Homeಮುಖಪುಟನೂತನ ಶಾಸಕರಿಗೆ ಪ್ರೇರಣಾ ಉಪನ್ಯಾಸ ನೀಡಲು ಗುರುರಾಜ ಕರ್ಜಗಿ, ರವಿಶಂಕರ್ ಗುರೂಜಿಗೆ ಆಹ್ವಾನ: ತೀವ್ರ ವಿರೋಧ

ನೂತನ ಶಾಸಕರಿಗೆ ಪ್ರೇರಣಾ ಉಪನ್ಯಾಸ ನೀಡಲು ಗುರುರಾಜ ಕರ್ಜಗಿ, ರವಿಶಂಕರ್ ಗುರೂಜಿಗೆ ಆಹ್ವಾನ: ತೀವ್ರ ವಿರೋಧ

- Advertisement -
- Advertisement -

ನೂತನ ಶಾಸಕರಿಗೆ ಏರ್ಪಡಿಸಿರುವ ಕಾರ್ಯಾಗಾರದಲ್ಲಿ ಪ್ರೇರಣಾ ಉಪನ್ಯಾಸ ನೀಡಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಡೆ, ಆರ್ಟ್‌ ಆಫ್‌ ಲಿವಿಂಗ್‌ನ ರವಿಶಂಕರ್ ಗುರೂಜಿ, ಜಮಾತೆ ಇಸ್ಲಾಮಿ ಹಿಂದ್ ನ ಮುಹಮ್ಮದ್ ಕುಂಞ, ಬ್ರಹ್ಮಕುಮಾರಿಯ ಆಶಾ ದೀದಿ ಮತ್ತು ಬಲಪಂಥೀಯ ಬರಹಗಾರ ಗುರುರಾಜ ಕರ್ಜಗಿಯವರನ್ನು ಆಹ್ವಾನಿಸಿರುವ ಸ್ಪೀಕರ್ ಯು.ಟಿ ಖಾದರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಹೊಸದಾಗಿ ಆಯ್ಕೆಯಾದ ಸುಮಾರು 58 ಶಾಸಕರಿಗೆ ಜೂನ್ 26 ರಿಂದ 28ರ ವರೆಗೆ ನೆಲಮಂಗಲದಲ್ಲಿರುವ ವೀರೇಂದ್ರ ಹೆಗ್ಗಡೆಯವರ ‘ಕ್ಷೇಮವನ’ದಲ್ಲಿ ಮೂರುದಿನಗಳ ಶಿಬಿರ ಏರ್ಪಡಿಸಲಾಗಿದೆ. ಆದರೆ ಅಲ್ಲಿ ಮಾತನಾಡಲು ಆಹ್ವಾನಿಸಿರುವ ವ್ಯಕ್ತಿಗಳು ಒಂದಲ್ಲ ಹಲವು ರೀತಿಯಲ್ಲಿ ವಿವಾದಾತ್ಮಕವೆನಿಸಿದ್ದಾರೆ. ವಿವಾದಾತ್ಮಕ ಗುರು ರವಿಶಂಕರ್ ಗುರೂಜಿ ಮೇಲೆ ಅಕ್ರಮ ಭೂಪರಭಾರೆ ಪ್ರಕರಣವಿದೆ. ಅಲ್ಲದೇ ಅವರು ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ನಕ್ಸಲರಾಗುತ್ತಾರೆ ಎಂಬ ದ್ವೇ‍ಷದ ಹೇಳಿಕೆ ನೀಡಿದ್ದರು. ಇನ್ನು ಡಾ. ವಿರೇಂದ್ರ ಹೆಗಡೆಯವರು ಬಿಜೆಪಿ ನಾಮನಿರ್ದೇಶಿತ ರಾಜ್ಯಸಭಾ ಸಂಸದರಾಗಿದ್ದಾರೆ. ಡಾ. ಗುರುರಾಜ್ ಕರ್ಜಗಿ ಬಲಪಂಥೀಯ ಭಾಷಣಕಾರರಾಗಿದ್ದು, ಇತಿಹಾಸ ತಿರುಚುತ್ತಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಬ್ರಹ್ಮಕುಮಾರಿಯ ಆಶಾ ದೀದಿ ಹಾಗೂ ಮೊಹಮ್ಮದ್ ಕುಂಞ ಸಹ ನೂತನ ಶಾಸಕರಿಗೆ ಪ್ರೇರಣೆ ಹೇಗೆ ನೀಡಬಲ್ಲರು ಎಂಬ ಪ್ರಶ್ನೆಗಳೆದ್ದಿವೆ.

