Homeಮುಖಪುಟಬಲ್ಲಿಯಾದಲ್ಲಿ 76 ರೋಗಿಗಳ ಸಾವಿಗೆ ವಿದ್ಯುತ್ ಕಡಿತವು ಒಂದು ಕಾರಣ: ಯುಪಿ ಅಧಿಕಾರಿ ಮಾಹಿತಿ

ಬಲ್ಲಿಯಾದಲ್ಲಿ 76 ರೋಗಿಗಳ ಸಾವಿಗೆ ವಿದ್ಯುತ್ ಕಡಿತವು ಒಂದು ಕಾರಣ: ಯುಪಿ ಅಧಿಕಾರಿ ಮಾಹಿತಿ

- Advertisement -
- Advertisement -

ಕಳೆದ ವಾರ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ 76 ಜನರು ಸಾವನ್ನಪ್ಪಿದ್ದರು. ಅವರ ಸಾವಿಗೆ ವಿದ್ಯುತ್ ಕಡಿತವು ಕಾರಣವಾಗಿದೆ ಎಂದು ಉತ್ತರ ಪ್ರದೇಶದ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ಬುಧವಾರ ಪಿಟಿಐ ವರದಿ ಮಾಡಿದ್ದಾರೆ.

ರಾಜ್ಯ ಸರ್ಕಾರವು ಸಾವಿನ ಕಾರಣ ಕಂಡುಹಿಡಿಯಲು ಜಿಲ್ಲೆಗೆ ಸಮಿತಿ ಕಳುಹಿಸಿತ್ತು. ಆ ಸಮಿತಿಯ ಸದಸ್ಯರೊಬ್ಬರಾದ ಎಕೆ ಸಿಂಗ್ ಅವರು, ”ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಟ್ರಾನ್ಸ್ಫಾರಮರ್‌ಗಳು ಸುಟ್ಟುಹೋಗಿವೆ. ವಿದ್ಯುತ್ ಲಭ್ಯತೆ ಮತ್ತು ಇತರ ಕಾರಣಗಳಿಂದಾಗಿ ಜನರ  ಆರೋಗ್ಯ ಸ್ಥಿತಿ ಹದಗೆಟ್ಟಿದೆ” ಎಂದು ಹೇಳಿದರು.

”ರೋಗಿಯು ಜಿಲ್ಲಾ ಆಸ್ಪತ್ರೆಗೆ ತಲುಪಲು ಐದರಿಂದ ಆರು ಗಂಟೆಗಳ ಕಾಲ ತೆಗೆದುಕೊಂಡಿತು. ದಾಖಲಾದ ಒಂದು ಗಂಟೆಯೊಳಗೆ ಅವರು ಸಾವನ್ನಪ್ಪಿದ್ದಾರೆ” ಎಂದು ಸಿಂಗ್ ಹೇಳಿದ್ದಾರೆ.

ಉತ್ತರ ಪ್ರದೇಶದ ಹಲವಾರು ಭಾಗಗಳು ಬಿಸಿಗಾಳಿಯಿಂದಾಗಿ ಜೂನ್ 15ರಿಂದ ಬಲ್ಲಿಯಾದ ಜಿಲ್ಲಾ ಆಸ್ಪತ್ರೆಯಲ್ಲಿ 76 ಜನರು ಸಾವನ್ನಪ್ಪಿದ್ದಾರೆ ಎಂದು ಪಿಟಿಐ ವರದಿ ಮಾಡಿತ್ತು. ರಾಜ್ಯಾದ್ಯಂತ ವ್ಯಾಪಕ ವಿದ್ಯುತ್ ಕಡಿತದಿಂದ ರೋಗಿಗಳ ಆರೋಗ್ಯ ಪರಿಸ್ಥಿತಿ ಹದಗೆಟ್ಟಿದೆ ಎಂದು ಕೂಡ ವರದಿಯಾಗಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮಿತಿ ಮೀರಿದ ಬಿಸಿಲಿನ ತಾಪ: ಸಾವಿನ ಸಂಖ್ಯೆ 68ಕ್ಕೆ ಏರಿಕೆ

ಬಯಲು ಪ್ರದೇಶಗಳಿಗೆ, ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚಾದಾಗ ಮತ್ತು ಸಾಮಾನ್ಯಕ್ಕಿಂತ ಕನಿಷ್ಠ 4.5 ಡಿಗ್ರಿಗಳಷ್ಟು ಹೆಚ್ಚಾದಾಗ ಬಿಸಿಗಾಳಿ ಬೀಸುತ್ತದೆ. ಆದಾಗ್ಯೂ, ಬಲ್ಲಿಯಾದಲ್ಲಿ ಸಂಭವಿಸಿದ ಸಾವುಗಳಿಗೆ ತೀವ್ರವಾದ ಶಾಖವೇ ಕಾರಣ ಎಂದು ತೋರಿಸಲು ಯಾವುದೇ ದೃಢವಾದ ಪುರಾವೆಗಳಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ನಗರದ ಮುಖ್ಯ ವೈದ್ಯಾಧಿಕಾರಿ ಜಯಂತ್ ಕುಮಾರ್ ಅವರು, ಬಿಸಿಗಾಳಿಯಿಂದ ಕೇವಲ ಎರಡು ಸಾವುಗಳು ಸಂಭವಿಸಿವೆ ಎಂದು ಹೇಳಿದ್ದಾರೆ.

ಈ ಸಾವುಗಳಿಗೆ ಬಿಸಿಗಾಳಿಯೇ ಕಾರಣವೆಂದು ಕಾರಣ ನೀಡಿದ್ದ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕರಾದ ದಿವಾಕರ್ ಸಿಂಗ್ ಅವರನ್ನು ಹುದ್ದೆಯಿಂದ ವಜಾಗೊಳಿಸಿದೆ. ಸಿಂಗ್ ಅವರು ಸರಿಯಾದ ಮಾಹಿತಿಯಿಲ್ಲದೆ ಅಸಡ್ಡೆ ಹೇಳಿಕೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...