Homeಕರ್ನಾಟಕನಮ್ಮ ಸಚಿವರಿವರು; ಮಂಡ್ಯಕ್ಕೊಬ್ಬ ಸಮರ್ಥನಾಯಕ ಎನ್. ಚಲುವರಾಯಸ್ವಾಮಿ

ನಮ್ಮ ಸಚಿವರಿವರು; ಮಂಡ್ಯಕ್ಕೊಬ್ಬ ಸಮರ್ಥನಾಯಕ ಎನ್. ಚಲುವರಾಯಸ್ವಾಮಿ

- Advertisement -
- Advertisement -

ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಕೃಷಿ ಮಂತ್ರಿ ಎನ್. ಚಲುವರಾಯಸ್ವಾಮಿ ಸರಕಾರ ರಚನೆಯಾದ ಒಂದೇ ವಾರಕ್ಕೆ ಸಕ್ಕರೆ ಕಾರ್ಖಾನೆಗೆ ಐವತ್ತು ಕೋಟಿ ಹಣ ಬಿಡುಗಡೆ ಮಾಡಿಸಿ ತಾವೊಬ್ಬ ಸಮರ್ಥ ಮಂತ್ರಿ ಎಂಬ ಭರವಸೆಯನ್ನು ಮೂಡಿಸುವತ್ತ ಮುಂದಡಿಯಿಟ್ಟಿದ್ದಾರೆ!

ಮಂಡ್ಯ ಜಿಲ್ಲಾಪಂಚಾಯ್ತಿಗೆ ಆಯ್ಕೆಯಾಗುವುದರ ಮುಖಾಂತರ ರಾಜಕೀಯ ಪ್ರವೇಶ ಪಡೆದ ಚಲುವರಾಯಸ್ವಾಮಿ ಅಂದು ಜಿಲ್ಲಾ ಮಂತ್ರಿಯಾಗಿದ್ದ ಎಸ್.ಡಿ ಜಯರಾಮರ ಬೆಂಬಲದಿಂದ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷರಾಗಿ ನಾಗಮಂಗಲ ಕ್ಷೇತ್ರದ ಕೆಲಸಗಳನ್ನು ಮಾಡುತ್ತ ಜನಪ್ರಿಯತೆ ಗಳಿಸತೊಡಗಿದರು. ಸಹಜವಾಗಿ ಅಂದಿನ ಶಾಸಕರು ಮತ್ತು ಬಿಡಿಎ ಛೇರ್ಮನ್ ಆಗಿದ್ದ ಶಿವರಾಮೇಗೌಡರು ತನ್ನ ಪ್ರತಿಸ್ಪರ್ಧಿಯ ವಿಷಯವಾಗಿ ಹೆಚ್ಚು ಪ್ರಚಾರ ಕೊಡತೊಡಗಿದರು; ಅದಾಗಲೇ ವಕೀಲ ಮತ್ತು ಪತ್ರಕರ್ತ ಗಂಗಾಧರಮೂರ್ತಿ ಕೊಲೆ ಆಪಾದನೆಯಿಂದ ಬಿಡುಗಡೆಯಾಗಿದ್ದ ಶಿವರಾಮೇಗೌಡರು ಹೊಸ ಹುಮ್ಮಸ್ಸಿನಿಂದ ನಾನು ಅಂತಹವನಲ್ಲ ಎಂದು ಸಾಬೀತುಮಾಡುವ ಭರದಲ್ಲಿ ಚಲುವರಾಯಸ್ವಾಮಿಗೇ ಹೆಚ್ಚು ಪ್ರಚಾರಕೊಟ್ಟರು. ಜನಕ್ಕೆ ಚಲುವರಾಯಸ್ವಾಮಿ ಹೇಗಿರಬಹುದೆಂಬ ಕುತೂಹಲ ಜಾಸ್ತಿಯಾಗಿ ತಮ್ಮ ಊರಿನ ಹಬ್ಬ, ಕ್ರೀಡೆ ಮತ್ತಿತರ ಸಾಂಸ್ಕೃತಿಕ ಚಟುವಟಿಕೆಗಳಿಗೆ ಕರೆಯತೊಡಗಿದರು; ಆಗ ಜನರಿಗೆ ತಮ್ಮ ನಾಯಕನಾಗಲು ಈತನೇ ಸರಿ ಅನ್ನಿಸತೊಡಗಿತು. ಮುಂದೆ 1999ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಚಲುವರಾಯಸ್ವಾಮಿ ಜೆಡಿಎಸ್‌ನಿಂದ ಸ್ಪರ್ಧಿಸಿ ಶೀವರಾಮೇಗೌಡರ ಎದುರು 16 ಸಾವಿರ ಮತಗಳ ಮುನ್ನಡೆಯಿಂದ ಗೆದ್ದರು. ಆಗ ಕುಮಾರಸ್ವಾಮಿ ದೇವೇಗೌಡರಾದಿಯಾಗಿ ಸೋತು ಹೋಗಿದ್ದರಿಂದ ಚಲುವರಾಯಸ್ವಾಮಿ ಮಂಡ್ಯ ಜಿಲ್ಲೆ ಗುರುತಿಸುವ ನಾಯಕರಾಗಿ ಬೆಳೆಯತೊಡಗಿದ್ದರು.

