Homeಕರ್ನಾಟಕಶಿಬಿರದ ಸಂಪನ್ಮೂಲ ವ್ಯಕ್ತಿಗಳ ಕುರಿತು ಮರು ಪರಿಶೀಲಿಸಿ: ಸ್ಪೀಕರ್ ನಡೆಗೆ ಕಾಂಗ್ರೆಸ್ ಮಾಜಿ ಶಾಸಕರ ವಿರೋಧ

ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಕುರಿತು ಮರು ಪರಿಶೀಲಿಸಿ: ಸ್ಪೀಕರ್ ನಡೆಗೆ ಕಾಂಗ್ರೆಸ್ ಮಾಜಿ ಶಾಸಕರ ವಿರೋಧ

ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ವಿಧಾನಸಭಾ ಸದಸ್ಯರ ಕಾರ್ಯಗಾರವನ್ನು ಆಯೋಜಿಸುವುದಾಗಿ ಸ್ಪೀಕರ್‌ರವರು ತಿಳಿಸಿದ್ದಾರೆಂದು ರಮೇಶ್‌ ಬಾಬುರವರು ತಿಳಿಸಿದ್ದಾರೆ.

- Advertisement -
- Advertisement -

ನೂತನ ಶಾಸಕರಿಗೆ ಏರ್ಪಡಿಸಿರುವ ಕಾರ್ಯಾಗಾರದಲ್ಲಿ ಪ್ರೇರಣಾ ಉಪನ್ಯಾಸ ನೀಡಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಡೆ, ಆರ್ಟ್‌ ಆಫ್‌ ಲಿವಿಂಗ್‌ನ ರವಿಶಂಕರ್ ಗುರೂಜಿ, ಜಮಾತೆ ಇಸ್ಲಾಮಿ ಹಿಂದ್ ನ ಮುಹಮ್ಮದ್ ಕುಂಞ, ಬ್ರಹ್ಮಕುಮಾರಿಯ ಆಶಾ ದೀದಿ ಮತ್ತು ಬಲಪಂಥೀಯ ಬರಹಗಾರ ಗುರುರಾಜ ಕರ್ಜಗಿಯವರನ್ನು ಆಹ್ವಾನಿಸಿರುವ ಸ್ಪೀಕರ್ ಯು.ಟಿ ಖಾದರ್ ಕ್ರಮಕ್ಕೆ ಮಾಜಿ ಪರಿಷತ್ ಸದಸ್ಯರು ಮತ್ತು ಕಾಂಗ್ರೆಸ್ ವಕ್ತಾರರಾದ ರಮೇಶ್‌ ಬಾಬುರವರು ವಿರೋಧ ವ್ಯಕ್ತಪಡಿಸಿದ್ದಾರೆ.

