Homeಕರ್ನಾಟಕಗೃಹಜ್ಯೋತಿ ಅರ್ಜಿ ನೋಂದಣಿ: ನಕಲಿ ಲಿಂಕ್‌ಗಳ ಬಗ್ಗೆ ಬೆಸ್ಕಾಂ ಎಚ್ಚರಿಕೆ, ಇಲ್ಲಿದೆ ಅಸಲಿ ಲಿಂಕ್..

ಗೃಹಜ್ಯೋತಿ ಅರ್ಜಿ ನೋಂದಣಿ: ನಕಲಿ ಲಿಂಕ್‌ಗಳ ಬಗ್ಗೆ ಬೆಸ್ಕಾಂ ಎಚ್ಚರಿಕೆ, ಇಲ್ಲಿದೆ ಅಸಲಿ ಲಿಂಕ್..

- Advertisement -
- Advertisement -

ಗೃಹಜ್ಯೋತಿ ಯೋಜನೆ ಫಲಾನುಭವಿಗಳಾಗಲು ಅರ್ಜಿ ನೋಂದಣಿ ಪ್ರಕ್ರಿಯೆ ರಾಜ್ಯಾದ್ಯಂತ ಆರಂಭವಾಗಿದೆ. ಆರಂಭದಲ್ಲಿ ಕೆಲವು ತೊಂದರೆಗಳಾದವು ಆದರೆ ಇದೀಗ ರಾಜ್ಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಈ ನಡುವೆ ಸೈಬರ್ ವಂಚಕರ ಹಾವಳಿ ಜೋರಾಗಿದೆ. ಹಾಗಾಗಿ ಬೆಸ್ಕಾಂ ಅಧಿಕಾರಿಗಳು ಗ್ರಾಹಕರಿಗೆ ನಕಲಿ ಲಿಂಕ್‌ಗಳು ಹರಿದಾಡುತ್ತಿರುವ ಬಗ್ಗೆ ಎಚ್ಚರಿಕೆ ಇರುವಂತೆ ಮನವಿ ಮಾಡಿದ್ದಾರೆ.

ಸೈಬರ್ ವಂಚಕರು ಗೃಹಜ್ಯೋತಿ ಯೋಜನೆ ಅರ್ಜಿ ನೋಂದಣಿಯ ನಕಲಿ ಲಿಂಕ್‌ಗಳನ್ನು ಸೃಷ್ಟಿಸಿದ್ದು. ಆ ಲಿಂಕ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ. ಒಂದುವೇಳೆ ನೀವು ಅಪ್ಪಿ ತಪ್ಪಿ ಆ ಲಿಂಕ್‌ಗಳನ್ನು ಕ್ಲಿಕ್ ಮಾಡಿದರೆ, ನಿಮ್ಮ ವೈಯಕ್ತಿಕ ವಿವರಗಳು, ಬ್ಯಾಂಕ್‌ ಖಾತೆಗೂ ಕನ್ನ ಹಾಕುವ ಸಾಧ್ಯತೆ ಇರುತ್ತದೆ.

ಗ್ರಾಹಕರಿಗೆ ಬೆಸ್ಕಾಂ ಮನವಿ

ನಕಲಿ ಲಿಂಕ್‌ಗಳು ಹರಿದಾಡುತ್ತಿರುವ ಬಗ್ಗೆ ಬೆಸ್ಕಾಂ ಗ್ರಾಹಕರಿಗೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದೆ. ಅಧಿಕೃತ ವಬ್‌ಸೈಟ್‌ನಲ್ಲಿ ಮಾತ್ರ ನೋಂದಣಿ ಮಾಡಿಕೊಳ್ಳುವಂತೆ ತಿಳಿಸಿದೆ. ಇನ್ನು ನೋಂದಣಿ ಮಾಡಲು ಗೊತ್ತಿರುವವರು, ಅಕ್ಕ ಪಕ್ಕದವರಿಗೆ, ಗೊತ್ತಿಲ್ಲದವರಿಗೆ ನೋಂದಣಿ ಮಾಡಲು ಸಹಾಯ ಮಾಡುವಂತೆ ಮನವಿ ಮಾಡಿದೆ.

https://sevasindhugs.karnataka.gov.in/ ಈ ವೆಬ್‌ಸೈಟ್‌ನಲ್ಲಿ ಮಾತ್ರ ನೀವು ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಳ್ಳಬೇಕು. ಸಾಕಷ್ಟು ಜನ ಈ ನೋಂದಣಿ ಮಾಡುತ್ತಿರುವ ಕಾರಣ, ಕೆಲವೊಮ್ಮೆ ಸರ್ವರ್ ಬ್ಯುಸಿ ಬರುತ್ತದೆ. ಹಾಗಂತ ನೀವು ಇನ್ಯಾವುದೋ ವೆಬ್‌ಸೈಟ್‌ಗೆ ತೆರಳಿದರೆ ನಿಮ್ಮ ಆಧಾರ್, ಗ್ರಾಹಕರ ಐಡಿ ವಿವರಗಳು ಸೈಬರ್ ಕಳ್ಳರ ಪಾಲಾಗಲಿವೆ.