ಹೊಸದಾಗಿ ಚುನಾಯಿತರಾಗಿ ಬಂದ ಶಾಸಕರಿಗೆ ಪಾಠ ಮಾಡಲು ನ್ಯಾಯಮೂರ್ತಿ ನಾಗಮೋಹನ ದಾಸ, ಗೋಪಾಲಗೌಡ, ರವಿವರ್ಮಕುಮಾರ, ಸಿ.ಎಸ್ ದ್ವಾರಕಾನಾಥ, ರಮೇಶ ಕುಮಾರ್ ಮುಂತಾದ ನುರಿತ ಸಂವಿಧಾನ ತಜ್ಞರು, ಕಾನೂನು ಪರಿಣಿತರು, ಹಿರಿಯ ಹಾಲಿ ಮತ್ತು ಮಾಜಿ, ಸ್ಪೀಕರ್ ಗಳು, ಶಾಸಕರು, ಅನುಭವಿ ಪತ್ರಕರ್ತರನ್ನು ಆಹ್ವಾನಿಸಿ ಉಪನ್ಯಾಸ ನೀಡಿಸಬೇಕು. ಆದರೆ ಸ್ಪೀಕರ್ ಖಾದರ್ ಸಾಹೇಬರು ಅದನ್ನು ಬಿಟ್ಟು ಆಧ್ಯಾತ್ಮವನ್ನು ದುಡ್ಡು ಮಾಡಿಕೊಳ್ಳುವ ದಂಧೆಯನ್ನಾಗಿ ಮಾಡಿಕೊಂಡವರಿಂದ, ಕೋಮುವಾದಿ ಸಂಘಟನೆಗಳ ಜೊತೆ ಗುರುತಿಸಿಕೊಂಡವರಿಂದ ನೂತನ ಶಾಸಕರಿಗೆ ಪ್ರವಚನ ಮಾಡಿಸಲು ಹೊರಟಿದ್ದಾರೆ‌. ಇದರ ಅಗತ್ಯವಿಲ್ಲ‌‌. ಸ್ಪೀಕರ್ ಖಾದರ್ ಸಾಹೇಬರು ಮೈ ಮರೆಯದಿರಲಿ. ಎಲ್ಲರಿಗೂ ಒಳ್ಳೆಯವರಾಗಲು ಹೋಗಿ ನಿಮ್ಮ ಕಾಲ ಮೇಲೆ ನೀವೇ ಕಲ್ಲು ಹಾಕಿಕೊಳ್ಳಬೇಡಿ.. ಯಾರದೋ ಮಾತನ್ನು ಕೇಳಿ ಜನ ಆಡಿಕೊಳ್ಳುವಂತೆ ಮಾಡಬೇಡಿ. ಶಾಸಕರಿಗೆ ಧಾರ್ಮಿಕ ಗುರುಗಳ ಪಾಠ ಸಂವಿಧಾನಕ್ಕೆ ಅಪಚಾರ ಎಂದು ಹಿರಿಯ ಪತ್ರಕರ್ತರಾದ ಸನತ್ ಕುಮಾರ ಬೆಳಗಲಿ ಅಭಿಪ್ರಾಯಪಟ್ಟಿದ್ದಾರೆ.