ವಿರೋಧ ಪಕ್ಷದಲ್ಲಿದ್ದುಕೊಂಡೇ ಎಸ್‌ಎಂ ಕೃಷ್ಣರ ಸರಕಾರದಿಂದ ತಾಲೂಕಿಗೆ ಬೇಕಾದ ಕೆಲಸ ಮಾಡುತ್ತ ಐದು ವರ್ಷ ತುಂಬಿಸಿದಾಗ ಮತ್ತೆ ಚುನಾವಣೆ ಬಂತು. 2004ರಲ್ಲಿ ಮತ್ತೆ ಗೆದ್ದ ಚಲುವರಾಯಸ್ವಾಮಿ ಧರ್ಮಸಿಂಗ್ ನೇತೃತ್ವದ ಸಮ್ಮಿಶ್ರ ಸರಕಾರದಲ್ಲಿ ಆರೋಗ್ಯ ಸಚಿವರಾದರು. ಆಗ ಮಂಡ್ಯ ಜಿಲ್ಲೆಗೆ ಮೆಡಿಕಲ್ ಕಾಲೇಜು ತಂದುದಲ್ಲದೆ ನಾಗಮಂಗಲದ ಆಸ್ಪತ್ರೆಯನ್ನು ಸುಸಜ್ಜಿತಗೊಳಿಸಿ ಸುಮಾರು ಐದು ಊರುಗಳಿಗೆ ಪ್ರಾಥಮಿಕ ಆರೋಗ್ಯದ ಘಟಕಗಳನ್ನು ತಂದರು. ಇದರ ಜೊತೆಗೆ ರಾಜ್ಯದ ಇನ್ನಿತರ ಕಡೆಯ ಜವಾಬ್ದಾರಿಯನ್ನು ನೋಡಬೇಕಿದ್ದುದರಿಂದ ಆರೋಗ್ಯ ಇಲಾಖೆಯನ್ನು ಸುಸ್ಥಿತಿಗೆ ತರುವ ಸಮಯದಲ್ಲಿ ಸಮ್ಮಿಶ್ರ ಸರಕಾರವೇ ಹೈಜಾಕಾದಂತಾಗಿ ಧರ್ಮಸಿಂಗ್ ಮನೆಗೆ ಹೋದರು. ಬಹುಶಃ ಕರ್ನಾಟಕದ ರಾಜಕಾರಣ ತನ್ನ ಪಥವನ್ನು ಬದಲಿಸಿಕೊಂಡು ಪತನದ ಹಾದಿ ಹಿಡಿಯಲು ಇದೇ ಕಾರಣ. ಕುಮಾರಸ್ವಾಮಿಯವರು ಬಿಜೆಪಿಗಳೊಟ್ಟಿಗೆ ಸರಕಾರ ಮಾಡಿದರು.

