Homeಕರ್ನಾಟಕಗೃಹಜ್ಯೋತಿ ಯೋಜನೆಗೆ ನಿಮ್ಮ ಮೊಬೈಲ್‌ನಿಂದ ಅರ್ಜಿ ಸಲ್ಲಿಸುವುದು ಹೇಗೆ?; ಇಲ್ಲಿದೆ ಸಂಪೂರ್ಣ ಮಾಹಿತಿ

ಗೃಹಜ್ಯೋತಿ ಯೋಜನೆಗೆ ನಿಮ್ಮ ಮೊಬೈಲ್‌ನಿಂದ ಅರ್ಜಿ ಸಲ್ಲಿಸುವುದು ಹೇಗೆ?; ಇಲ್ಲಿದೆ ಸಂಪೂರ್ಣ ಮಾಹಿತಿ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಸರ್ಕಾರದ 5 ಜನಪ್ರಿಯ ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಜೂನ್‌ 18ರಿಂದ ನೋಂದಣಿ ಮಾಡಿಕೊಳ್ಳಲು ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮೊದಲ ಎರಡು ದಿನ ಸರ್ವರ್‌ ಡೌನ್‌ ಆಗಿ, ಗ್ರಾಹಕರು ಪರದಾಡಿದ್ದರು. ಆದರೆ, ಈಗ ಸರ್ವರ್‌ ಸಮಸ್ಯೆ ಸ್ವಲ್ಪ ಒಂದು ಹಂತಕ್ಕೆ ಸರಿಯಾಗಿದ್ದು, ಆನ್‌ಲೈನ್‌ ಅಥವಾ ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಸೇರಿ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ನೀವು ಅರ್ಜಿ ಸಲ್ಲಿಸಬಹುದು.

ನಿಮ್ಮ ಮೊಬೈಲ್‌ನಿಂದಲೇ ಅರ್ಜಿ ಸಲ್ಲಿಸಬಹುದು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಸರಳವಾಗಿದ್ದು, ಸರ್ವರ್‌ ಡೌನ್‌ ಆಗಿಲ್ಲ ಎಂದರೆ ನಿಮ್ಮ ಮೊಬೈಲ್‌ ಅಥವಾ ನಿಮ್ಮ ಲ್ಯಾಪ್‌ಟಾಪ್‌ನಲ್ಲಿಯೂ ಸೇವಾಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವೇಳೆ ನಿಮ್ಮ ಬಳಿ ವಿದ್ಯುತ್‌ ಬಿಲ್‌, ಆಧಾರ್‌ ಕಾರ್ಡ್ ಮತ್ತು ಒಟಿಪಿ ನಮೂದಿಸಲು ಮೊಬೈಲ್‌ ಇರಬೇಕು.

1 ನಿಮ್ಮ ಮೊಬೈಲ್‌ ಅಥವಾ ಕಂಪ್ಯೂಟರ್‌ನಲ್ಲಿ ಗೂಗಲ್‌ ಕ್ರೋಮ್‌ ಅಥವಾ ಫೈರ್‌ಫಾಕ್ಸ್‌ ಬ್ರೌಸರ್‌ ಅನ್ನು ಓಪನ್‌ ಮಾಡಿ. ಅಲ್ಲಿನ ಯುಆರ್‌ಎಲ್‌ ಬಾರ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿಯೇ ರೂಪಿಸಲಾದ ಸೇವಾಸಿಂಧು ಪೋರ್ಟಲ್‌ನ ಪ್ರತ್ಯೇಕ ವೆಬ್‌ಸೈಟ್‌ sevasindhugs.karnataka.gov.in ಎಂದು ಟೈಪ್‌ ಮಾಡಿ ಸರ್ಚ್‌ ಮಾಡಿ. ಅದಾದ ಬಳಿಕ ನಿಮಗೆ ಈ ರೀತಿ ವೆಬ್‌ಪೇಜ್‌ ಒಪನ್‌ ಆಗುತ್ತದೆ. ಇಲ್ಲಿ ಅನ್ನಭಾಗ್ಯ ಹೊರತುಪಡಿಸಿ ಉಳಿದ ನಾಲ್ಕು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಿಗೆ ನೀವು ಅರ್ಜಿ ಸಲ್ಲಿಸಬಹುದು. ಸದ್ಯ ಗೃಹಜ್ಯೋತಿಗೆ ಮಾತ್ರ ಅರ್ಜಿ ಸಲ್ಲಿಸುವ ಆಯ್ಕೆ ಇದೆ.

2 ಗೃಹಜ್ಯೋತಿ ಟ್ಯಾಬ್‌ ಮೇಲೆ ಕ್ಲಿಕ್‌ ಮಾಡಿ. ಅಲ್ಲಿ ನಿಮಗೆ ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಳ್ಳುವ ಅರ್ಜಿ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಹಲವು ಮಾಹಿತಿಯನ್ನು ನಮೂದಿಸಬೇಕಾಗುತ್ತದೆ.

