Homeಕರ್ನಾಟಕಸಾರ್ವಜನಿಕರ ಒತ್ತಾಯಕ್ಕೆ ಮಣಿದು ತರಬೇತಿ ಶಿಬಿರದಿಂದ ವಿವಾದಿತರಾದ ರವಿಶಂಕರ್ ಗುರೂಜಿ, ಕರ್ಜಗಿಗೆ ಕೋಕ್

ಸಾರ್ವಜನಿಕರ ಒತ್ತಾಯಕ್ಕೆ ಮಣಿದು ತರಬೇತಿ ಶಿಬಿರದಿಂದ ವಿವಾದಿತರಾದ ರವಿಶಂಕರ್ ಗುರೂಜಿ, ಕರ್ಜಗಿಗೆ ಕೋಕ್

- Advertisement -
- Advertisement -

ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರ ನಡೆಸಲು ಕೆಲವು ವಿವಾದಿತ ವ್ಯಕ್ತಿಗಳನ್ನು ಅಹ್ವಾನಿಸಲು ಸಿದ್ದತೆ ನಡೆದಿತ್ತು. ಇದಕ್ಕೆ ಸಾರ್ವಜನಿಕ ವಲಯದಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಆಹ್ವಾನಿತರ ಪಟ್ಟಿಯಲ್ಲಿದ್ದ ರವಿಶಂಕರ್ ಗುರೂಜಿ ಮತ್ತು ಡಾ.ಗುರುರಾಜ ಕರ್ಜಗಿ ಅವರ ಹೆಸರನ್ನು ಕೈ ಬಿಡಲಾಗಿದೆ.

ಸಾರ್ವಜನಿಕರ ಭಾರೀ ವಿರೋಧವೇ ಈ ಇಬ್ಬರ ಹೆಸರನ್ನು ಕೈಬಿಡಲು ಕಾರಣ ಎಂದು ಹೇಳಲಾಗಿದೆ. ಗುರುರಾಜ ಕರ್ಜಗಿ ಅವರ ಬದಲಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಮತ್ತು ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರನ್ನು ಭಾಷಣಕ್ಕೆ ಆಹ್ವಾನಿಸಲಾಗಿದೆ.

ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರವು ಜೂನ್ 26 ರಿಂದ ಜೂನ್ 29 ವರೆಗೆ ನೆಲಮಂಗಲದ ಕ್ಷೇಮ ವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ, ಮಹಮ್ಮದ್ ಕುಂಞ, ಮತ್ತು ವೀಣಾ ಅವರು ನೂತನ ಶಾಸಕರಿಗೆ ಪ್ರವಚನ ನೀಡಲಿದ್ದಾರೆ.

‘ರವಿಶಂಕರ್ ಗುರೂಜಿ ಅವರನ್ನು ಆಹ್ವಾನಿಸಿಯೇ ಇಲ್ಲ’ ಎಂದ ಸ್ಪೀಕರ್ ಖಾದರ್

ಶಿಬಿರಕ್ಕೆ ಆಹ್ವಾನಿತರ ಪಟ್ಟಿಯಲ್ಲಿದ್ದ ವಿವಾದಿತ ವ್ಯಕ್ತಿ ರವಿಶಂಕರ್ ಗುರೂಜಿ ಹಾಗೂ ಡಾ.ಗುರುರಾಜ ಕರ್ಜಗಿ ಅವರನ್ನು ಕೈಬಿಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸ್ಪೀಕರ್ ಯುಟಿ ಖಾದರ್, ”ಆಧ್ಯಾತ್ಮಿಕ ಚಿಂತಕರಿಗೆ ಆಹ್ವಾನ ನೀಡಿದ್ದೇವೆ. ಎಲ್ಲಾ ಸಂಪನ್ಮೂಲ ವ್ಯಕ್ತಿಗಳು ಇನ್ನೂ ನಮಗೆ ಸಮ್ಮತಿ ಸೂಚಿಸಿಲ್ಲ. ಕೆಲವರು ಮಾತ್ರ ಒಪ್ಪಿಗೆ ನೀಡಿದ್ದಾರೆ. ಇನ್ನೂ ಯಾವುದೇ ತೀರ್ಮಾನವಾಗಿಲ್ಲ. ಈ ಬಗ್ಗೆ ಈಗಾಗಲೇ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣದಲ್ಲಿ ವ್ಯತಿರಿಕ್ತವಾದ ಮಾತುಗಳು ಕೇಳಿಬರುತ್ತಿದೆ. ತರಬೇತಿ ಶಿಬಿರವನ್ನು ನೋಡದೆ ಈಗಲೇ ಹೇಳಿಕೆಗಳನ್ನು ನೀಡುವುದು ಸರಿಯಲ್ಲ” ಎಂದು ಹೇಳಿದರು.

