Homeಮುಖಪುಟಜೆಪಿ ನಡ್ಡಾ ಬೆದರಿಕೆಯಂತೆ ಕರ್ನಾಟಕಕ್ಕೆ ಅಕ್ಕಿ ನಿರಾಕರಿಸಿದ ಕೇಂದ್ರ ಸರ್ಕಾರ: ಜೈರಾಮ್ ರಮೇಶ್ ವಾಗ್ದಾಳಿ

ಜೆಪಿ ನಡ್ಡಾ ಬೆದರಿಕೆಯಂತೆ ಕರ್ನಾಟಕಕ್ಕೆ ಅಕ್ಕಿ ನಿರಾಕರಿಸಿದ ಕೇಂದ್ರ ಸರ್ಕಾರ: ಜೈರಾಮ್ ರಮೇಶ್ ವಾಗ್ದಾಳಿ

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜನರಿಗೆ ಬೆದರಿಕೆ ಹಾಕಿದ್ದರು. ಅದರಂತೆ ಇದೀಗ ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿಯನ್ನು ನೀಡಲು ಕೇಂದ್ರ ಸರ್ಕಾರ ನಿರಾಕರಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿರುವುದನ್ನು ಪ್ರಸ್ತಾಪಿಸಿ ಟ್ವಿಟ್ ಮಾಡಿರುವ ಅವರು, ”ಜನವರಿ 1, 2023 ರಿಂದ ಮೇ 24, 2023 ರವರೆಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಕರ್ನಾಟಕವೊಂದರಲ್ಲೇ ಎಲ್ಲಾ ರಾಜ್ಯ ಸರ್ಕಾರಗಳು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ದೇಶೀಯ) ಅಡಿಯಲ್ಲಿ ಪ್ರತಿ ಕ್ವಿಂಟಲ್‌ಗೆ 13,400 ದರದಲ್ಲಿ ಸಂಗ್ರಹಿಸಿದ ಶೇ 95 ಕ್ಕಿಂತ ಹೆಚ್ಚು ಅಕ್ಕಿಯನ್ನು ತೆಗೆದುಕೊಂಡಿದೆ. ಬಹುಶಃ ಇದು ಮೋದಿ ಜೀಯವರ ಆಶೀರ್ವಾದದಿಂದಲೇ ಆಗಿರಬೇಕು” ಎಂದು ಟೀಕಿಸಿದ್ದಾರೆ.

”ಬಡವರು ತಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಕಾಂಗ್ರೆಸ್‌ಗೆ ಮತ ಚಲಾಯಿಸಿದ ಏಕೈಕ ಕಾರಣಕ್ಕೆ ಶಿಕ್ಷೆ ನೀಡುತ್ತಿರುವುದು ಕರ್ನಾಟಕದ ದೌರ್ಭಾಗ್ಯವಲ್ಲದೆ ಮತ್ತೇನಲ್ಲ” ಎಂದು ರಮೇಶ್ ವಾಗ್ದಾಳಿ ನಡೆಸಿದ್ದಾರೆ.

”ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬೆನ್ನಲ್ಲೇ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಬೆದರಿಕೆಯಂತೆ ಈ ಮೋದಿ ಜೀ ಅವರು ಆಶೀರ್ವಾದವನ್ನು ಅತ್ಯಂತ ವೇಗದಲ್ಲಿ ಹಿಂತೆಗೆದುಕೊಳ್ಳಲಾಗಿದೆ” ಎಂದು ಕಿಡಿಕಾರಿದ್ದಾರೆ.

”ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕುಗಳನ್ನು ರಕ್ಷಿಸಲು ಸಾಧ್ಯವಿರುವ ಎಲ್ಲವನ್ನೂ ಪ್ರಯತ್ನಗಳನ್ನು ಮಾಡುತ್ತದೆ. ಜತೆಗೆ, ಪ್ರತಿಯೊಬ್ಬರಿಗೂ ತಲಾ 10 ಕೆ.ಜಿ. ಅಕ್ಕಿ ಉಚಿತವಾಗಿ ನೀಡಲು ಅನ್ನ ಭಾಗ್ಯ 2.0 ಖಾತ್ರಿಯನ್ನು ಶೀಘ್ರವಾಗಿ ಜಾರಿಗೆ ತರಲಾಗುತ್ತದೆ” ಎಂದು ರಮೇಶ್ ಭರವಸೆ ನೀಡಿದ್ದಾರೆ.