ದೇವೇಗೌಡ

ಆಗ ಕುಮಾರಸ್ವಾಮಿ ಸುತ್ತ ಸಮರ್ಥರ ದಂಡೇ ನೆರೆದಿತ್ತು; ಜಮೀರ್ ಅಹಮದ್, ಬಾಲಕೃಷ್ಣ, ಚಲುವರಾಯಸ್ವಾಮಿ ಹೀಗೆ; ಇವರೆಲ್ಲಾ ತಮ್ಮ ಮಗನನ್ನು ಮೀರಿಸುವ ನಾಯಕರಾಗಿ ಹೊರಹೊಮ್ಮುತ್ತಿದ್ದಂತೆ ಕಂಡಿದ್ದರಿಂದ ಆತಂಕಗೊಂಡ ದೇವೇಗೌಡರು ಮಗನೊಂದಿಗೆ ರಾಜಿಯಾಗಿ ಅಧಿಕಾರದ ಸೂತ್ರ ಕೈಗೆ ತೆಗೆದುಕೊಳ್ಳತೊಡಗಿದರು. ಚಲುವರಾಯಸ್ವಾಮಿ ಆಗ ಸಾರಿಗೆ ಸಚಿವರಾಗಿದ್ದರು. ಆಗಾಗಲೇ ನಾಗಮಂಗಲಕ್ಕೆ ಕೆಎಸ್‌ಆರ್‌ಟಿಸಿ ಡಿಪೋ ತಂದು ಆರ್‌ಟಿಓ ಆಫೀಸ್ ತೆರೆದಿದ್ದರು ಮತ್ತು ಬಸ್ಸನ್ನೇ ನೋಡದಂತಹ ಹಳ್ಳಿಗಳಿಗೂ ಬಸ್ಸು ಹೋಗಿ ಬರುವಂತೆ ಮಾಡಿದ್ದರು. ಕೆ.ಇ.ಬಿಯ ಇ.ಇ ಆಫೀಸು (ಎಕ್ಸೆಕ್ಯುಟಿವ್ ಇಂಜಿನಿಯರ್ ಆಫೀಸು) ಪಾಂಡವಪುರದಲ್ಲಿತ್ತು. ಅದನ್ನು ನಾಗಮಂಗಲಕ್ಕೂ ತಂದರು.