ಹೊಸದಾಗಿ ಆಯ್ಕೆಯಾದ ಸುಮಾರು 58 ಶಾಸಕರಿಗೆ ಜೂನ್ 26 ರಿಂದ 28ರ ವರೆಗೆ ನೆಲಮಂಗಲದಲ್ಲಿರುವ ವೀರೇಂದ್ರ ಹೆಗ್ಗಡೆಯವರ ‘ಕ್ಷೇಮವನ’ದಲ್ಲಿ ಮೂರುದಿನಗಳ ಶಿಬಿರ ಏರ್ಪಡಿಸಲಾಗಿದೆ. ಆದರೆ ಅಲ್ಲಿ ಮಾತನಾಡಲು ಆಹ್ವಾನಿಸಿರುವ ವ್ಯಕ್ತಿಗಳು ಒಂದಲ್ಲ ಹಲವು ರೀತಿಯಲ್ಲಿ ವಿವಾದಾತ್ಮಕವೆನಿಸಿದ್ದಾರೆ. ವಿವಾದಾತ್ಮಕ ಗುರು ರವಿಶಂಕರ್ ಗುರೂಜಿ ಮೇಲೆ ಅಕ್ರಮ ಭೂಪರಭಾರೆ ಪ್ರಕರಣವಿದೆ. ಅಲ್ಲದೇ ಅವರು ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ನಕ್ಸಲರಾಗುತ್ತಾರೆ ಎಂಬ ದ್ವೇ‍ಷದ ಹೇಳಿಕೆ ನೀಡಿದ್ದರು. ಇನ್ನು ಡಾ. ವಿರೇಂದ್ರ ಹೆಗಡೆಯವರು ಬಿಜೆಪಿ ನಾಮನಿರ್ದೇಶಿತ ರಾಜ್ಯಸಭಾ ಸಂಸದರಾಗಿದ್ದಾರೆ. ಡಾ. ಗುರುರಾಜ್ ಕರ್ಜಗಿ ಬಲಪಂಥೀಯ ಭಾಷಣಕಾರರಾಗಿದ್ದು, ಇತಿಹಾಸ ತಿರುಚುತ್ತಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಬ್ರಹ್ಮಕುಮಾರಿಯ ಆಶಾ ದೀದಿ ಹಾಗೂ ಮೊಹಮ್ಮದ್ ಕುಂಞ ಸಹ ನೂತನ ಶಾಸಕರಿಗೆ ಪ್ರೇರಣೆ ಹೇಗೆ ನೀಡಬಲ್ಲರು ಎಂಬ ಪ್ರಶ್ನೆಗಳೆದ್ದಿವೆ.

