Homeಕರ್ನಾಟಕವಿವಾಹದ ಬಳಿಕ ದೈಹಿಕ ಸಂಪರ್ಕಕ್ಕೆ ನಿರಾಕರಿಸುವುದು ಐಪಿಸಿಯಡಿ ಅಪರಾಧವಲ್ಲ: ಹೈಕೋರ್ಟ್

ವಿವಾಹದ ಬಳಿಕ ದೈಹಿಕ ಸಂಪರ್ಕಕ್ಕೆ ನಿರಾಕರಿಸುವುದು ಐಪಿಸಿಯಡಿ ಅಪರಾಧವಲ್ಲ: ಹೈಕೋರ್ಟ್

- Advertisement -
- Advertisement -

ವಿವಾಹದ ಬಳಿಕ ದೈಹಿಕ ಸಂಪರ್ಕಕ್ಕೆ ನಿರಾಕರಿಸುವುದು ಹಿಂದೂ ವಿವಾಹ ಕಾಯ್ದೆ ಅಡಿಯಲ್ಲಿ ಕ್ರೌರ್ಯ ಎನಿಸಿದರೂ, ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 498-ಎ (ಹೆಣ್ಣಿನ ಪತಿ ಅಥವಾ ಪತಿ ಸಂಬಂಧಿಯಿಂದ ಕ್ರೌರ್ಯ) ಅಡಿಯಲ್ಲಿ ಅದು ಕ್ರೌರ್ಯದ ಅಪರಾಧವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ.

ವಿವಾಹ ನಂತರ ದೈಹಿಕ ಸಂಪರ್ಕಕ್ಕೆ ನಿರಾಕರಿಸಿದ ಹಿನ್ನೆಲೆ ಪತ್ನಿಯು ಐಪಿಸಿ ಕಲಂ 498-ಎ ಅಡಿಯಲ್ಲಿ ಕ್ರೌರ್ಯದ ಆರೋಪ ಹೊರಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಅವರ ಪತಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಅರ್ಜಿಯನ್ನು ಪುರಸ್ಕರಿಸಿ ಆದೇಶ ಹೊರಡಿಸಿದೆ.

ಡಿಸೆಂಬರ್ 2019 ರಲ್ಲಿ ವಿವಾಹದ ಬಳಿಕ ಪತಿ-ಪತ್ನಿ 28 ದಿನಗಳ ಕಾಲ ಜೊತೆಗೆ ಇದ್ದರು. ಆದರೆ ಪತ್ನಿ ಮಾಡಿರುವ ಏಕೈಕ ಆರೋಪವೆಂದರೆ, ”ಪತಿಯು ಆಧ್ಯಾತ್ಮಕ ಚಿಂತಕರೊಬ್ಬರ ಅನುಯಾಯಿಯಾಗಿದ್ದಾರೆ. ಸದಾ ಅವರ ಪ್ರವಚನಗಳ ವಿಡಿಯೊ ಕಡೆಗೇ ಆಸಕ್ತಿ ತೋರುತ್ತಾ ಆಧ್ಯಾತ್ಮಿಕ ಒಲವು ಬೆಳೆಸಿಕೊಂಡಿದ್ದಾರೆ. ನನ್ನೊಡನೆ ಯಾವತ್ತೂ ದೈಹಿಕ ಸಂಪರ್ಕ ಬೆಳೆಸುವ ಆಸಕ್ತಿ ತೋರಿಸಿಲ್ಲ. ಇದು ಹಿಂದೂ ವಿವಾಹ ಕಾಯ್ದೆಯಡಿ ನಿಸ್ಸಂದೇಹವಾಗಿ ಕ್ರೌರ್ಯ ಎನಿಸಲಿದೆ” ಎಂದು ಹೇಳಿದ್ದಾರೆ. ಆದರೆ ಇದಕ್ಕೆ ನ್ಯಾಯಪೀಠವು, ”ಇದು ಐಪಿಸಿ ಕಲಂ 498- ಎ ಅಡಿಯಲ್ಲಿ ಹೇಳಿರುವಂತಹ ಕ್ರೌರ್ಯದ ಅಪರಾಧ ಕೃತ್ಯವಾಗುವುದಿಲ್ಲ” ಎಂದು ಅಭಿಪ್ರಾಯಪಟ್ಟಿದೆ.

ನವೆಂಬರ್ 2022 ರಲ್ಲಿ ಹಿಂದೂ ವಿವಾಹ ಕಾಯ್ದೆಯಡಿಯಲ್ಲಿ ಕ್ರೌರ್ಯದ ಆಧಾರದ ಮೇಲೆ ಪತ್ನಿಯ ಮನವಿಯ ಮೇರೆಗೆ ಕೌಟುಂಬಿಕ ನ್ಯಾಯಾಲಯವು ಈಗಾಗಲೇ ವಿಚ್ಛೇದನದ ಆದೇಶವನ್ನು ನೀಡಿತ್ತು.

