Homeಕರ್ನಾಟಕಸಾರ್ವಜನಿಕರ ಒತ್ತಾಯಕ್ಕೆ ಮಣಿದು ತರಬೇತಿ ಶಿಬಿರದಿಂದ ವಿವಾದಿತರಾದ ರವಿಶಂಕರ್ ಗುರೂಜಿ, ಕರ್ಜಗಿಗೆ ಕೋಕ್

ಸಾರ್ವಜನಿಕರ ಒತ್ತಾಯಕ್ಕೆ ಮಣಿದು ತರಬೇತಿ ಶಿಬಿರದಿಂದ ವಿವಾದಿತರಾದ ರವಿಶಂಕರ್ ಗುರೂಜಿ, ಕರ್ಜಗಿಗೆ ಕೋಕ್

- Advertisement -
- Advertisement -

ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರ ನಡೆಸಲು ಕೆಲವು ವಿವಾದಿತ ವ್ಯಕ್ತಿಗಳನ್ನು ಅಹ್ವಾನಿಸಲು ಸಿದ್ದತೆ ನಡೆದಿತ್ತು. ಇದಕ್ಕೆ ಸಾರ್ವಜನಿಕ ವಲಯದಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಆಹ್ವಾನಿತರ ಪಟ್ಟಿಯಲ್ಲಿದ್ದ ರವಿಶಂಕರ್ ಗುರೂಜಿ ಮತ್ತು ಡಾ.ಗುರುರಾಜ ಕರ್ಜಗಿ ಅವರ ಹೆಸರನ್ನು ಕೈ ಬಿಡಲಾಗಿದೆ.

ಸಾರ್ವಜನಿಕರ ಭಾರೀ ವಿರೋಧವೇ ಈ ಇಬ್ಬರ ಹೆಸರನ್ನು ಕೈಬಿಡಲು ಕಾರಣ ಎಂದು ಹೇಳಲಾಗಿದೆ. ಗುರುರಾಜ ಕರ್ಜಗಿ ಅವರ ಬದಲಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಮತ್ತು ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರನ್ನು ಭಾಷಣಕ್ಕೆ ಆಹ್ವಾನಿಸಲಾಗಿದೆ.

ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರವು ಜೂನ್ 26 ರಿಂದ ಜೂನ್ 29 ವರೆಗೆ ನೆಲಮಂಗಲದ ಕ್ಷೇಮ ವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ, ಮಹಮ್ಮದ್ ಕುಂಞ, ಮತ್ತು ವೀಣಾ ಅವರು ನೂತನ ಶಾಸಕರಿಗೆ ಪ್ರವಚನ ನೀಡಲಿದ್ದಾರೆ.

‘ರವಿಶಂಕರ್ ಗುರೂಜಿ ಅವರನ್ನು ಆಹ್ವಾನಿಸಿಯೇ ಇಲ್ಲ’ ಎಂದ ಸ್ಪೀಕರ್ ಖಾದರ್

ಶಿಬಿರಕ್ಕೆ ಆಹ್ವಾನಿತರ ಪಟ್ಟಿಯಲ್ಲಿದ್ದ ವಿವಾದಿತ ವ್ಯಕ್ತಿ ರವಿಶಂಕರ್ ಗುರೂಜಿ ಹಾಗೂ ಡಾ.ಗುರುರಾಜ ಕರ್ಜಗಿ ಅವರನ್ನು ಕೈಬಿಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸ್ಪೀಕರ್ ಯುಟಿ ಖಾದರ್, ”ಆಧ್ಯಾತ್ಮಿಕ ಚಿಂತಕರಿಗೆ ಆಹ್ವಾನ ನೀಡಿದ್ದೇವೆ. ಎಲ್ಲಾ ಸಂಪನ್ಮೂಲ ವ್ಯಕ್ತಿಗಳು ಇನ್ನೂ ನಮಗೆ ಸಮ್ಮತಿ ಸೂಚಿಸಿಲ್ಲ. ಕೆಲವರು ಮಾತ್ರ ಒಪ್ಪಿಗೆ ನೀಡಿದ್ದಾರೆ. ಇನ್ನೂ ಯಾವುದೇ ತೀರ್ಮಾನವಾಗಿಲ್ಲ. ಈ ಬಗ್ಗೆ ಈಗಾಗಲೇ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣದಲ್ಲಿ ವ್ಯತಿರಿಕ್ತವಾದ ಮಾತುಗಳು ಕೇಳಿಬರುತ್ತಿದೆ. ತರಬೇತಿ ಶಿಬಿರವನ್ನು ನೋಡದೆ ಈಗಲೇ ಹೇಳಿಕೆಗಳನ್ನು ನೀಡುವುದು ಸರಿಯಲ್ಲ” ಎಂದು ಹೇಳಿದರು.

