Homeಮುಖಪುಟಅಮೆರಿಕಾದಲ್ಲಿ ಮೋದಿಗೆ ಪ್ರಶ್ನೆ ಕೇಳಿದ ಪತ್ರಕರ್ತೆಗೆ ಟ್ವಿಟರ್‌ನಲ್ಲಿ ಹಿಂದುತ್ವವಾದಿಗಳಿಂದ ನಿಂದನೆ

ಅಮೆರಿಕಾದಲ್ಲಿ ಮೋದಿಗೆ ಪ್ರಶ್ನೆ ಕೇಳಿದ ಪತ್ರಕರ್ತೆಗೆ ಟ್ವಿಟರ್‌ನಲ್ಲಿ ಹಿಂದುತ್ವವಾದಿಗಳಿಂದ ನಿಂದನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿಯ ಸಂದರ್ಭದಲ್ಲಿ ಭಾರತದಲ್ಲಿ ಅಲ್ಪಸಂಖ್ಯಾತರ ತಾರತಮ್ಯದ ಕುರಿತು ವಾಲ್ ಸ್ಟ್ರೀಟ್ ಜರ್ನಲ್‌ನ ಶ್ವೇತಭವನದ ವರದಿಗಾರ್ತಿ ಸಬ್ರಿನಾ ಸಿದ್ದಿಕಿ ಅವರು ಪ್ರಶ್ನೆಯನ್ನು ಕೇಳಿದ್ದರು. ಆ ಬಳಿಕ ಅವರ ಮೇಲೆ ಹಿಂದುತ್ವದವಾದಿಗಳು ಟ್ವಿಟರ್‌ನಲ್ಲಿ ದಾಳಿ ನಡೆಸಿದ್ದಾರೆ.

ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ನೇತೃತ್ವದಲ್ಲಿ ಪತ್ರಕರ್ತೆ ಸಿದ್ದಿಕಿ ಅವರ ಮೇಲೆ ಆನ್‌ಲೈನ್ ದಾಳಿ ನಡೆಯುತ್ತಿದ್ದು, ”ಸಬ್ರಿನಾ ಸಿದ್ದಿಕಿ ಮುಸ್ಲಿಂ ಸಮುದಾಯದವಳಾಗಿದ್ದು, ಪಾಕಿಸ್ತಾನದೊಂದಿಗಿನ ಸಂಪರ್ಕವನ್ನು ಹೊಂದಿದ್ದಾಳೆ. ಅವರು ಟೂಲ್‌ಕಿಟ್ ಗ್ಯಾಂಗ್‌ನ ಭಾಗವಾಗಿದ್ದಾರೆ” ಎಂದು ಮಾಳವಿಯ ಟ್ವೀಟ್ ಮಾಡಿದ್ದಾರೆ.

ಸಬ್ರಿನಾ ಸಿದ್ದಿಕಿ ಮೋದಿಯವರನ್ನು ಕೇಳಿದ ಪ್ರಶ್ನೆ:

”ಭಾರತವು ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ಎಂದು ದೀರ್ಘಕಾಲ ಹೆಮ್ಮೆಪಡುತ್ತಿದೆ, ಆದರೆ ನಿಮ್ಮ ಸರ್ಕಾರವು ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ತಾರತಮ್ಯ ಮಾಡಿದೆ ಮತ್ತು ಅದರ ಟೀಕಾಕಾರರನ್ನು ಮೌನಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಹೇಳುವ ಅನೇಕ ಮಾನವ ಹಕ್ಕುಗಳ ಗುಂಪುಗಳಿವೆ. ನಿಮ್ಮ ದೇಶದಲ್ಲಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ಹಕ್ಕುಗಳನ್ನು ಸುಧಾರಿಸಲು ಮತ್ತು ಎತ್ತಿಹಿಡಿಯಲು ನೀವು ಮತ್ತು ನಿಮ್ಮ ಸರ್ಕಾರವು ಯಾವ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧರಿದ್ದೀರಿ?” ಎಂದು ಪ್ರಶ್ನೆ ಮಾಡಿದ್ದಾರೆ.

