Homeಕರ್ನಾಟಕಗೃಹಜ್ಯೋತಿ ಯೋಜನೆಗೆ ನಿಮ್ಮ ಮೊಬೈಲ್‌ನಿಂದ ಅರ್ಜಿ ಸಲ್ಲಿಸುವುದು ಹೇಗೆ?; ಇಲ್ಲಿದೆ ಸಂಪೂರ್ಣ ಮಾಹಿತಿ

ಗೃಹಜ್ಯೋತಿ ಯೋಜನೆಗೆ ನಿಮ್ಮ ಮೊಬೈಲ್‌ನಿಂದ ಅರ್ಜಿ ಸಲ್ಲಿಸುವುದು ಹೇಗೆ?; ಇಲ್ಲಿದೆ ಸಂಪೂರ್ಣ ಮಾಹಿತಿ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಸರ್ಕಾರದ 5 ಜನಪ್ರಿಯ ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಜೂನ್‌ 18ರಿಂದ ನೋಂದಣಿ ಮಾಡಿಕೊಳ್ಳಲು ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮೊದಲ ಎರಡು ದಿನ ಸರ್ವರ್‌ ಡೌನ್‌ ಆಗಿ, ಗ್ರಾಹಕರು ಪರದಾಡಿದ್ದರು. ಆದರೆ, ಈಗ ಸರ್ವರ್‌ ಸಮಸ್ಯೆ ಸ್ವಲ್ಪ ಒಂದು ಹಂತಕ್ಕೆ ಸರಿಯಾಗಿದ್ದು, ಆನ್‌ಲೈನ್‌ ಅಥವಾ ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಸೇರಿ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ನೀವು ಅರ್ಜಿ ಸಲ್ಲಿಸಬಹುದು.

ನಿಮ್ಮ ಮೊಬೈಲ್‌ನಿಂದಲೇ ಅರ್ಜಿ ಸಲ್ಲಿಸಬಹುದು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಸರಳವಾಗಿದ್ದು, ಸರ್ವರ್‌ ಡೌನ್‌ ಆಗಿಲ್ಲ ಎಂದರೆ ನಿಮ್ಮ ಮೊಬೈಲ್‌ ಅಥವಾ ನಿಮ್ಮ ಲ್ಯಾಪ್‌ಟಾಪ್‌ನಲ್ಲಿಯೂ ಸೇವಾಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವೇಳೆ ನಿಮ್ಮ ಬಳಿ ವಿದ್ಯುತ್‌ ಬಿಲ್‌, ಆಧಾರ್‌ ಕಾರ್ಡ್ ಮತ್ತು ಒಟಿಪಿ ನಮೂದಿಸಲು ಮೊಬೈಲ್‌ ಇರಬೇಕು.

1 ನಿಮ್ಮ ಮೊಬೈಲ್‌ ಅಥವಾ ಕಂಪ್ಯೂಟರ್‌ನಲ್ಲಿ ಗೂಗಲ್‌ ಕ್ರೋಮ್‌ ಅಥವಾ ಫೈರ್‌ಫಾಕ್ಸ್‌ ಬ್ರೌಸರ್‌ ಅನ್ನು ಓಪನ್‌ ಮಾಡಿ. ಅಲ್ಲಿನ ಯುಆರ್‌ಎಲ್‌ ಬಾರ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿಯೇ ರೂಪಿಸಲಾದ ಸೇವಾಸಿಂಧು ಪೋರ್ಟಲ್‌ನ ಪ್ರತ್ಯೇಕ ವೆಬ್‌ಸೈಟ್‌ sevasindhugs.karnataka.gov.in ಎಂದು ಟೈಪ್‌ ಮಾಡಿ ಸರ್ಚ್‌ ಮಾಡಿ. ಅದಾದ ಬಳಿಕ ನಿಮಗೆ ಈ ರೀತಿ ವೆಬ್‌ಪೇಜ್‌ ಒಪನ್‌ ಆಗುತ್ತದೆ. ಇಲ್ಲಿ ಅನ್ನಭಾಗ್ಯ ಹೊರತುಪಡಿಸಿ ಉಳಿದ ನಾಲ್ಕು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಿಗೆ ನೀವು ಅರ್ಜಿ ಸಲ್ಲಿಸಬಹುದು. ಸದ್ಯ ಗೃಹಜ್ಯೋತಿಗೆ ಮಾತ್ರ ಅರ್ಜಿ ಸಲ್ಲಿಸುವ ಆಯ್ಕೆ ಇದೆ.

2 ಗೃಹಜ್ಯೋತಿ ಟ್ಯಾಬ್‌ ಮೇಲೆ ಕ್ಲಿಕ್‌ ಮಾಡಿ. ಅಲ್ಲಿ ನಿಮಗೆ ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಳ್ಳುವ ಅರ್ಜಿ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಹಲವು ಮಾಹಿತಿಯನ್ನು ನಮೂದಿಸಬೇಕಾಗುತ್ತದೆ.

