ ಸಾಕಿರಲಿಲ್ವ? ಕಾನೂನು ಮೀರಿದ್ದು ಏಕೆ ಎಂದು ಅಹೋರಾತ್ರ ಪ್ರಶ್ನಿಸಿದ್ದಕ್ಕೆ, “ದನ ಕಡಿಯೋದು ತಪ್ಪಲ್ವ? ದನ ಕಡಿಯುವವರನ್ನು ನಾವು ಕಡಿಯುತ್ತೇವೆ” ಎಂದು ಹೇಳುವ ಮೂಲಕ ಇದ್ರೀಸ್ ಪಾಶ ಹತ್ಯೆಯನ್ನು ಸಮರ್ಥಿಸಿಕೊಂಡಿರುವುದು ಆಡಿಯೋದಲ್ಲಿ ದಾಖಲಾಗಿದೆ.

ಕಾಂಗ್ರೆಸ್‌ನವರು ಗೆದ್ದುಬಿಟ್ಟಿದ್ದಾರೆ, ಹಾಗಾಗಿ ನಾವು ಸುಮ್ಮನಾಗಿಬಿಟ್ಟಿದ್ದಾರೆ ಎಂದು ಕೆಲವರು ಅಂದುಕೊಂಡಿರಬಹುದು. ಆದರೆ ನಾವು ಗೋವುಗಳ ರಕ್ಷಣೆ ಮಾಡಿಯೇ ಮಾಡುತ್ತೇವೆ ಎಂದು ಇದ್ರೀಸ್ ಪಾಶ ಹತ್ಯೆಯ ಆರೋಪಿಗಳಾದ ಪವನ್ ಮತ್ತು ಅಂಬಿಗಾರ್ ಎಂಬುವವರು ಮಾತನಾಡಿದ್ದಾರೆ.

ಫೋನ್ ಕರೆಯಲ್ಲಿ ಅಹೋರಾತ್ರ ಮಾತನಾಡಿ, “ಸೂಲಿಬೆಲೆ ನಿಮ್ಮನ್ನು ಹೊರಗೆ ಕರೆಸಿಕೊಂಡು, ನಿಮಗೆ ಊಟ ಹಾಕಿದ್ದು ಏಕೆ? ನಾಗರಕಟ್ಟೆಯ ಅಶ್ವಥ ಮರ ಕಡಿದಿದ್ದಕ್ಕೆ ಅನುಭವಿಸಿದರಿ. ಯಾರನ್ನು ಕೊಂದರು ಅಧರ್ಮ. ಜಗತ್ತಿನ ಯಾವ ಧರ್ಮವೂ ಕೊಲ್ಲು ಎಂದು ಹೇಳಿಕೊಡುವುದಿಲ್ಲ. ನೀವು ಇದ್ರೀಸ್ ಪಾಶನಿಗೆ ಏಕೆ ಎಲೆಕ್ಟ್ರಿಕ್ ಶಾಕ್ ಕೊಟ್ಟಿದ್ದು” ಎಂದು ಪ್ರಶ್ನಿಸಿದ್ದಾರೆ. ಆದರೆ ಆರೋಪಿಗಳು ಕೊಲ್ಲಲು ನೀನೆ ಹೇಳಿದ್ದು, ನೀನೆ ಮಾಡಿದ್ದು ಎಂದಿದ್ದಾರೆ. ಯಾರಾದರೂ ಸಾಬರು ನಿನಗೆ ಹೊಡೆಯಲು ಬಂದರೆ ನಮ್ಮನ್ನು ಕರಿ ಬರುತ್ತೇವೆ, ನಿನ್ನನ್ನು ಉಳಿಸುತ್ತೇವೆ ಎಂದಿದ್ದಾರೆ.

ನೀನು ನನಗೆ ಜಾಮೀನು ಕೊಡಿಸುತ್ತೀಯಾ? ಸಪೋರ್ಟ್ ಮಾಡ್ತೀಯ ಎಂದು ನಂಬಿದ್ದೇವು. ಆದರೆ ನೀನು ಮುಂಬೈಗೆ ಕರೆದು ಕೊನೆಗೆ ಫೋನ್ ಸ್ವಿಚ್ ಆಫ್ ಮಾಡಿಕೊಂಡೆ ಎಂದು ಅಹೋರಾತ್ರ ವಿರುದ್ಧ ಆರೋಪಿಸಿದ್ದಾರೆ.

ಆನಂತರ ಆಹೋರಾತ್ರ ಸಾತನೂರು ಪೊಲೀಸ್ ಠಾಣೆಗೆ ಫೋನ್ ಮಾಡಿ ಪುನೀತ್ ಕೆರೆಹಳ್ಳಿ ಜೊತೆಗಿದ್ದ ಆರೋಪಿಗಳು ಫೋನ್ ಮಾಡಿ ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಆನಂತರ ಕನಕಪುರ ಇನ್ಸ್‌ಪೆಕ್ಟರ್‌ರವರಿಗೆ ಫೋನ್ ಮಾಡಿ, “ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳು ಫೋನ್ ಮಾಡಿ ಮಾತನಾಡಿದ್ದಾರೆ ಎಂದು ದೂರಿದ್ದಾರೆ. ಇನ್ಸ್‌ಪೆಕ್ಟರ್‌ ದೂರು ದಾಖಲಿಸಿ ಎಂದಾಗ ನಾನು ಬಾಂಬೆಯಲ್ಲಿದ್ದೇನೆ, ನಿಮಗೆ ವಾಟ್ಸಾಪ್‌ ಮೂಲಕ ಆಡಿಯೋ ಕಳಿಸುತ್ತೇವೆ” ಎಂದಿದ್ದಾರೆ. ಈ ವೇಳೆ ಪೊಲೀಸರು ನಾವು ಶೀಘ್ರದಲ್ಲಿಯೇ ಚಾರ್ಜ್‌ಶೀಟ್‌ ಸಲ್ಲಿಸುತ್ತೇವೆ ಎಂದು ಹೇಳಿರುವುದು ದಾಖಲಾಗಿದೆ.

