Homeಮುಖಪುಟದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯ: ವಿದ್ಯಾರ್ಥಿಗಳ ಪರ ದನಿಯೆತ್ತಿದ ನಾಲ್ವರು ಅಧ್ಯಾಪಕರ ಅಮಾನತು

ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯ: ವಿದ್ಯಾರ್ಥಿಗಳ ಪರ ದನಿಯೆತ್ತಿದ ನಾಲ್ವರು ಅಧ್ಯಾಪಕರ ಅಮಾನತು

- Advertisement -
- Advertisement -

ದೆಹಲಿಯ ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯ (SAU)ದಲ್ಲಿ ವಿದ್ಯಾರ್ಥಿಗಳ ಪರ ದನಿಯೆತ್ತಿದ ಏಕೈಕ ಕಾರಣಕ್ಕಾಗಿ ಅವರ ಮೇಲೆ ದುಷ್ಕೃತ್ಯದ ಆರೋಪ ಹೊರಿಸಿ ನಾಲ್ವರು ಅಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ. ಆಡಳಿತ ಮಂಡಳಿಯ ಈ ಕ್ರಮದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಹಲವು ಅಧ್ಯಾಪಕ ಸಂಘಗಳು ಕೂಡ ಪತ್ರ ಬರೆದಿದ್ದು ಅಮಾನತುಗೊಂಡ ಅಧ್ಯಾಪಕರಿಗೆ ಬೆಂಬಲ ಘೋಷಿಸಿವೆ.

ಜೂನ್ 16, 2023 ರಂದು ದೆಹಲಿಯ ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯವು ವಿಶ್ವವಿದ್ಯಾನಿಲಯದ ನೀತಿ ಸಂಹಿತೆಯ ಉಲ್ಲಂಘನೆಯ ಆರೋಪದ ಮೇಲೆ ಸ್ನೇಹಶಿಶ್ ಭಟ್ಟಾಚಾರ್ಯ (ಅರ್ಥಶಾಸ್ತ್ರ ವಿಭಾಗ), ಶ್ರೀನಿವಾಸ್ ಬುರ್ರಾ (ಕಾನೂನು ಅಧ್ಯಯನ ವಿಭಾಗ), ಇರ್ಫಾನುಲ್ಲಾ ಫಾರೂಕಿ (ಸಾಮಾಜಿಕ ವಿಜ್ಞಾನ ವಿಭಾಗ), ಮತ್ತು ರವಿಕುಮಾರ್ (ಸಾಮಾಜಿಕ ವಿಜ್ಞಾನ ವಿಭಾಗ) ಅವರನ್ನು ಅಮಾನತುಗೊಳಿಸಿದೆ.

ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘ (SAARC)ದ ವತಿಯಿಂದ ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯವು (SAU) 2010 ರ ಶೈಕ್ಷಣಿಕ ವರ್ಷದಲ್ಲಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಇದು ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಭಾರತ, ಮಾಲ್ಡೀವ್ಸ್, ನೇಪಾಳ, ಶ್ರೀಲಂಕಾ ಮತ್ತು ಪಾಕಿಸ್ತಾನ ದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು ಈ ಹಿಂದೆ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ನಿಭಾಯಿಸುವಲ್ಲಿ ಆಡಳಿತ ಮಂಡಳಿಯ “ನಿರಂಕುಶ ಕ್ರಮಗಳ” ಬಗ್ಗೆ ಕಳವಳ ವ್ಯಕ್ತಪಡಿಸಿದ ಏಕೈಕ ಕಾರಣಕ್ಕಾಗಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದು ರಾಜಕೀಯ ಪ್ರತೀಕಾರವಾಗಿದ್ದು, ಶೈಕ್ಷಣಿಕ ಸಂಸ್ಥೆಯಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಜಾಪ್ರಭುತ್ವದ ಹಕ್ಕಿನ ಉಲ್ಲಂಘನೆಯಾಗಿದೆ. ಹಲವು ವರ್ಷಗಳಿಂದ ಸಾರ್ಕ್ ಸಭೆ ರದ್ದಾದ ಕಾರಣ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ರಚನೆಯಾಗದ ಕಾರಣ ಹಾಲಿ ಅಧ್ಯಕ್ಷ, ಉಪಾಧ್ಯಕ್ಷ, ರಿಜಿಸ್ಟ್ರಾರ್ ಸೇರಿದಂತೆ ಪ್ರಾಧ್ಯಾಪಕರ ಕೂಟ ವಿವಿಯನ್ನು ವಿಚಿತ್ರವಾಗಿ ನಡೆಸುತ್ತಿದೆ. ಪ್ರಸ್ತುತ ಅಮಾನತು ಆದೇಶವು ಆಡಳಿತ ಮಂಡಳಿಯ ಸರ್ವಾಧಿಕಾರ ಮತ್ತು ಅನಿಯಂತ್ರಿತ ಕ್ರಮಗಳ ವಿರುದ್ಧ ಧ್ವನಿ ಎತ್ತುವ ವಿದ್ಯಾರ್ಥಿಗಳನ್ನು ಮತ್ತು ಪ್ರಾಧ್ಯಾಪಕರನ್ನು ಬೆದರಿಸಿ ಮೌನಗೊಳಿಸುವ ಕುತಂತ್ರವಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2021 ರಲ್ಲಿ, ವಿಶ್ವವಿದ್ಯಾನಿಲಯದ ಹಲವಾರು ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಉತ್ತಮ ಹಾಸ್ಟೆಲ್ ವ್ಯವಸ್ಥೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಸೆಪ್ಟೆಂಬರ್ 2022 ರಲ್ಲಿ, ವಿದ್ಯಾರ್ಥಿಗಳು ಸ್ನಾತಕೋತ್ತರ ಮತ್ತು ಪಿಎಚ್‌ಡಿ ವಿದ್ಯಾರ್ಥಿವೇತನವನ್ನು ಹೆಚ್ಚಿಸಬೇಕು ಮತ್ತು ವಿಶ್ವವಿದ್ಯಾಲಯದ ಕೆಲವು ಶಾಸನಬದ್ಧ ಸಮಿತಿಗಳಲ್ಲಿ, ವಿಶೇಷವಾಗಿ ಲಿಂಗ ಸಂವೇದನೆ ಮತ್ತು ಲೈಂಗಿಕ ಕಿರುಕುಳದ ಸಮಿತಿಗಳಲ್ಲಿ ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರಾತಿನಿಧ್ಯವನ್ನು ಒದಗಿಸಬೇಕೆಂದು ಒತ್ತಾಯಿಸಿದ್ದರು. ಆಗ ಅಕ್ಟೋಬರ್ 13, 2022 ರ ಸಂಜೆ, ಹಂಗಾಮಿ ಅಧ್ಯಕ್ಷರ ಕಚೇರಿಯಲ್ಲಿ ಜಮಾಯಿಸಿದ ವಿದ್ಯಾರ್ಥಿಗಳನ್ನು ಚದುರಿಸಲು ವಿಶ್ವವಿದ್ಯಾಲಯದ ಆಡಳಿತವು ದೆಹಲಿ ಪೊಲೀಸರನ್ನು ಕರೆಸಿತ್ತು. ಈ ಕ್ರಮದ ವಿರುದ್ಧ ಹದಿಮೂರು ಅಧ್ಯಾಪಕರು ವಿಶ್ವವಿದ್ಯಾಲಯದ ಆಡಳಿತಕ್ಕೆ ಪತ್ರ ಬರೆದಿದ್ದರು. ನವೆಂಬರ್ 1, 2022 ರಂದು, ಹಲವಾರು ಅಧ್ಯಾಪಕರು ಹಂಗಾಮಿ ಅಧ್ಯಕ್ಷರು, ಹಂಗಾಮಿ ಉಪಾಧ್ಯಕ್ಷರು ಮತ್ತು ಹಂಗಾಮಿ ರಿಜಿಸ್ಟ್ರಾರ್ ಅವರನ್ನು ಭೇಟಿ ಮಾಡಿ ಈ ರೀತಿಯ ಕ್ರಮಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದರು.