3 ಮೊದಲು ನಿಮ್ಮ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಿ.

4 ಬಳಿಕ ನಿಮ್ಮ ವ್ಯಾಪ್ತಿಯ ಎಸ್ಕಾಂ ಅನ್ನು ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ಆರು ಎಸ್ಕಾಂಗಳು ಇದ್ದು, BESCOM, CHESCOM, HESCOM, GESCOM, MESCOM ಹಾಗೂ ಹುಕ್ಕೇರಿ ಸೊಸೈಟಿ ಎಂಬ ಆಯ್ಕೆಗಳು ಇವೆ. ಅದರಲ್ಲಿ ನಿಮ್ಮ ಎಸ್ಕಾಂ ಅನ್ನು ಆಯ್ಕೆ ಮಾಡಿಕೊಳ್ಳಬೇಕು.

5 ನಿಮ್ಮ ಅಕೌಂಟ್‌ ನಂಬರ್‌ ನಮೂದಿಸಿ! ಬೆಸ್ಕಾಂ ಆಯ್ಕೆ ಮಾಡಿಕೊಂಡ ತಕ್ಷಣ ನಿಮ್ಮ ವಿದ್ಯುತ್‌ ಮೀಟರ್‌ನ ಅಕೌಂಟ್‌ ನಂಬರ್‌ ಅನ್ನು ನಮೂದಿಸಿ. ಆರ್‌ಆರ್‌ ಸಂಖ್ಯೆಯನ್ನು ನೀವು ಇಲ್ಲಿ ನಮೂದಿಸಬಾರದು. ಆರ್‌ಆರ್‌ ಸಂಖ್ಯೆಯೇ ಬೇರೆ, ಅಕೌಂಟ್‌ ಸಂಖ್ಯೆಯೇ ಬೇರೆ. ಈ ಸಂಖ್ಯೆ ನಿಮ್ಮ ಕರೆಂಟ್‌ ಬಿಲ್‌ನಲ್ಲಿ ಆರ್‌ಆರ್‌ ಸಂಖ್ಯೆಯ ಕೆಳಗಡೆ ಇರುತ್ತದೆ. ನೀವು ಅಕೌಂಟ್‌ ನಂಬರ್‌ ನಮೂದಿಸಿದ ಬಳಿಕ ವಿದ್ಯುತ್‌ ಮೀಟರ್‌ ಯಾರ ಹೆಸರಿನಲ್ಲಿದೆಯೋ ಅವರ ಹೆಸರು ಹಾಗೂ ವಿಳಾಸ ಆಟೋಮ್ಯಾಟಿಕ್‌ ಆಗಿ ಅಪ್‌ಡೇಟ್‌ ಆಗಲಿದೆ.

ಆ ನಂತರ ನೀವು ಬಾಡಿಗೆದಾರರೋ ಅಥವಾ ಮನೆ ಮಾಲೀಕರೋ ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ಎರಡು ಆಯ್ಕೆಗಳಿದ್ದು, ನಿಮಗೆ ಸರಿ ಹೊಂದಿಸುವ ಆಯ್ಕೆಯನ್ನು ಕ್ಲಿಕ್‌ ಮಾಡಿ.

7 ಬಳಿಕ ನಿಮ್ಮ ಆಧಾರ್‌ ಸಂಖ್ಯೆಯನ್ನು ನಮೂದಿಸಿ. ಆಧಾರ್‌ ಸಂಖ್ಯೆಯನ್ನು ನಮೂದಿಸಿದ ಬಳಿಕ ನಿಮಗೆ ಆಧಾರ್‌ ದೃಢೀಕರಣದ ಆಯ್ಕೆಗಳು ಕಾಣುತ್ತವೆ. ಆಧಾರ್‌ ದೃಢೀಕರಣ ಆಯ್ಕೆ ಮೇಲೆ ಕ್ಲಿಕ್‌ ಮಾಡಿ. ಒಂದು ವೇಳೆ ಈಗಾಗಲೇ ಆಧಾರ್‌ ದೃಢೀಕರಣ ಆಗಿದ್ದರೆ, ನೀವು ಆಧಾರ್‌ ಸಂಖ್ಯೆ ನಮೂದಿಸಿದ ತಕ್ಷಣ ನಿಮ್ಮ ಹೆಸರು ಕೂಡ ಅಲ್ಲಿ ಆಟೋಮ್ಯಾಟಿಕ್‌ ಆಗಿ ಬರಲಿದೆ.