ಆಗ ಅಸಿಸ್ಟೆಂಟ್ ಕಮೀಷನರ್ ಕಚೇರಿ ಪಾಂಡವಪುರದಲ್ಲಿದ್ದು ನಾಗಮಂಗಲ ಪ್ರಾಂತ್ಯದ ಜನ ತಮ್ಮ ವ್ಯಾಜ್ಯಗಳ ಇತ್ಯರ್ಥಕ್ಕೆ ಪಾಂಡವಪುರಕ್ಕೆ ಅಲೆಯಬೇಕಾಗಿತ್ತು. ಚಲುವರಾಯಸ್ವಾಮಿಯವರು ಎ.ಸಿ. ಕಚೇರಿಯೇ ವಾರಕ್ಕೊಮ್ಮೆ ನಾಗಮಂಗಲಕ್ಕೆ ಬಂದು ಕೆಲಸ ಮಾಡುವಂತೆ ಮಾಡಿದರು. ಅಲ್ಲದೆ ತಾಲೂಕಿನ ದೊಡ್ಡ ಊರುಗಳಿಗೆ ಹೈಸ್ಕೂಲು ತಂದರು. ಅಷ್ಟರಲ್ಲಿ ಇವರುಗಳ ಇಲಾಖೆಯ ಕೆಲಸಗಳಿಗೆ ಅಡೆತಡೆಗಳು ಶುರುವಾದವು. ಗೌಡರಿಗೆ ಚಲುವರಾಯಸ್ವಾಮಿ ಎಲ್ಲೋ ತಮ್ಮ ಮಗನನ್ನೇ ಒವರ್‌ಟೇಕ್ ಮಾಡುವಂತೆ ಕಂಡಿತು; ಹಾಗಾಗಿ ದೇವೇಗೌಡರ ಅಭಿಮಾನಿಗಳು ಮತ್ತು ರೇವಣ್ಣನ ಹಿಂಬಾಲಕರು ಮುಂದಿನ 2008ರ ಚುನಾವಣೆಯಲ್ಲಿ ಚಲುವರಾಯಸ್ವಾಮಿ ವಿರುದ್ಧ ಕೆಲಸ ಮಾಡಿದ್ದರು ಎಂಬ ಮಾತು ಜನಜನಿತವಾಗಿದೆ. ಇದೆಲ್ಲಕ್ಕಿಂತ ಮುಖ್ಯವಾಗಿ ಹಿಂದೆ ಮುಂದೆ ಪಹರೆ ವಾಹನದ ನಡುವೆ ಸೈರನ್ ಮೊಳಗಿಸಿಕೊಂಡು ಹೋಗುವ ಮಂತ್ರಿ ಬಗ್ಗೆ ನಿಷ್ಕಾರಣದ ತಾತ್ಸಾರ ಬೆಳೆದುಕೊಂಡಿದ್ದು ಒಂದು ಕಾರಣವಾಗಿ ಆ ಚುನಾವಣೆಯಲ್ಲಿ ಚಲುವರಾಯಸ್ವಾಮಿ ಸೋತರು. ಇಷ್ಟೊಂದು ಕೆಲಸ ಮಾಡಿಯೂ ಜನ ಸೋಲಿಸಿದರಲ್ಲಾ ಎಂಬ ನಿರಾಶೆಗೆ ಚಲುವರಾಯಸ್ವಾಮಿ ಒಳಗಾಗಿದ್ದರು. ಬೇರೆ ಕಾರಣಗಳೂ ಇದ್ದವು. ಆ ಕಾರಣಗಳು ಮುಂದೆ ಬೃಹದಾಕಾರವಾಗಿ ಎದ್ದುನಿಂತು ದೇವೇಗೌಡರು ನಾಗಮಂಗಲ ಕ್ಷೇತ್ರದ ದೇವಸ್ಥಾನ ಉದ್ಘಾಟನೆ, ತಿಥಿ, ಮದುವೆಗೆಲ್ಲಾ ಬಂದು ಚಲುವರಾಯಸ್ವಾಮಿಯನ್ನು ಮೂಲೆಗುಂಪು ಮಾಡಲು ಶತಾಯಗತಾಯ ಪ್ರಯತ್ನಿಸಿದರು. ಆಗ ಬೆಂಗಳೂರಿನ ಎಚ್‌ಎಎಲ್ ಕಾರ್ಖಾನೆ ನೌಕರರ ವಸತಿ ನಿರ್ಮಾಣದ ಸೊಸೈಟಿಯಲ್ಲಿ ಹೆಸರು ಮಾಡಿದ್ದ ಸುರೇಶ್‌ಗೌಡರು ಬಂದು ಚಲುವರಾಯಸ್ವಾಮಿ ಎದುರು ನಿಂತು ಗೆದ್ದರು. 2013ರಲ್ಲಿ ಚಲುವರಾಯಸ್ವಾಮಿ ಮತ್ತೆ ಜೆಡಿಎಸ್‌ನಿಂದ ಗೆದ್ದರೂ ಆಗ ಕಾಂಗ್ರೆಸ್ ಸರ್ಕಾರ ಬಂತು. ಮುಂದೆ ಅದುಲುಬದಲಾಗಿ ಸುರೇಶ್‌ಗೌಡ ಜನತಾದಳಕ್ಕೆ ಹೋದರೆ ಚಲುವರಾಯಸ್ವಾಮಿ ಕಾಂಗ್ರೆಸ್‌ಗೆ ಹೋದರು.