ಕರ್ನಾಟಕ ವಿಧಾನಸಭಾ ಸದಸ್ಯರಿಗೆ 3 ದಿನಗಳ ಕಾಲ ತರಬೇತಿ ಶಿಬಿರ ಆಯೋಜನೆ ಸಮಂಜಸವಾಗಿರುತ್ತದೆ. ಭೌದ್ದಿಕವಾಗಿ ಮತ್ತು ದೈಹಿಕವಾಗಿ ಶಾಸಕರನ್ನು ಗಟ್ಟಿಗೊಳಿಸುವ ಯಾವುದೇ ಪ್ರಯತ್ನ ಔಚಿತ್ಯಪೂರ್ಣವಾಗಿರುತ್ತದೆ. ಇಂತಹ ತರಭೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಗಳು ಸಮಾಜಮುಖಿಗಳಾಗಿರಬೇಕು. ಇವರು ಜೀವನಬದ್ಧತೆ, ಗಟ್ಟಿತನದ ಮೌಲ್ಯ ಮತ್ತು ಸಂವಿಧಾನದ ಆಶಯಗಳಿಗೆ ಪೂರಕವಾಗಿ ವಿಶಾಲವಾದ ಮಾನವೀಯ ಮೌಲ್ಯಗಳ ಚಿಂತನೆಗಳನ್ನು ಹೊಂದಿರಬೇಕು. ಯಾವುದೇ ಒಂದು ಸಿದ್ಧಾಂತಕ್ಕೆ ಅಂಟಿಕೊಂಡವರನ್ನು ಅಥವಾ ಪೂರ್ವಗ್ರಹ ಪೀಡಿತರಾಗಿ ಚಿಂತಿಸುವವರನ್ನು ತರಭೇತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ವಿಷಯ ಮಂಡನೆಗೆ ನೀಡಿದರೆ, ಅಂತಹ ಬೋಧನೆಗಳು ಅಥವಾ ಚರ್ಚೆಗಳು ಶಿಬಿರದ ಒಟ್ಟಾರೆ ಮೌಲ್ಯಗಳನ್ನು ಕಳಂಕಗೊಳಿಸುತ್ತದೆ ಎಂದು ರಮೇಶ್‌ ಬಾಬುರವರು ಸ್ಪೀಕರ್‌ರವರಿಗೆ ಪತ್ರ ಬರೆದಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸಲು ಮತ್ತು ಕುವೆಂಪುರವರ ಸರ್ವಧರ್ಮಗಳ ಶಾಂತಿಯ ತೋಟದ ಕಲ್ಪನೆಗೆ ಭಂಗ ತರಲು ಪ್ರಯತ್ನಿಸಿದವರ ಹಿನ್ನೆಲೆಯನ್ನು, ತಂತ್ರಗಾರಿಕೆಯ ಪ್ರಯತ್ನವನ್ನು ತಾವು ಸೂಕ್ಷ್ಮವಾಗಿ ಗಮನಿಸಿರುತ್ತೀರಿ. ಅನೇಕ ಸಂದರ್ಭಗಳಲ್ಲಿ ಇಂತಹ ಶಕ್ತಿಗಳ ಕುತಂತ್ರಗಳನ್ನು ನೀವೂ ಸೇರಿದಂತೆ ನಾವೆಲ್ಲರೂ ಆಸಹಾಯಕರಾಗಿ ಎದುರಿಸಿದ ಪ್ರಸಂಗಗಳಿದೆ. ಇದರ ಹಿನ್ನೆಲೆಯಲ್ಲಿ ಸಂವಿಧಾನದ ಮೌಲ್ಯಗಳನ್ನು ಸಂರಕ್ಷಿಸುವ ಕೆಲಸವನ್ನು ನಾವೆಲ್ಲರೂ ತರಭೇತಿ ಶಿಬಿರಗಳಲ್ಲಿ ನಿರೀಕ್ಷಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಹಿರಿಯ ಸಂಸದೀಯ ಪಟುಗಳ ಅನುಭವದ ಹಂಚಿಕೆಯ ಜೊತೆಗೆ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುವ ವಿಷಯಗಳಿಗೆ ಮತ್ತು ಈ ದೇಶದ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಹಾಗೂ ಅದಕ್ಕೆ ಅನುಗುಣವಾಗಿ ಶಾಸಕರು ಕರ್ತವ್ಯ ನಿರ್ವಹಣೆ ಮಾಡುವ ಹಿನ್ನೆಲೆಯಲ್ಲಿ ತರಭೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ತಾವು ಉದ್ದೇಶಿತ ತರಭೇತಿ ಶಿಬಿರಕ್ಕೆ ಆಯ್ಕೆ ಮಾಡಿರುವ ಸಂಪನ್ಮೂಲ ವ್ಯಕ್ತಿಗಳ ಕುರಿತು ಅನೇಕ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ದಯಮಾಡಿ ಇದನ್ನು ಮರುಪರಿಶೀಲಿಸಲು ಕೋರುತ್ತೇನೆ. ಕೆಲವು ನಿವೃತ್ತ ಅಧಿಕಾರಿಗಳು ತಮಗೆ ತಪ್ಪು ಮಾಹಿತಿ ನೀಡಿರುವ ಸಾದ್ಯತೆ ಇದ್ದು, ದಯಮಾಡಿ ಸಂಸದೀಯ ವ್ಯವಸ್ಥೆಯ ಮೌಲ್ಯಗಳ ರಕ್ಷಣೆಯ ದೃಷ್ಟಿಯಿಂದ ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಕುರಿತು ಮರು ಪರಿಶೀಲಿಸಿ ಎಂದು ಅವರು ಒತ್ತಾಯಿಸಿದ್ದಾರೆ.