ಮುನಿಯಪ್ಪ ಮೂರು ದಿನ ಕಾದ ಬಳಿಕ ಕೇಂದ್ರ ಸಚಿವರ ಭೇಟಿ 

ಜೂನ್ 23ರಂದು ದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರನ್ನು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಭೇಟಿ ಮಾಡಿದರು. ಈ ವೇಳೆ ಕರ್ನಾಟಕಕ್ಕೆ ಅಕ್ಕಿ ಪೂರೈಸುವಂತೆ ಮನವಿ ಮಾಡಿದರು. ಆದರೆ, ಪಿಯೂಷ್ ಗೋಯಲ್ ಅವರು ಹಾರಿಕೆಯ ಉತ್ತರ ನೀಡಿದ್ದಾರೆ ಎಂದು ಮುನಿಯಪ್ಪ ಹೇಳಿದ್ದಾರೆ.

ಪಿಯೂಷ್ ಗೋಯಲ್ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಮುನಿಯಪ್ಪ, ”ಕೇಂದ್ರ ಸರ್ಕಾರದಲ್ಲಿ ಸಾಕಷ್ಟು ಅಕ್ಕಿ ದಾಸ್ತಾನು ಇದ್ದರೂ ರಾಜಕೀಯ ದುರುದ್ದೇಶದಿಂದ ಸಚಿವರು ನಮ್ಮ ಬೇಡಿಕೆಯನ್ನು ನಿರಾಕರಿಸಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

”ಅಕ್ಕಿ ಕೊಡಲು ಆಗುವುದಿಲ್ಲ ಎಂದು ಗೋಯಲ್​ ಹೇಳಿದ್ದಾರೆ. ಹೆಚ್ಚುವರಿ ಅಕ್ಕಿ ಪೂರೈಸಲು ಆಗಲ್ಲ ಎಂದಿದ್ದಾರೆ. ಹಣ ನೀಡುತ್ತೇವೆ ಅಕ್ಕಿ ಪೂರೈಸಿ ಎಂದು ಕೇಳಿದೆ. ಆದರೆ ಕೇಂದ್ರ ಸಚಿವ ಗೋಯಲ್ ಹಾರಿಕೆ ಉತ್ತರ ಕೊಟ್ಟಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

”ಎಷ್ಟೇ ಕಷ್ಟವಾದರೂ ಉಚಿತವಾಗಿ 10 ಕೆಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ. ಅಕ್ಕಿ ಕೊಡಲು ಸ್ವಲ್ಪ ವಿಳಂಬವಾಗಹುದು ಅಷ್ಟೇ. ಏಜೆನ್ಸಿಗಳ ಮೂಲಕ‌ ಅಕ್ಕಿ ಖರೀದಿಸುವ ಪ್ರಯತ್ನ ಮಾಡುತ್ತಿದ್ದೇವೆ. ರಾಜಕೀಯ ಉದ್ದೇಶದಿಂದ ಅಕ್ಕಿ ಪೂರೈಕೆ ಮಾಡುತ್ತಿಲ್ಲ. ಸ್ಟಾಕ್​ ಇದ್ದರೂ ಅಕ್ಕಿ ಕೊಡಲ್ಲ ಎನ್ನುವುದು ಎಷ್ಟರ ಮಟ್ಟಿಗೆ ಸರಿ? ಅಕ್ಕಿ ವಿಚಾರವಾಗಿ ನಮ್ಮ ದಾರಿಯನ್ನು ನಾವು ಕಂಡುಕೊಳ್ಳಬೇಕಿದೆ. ರಾಜಕೀಯ ದುರುದ್ದೇಶ ಇದೆ ಎನ್ನುವ ಭಾವನೆ ಬರುತ್ತಿದೆ. ಈ ವಾರದಲ್ಲಿ ಅಂತಿಮ ತೀರ್ಮಾನ ಆಗಲಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...