ಬಿ.ಎಲ್ ಶಂಕರ್ ರವರು ತಮ್ಮ 45 ನೇ ವಯಸ್ಸಿಗೆಲ್ಲ ಜನತಾ ಪಕ್ಶದಲ್ಲಿ ಹಲವಾರು ಅವಕಾಶಗಳನ್ನು ಪಡೆದಿದ್ದರು. ಆಮೇಲೆ ಕಾಂಗ್ರೆಸ್ ಸೇರಿ ಪಕ್ಶದ ವಕ್ತಾರರು ಪೋಸ್ಟ್ ನಿಂದ ಮೇಲಕ್ಕೆ ಏರಲಿಲ್ಲ. ಶಾಸಕರಿಗೆ ಟ್ರೈನಿಂಗ್ ಕೊಡಲು ಶಂಕರ್ ರವರಿಗಿಂತ ಸೂಪರ್ ಸಂಪನ್ಮೂಲ ವ್ಯಕ್ತಿ ಬೇಕಿಲ್ಲ. ಆದರೂ ಶಂಕರ್ ರವರಿಗೆ ಒಂದು ಬಾಶಣಕ್ಕೂ ಅವಕಾಶ ಇಲ್ಲ ಎಂದು ನಾಗೇಗೌಡ ಕೀಲಾರ ಶಿವಲಿಂಗಯ್ಯನವರು ಕಿಡಿಕಾರಿದ್ದಾರೆ.

ಯು.ಟಿ.ಖಾದರ್ ಸಾಹೇಬರೇ.. ಈವರೆಗೆ ಈ ರಾಜ್ಯದಲ್ಲಿ ಅದೆಷ್ಟೋ ಸ್ಪೀಕರ್‌ಗಳು ಆಗಿ ಹೋಗಿದ್ದಾರೆ. ಅವರ್ಯಾರೂ ಮಾಡಿಸಿರದಂತಹ ಈ ಮೋಟಿವೇಶನಲ್ ಟಾಕ್‌ಗಳ ಅಗತ್ಯ ಈ ರಾಜ್ಯದ ಜನಪ್ರತಿನಿಧಿಗಳಿಗೆ ಯಾಕೆ ಬೇಕಿತ್ತು? ಇದನ್ನು ಮಾಡಿಸುವ ಮೂಲಕ ಖಂಡಿತಾ ನೀವು ಒಳ್ಳೆಯ ಹೆಸರನ್ನು ಗಳಿಸಲಾರಿರಿ ಎಂದು ಇಸ್ಮತ್ ಪಜೀರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐಡಿಯಲಾಜಿಕಲ್ ಪಾಲಿಟಿಕ್ಸ್ ನಿಮಗೆ ಗೊತ್ತಿಲ್ಲದಿರಬಹುದು. ಆದರೆ ನಿಮ್ಮನ್ನು ರಾಜಕೀಯವಾಗಿ ಈ ಹಂತದವರೆಗೆ ತಂದ ಪಕ್ಷವನ್ನು ಅದರ ಜಾತ್ಯಾತೀತ ಸಿದ್ಧಾಂತವನ್ನು ಒಪ್ಪುವವರು ಯಾರು ಎಂಬ ಕನಿಷ್ಠ ಪ್ರಜ್ಞೆ ನಿಮಗಿಲ್ಲದಾಯಿತೇ..? ಈ ಜಾತ್ಯಾತೀತತೆ ಎಂದರೆ ಯಾರದೇ ಔದಾರ್ಯವಲ್ಲ.ಅದು ಈ ನೆಲದ ಮೂಲಗುಣ, ಈ ದೇಶದ ಸಂವಿಧಾನದ ಅಂತಃ ಸತ್ವ ಅಡಗಿರುವುದೇ ಅದರ ಪರಮ ಜಾತ್ಯಾತೀತ ಗುಣದಲ್ಲಿ.
ಅದನ್ನು ಬಿಲ್ಕುಲ್ ಒಪ್ಪದ ರವಿಶಂಕರ್ , ಸ್ಪಷ್ಟವಾಗಿ ಬಿಜೆಪಿಯೊಂದಿಗೆ ಗುರುತಿಸಿರುವ ವೀರೇಂದ್ರ ಹೆಗ್ಗಡೆ, ಮೊನ್ನೆ ಮೊನ್ನೆ ನಿಮ್ಮದೇ ಸರಕಾರ ಪಠ್ಯಪುಸ್ತಕಗಳ ವಿಚಾರದಲ್ಲಿ ತೆಗೆದುಕೊಂಡ ನಿಲುವನ್ನು ಯಾವ ಮುಚ್ಚುಮರೆಯೂ ಇಲ್ಲದೇ ವಿರೋಧಿಸಿ ಹಿಂದಿನ ಜನವಿರೋಧೀ ಬಿಜೆಪಿ ಸರಕಾರ ವಿಷಯುಕ್ತಗೊಳಿಸಿದ ಪಠ್ಯ ಪುಸ್ತಕಗಳ ಪರ ವಕಾಲತ್ತು ವಹಿಸಿದ ಗುರುರಾಜ ಕರ್ಜಗಿ ಮುಂತಾದವರಿಂದ ಎಂತಹ ಮೋಟಿವೇಶನಲ್ ಕ್ಲಾಸ್‌ಗಳು ಸಿಗಬಹುದು..? ಮೊನ್ನೆ ಮೊನ್ನೆಯವರೆಗೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲೆಂದು ಶ್ರಮಿಸಿದ ದೇವನೂರು ಮಹಾದೇವ, ಪುರುಷೋತ್ತಮ ಬಿಳಿಮಲೆ ಮುಂತಾದ ಹಿರಿಯರನ್ನು ತಾವು ಇಷ್ಟು ಬೇಗ ಮರೆತಿರಾ..?