ಇದನ್ನೂ ಓದಿ: ನಮ್ಮ ಸಚಿವರಿವರು; ಸರಳ ರಾಜಕಾರಣಿ ರಹೀಂ ಖಾನ್ ಪೌರಾಡಳಿತ ಸಚಿವ ಮತ್ತು ಹಜ್ ಮುಖ್ಯಸ್ಥ

ನಂತರ 2018ರ ಚುನಾವಣೆಯಲ್ಲಿ ಸುರೇಶ್‌ಗೌಡರು ದಾಖಲೆಯ ನಲವತ್ತೇಳುವರೆ ಸಾವಿರ ಲೀಡನಲ್ಲಿ ಗೆದ್ದರು. ಚಲುವರಾಯಸ್ವಾಮಿ ಗೌಡರಿಗೆ ದ್ರೋಹ ಬಗೆದು ಕಾಂಗ್ರೆಸ್ಸಿಗೆ ಹೋದರೆಂದು ದೇವೇಗೌಡರ ಕಡೆಯವರು ಮತದಾರರನ್ನು ಕೆರಳಿಸಿ ಗೆಲುವು ಸಾಧಿಸಿದ್ದರು. ಮುಂದೆ ಸಮ್ಮಿಶ್ರ ಸರಕಾರ ಬಂತು; 80 ಸೀಟು ಗೆದ್ದಿದ್ದ ಕಾಂಗ್ರೆಸ್ ಮೂವತ್ತು ಚಿಲ್ಲರೆ ಸೀಟು ಗೆದ್ದಿದ್ದ ದಳಕ್ಕೆ ಸಪೋರ್ಟಟು ಮಾಡಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಿತ್ತು. ಚಲುವರಾಯಸ್ವಾಮಿಯವರನ್ನು ಮೂಲೆಗುಂಪು ಮಾಡಿ ಮಂಡ್ಯವನ್ನು ಕೈಗೆ ತೆಗೆದುಕೊಳ್ಳುವ ಪ್ಲಾನ್ ಮಾಡಿದ ದೇವೇಗೌಡರು ಮತ್ತು ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿಯವರನ್ನು ಲೋಕಸಭಾ ಅಭ್ಯರ್ಥಿಯನ್ನಾಗಿಸಿದರು. ಅವರಗೂ ಓಟು ಕೇಳುವಂತಹ ಸ್ಥಿತಿ ಚಲುವರಾಯಸ್ವಾಮಿಗೆ ಬಂತು. ಆದರೆ ಮಂಡ್ಯದ ಕಾಂಗ್ರೆಸ್ಸಿಗರು ಮೈತ್ರಿ ಅಭ್ಯರ್ಥಿಯಾದ ನಿಖಿಲ್‌ಗೆ ಕೆಲಸ ಮಾಡುವುದರ ಬದಲು ಸುಮಲತಾಗೆ ವರ್ಕ್ ಮಾಡಿದ್ದರಿಂದ ನಿಖಿಲ್ ಒಂದೂಕಾಲು ಲಕ್ಷದ ಅಂತರದಿಂದ ಸೋತರು. ಇದರಲ್ಲಿ ಚಲುವರಾಯಸ್ವಾಮಿ ಶ್ರಮವೂ ಇತ್ತು.

ಸುರೇಶ್‌ಗೌಡ

ಮುಂದೆ ರಾಹುಲ್ ಗಾಂಧಿಯವರ ಭಾರತ್ ಜೋಡೊ ಯಾತ್ರೆ ನಾಗಮಂಗಲದ ಮುಖಾಂತರ ಹಾದುಹೋಗುವಾಗ ಅದರ ಜವಾಬ್ದಾರಿ ಚಲುವರಾಯಸ್ವಾಮಿ ಮೇಲೆ ಬಿತ್ತು. ಈ ಐತಿಹಾಸಿಕ ಘಟನೆಯನ್ನು ಸಮರ್ಥವಾಗಿ ನಿಭಾಯಿಸಿದ ಚಲುವರಾಯಸ್ವಾಮಿ ರಾಹುಲಗಾಂಧಿಗೆ ಹತ್ತಿರವಾದರು.