ಗೃಹಲಕ್ಷ್ಮಿ, ಯುವ ನಿಧಿ ನೋಂದಣಿ ಬಗ್ಗೆ ಇರಲಿ ಜಾಗ್ರತೆ ಗೃಹ ಜ್ಯೋತಿ ಯೋಜನೆಯಲ್ಲಿ ನೀವು ಆಧಾರ್, ಮೊಬೈಲ್ ಸಂಖ್ಯೆ, ಗ್ರಾಹಕರ ಐಡಿ ವಿವರಗಳನ್ನು ಮಾತ್ರ ನೀಡಬೇಕು. ಆದರೆ ಗೃಹ ಲಕ್ಷ್ಮೀ ಯೋಜನೆ ಮತ್ತು ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸುವಾಗ ನಿಮ್ಮ ಬ್ಯಾಂಕ್ ಖಾತೆ, ಆಧಾರ್ ನಂಬರ್ ಸೇರಿದಂತೆ ಹಲವು ಮಹತ್ವದ ಮಾಹಿತಿ ನೀಡಬೇಕಾಗುತ್ತದೆ.

ಗೃಹ ಲಕ್ಷ್ಮಿ ಮತ್ತು ಯುವ ನಿಧಿ ಯೋಜನೆಗೆ ಇನ್ನೂ ಅರ್ಜಿ ಸ್ವೀಕರಿಸುತ್ತಿಲ್ಲ. ವಾಟ್ಸಾಪ್ ಸೇರಿದಂತೆ ಹಲವು ಕಡೆ ಬರುವ ಸುಳ್ಳು ಮಾಹಿತಿಗೆ ಮರುಳಾಗಿ ನಕಲಿ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಿ, ವಿವರಗಳನ್ನು ನಮೂದಿಸಿದರೆ ವಂಚಕರು ನಿಮ್ಮ ಬ್ಯಾಂಕ್‌ ಖಾತೆಗೆ ಕನ್ನ ಹಾಕುವ ಅಪಾಯ ಹೆಚ್ಚಾಗಿದೆ. ಅಧಿಕೃತ ಆದೇಶ ಬರುವವರೆಗೂ ಈ ರೀತಿಯ ಯಾವುದೇ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ, ಸರ್ಕಾರವೇ ನೋಂದಣಿ ಬಗ್ಗೆ ಸೂಚನೆಗಳನ್ನು ನೀಡಲಿದೆ.

ಎಲ್ಲ ಸರ್ಕಾರದ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಸದ್ಯ ಉಚಿತ ವಿದ್ಯುತ್ ಪಡೆಯುವ ಗೃಹ ಜ್ಯೋತಿಗಾಗಿ ಮಾತ್ರ ಅರ್ಜಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಪ್ರತಿ ತಿಂಗಳು 2000 ರೂಪಾಯಿ ನೀಡುವ ಗೃಹಲಕ್ಷ್ಮಿ, ನಿರುದ್ಯೋಗಿ ಪದವಿಧರರಿಗೆ 3000 ಸಾವಿರ ರೂಪಾಯಿ ನೀಡುವ ಯುವ ನಿಧಿ ಯೋಜನೆಗಳಿಗೆ ಇನ್ನೂ ಅರ್ಜಿ ಸ್ವೀಕಾರ ಪ್ರಕ್ರಿಯೆ ಆರಂಭವಾಗಿಲ್ಲ. ಈ ಬಗ್ಗೆ ವಾಟ್ಸಾಪ್, ಇನ್‌ಸ್ಟಾಗ್ರಾಂ, ಟ್ವಿಟರ್, ಟೆಲಿಗ್ರಾಂ, ಮೆಸೇಜ್ ಯಾವುದೇ ಮಾಧ್ಯಮಗಳಲ್ಲಿ ಲಿಂಕ್ ಕಂಡರು ಕ್ಲಿಕ್ ಮಾಡಬೇಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...