ನಾವು ಈಗಲೂ ಹೇಳುತ್ತೇವೆ. ನೀವು ನಮ್ಮ ಸೆಕ್ಯುಲರ್ ಸಾಹಿತಿಗಳನ್ನೂ ಕರೆಯಬೇಡಿ.
ನಮ್ಮ ದೇಶದಲ್ಲಿ ನಮ್ಮ ಪವಿತ್ರ ಸಂವಿಧಾನಕ್ಕಿಂತ ಮಿಗಿಲಾದ ಮೋಟಿವೇಟರ್ ಬೇರೊಂದಿಲ್ಲ. ಅದನ್ನೇ ಒಪ್ಪದವರಿಂದ ನೀವೆಂತಹ ಮೋಟಿವೇಶನ್ ಮಾಡಿಸಬಲ್ಲಿರಿ..? ನಮ್ಮ ಜನಪ್ರತಿನಿಧಿಗಳಿಗೆ ಎಲ್ಲಕ್ಕಿಂತ ತುರ್ತಾಗಿ ಬೇಕಿರುವುದು ಸಂವಿಧಾನದ ಅರಿವು. ಅದನ್ನು ಮನವರಿಕೆ ಮಾಡಿಸಿ ಕೊಡುವ ಒಂದು ತರಗತಿಯನ್ನು ವ್ಯವಸ್ಥೆ ಮಾಡಿಸಿ ಪುಣ್ಯ ಕಟ್ಕೊಳ್ಳಿ.. ಸೆಕ್ಯುಲರಿಸಮ್ಮನ್ನು ಮತ್ತು ಸಂವಿಧಾನವನ್ನು ಒಪ್ಪದವರಿಂದ ಮಾಡಿಸ ಹೊರಟ ಮೋಟಿವೇಶನಲ್ ಸೆಶನ್ ಕೂಡಲೇ ನಿಲ್ಲಿಸಿ ಎಂದು ಇಸ್ಮತ್ ಪಜೀರ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ: ಅಮಿತ್ ಶಾಗೆ ಸಿದ್ದರಾಮಯ್ಯ ಮನವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....