ಈ ಬಾರಿ ಚಲುವರಾಯಸ್ವಾಮಿ ಎದುರಿಸಿದ ನಾಗಮಂಗಲದ ಚುನಾವಣೆ ಹಿಂದಿಗಿಂತಲೂ ಬಿರುಸಾಗಿತ್ತು. ಗೆಲ್ಲುವ ಎಲ್ಲ ಸೂಚನೆಗಳಿದ್ದರೂ ಕಡೆ ಗಳಿಗೆಯಲ್ಲಿ ನಾಗಮಂಗಲಕ್ಕೆ ಬಂದು ರೋಡ್‌ಶೋ ಮಾಡಿದ ದೇವೇಗೌಡರು, ಚಲುವರಾಯಸ್ವಾಮಿಯನ್ನು ಸೋಲಿಸಲು ಕರೆಕೊಟ್ಟಿದ್ದಲ್ಲದೆ, ಗದ್ಗರಿತವಾಗಿ ಕೇಳಿಕೊಂಡರು. ಅವರ ಸಭೆಗೆ ಸೇರಿದ್ದ ಜನಸ್ತೋಮ ನೋಡಿದ ಜನರು ಸುರೇಶ್‌ಗೌಡರ ಗೆಲುವಿನ ಬಗ್ಗೆ ಯಾವ ಸಂಶಯವನ್ನು ಇಟ್ಟುಕೊಳ್ಳದೆ ಮನಸ್ಸಿಗೆ ಬಂದಷ್ಟು ಬೆಟ್ ಕಟ್ಟಿ ಸೋತುಹೋದರು. ಬೆಳ್ಳೂರು, ನಾಗಮಂಗಲ ಮತ್ತು ಕೊಪ್ಪ ಹೋಬಳಿ ಚಲುವರಾಯಸ್ವಾಮಿಯವರ ಕೈಹಿಡಿದಿದ್ದರಿಂದ ಅವರು ನಾಲ್ಕುವರೆ ಸಾವಿರ ವೋಟುಗಳ ಅಂತರದಲ್ಲಿ ಗೆದ್ದರು. ಈಗ ಎಲ್ಲ ಅಡೆತಡೆಗಳನ್ನು ನಿಭಾಯಿಸಿಕೊಂಡು ಗೆದ್ದು ಸಚಿವರಾಗಿರುವ ಮಂಡ್ಯ ಜಿಲ್ಲೆಯ ನಾಯಕರಾದ ಚಲುವರಾಯಸ್ವಾಮಿಯನ್ನು ಮಂಡ್ಯದ ಕರ್ನಾಟಕ ಸಂಘ ಸನ್ಮಾನಿಸಿದೆ. ಕೃಷಿ ಸಮಾಜದಿಂದ ಬಂದ ಭೈರೇಗೌಡರ ನಂತರ ಚಲುವರಾಯಸ್ವಾಮಿ ಆ ಇಲಾಖೆಗೆ ಜೀವ ನೀಡಬೇಕಾಗಿದೆ. ನಾಗಮಂಗಲದ ಶಾಸಕರಾಗಿದ್ದ ಚಲುವರಾಯಸ್ವಾಮಿ ಈಗ ಕೃಷಿಮಂತ್ರಿ ಹಾಗು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವುದರಿಂದ, ಮಂಡ್ಯದಲ್ಲಿ ನಿರ್ವಹಣೆಯಿಲ್ಲದೆ ಹಾಳುಬಿದ್ದಿರುವ ರೈತ ಸಭಾಂಗಣ, ಕಲಾಮಂದಿರ ಇತ್ಯಾದಿ ಸಾಂಸ್ಕೃತಿಕ ವಲಯಗಳ ಪುನಶ್ಚೇತನಕ್ಕೆ ಕೆಲಸ ಮಾಡಿ, ಮಂಡ್ಯವನ್ನು ಅದರ ಗತಕಾಲದ ವೈಭವಕ್ಕೆ ಮರಳಿ ತರಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...