ಆದರೆ ವಿಶ್ವವಿದ್ಯಾನಿಲಯವು ನವೆಂಬರ್ 4, 2022 ರಂದು 5 ವಿದ್ಯಾರ್ಥಿಗಳನ್ನು ಉಚ್ಚಾಟನೆ ಮಾಡಿತು. ಅವರು ಹಳ್ಳಿಗಾಡಿನ ಬಡ ವಿದ್ಯಾರ್ಥಿಗಳಾಗಿದ್ದರು. ನವೆಂಬರ್ 5 ರಂದು, ವಿಶ್ವವಿದ್ಯಾನಿಲಯದ 15 ಅಧ್ಯಾಪಕರು ವಿಶ್ವವಿದ್ಯಾನಿಲಯದ ಸಮುದಾಯಕ್ಕೆ ಇಮೇಲ್ ಬರೆದು ವಿಶ್ವವಿದ್ಯಾನಿಲಯದ ಆಡಳಿತದ ಈ ಅನಿಯಂತ್ರಿತ ಕ್ರಮಗಳ ಬಗ್ಗೆ ತಮ್ಮ ಆತಂಕಗಳನ್ನು ವ್ಯಕ್ತಪಡಿಸಿದ್ದರು. ಇದೀಗ ವಿಶ್ವವಿದ್ಯಾಲವು ಆ ಪ್ರಾಧ್ಯಪಕರನ್ನೇ ಅಮಾನತು ಮಾಡಿ ಆದೇಶ ಹೊರಡಿಸಿದೆ.

SAU ನ ನಾಲ್ವರು ಅಧ್ಯಾಪಕರ ಅಮಾನತು “ಆಘಾತಕಾರಿ ಕಾನೂನುಬಾಹಿರ ಕ್ರಮ” ಎಂದು ಕರೆದಿರುವ ಕೇಂದ್ರೀಯ ವಿಶ್ವವಿದ್ಯಾಲಯಗಳ ಶಿಕ್ಷಕರ ಸಂಘಗಳ ಒಕ್ಕೂಟ (FEDCUTA) ಈ ಎಲ್ಲಾ ಕಾನೂನುಬಾಹಿರ ಕ್ರಮಗಳನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳುವಂತೆ ದಕ್ಷಿಣ ಏಷ್ಯಾ ವಿಶ್ವವಿದ್ಯಾಲಯದ ಆಡಳಿತವನ್ನು ಒತ್ತಾಯಿಸಿದೆ.

ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯದ ಆಡಳಿತವು ನಾಲ್ವರು ಅಧ್ಯಾಪಕರನ್ನು ಅಮಾನತುಗೊಳಿಸಿರುವುದನ್ನು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಶಿಕ್ಷಕರ ಸಂಘ (ಜೆಎನ್‌ಯುಟಿಎ) ತೀವ್ರವಾಗಿ ಖಂಡಿಸಿದೆ. ಆಡಳಿತದ ಅನಿಯಂತ್ರಿತ ಮತ್ತು ನಿರಂಕುಶ ಕ್ರಮಗಳ ವಿರುದ್ಧ ಧ್ವನಿ ಎತ್ತುವ ಶಿಕ್ಷಕ ಸಮುದಾಯದವರಲ್ಲಿ ಭಯ ಹುಟ್ಟಿಸುವ ಮತ್ತು ಭಯವನ್ನು ಹರಡುವ ಪ್ರಯತ್ನವನ್ನು ಇದು ಸ್ವೀಕಾರಾರ್ಹವಲ್ಲ ಎಂದು ಅದು ಕಿಡಿಕಾರಿದೆ.

ಇದನ್ನೂ ಓದಿ: ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ: ಪರೀಕ್ಷಾರ್ಥಿಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...