ದೂರಿನಲ್ಲಿ ಮತ್ತು ದೋಷಾರೋಪ ಪಟ್ಟಿಯಲ್ಲಿ 498-ಎ ಅಡಿಯಲ್ಲಿ ಕ್ರೌರ್ಯದ ಅಪರಾಧ ನಡೆದಿದೆ ಎನ್ನಲಾದ ಬಗ್ಗೆ ಯಾವುದೇ ಅಂಶಗಳು ಕಂಡುಬರುತ್ತಿಲ್ಲ. ಹೀಗಾಗಿ, ಪತಿ ಹಾಗೂ ಅವರ ತಂದೆ-ತಾಯಿ ವಿರುದ್ಧದ ಕ್ರಿಮಿನಲ್ ಪ್ರಕರಣದ ವಿಚಾರಣೆ ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರ್ಬಳಕೆಯಾಗಲಿದೆ. ಹಾಗಾಗಿ ಪತಿ ಮತ್ತು ಅವರ ಪೋಷಕರ ವಿರುದ್ಧದ ಕ್ರಿಮಿನಲ್ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಲು ನ್ಯಾಯಪೀಠ ತೀರ್ಮಾನಿಸಿದೆ.

ಇದನ್ನೂ ಓದಿ: ಲಿವ್‌ ಇನ್‌ ರಿಲೇಷನ್‌ಷಿಪ್‌ಗಳಿಗೆ ಕಾನೂನಿನಡಿ ಮದುವೆಯ ಮಾನ್ಯತೆ ಇಲ್ಲ: ಕೇರಳ ಹೈಕೋರ್ಟ್

ಏನಿದು ಪ್ರಕರಣ?:

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಪತಿ-ಪತ್ನಿ 2019ರ ಡಿಸೆಂಬರ್ 18 ರಂದು ವಿವಾಹವಾಗಿದ್ದರು. ವಿವಾಹದ ಬಳಿಕ ಪತಿ-ಪತ್ನಿ 28 ದಿನಗಳ ಕಾಲ ಜೊತೆಗೆ ಇದ್ದರು. ನಂತರ ಪತಿಯ ಮನೆಯನ್ನು ತೊರೆದಿದ್ದರು. 2020ರ ಫೆಬ್ರುವರಿ 5ರಂದು ಪತಿ ಮತ್ತು ಅವರ ಪೋಷಕರ ವಿರುದ್ಧ ಐಪಿಸಿ ಕಲಂ 498-ಎ, ವರದಕ್ಷಿಣೆ ತಡೆ ಕಾಯ್ದೆ ಕಲಂ 4ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಮತ್ತೊಂದೆಡೆ ವಿವಾಹ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಕ್ರೌರ್ಯದ ಆಧಾರದ ಮೇಲೆ ಮದುವೆ ಅಸಿಂಧುಗೊಳಿಸುವಂತೆ ಕೋರಿದ್ದರು.

ಕೌಟುಂಬಿಕ ನ್ಯಾಯಾಲಯವು 2022ರ ನವೆಂಬರ್ 16ರಂದು ದಂಪತಿಯ ವಿವಾಹವನ್ನು ಅನೂರ್ಜಿತಗೊಳಿಸಿ ಆದೇಶಿಸಿತ್ತು. ಇದಾದ ನಂತರ ವರದಕ್ಷಿಣೆ ಕಿರುಕುಳ ಆರೋಪದಡಿ ಪತಿಯ ವಿರುದ್ಧದ ಪ್ರಕರಣವನ್ನು ಪತ್ನಿ ಮುಂದುವರಿಸಿದ್ದರು.

ಆ ಬಳಿಕ ಪೊಲೀಸರು ಕ್ರಿಮಿನಲ್‌ ಪ್ರಕರಣದ ಸಂಬಂಧ ತನಿಖೆ ನಡೆಸಿದ್ದರು. ಪತಿ ಮತ್ತು ಅವರ ತಂದೆ, ತಾಯಿ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ದೋಷಾರೋಪ ಪಟ್ಟಿ ರದ್ದು ಕೋರಿ ಪತಿ 2021ರ ಸೆಪ್ಟೆಂಬರ್ 6ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್, ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿದ್ದ ವಿಚಾರಣೆಯ ಪ್ರಕ್ರಿಯೆಗೆ ತಡೆ ನೀಡಿತ್ತು. ಪತ್ನಿಯ ಆರೋಪಗಳನ್ನು ಅಲ್ಲಗೆಳೆದಿದ್ದ ಪತಿ, ವಿವಾಹಯಾದ ನಂತರ ನನ್ನ ತಂದೆ-ತಾಯಿ ನಮ್ಮ ಜೊತೆಗೆ ನೆಲೆಸಿರಲಿಲ್ಲವಾದರೂ ಅವರನ್ನೂ ಪ್ರಕರಣದಲ್ಲಿ ಎಳೆದು ತಂದಿದ್ದಾರೆ. ಹೀಗಾಗಿ, ಐಪಿಸಿ 498-ಎ ಅಡಿ ಮಾಡಿರುವ ಆರೋಪಗಳನ್ನು ರದ್ದುಪಡಿಸಬೇಕು ಎಂದು ಕೋರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...