ಆನಂತರ ಮತ್ತೊಂದು ಪತ್ರಿಕಾ ಹೇಳಿಕೆ ಹೊರಡಿಸಿ, “ಸಂಪನ್ಮೂಲ ವ್ಯಕ್ತಿಗಳನ್ನು ಕರೆಸುವ ಸಂಬಂಧ ವಿಧಾನಸಭೆಯ ಗೌರವಾನ್ವಿತಾ ಸ್ಪೀಕರ್ ರವರಿಗೆ ನಾನು ಮನವಿಯನ್ನು ಸಲ್ಲಿಸಿ ಸುಧೀರ್ಘವಾಗಿ ಚರ್ಚಿಸಿರುತ್ತೇನೆ. ಗೌರವಾನ್ವಿತ ಸ್ಪೀಕರ್ ರವರು ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಸಂಬಂಧ ಅಂತಿಮ ಪಟ್ಟಿ ಇನ್ನೂ ಆಖೈರುಗೊಳಿಸಬೇಕಾಗಿದೆ ಎಂದು ತಿಳಿಸಿರುತ್ತಾರೆ. ಕರ್ನಾಟಕ ವಿಧಾನಸಭೆಯ ಪರಂಪರೆಗೆ ಅನುಗುಣವಾಗಿ ಮತ್ತು ರಾಜ್ಯದ ಸಂಸ್ಕೃತಿಗೆ ಅನುಗುಣವಾಗಿ ಎಲ್ಲರ ಭಾವನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಪನ್ಮೂಲ ವ್ಯಕ್ತಿಗಳಿಗೆ ಆದ್ಯತೆ ನೀಡುವುದಾಗಿ ತಿಳಿಸಿರುತ್ತಾರೆ. ಮಾನ್ಯ ಸ್ಪೀಕರ್ ರವರು ನಾನು ನೀಡಿದ ಪತ್ರದಲ್ಲಿನ ಭಾವನೆಗಳನ್ನು ಪರಿಗಣಿಸುವುದಾಗಿ ತಿಳಿಸಿ ರಾಜ್ಯದ ವಿಧಾನಸಭೆಯ ಸಂಪ್ರದಾಯಕ್ಕೆ ಅನುಗುಣವಾಗಿ ಮತ್ತು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ವಿಧಾನಸಭಾ ಸದಸ್ಯರ ಕಾರ್ಯಗಾರವನ್ನು ಆಯೋಜಿಸುವುದಾಗಿ ಮತ್ತು ಕಾನೂನು ರಚನೆಯ ಹಿನ್ನೆಲೆಯಲ್ಲಿ ವಿಧಾನಸಭಾ ಸದಸ್ಯರಿಗೆ ಉಪಯುಕ್ತ ಆಗುವ ರೀತಿಯಲ್ಲಿ ಕಾರ್ಯಾಗಾರ ನಡೆಸುವುದಾಗಿ ತಿಳಿಸಿರುತ್ತಾರೆ. ಕಾರ್ಯಾಗಾರ ಶಿಬಿರದ ಸಂಬಂಧ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಬಂದಿರುವ ಎಲ್ಲಾ ಸಕರಾತ್ಮಕ ಅಂಶಗಳನ್ನು ಪರಿಗಣಿಸುವುದಾಗಿ ತಿಳಿಸಿರುತ್ತಾರೆ, ನನ್ನ ಪತ್ರದ ಸಂಬಂಧ ಮಾನ್ಯ ಸ್ಪೀಕರ್ ರವರು ಸುಧೀರ್ಘ ಸಮಯ ಚರ್ಚಿಸಿ ಪತ್ರದಲ್ಲಿನ ಅಂಶಗಳನ್ನು ಪರಿಗಣಿಸುವುದಾಗಿ ತಿಳಿಸಿದ್ದು, ಮಾನ್ಯ ಗೌರವಾನ್ವಿತ ಸ್ಪೀಕರ್ ರವರಿಗೆ ಮತ್ತು ವಿಧಾನಸಭಾ ಸಚಿವಲಾಯಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ರಮೇಶ್‌ ಬಾಬುರವರು ತಿಳಿಸಿದ್ದಾರೆ.

ಇದನ್ನೂ ಓದಿ: ನೂತನ ಶಾಸಕರಿಗೆ ಪ್ರೇರಣಾ ಉಪನ್ಯಾಸ ನೀಡಲು ಗುರುರಾಜ ಕರ್ಜಗಿ, ರವಿಶಂಕರ್ ಗುರೂಜಿಗೆ ಆಹ್ವಾನ: ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....