”ಆ ತರಬೇತಿ ಶಿಬಿರದಲ್ಲಿ ಏನಾದರೂ ಕುಂದುಕೊರತೆಗಳಿದ್ದರೆ, ಆ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದ್ದಲ್ಲಿ ಸರಿಪಡಿಸುತ್ತೇವೆ. ಈಗಲೇ ಪೂರ್ವಾಗ್ರಹ ಪೀಡಿತರಾಗಿ ಮಾತನಾಡುವುದು ತಪ್ಪು. ರವಿಶಂಕರ್ ಗುರೂಜಿಯವರನ್ನು ನಾನು ಭೇಟಿ ಮಾಡಿದ ತಕ್ಷಣ ನಾನು ತರಬೇತಿ ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ ಎಂದು ಗುಲ್ಲೆಬ್ಬಿಸುವುದು ತಪ್ಪು. ನನಗೆ ಹಿಂದಿನಿಂದಲೂ ಅವರೊಂದಿಗೆ ಆತ್ಮೀಯ ಒಡನಾಡಿಯಾಗಿದ್ದೇನೆ. ಅಲ್ಲದೆ ಅವರು ಈಗ ಅಮೆರಿಕದಲ್ಲಿ ದೊಡ್ಡಮಟ್ಟದ ಕಾರ್ಯಕ್ರಮದ ಹಿಂದಿದ್ದಾರೆ. ದೇಶದಲ್ಲಿಯೇ ಇಲ್ಲದ ಅವರ ಬಗ್ಗೆ ಇಲ್ಲಸಲ್ಲದ ಮಾತನಾಡುವುದು ತಪ್ಪು” ಎಂದರು.

”ಅಲ್ಲದೇ ಈ ಬಗ್ಗೆ ನನ್ನಲ್ಲಿ ಸ್ಪಷ್ಟೀಕರಣ ಕೇಳದೆ ಹೇಳಿಕೆಗಳನ್ನು ಕೊಡುವವರಿಗೆ ನಾನೇನು ಹೇಳಲು ಹೋಗುವುದಿಲ್ಲ. ಆದ್ದರಿಂದ ತರಬೇತಿ ಕ್ಯಾಂಪ್ ಮುಗಿದ ಬಳಿಕ ಅದರ ಸಾಧಕ ಬಾಧಕಗಳು, ಸಲಹೆ ಸೂಚನೆಗಳನ್ನು ನೀಡಿದರೆ ಅದನ್ನು ಸ್ವಾಗತಿಸಲು ತಯಾರಿದ್ದೇವೆ‌” ಎಂದು ಯು.ಟಿ.ಖಾದರ್ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಧಾರ್ಮಿಕ ಪ್ರತಿನಿಧಿಗಳಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ ಕೈಬಿಡಿ: ಸ್ಪೀಕರ್ ಖಾದರ್‌ಗೆ ‘ಜಾಗೃತ ನಾಗರಿಕರ ಒಕ್ಕೂಟ’ದ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...