8 ಮೊಬೈಲ್‌ ನಂಬರ್‌ ನಮೂದಿಸಿ! ಆಧಾರ್‌ ದೃಢೀಕರಣದ ಬಳಿಕ ನಿಮ್ಮ 10 ಅಂಕಿಯ ಮೊಬೈಲ್‌ ನಂಬರ್‌ ಅನ್ನು ನಮೂದಿಸಿ. ಇದಾದ ಬಳಿಕ ನಿಮ್ಮ ಮೊಬೈಲ್‌ಗೆ ಒಂದು ಒಟಿಪಿ ಬರಲಿದೆ. ಆ ಒಟಿಪಿಯನ್ನು ನಮೂದಿಸಿ.

9 ಒಟಿಪಿ ನಮೂದಿಸಿದ ಬಳಿಕ ಕೆಳಗಡೆ ಡಿಕ್ಲರೇಷನ್‌ ಎಂಬ ವಿಭಾಗ ಇದ್ದು, ಅಲ್ಲಿ ಐ ಅಗ್ರಿ ಎಂಬ ಟಿಕ್‌ ಬಾಕ್ಸ್‌ ಅನ್ನು ಕ್ಲಿಕ್‌ ಮಾಡಬೇಕು. ಅದಾದ ನಂತರ ವರ್ಡ್‌ ವೆರಿಫಿಕೇಷನ್‌ ಕೇಳುತ್ತದೆ. ಅಲ್ಲಿರುವ ಸಂಖ್ಯೆಯನ್ನು ನೀವು ಕೊಟ್ಟಿರುವ ಬಾಕ್ಸ್‌ನಲ್ಲಿ ಸರಿಯಾಗಿ ನಮೂದಿಸಬೇಕು.

ಬಳಿಕ ಕೆಳಗಡೆ ಸಬ್ಮಿಟ್, ಕ್ಯಾನ್ಸಲ್‌ ಹಾಗೂ ಕ್ಲೋಸ್‌ ಎಂಬ ಮೂರು ಆಯ್ಕೆಗಳಿದ್ದು, ಸಬ್ಮಿಟ್ ಬಟನ್‌ ಅನ್ನು ಕ್ಲಿಕ್‌ ಮಾಡಿ. ಇದರ ಬಳಿಕ ಮತ್ತೊಂದು ವೆಬ್‌ಪೇಜ್‌ಗೆ ನೀವು ಹೋಗುತ್ತೀರಿ. ಅಲ್ಲಿ ನೀವು ನಮೂದಿಸಿರುವ ಮಾಹಿತಿಯನ್ನು ಮತ್ತೊಂದು ಸಲ ವೆಬ್‌ಸೈಟ್‌ ತೋರಿಸುತ್ತದೆ. ಎಲ್ಲ ಸರಿ ಇದೆ ಎಂದು ಖಚಿತಪಡಿಸಿಕೊಂಡ ಬಳಿಕ ನೀವು ಮತ್ತೊಂದು ಸಲ ಸಬ್ಮಿಟ್ ಬಟನ್‌ ಅನ್ನು ಕ್ಲಿಕ್‌ ಮಾಡಬೇಕು. ಎಡಿಟ್‌ ಮಾಡಲು ಕೂಡ ಅವಕಾಶ ಇದೆ.

ಕೊನೆಗೆ ಸಬ್ಮಿಟ್ ಬಟನ್‌ ಕ್ಲಿಕ್‌ ಮಾಡಿದ ಬಳಿಕ ನಿಮಗೆ ಒಂದು ಸ್ವೀಕೃತಿ ಪತ್ರ ಅಥವಾ ಅಕ್ನಾಲೇಜ್‌ಮೆಂಟ್‌ ಬರಲಿದೆ. ಅದನ್ನು ನೀವು ಎಕ್ಸ್‌ಪೋರ್ಟ್‌ ಪಿಡಿಎಫ್‌ ಎಂದು ಆಯ್ಕೆ ಕೊಟ್ಟರೆ ಸ್ವೀಕೃತಿ ಪತ್ರ ನಿಮ್ಮ ಮೊಬೈಲ್‌ ಅಥವಾ ಕಂಪ್ಯೂಟರ್‌ನಲ್ಲಿ ಸೇವ್‌ ಆಗಲಿದೆ. ಮುಂದೆ ಅರ್ಜಿಯನ್ನು ಪರಿಶೀಲಿಸಲಿರುವ ಸರ್ಕಾರ ನಿಮಗೆ ಉಚಿತವಾಗಿ ವಿದ್ಯುತ್‌ ಅನ್ನು ನೀಡಲಿದೆ. ಸದ್ಯಕ್ಕೆ ಯಾವುದೇ ರೀತಿಯ ದಾಖಲೆಗಳನ್ನು ಅಪ್‌ಲೋಡ್‌ ಮಾಡುವಂತಿಲ್ಲ. ಮುಂದೆ ದಾಖಲೆಗಳನ್ನು ಪರಿಶೀಲಿಸುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಗೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್‌: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...