”ಆ ತರಬೇತಿ ಶಿಬಿರದಲ್ಲಿ ಏನಾದರೂ ಕುಂದುಕೊರತೆಗಳಿದ್ದರೆ, ಆ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದ್ದಲ್ಲಿ ಸರಿಪಡಿಸುತ್ತೇವೆ. ಈಗಲೇ ಪೂರ್ವಾಗ್ರಹ ಪೀಡಿತರಾಗಿ ಮಾತನಾಡುವುದು ತಪ್ಪು. ರವಿಶಂಕರ್ ಗುರೂಜಿಯವರನ್ನು ನಾನು ಭೇಟಿ ಮಾಡಿದ ತಕ್ಷಣ ನಾನು ತರಬೇತಿ ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ ಎಂದು ಗುಲ್ಲೆಬ್ಬಿಸುವುದು ತಪ್ಪು. ನನಗೆ ಹಿಂದಿನಿಂದಲೂ ಅವರೊಂದಿಗೆ ಆತ್ಮೀಯ ಒಡನಾಡಿಯಾಗಿದ್ದೇನೆ. ಅಲ್ಲದೆ ಅವರು ಈಗ ಅಮೆರಿಕದಲ್ಲಿ ದೊಡ್ಡಮಟ್ಟದ ಕಾರ್ಯಕ್ರಮದ ಹಿಂದಿದ್ದಾರೆ. ದೇಶದಲ್ಲಿಯೇ ಇಲ್ಲದ ಅವರ ಬಗ್ಗೆ ಇಲ್ಲಸಲ್ಲದ ಮಾತನಾಡುವುದು ತಪ್ಪು” ಎಂದರು.

”ಅಲ್ಲದೇ ಈ ಬಗ್ಗೆ ನನ್ನಲ್ಲಿ ಸ್ಪಷ್ಟೀಕರಣ ಕೇಳದೆ ಹೇಳಿಕೆಗಳನ್ನು ಕೊಡುವವರಿಗೆ ನಾನೇನು ಹೇಳಲು ಹೋಗುವುದಿಲ್ಲ. ಆದ್ದರಿಂದ ತರಬೇತಿ ಕ್ಯಾಂಪ್ ಮುಗಿದ ಬಳಿಕ ಅದರ ಸಾಧಕ ಬಾಧಕಗಳು, ಸಲಹೆ ಸೂಚನೆಗಳನ್ನು ನೀಡಿದರೆ ಅದನ್ನು ಸ್ವಾಗತಿಸಲು ತಯಾರಿದ್ದೇವೆ‌” ಎಂದು ಯು.ಟಿ.ಖಾದರ್ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಧಾರ್ಮಿಕ ಪ್ರತಿನಿಧಿಗಳಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ ಕೈಬಿಡಿ: ಸ್ಪೀಕರ್ ಖಾದರ್‌ಗೆ ‘ಜಾಗೃತ ನಾಗರಿಕರ ಒಕ್ಕೂಟ’ದ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...