Homeಕರ್ನಾಟಕಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ: ಅಮಿತ್ ಶಾಗೆ ಸಿದ್ದರಾಮಯ್ಯ ಮನವರಿಕೆ

ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ: ಅಮಿತ್ ಶಾಗೆ ಸಿದ್ದರಾಮಯ್ಯ ಮನವರಿಕೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬುಧವಾರ ರಾತ್ರಿ ಸಿಎಂ ಸಿದ್ದರಾಮಯ್ಯ ಅವರು ಭೇಟಿ ಮಾಡಿ, ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ ಆಗಿರುವ ಸಂಗತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ.

ಈ ಬಗ್ಗೆ ಗುರುವಾರ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ”ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಎಫ್.ಸಿ.ಐ. ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ. ಅಮಿತ್ ಶಾ ಸಂಬಂಧಪಟ್ಟ ಸಚಿವರೊಂದಿಗೆ ಈ ಬಗ್ಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ” ಎಂದು ತಿಳಿಸಿದರು.

”ರಾಜ್ಯಕ್ಕೆ ಎರಡು ಐ.ಆರ್.ಪಿ ಬಟಾಲಿಯನ್ ನ್ನು ಒದಗಿಸಿದ್ದು, ಇನ್ನೆರಡು ಬಟಾಲಿಯನ್ ಒದಗಿಸಬೇಕೆಂದು ಮನವಿ ಮಾಡಲಾಗಿದೆ” ಎಂದು ಸಿದ್ದರಾಮಯ್ಯ ತಿಳಿಸಿದರು.

ಶಾ-ಸಿದ್ದು ಭೇಟಿ ವೇಳೆ ಅಕ್ಕಿ ವಿಚಾರ ಚರ್ಚೆ

ಈ ಸೌಹಾರ್ದ ಭೇಟಿಯ ವೇಳೆ ಸಿದ್ದರಾಮಯ್ಯ ಅವರು, ”ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎಂದು ಅಮಿತ್ ಶಾ ಅವರಿಗೆ ಹೇಳಿದ್ದಾರೆ.

ಕೇಂದ್ರ ಸರ್ಕಾರದ ನೀತಿಯಿಂದ ಬಡವರಿಗೆ ಅಹಾರ ನೀಡುವ ಯೋಜನೆಗೆ ತೊಂದರೆಯಾಗುತ್ತಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಅಮಿತ್ ಶಾ ಅವರ ಗಮನಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ತಿಳಿಸಿವೆ.

”ಕೇಂದ್ರ ಸರ್ಕಾರದ ಹೊಸ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ಬಡವರ ಎರಡು ಹೊತ್ತಿನ ಊಟಕ್ಕೆ ತೊಂದರೆಯಿಂಟು ಮಾಡುತ್ತಿದೆ. ರಾಜ್ಯ ಸರ್ಕಾರಗಳಿಗೆ ಆಹಾರಧಾನ್ಯ ಪೂರೈಕೆ ಮಾಡದಿರುವ ನೀತಿಯನ್ನು ಬದಲಾಯಿಸುವುದು ಒಳಿತು” ಎಂದು ಸಿದ್ದರಾಮಯ್ಯ ಹೇಳಿದ್ದಾಗಿ ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.

ಈ ಬಗ್ಗೆ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರ ಜತೆ ಗುರುವಾರ ಮಾತುಕತೆ ನಡೆಸುವುದಾಗಿ ಅಮಿತ್ ಶಾ ಅವರು ಆಶ್ವಾಸನೆ ನೀಡಿದ್ದಾರೆ.

ಚುನಾವಣೆ ವೇಳೆ ರಾಜ್ಯ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳಲ್ಲಿ, ಬಿಪಿಎಲ್ ಕುಟುಂಬದ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಯೂ ಒಂದಾಗಿದ್ದು, ಇದನ್ನೂ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಅಕ್ಕಿಯ ಅಭಾವ ಕಾಡುತ್ತಿದೆ.

ಅಕ್ಕಿ ಪೂರೈಸಿ ಎಂದು ಭಾರತೀಯ ಆಹಾರ ನಿಗಮಕ್ಕೆ ರಾಜ್ಯ ಸರ್ಕಾರ ಮಾಡಿದ್ದ ಮನವಿ ತಿರಸ್ಕೃತವಾಗಿದೆ. ಹೀಗಾಗಿ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಗೆ ಕರ್ನಾಟಕ ಸರ್ಕಾರ ಮುಂದಾಗಿದೆ.

