Homeಮುಖಪುಟಚತ್ತೀಸ್‌ಘಡದಿಂದ ಅಕ್ಕಿ, ತೆಲಂಗಾಣದಿಂದ ಭತ್ತ ಸಿಗಲಿದೆ: ಸಿಎಂ ಸಿದ್ದರಾಮಯ್ಯ

ಚತ್ತೀಸ್‌ಘಡದಿಂದ ಅಕ್ಕಿ, ತೆಲಂಗಾಣದಿಂದ ಭತ್ತ ಸಿಗಲಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿಗಾಗಿ ತೆಲಂಗಾಣ ಸರ್ಕಾರವು ಕರ್ನಾಟಕಕ್ಕೆ ಭತ್ತ ಕೊಡುವುದಾಗಿ ಮತ್ತು ಛತ್ತೀಸ​ಗಢ ​ಸರ್ಕಾರ ಕರ್ನಾಟಕಕ್ಕೆ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಜನರಿಗೆ 10 ಕೆ.ಜಿ ಅಕ್ಕಿ ನೀಡಲು 2 ಲಕ್ಷದ 29 ಸಾವಿರ ಮೆಟ್ರಿಕ್​ ಟನ್ ಅಕ್ಕಿ ಬೇಕು. ಪಂಜಾಬ್​ ಸರ್ಕಾರವೂ ನವೆಂಬರ್​ ತಿಂಗಳಿನಿಂದ ಅಕ್ಕಿ ಕೊಡುವುದಾಗಿ ತಿಳಿಸಿದೆ ಎಂದರು.

ಬಡವರ ಕಾರ್ಯಕ್ರಮಕ್ಕೆ ತೊಂದರೆ ನೀಡಬೇಕೆಂದು ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಅವರ ಬಳಿ ಲಕ್ಷಗಟ್ಟಲೆ ಟನ್ ಅಕ್ಕಿಯಿದೆ. ಖಾಸಗಿಯವರಿಗೆ ಹರಾಜು ಮಾಡುತ್ತಾರೆ. ಆದರೆ, ರಾಜ್ಯಗಳಿಗೆ ನೀಡುವುದಿಲ್ಲ ಎನ್ನುತ್ತಾರೆ. ಹಣ ನೀಡಿದರೂ ಕೊಡುವುದಿಲ್ಲ. ಇಂತಹ ದ್ವೇಷದ ರಾಜಕಾರಣ ಮಾಡುವವರನ್ನು ಬಡವರ ವಿರೋಧಿ ಎನ್ನಬೇಕು ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ 5 ಕೆಜಿ ಅಕ್ಕಿ ನೀಡಲು ಕೇಂದ್ರ ಆಹಾರ ಸಚಿವ ಪೀಯೂಷ್ ಗೋಯಲ್ ನಿರಾಕರಿಸಿದ್ದಾರೆ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಆರೋಪಿಸಿದ್ದಾರೆ.

ಇಂದು (ಜೂನ್ 23) ದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಕರ್ನಾಟಕಕ್ಕೆ ಅಕ್ಕಿ ಪೂರೈಸುವಂತೆ ಮನವಿ ಮಾಡಿದರು. ಆದರೆ, ಪಿಯೂಷ್ ಗೋಯಲ್ ಅವರು ಹಾರಿಕೆಯ ಉತ್ತರ ನೀಡಿದ್ದಾರೆ ಎಂದು ಮುನಿಯಪ್ಪ ಹೇಳಿದ್ದಾರೆ.

ಪಿಯೂಷ್ ಗೋಯಲ್ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುನಿಯಪ್ಪ, ”ಕೇಂದ್ರ ಸರ್ಕಾರದಲ್ಲಿ ಸಾಕಷ್ಟು ಅಕ್ಕಿ ದಾಸ್ತಾನು ಇದ್ದರೂ ರಾಜಕೀಯ ದುರುದ್ದೇಶದಿಂದ ಸಚಿವರು ನಮ್ಮ ಬೇಡಿಕೆಯನ್ನು ನಿರಾಕರಿಸಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

”ಅಕ್ಕಿ ಕೊಡಲು ಆಗುವುದಿಲ್ಲ ಎಂದು ಗೋಯಲ್​ ಹೇಳಿದ್ದಾರೆ. ಹೆಚ್ಚುವರಿ ಅಕ್ಕಿ ಪೂರೈಸಲು ಆಗಲ್ಲ ಎಂದಿದ್ದಾರೆ. ಹಣ ನೀಡುತ್ತೇವೆ ಅಕ್ಕಿ ಪೂರೈಸಿ ಎಂದು ಕೇಳಿದೆ. ಆದರೆ ಕೇಂದ್ರ ಸಚಿವ ಗೋಯಲ್ ಹಾರಿಕೆ ಉತ್ತರ ಕೊಟ್ಟಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

”ಎಷ್ಟೇ ಕಷ್ಟವಾದರೂ ಉಚಿತವಾಗಿ 10 ಕೆಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ. ಅಕ್ಕಿ ಕೊಡಲು ಸ್ವಲ್ಪ ವಿಳಂಬವಾಗಹುದು ಅಷ್ಟೇ. ಏಜೆನ್ಸಿಗಳ ಮೂಲಕ‌ ಅಕ್ಕಿ ಖರೀದಿಸುವ ಪ್ರಯತ್ನ ಮಾಡುತ್ತಿದ್ದೇವೆ. ರಾಜಕೀಯ ಉದ್ದೇಶದಿಂದ ಅಕ್ಕಿ ಪೂರೈಕೆ ಮಾಡುತ್ತಿಲ್ಲ. ಸ್ಟಾಕ್​ ಇದ್ದರೂ ಅಕ್ಕಿ ಕೊಡಲ್ಲ ಎನ್ನುವುದು ಎಷ್ಟರ ಮಟ್ಟಿಗೆ ಸರಿ? ಅಕ್ಕಿ ವಿಚಾರವಾಗಿ ನಮ್ಮ ದಾರಿಯನ್ನು ನಾವು ಕಂಡುಕೊಳ್ಳಬೇಕಿದೆ. ರಾಜಕೀಯ ದುರುದ್ದೇಶ ಇದೆ ಎನ್ನುವ ಭಾವನೆ ಬರುತ್ತಿದೆ. ಈ ವಾರದಲ್ಲಿ ಅಂತಿಮ ತೀರ್ಮಾನ ಆಗಲಿದೆ” ಎಂದು ಹೇಳಿದರು.

ಇದನ್ನೂ ಓದಿ: ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್ ಸಿದ್ಧಗೊಂಡಿದೆ: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...