3 ಮೊದಲು ನಿಮ್ಮ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಿ.

4 ಬಳಿಕ ನಿಮ್ಮ ವ್ಯಾಪ್ತಿಯ ಎಸ್ಕಾಂ ಅನ್ನು ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ಆರು ಎಸ್ಕಾಂಗಳು ಇದ್ದು, BESCOM, CHESCOM, HESCOM, GESCOM, MESCOM ಹಾಗೂ ಹುಕ್ಕೇರಿ ಸೊಸೈಟಿ ಎಂಬ ಆಯ್ಕೆಗಳು ಇವೆ. ಅದರಲ್ಲಿ ನಿಮ್ಮ ಎಸ್ಕಾಂ ಅನ್ನು ಆಯ್ಕೆ ಮಾಡಿಕೊಳ್ಳಬೇಕು.

5 ನಿಮ್ಮ ಅಕೌಂಟ್‌ ನಂಬರ್‌ ನಮೂದಿಸಿ! ಬೆಸ್ಕಾಂ ಆಯ್ಕೆ ಮಾಡಿಕೊಂಡ ತಕ್ಷಣ ನಿಮ್ಮ ವಿದ್ಯುತ್‌ ಮೀಟರ್‌ನ ಅಕೌಂಟ್‌ ನಂಬರ್‌ ಅನ್ನು ನಮೂದಿಸಿ. ಆರ್‌ಆರ್‌ ಸಂಖ್ಯೆಯನ್ನು ನೀವು ಇಲ್ಲಿ ನಮೂದಿಸಬಾರದು. ಆರ್‌ಆರ್‌ ಸಂಖ್ಯೆಯೇ ಬೇರೆ, ಅಕೌಂಟ್‌ ಸಂಖ್ಯೆಯೇ ಬೇರೆ. ಈ ಸಂಖ್ಯೆ ನಿಮ್ಮ ಕರೆಂಟ್‌ ಬಿಲ್‌ನಲ್ಲಿ ಆರ್‌ಆರ್‌ ಸಂಖ್ಯೆಯ ಕೆಳಗಡೆ ಇರುತ್ತದೆ. ನೀವು ಅಕೌಂಟ್‌ ನಂಬರ್‌ ನಮೂದಿಸಿದ ಬಳಿಕ ವಿದ್ಯುತ್‌ ಮೀಟರ್‌ ಯಾರ ಹೆಸರಿನಲ್ಲಿದೆಯೋ ಅವರ ಹೆಸರು ಹಾಗೂ ವಿಳಾಸ ಆಟೋಮ್ಯಾಟಿಕ್‌ ಆಗಿ ಅಪ್‌ಡೇಟ್‌ ಆಗಲಿದೆ.

ಆ ನಂತರ ನೀವು ಬಾಡಿಗೆದಾರರೋ ಅಥವಾ ಮನೆ ಮಾಲೀಕರೋ ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ಎರಡು ಆಯ್ಕೆಗಳಿದ್ದು, ನಿಮಗೆ ಸರಿ ಹೊಂದಿಸುವ ಆಯ್ಕೆಯನ್ನು ಕ್ಲಿಕ್‌ ಮಾಡಿ.

7 ಬಳಿಕ ನಿಮ್ಮ ಆಧಾರ್‌ ಸಂಖ್ಯೆಯನ್ನು ನಮೂದಿಸಿ. ಆಧಾರ್‌ ಸಂಖ್ಯೆಯನ್ನು ನಮೂದಿಸಿದ ಬಳಿಕ ನಿಮಗೆ ಆಧಾರ್‌ ದೃಢೀಕರಣದ ಆಯ್ಕೆಗಳು ಕಾಣುತ್ತವೆ. ಆಧಾರ್‌ ದೃಢೀಕರಣ ಆಯ್ಕೆ ಮೇಲೆ ಕ್ಲಿಕ್‌ ಮಾಡಿ. ಒಂದು ವೇಳೆ ಈಗಾಗಲೇ ಆಧಾರ್‌ ದೃಢೀಕರಣ ಆಗಿದ್ದರೆ, ನೀವು ಆಧಾರ್‌ ಸಂಖ್ಯೆ ನಮೂದಿಸಿದ ತಕ್ಷಣ ನಿಮ್ಮ ಹೆಸರು ಕೂಡ ಅಲ್ಲಿ ಆಟೋಮ್ಯಾಟಿಕ್‌ ಆಗಿ ಬರಲಿದೆ.