ಭಾರತದಲ್ಲಿ ಮೋದಿಯವರು ಪ್ರಧಾನಿಯಾದ ಅವಧಿಯಲ್ಲಿ ಅಲ್ಪಸಂಖ್ಯಾತರ ಮೇಲೆ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪತ್ರಕರ್ತೆ ಸಬ್ರಿನಾ ಸಿದ್ದಿಕಿ ಆರೋಪ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮೋದಿ, ”ತಮ್ಮ ಆಡಳಿತದಲ್ಲಿ ಅಲ್ಪಸಂಖ್ಯಾತರಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಭಾವಿಸಿರುವುದು ”ಆಶ್ಚರ್ಯ” ತಂದಿದೆ. ಪ್ರಜಾಪ್ರಭುತ್ವ ನಮ್ಮ ಆತ್ಮ. ಪ್ರಜಾಪ್ರಭುತ್ವ ನಮ್ಮ ರಕ್ತನಾಳಗಳಲ್ಲಿ ಹರಿಯುತ್ತದೆ. ನಾವು ಪ್ರಜಾಪ್ರಭುತ್ವವನ್ನು ಬದುಕುತ್ತೇವೆ… ನಮ್ಮ ಸರ್ಕಾರವು ಪ್ರಜಾಪ್ರಭುತ್ವದ ಮೂಲ ತತ್ವಗಳನ್ನು ಅನುಸರಿಸುತ್ತಿದೆ… ನಮ್ಮಲ್ಲಿ ಜಾತಿ, ಧರ್ಮ, ಧರ್ಮ, ಲಿಂಗ ತಾರತಮ್ಯಕ್ಕೆ ಅವಕಾಶವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತ ಸರ್ಕಾರ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸದಿದ್ದರೆ ದೇಶ ವಿಭಜನೆಯಾಗಬಹುದು: ಬರಾಕ್ ಒಬಾಮಾ ಎಚ್ಚರಿಕೆ

ಪತ್ರಕತೆ ಮೋದಿ ಅವರಿಗೆ ಪ್ರಶ್ನೆ ಕೇಳಿದ ಬೆನ್ನಲ್ಲೇ ಬಿಜೆಪಿ ಪರ ಮತ್ತು ಹಿಂದುತ್ವವಾದಿಗಳು ಟ್ವಿಟರ್‌ನಲ್ಲಿ ಸಿದ್ದಿಕಿ ಅವರನ್ನು ‘ಪಾಕಿಸ್ತಾನಿ ಇಸ್ಲಾಮಿಸ್ಟ್’ ಎಂದು ಲೇಬಲ್ ಮಾಡಿದವು. ಈ ಪ್ರಶ್ನೆಯನ್ನು ಮೋದಿಯ ಮುಂದೆ ಕೇಳಲು ಆಕೆಗೆ ಉದ್ಯೋಗದಾತ ಅವಕಾಶ ನೀಡುವ ಪಿತೂರಿ ಎಂದಿದ್ದಾರೆ. ”ಅವಳು ಭಾರತದ ಮೇಲೆ ಮಾತ್ರ ದಾಳಿ ಮಾಡುತ್ತಾಳೆ. ದ್ವೇಷವು ಪಾಕಿಸ್ತಾನಿಗಳ ಡಿಎನ್‌ಎಯಲ್ಲಿದೆ” ಎಂದು ಟ್ವೀಟ್ ಮಾಡಿದ್ದಾರೆ.

OpIndiaದಂತಹ ಬಿಜೆಪಿ ಪರ ವೆಬ್‌ಸೈಟ್‌ಗಳು ಆಕೆ ”ಪಾಕಿಸ್ತಾನಿ ಪೋಷಕರ” ಮಗಳು ಮತ್ತು ”ಇಸ್ಲಾಮಿಸ್ಟ್‌ಗಳ ಹಕ್ಕುಗಳನ್ನು ಪ್ರತಿಧ್ವನಿಸುತ್ತಿದ್ದಾರೆ” ಎಂಬ ವರದಿಯನ್ನು ಪ್ರಕಟಿಸುವ ಮೂಲಕ ಒಂದು ಹೆಜ್ಜೆ ಮುಂದಿಟ್ಟಿವೆ.

”ಭಾರತದಲ್ಲಿ ಮುಸ್ಲಿಮರ ಮೇಲಿನ ಕಿರುಕುಳವನ್ನು ಆರೋಪಿಸಿದ ಪತ್ರಕರ್ತೆ ಸಬ್ರಿನಾ ಸಿದ್ದಿಕ್ ಬೇರೆ ಯಾರೂ ಅಲ್ಲ … ಪಾಕಿಸ್ತಾನಿ ಪೋಷಕರ ಮಗಳು” ಎಂದು ಟ್ವೀಟ್ ಮಾಡಿದ್ದಾರೆ.

ತನ್ನನ್ನು ‘ಭಾರತ ವಿರೋಧಿ’ ಎಂದು ಕರೆಯುವ ಆನ್‌ಲೈನ್ ದಾಳಿಗೆ ಸಿದ್ದಿಕಿ ಪ್ರತ್ಯತ್ತರವಾಗಿ ಟ್ವೀಟ್ ಮಾಡಿದ್ದಾರೆ. ಭಾರತ ಮೂಲದ ತನ್ನ ತಂದೆಯೊಂದಿಗೆ ಭಾರತೀಯ ಕ್ರಿಕೆಟ್ ತಂಡವನ್ನು ಹುರಿದುಂಬಿಸುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ”ಕೆಲವರು ನನ್ನ ವೈಯಕ್ತಿಕ ಹಿನ್ನೆಲೆಯನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ. ಹಾಗಾಗಿ ಸಂಪೂರ್ಣ ಚಿತ್ರವನ್ನು ಒದಗಿಸುವುದು ಸರಿ ಎನಿಸುತ್ತದೆ” ಎಂದು ಅವರು ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...