ಇದನ್ನೂ ಓದಿ:

ಶಾ ಭೇಟಿಗೂ ಮುನ್ನ ಸಿದ್ದು ಹೇಳಿದ್ದೇನು?

”ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಅಕ್ಕಿಯನ್ನು ನೀಡಿರುವ ಭರವಸೆಯನ್ನು ಈಡೇರಿಸುವ ಹಿನ್ನಲೆಯಲ್ಲಿ ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಕೋರಿ ಎಫ್‌ಸಿಐಗೆ ಜೂನ್ 9 ರಂದು ಪತ್ರ ಬರೆಯಲಾಗಿತ್ತು. ಎಫ್‌ಸಿಐ ಅವರು ತಮ್ಮಲ್ಲಿ 7 ಲಕ್ಷ ಮೆಟ್ರಿಕ್ ಟನ್ ಅಕ್ಕಿ ದಾಸ್ತಾನು ಇದ್ದು, ರಾಜ್ಯ ಕೋರಿರುವ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಯಾವುದೇ ತೊಂದರೆಯಿಲ್ಲ ಎಂದು ಜೂನ್ 12 ರಂದು ಪತ್ರ ಮುಖೇನ ತಿಳಿಸಿದ್ದರು” ಎಂದರು.

”ಆದರೆ, ಜೂನ್ 13 ರಂದು ಕೇಂದ್ರ ಆಹಾರ ಇಲಾಖೆಯವರು ಎಫ್ ಸಿ ಐ ಗೆ ಪತ್ರ ಬರೆದು ರಾಜ್ಯಗಳಿಗೆ ಕೇಂದ್ರದಿಂದ ಅಕ್ಕಿ ಸರಬರಾಜನ್ನು ನಿಲ್ಲಿಸಲಾಗಿದ್ದು, ನಂತರ ಜೂನ್ 14 ರಂದು ಎಫ್‌ಸಿಐ ನ ಅಧ್ಯಕ್ಷರು ಪತ್ರ ಬರೆದು, ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ಸಾಧ್ಯವಿಲ್ಲ. ಮೊದಲು ಅಕ್ಕಿ ನೀಡುವುದಾಗಿ ಒಪ್ಪಿಕೊಂಡು ನಂತರ ನಿರಾಕರಿಸಿದ್ದು, ಭಾರತ ಸರ್ಕಾರ ಕೀಳುಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದೆ” ಎಂದು ಬೇಸರವ್ಯಕ್ತಪಡಿಸಿದ್ದರು.

”ಅನ್ನಭಾಗ್ಯ ಯೋಜನೆಗೆ ಅಕ್ಕಿಯನ್ನು ಪಡೆಯಲು ಬಗ್ಗೆ ಅನೇಕ ರಾಜ್ಯಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. ಆದರೆ ಅವರು ಸಂಪೂರ್ಣ 2.28 ಲಕ್ಷ ಮೆ.ಟನ್ ನೀಡಲು ಸಾಧ್ಯವಿಲ್ಲ. ಆಂಧ್ರಪ್ರದೇಶದವರು 42 ರೂ.ಗಳಿಗೆ ಅಕ್ಕಿ ನೀಡುವುದಾಗಿ ತಿಳಿಸಿದ್ದು, ಸಾರಿಗೆ ವೆಚ್ಚ ಅಧಿಕವಾಗಲಿದೆ. ತೆಲಂಗಾಣದವರು ಭತ್ತ ಮಾತ್ರ ಲಭ್ಯವಿರುವುದಾಗಿ ತಿಳಿಸಿದ್ದಾರೆ. ಛತ್ತೀಸ್ಗಡದ ಮುಖ್ಯಮಂತ್ರಿಗಳು ಒಂದು ತಿಂಗಳಿಗೆ ಮಾತ್ರ 1 ಲಕ್ಷ ಮೆಟ್ರಿಕ್ ಟನ್ ನೀಡುವುದಾಗಿ ತಿಳಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ತಿಳಿಸುವುದಾಗಿ ಭರವಸೆ ನೀಡಿದ್ದಾರೆ” ಎಂದು ತಿಳಿಸಿದ್ದರು.

”ಎಫ್‌ಸಿಐ ಕೇಂದ್ರ ಸರ್ಕಾರದ ಸ್ವಾಮ್ಯ ಸಂಸ್ಥೆಯಾಗಿದ್ದು, ಅಕ್ಕಿ ನೀಡುವುದಾಗಿ ಒಪ್ಪಿ ಪತ್ರ ಬರೆದಿದ್ದಾರೆ ಎಂದರು. ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...