8 ಮೊಬೈಲ್‌ ನಂಬರ್‌ ನಮೂದಿಸಿ! ಆಧಾರ್‌ ದೃಢೀಕರಣದ ಬಳಿಕ ನಿಮ್ಮ 10 ಅಂಕಿಯ ಮೊಬೈಲ್‌ ನಂಬರ್‌ ಅನ್ನು ನಮೂದಿಸಿ. ಇದಾದ ಬಳಿಕ ನಿಮ್ಮ ಮೊಬೈಲ್‌ಗೆ ಒಂದು ಒಟಿಪಿ ಬರಲಿದೆ. ಆ ಒಟಿಪಿಯನ್ನು ನಮೂದಿಸಿ.

9 ಒಟಿಪಿ ನಮೂದಿಸಿದ ಬಳಿಕ ಕೆಳಗಡೆ ಡಿಕ್ಲರೇಷನ್‌ ಎಂಬ ವಿಭಾಗ ಇದ್ದು, ಅಲ್ಲಿ ಐ ಅಗ್ರಿ ಎಂಬ ಟಿಕ್‌ ಬಾಕ್ಸ್‌ ಅನ್ನು ಕ್ಲಿಕ್‌ ಮಾಡಬೇಕು. ಅದಾದ ನಂತರ ವರ್ಡ್‌ ವೆರಿಫಿಕೇಷನ್‌ ಕೇಳುತ್ತದೆ. ಅಲ್ಲಿರುವ ಸಂಖ್ಯೆಯನ್ನು ನೀವು ಕೊಟ್ಟಿರುವ ಬಾಕ್ಸ್‌ನಲ್ಲಿ ಸರಿಯಾಗಿ ನಮೂದಿಸಬೇಕು.

ಬಳಿಕ ಕೆಳಗಡೆ ಸಬ್ಮಿಟ್, ಕ್ಯಾನ್ಸಲ್‌ ಹಾಗೂ ಕ್ಲೋಸ್‌ ಎಂಬ ಮೂರು ಆಯ್ಕೆಗಳಿದ್ದು, ಸಬ್ಮಿಟ್ ಬಟನ್‌ ಅನ್ನು ಕ್ಲಿಕ್‌ ಮಾಡಿ. ಇದರ ಬಳಿಕ ಮತ್ತೊಂದು ವೆಬ್‌ಪೇಜ್‌ಗೆ ನೀವು ಹೋಗುತ್ತೀರಿ. ಅಲ್ಲಿ ನೀವು ನಮೂದಿಸಿರುವ ಮಾಹಿತಿಯನ್ನು ಮತ್ತೊಂದು ಸಲ ವೆಬ್‌ಸೈಟ್‌ ತೋರಿಸುತ್ತದೆ. ಎಲ್ಲ ಸರಿ ಇದೆ ಎಂದು ಖಚಿತಪಡಿಸಿಕೊಂಡ ಬಳಿಕ ನೀವು ಮತ್ತೊಂದು ಸಲ ಸಬ್ಮಿಟ್ ಬಟನ್‌ ಅನ್ನು ಕ್ಲಿಕ್‌ ಮಾಡಬೇಕು. ಎಡಿಟ್‌ ಮಾಡಲು ಕೂಡ ಅವಕಾಶ ಇದೆ.

ಕೊನೆಗೆ ಸಬ್ಮಿಟ್ ಬಟನ್‌ ಕ್ಲಿಕ್‌ ಮಾಡಿದ ಬಳಿಕ ನಿಮಗೆ ಒಂದು ಸ್ವೀಕೃತಿ ಪತ್ರ ಅಥವಾ ಅಕ್ನಾಲೇಜ್‌ಮೆಂಟ್‌ ಬರಲಿದೆ. ಅದನ್ನು ನೀವು ಎಕ್ಸ್‌ಪೋರ್ಟ್‌ ಪಿಡಿಎಫ್‌ ಎಂದು ಆಯ್ಕೆ ಕೊಟ್ಟರೆ ಸ್ವೀಕೃತಿ ಪತ್ರ ನಿಮ್ಮ ಮೊಬೈಲ್‌ ಅಥವಾ ಕಂಪ್ಯೂಟರ್‌ನಲ್ಲಿ ಸೇವ್‌ ಆಗಲಿದೆ. ಮುಂದೆ ಅರ್ಜಿಯನ್ನು ಪರಿಶೀಲಿಸಲಿರುವ ಸರ್ಕಾರ ನಿಮಗೆ ಉಚಿತವಾಗಿ ವಿದ್ಯುತ್‌ ಅನ್ನು ನೀಡಲಿದೆ. ಸದ್ಯಕ್ಕೆ ಯಾವುದೇ ರೀತಿಯ ದಾಖಲೆಗಳನ್ನು ಅಪ್‌ಲೋಡ್‌ ಮಾಡುವಂತಿಲ್ಲ. ಮುಂದೆ ದಾಖಲೆಗಳನ್ನು ಪರಿಶೀಲಿಸುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಗೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್‌: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...