ಇನ್ನೊಂದೆಡೆ ಇದ್ರೀಸ್ ಪಾಶ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾನೆ. ಅದರಲ್ಲಿ “ಇದ್ರೀಸ್ ಪಾಶ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಹೇಗೆ 25 ಲಕ್ಷ ಪರಿಹಾರ ನೀಡಿದ್ದೀರಿ” ಎಂದು ಮನಬಂದಂತೆ ಮಾತನಾಡಿದ್ದಾನೆ.

ಟ್ರಕ್ ಚಾಲಕ ಇದ್ರೀಸ್ ಪಾಶ ಹತ್ಯೆಯಲ್ಲಿ ಪೊಲೀಸರ ಕರ್ತವ್ಯ ಲೋಪ ಕಂಡುಬಂದಿದೆ. ವಿಷಯ ತಿಳಿದ ತಕ್ಷಣ ಪೊಲೀಸರು ನಕಲಿ ಗೋರಕ್ಷಕರಿಗೆ ಎಚ್ಚರಿಕೆ ನೀಡಿ, ವಶಕ್ಕೆ ಪಡೆದಿದ್ದಲ್ಲಿ ಹತ್ಯೆಯನ್ನು ತಡೆಗಟ್ಟಬಹುದಿತ್ತು ಎಂದು ಸತ್ಯ ಶೋಧನಾ ವರದಿ ತಿಳಿಸಿದೆ.

ವಕೀಲ ಶಿವಮಾನಿತನ್, ಸಿದ್ಧಾರ್ಥ್ ಕೆ.ಜಿ, ಡಾ. ಸಿಲ್ವಿಯಾ ಕರ್ಪಗಂ, ಖಾಸಿಂ ಶೋಯೆಬ್ ಖುರೇಷಿ ಮತ್ತು ಅಖಿಲ ಭಾರತ ಜಮೈತುಲ್ ಖುರೇಷ್ (ಕರ್ನಾಟಕ) ಸದಸ್ಯರ ಸತ್ಯಶೋಧನಾ ತಂಡವು ಇದ್ರೀಸ್ ಪಾಶ ಹತ್ಯೆ ಪ್ರಕರಣದ ಸತ್ಯಶೋಧನಾ ವರದಿಯನ್ನು ಪ್ರಕಟಿಸಿದ್ದು, ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಶಿಫಾರಸ್ಸುಗಳನ್ನು ಸಲ್ಲಿಸಿದ್ದಾರೆ.

ಹಣ ಸುಲಿಗೆ ಮಾಡುವ ಹಾಗೂ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ, ದಾಳಿ ನಡೆಸುವ ಉದ್ದೇಶದಿಂದ ಸಮಾಜ-ವಿರೋಧಿ ಗುಂಪುಗಳು ಬಹಿರಂಗವಾಗಿ ಕಾನೂನನ್ನು ಕೈಗೆತ್ತಿಕೊಂಡಿವೆ. ಪೊಲೀಸರ ಯಾವುದೇ ಭಯವಿಲ್ಲದೆ ಪೊಲೀಸ್ ಠಾಣೆಯ ಹತ್ತಿರವೇ ಮೂರು ಜನ ನಾಗರೀಕರ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ. ಆದರೆ ಪೊಲೀಸರು ತಕ್ಷಣವೇ ಈ ದಾಳಿಕೋರರನ್ನು ಬಂಧಿಸುವ ಬದಲು ಇನ್ನುಳಿದ ಸಂತ್ರಸ್ಥರನ್ನು ಹುಡುಕಲು ದಾಳಿಕೋರರನ್ನು ಬಿಟ್ಟಿದ್ದಾರೆ. ಪೊಲೀಸ್ ಠಾಣೆಯ ಸಿಬ್ಬಂಧಿಯೊಬ್ಬರು ಸಂತ್ರಸ್ಥರ ಮೇಲೆ ನಡೆಯುತ್ತಿದ್ದ ಹಲ್ಲೆಯನ್ನು ಕಣ್ಣಾರೆ ಕಂಡ ನಂತರ ಹಾಗೂ ಪೊಲೀಸ್ ಠಾಣೆ ಹೊರಗೆ ಸ್ವತಃ ದಾಳಿಕೋರರೇ ಫೇಸ್‌ಬುಕ್ ಲೈವ್ ಮಾಡಿದರೂ ಸಹ ದಾಳಿಕೋರರನ್ನು ಬಂಧಿಸಿರುವುದಿಲ್ಲ. ಇದರಿಂದಾಗಿಯೇ ಇದ್ರೀಸ್ ಪಾಶರವರ ಹತ್ಯೆಯಾಗಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ; ಇದ್ರೀಸ್ ಪಾಶ ಹತ್ಯೆಗೆ ಪೊಲೀಸರ ಕರ್ತವ್ಯ ಲೋಪವೂ ಕಾರಣ: ಸತ್ಯಶೋಧನಾ ವರದಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...