Homeಕರ್ನಾಟಕರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಸ್ಥಾನಕ್ಕೆ ಬಿಜೆಪಿಯಲ್ಲಿ ಭಾರೀ ಪೈಪೋಟಿ; ದಲಿತರಿಗೆ ಅವಕಾಶ ಯಾಕಿಲ್ಲ?- ಜಿಗಜಿಣಗಿ ಪ್ರಶ್ನೆ

ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಸ್ಥಾನಕ್ಕೆ ಬಿಜೆಪಿಯಲ್ಲಿ ಭಾರೀ ಪೈಪೋಟಿ; ದಲಿತರಿಗೆ ಅವಕಾಶ ಯಾಕಿಲ್ಲ?- ಜಿಗಜಿಣಗಿ ಪ್ರಶ್ನೆ

- Advertisement -
- Advertisement -

ರಾಜ್ಯದಲ್ಲಿ ಚುನಾವಣೆ ಮುಗಿದು, ಸರ್ಕಾರ ರಚನೆಯಾಗಿ ತಿಂಗಳು ಕಳೆದರೂ ಬಿಜೆಪಿಯಲ್ಲಿ ಇನ್ನೂ ವಿರೋಧ ಪಕ್ಷದ ಸ್ಥಾನ ಭರ್ತಿ ಆಗಿಲ್ಲ, ಮತ್ತೊಂದೆಡೆ ಹೀನಾಯವಾಗಿ ಸೋತಿರುವ ಬಿಜೆಪಿಯು, ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆಯ ಚರ್ಚೆಗಳು ಜೋರಾಗಿದೆ. ಇದೀಗ ರಾಜ್ಯ ಬಿಜೆಪಿ ನಾಯಕರಲ್ಲಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆಯ ಪ್ರತಿಪಕ್ಷ ನಾಯಕನ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಮುಂದುವರಿದಿದೆ.

ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರಬಲ ಆಕಾಂಕಿಗಳಾಗಿದ್ದು, ಉಭಯ ನಾಯಕರು ಈ ಬಗ್ಗೆ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ. ಇದರ ಹೊರತಾಗಿ, ಆರ್.ಅಶೋಕ್, ಅಶ್ವತ್ಥ ನಾರಾಯಣ ಅವರ ಹೆಸರೂ ವಿಪಕ್ಷ ನಾಯಕನ ಸ್ಥಾನಕ್ಕೆ ಕೇಳಿಬಂದಿದೆ.

ಇನ್ನು ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಯ ಬೇಡಿಕೆ ಪಕ್ಷದ ಆಂತರಿಕ ವಲಯಗಳಲ್ಲಿ ಕೇಳಿಬಂದಿದೆ. ಮಾಜಿ ಸಚಿವ ವಿ. ಸೋಮಣ್ಣ ಹಾಗೂ ಹಿರಿಯ ಸಂಸದ ರಮೇಶ್ ಜಿಗಜಿಣಗಿ ತಾವು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳೆಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಜುಲೈ 3ರಂದು ವಿಧಾನ ಸಭೆಯ ಜಂಟಿ ಅಧಿವೇಶನ ನಡೆಯಲಿರುವುದರಿಂದ ಅದಕ್ಕೂ ಮುನ್ನ ಬಿಜೆಪಿ ಹೈಕಮಾಂಡ್ ವಿಪಕ್ಷ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಬಹುತೇಕ ಖಚಿತವಾಗಿದೆ.

ದಲಿತರು ಬಿಜೆಪಿ ಅಧ್ಯಕ್ಷ ಆಗಬಾರದೇ? ನಾನೂ ಆಕಾಂಕ್ಷಿ ಎಂದ ಜಿಗಜಿಣಗಿ

ಮಾಜಿ ಸಚಿವ ವಿ ಸೋಮಣ್ಣ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಆಗುವ ಬಯಕೆಯನ್ನು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಹೊರ ಹಾಕಿದ್ದಾರೆ. ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಯಾರು ಆಗಬೇಕು ಎಂಬುದನ್ನು ಬಹಿರಂಗ ಚರ್ಚೆ ಮಾಡುವುದು ಸರಿಯಲ್ಲ. ನಮ್ಮದು ರಾಷ್ಟ್ರೀಯ ಪಕ್ಷ ರಾಷ್ಟ್ರೀಯ ನಾಯಕರ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡ್ತಾರೆ. ಎಲ್ಲರಿಗೂ ರಾಜ್ಯಾಧ್ಯಕ್ಷ ಆಗಬೇಕು ಎಂಬ ಆಶಯ ಇರುವುದು ಸಹಜ. ನಾನೂ ಬಿಜೆಪಿಯ ಹಿರಿಯ ನಾಯಕ ಅವಕಾಶ ಕೊಟ್ಟರೆ ನಾನು ಕೂಡ ರಾಜ್ಯಾಧ್ಯಕ್ಷನಾಗುವೆ. ಬಿಜೆಪಿಯಲ್ಲಿ ದಲಿತರು ರಾಜ್ಯದ ಅಧ್ಯಕ್ಷ ಆಗಬಾರದೇ? ಎಂದು ಪ್ರಶ್ನಿಸಿದರು.

ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಕೇಳಿದ್ದೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ, ಎಲ್ಲಿ ಕೇಳಬೇಕು ಎಂಬುದು ನನಗೆ ಗೊತ್ತಿದೆ. ನನಗೂ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಕೋರುತ್ತೇನೆ ಎಂದು ರಮೇಶ ಜಿಗಜಿಣಗಿ ತಮ್ಮ ಆಶಯ ವ್ಯಕ್ತಪಡಿಸಿದರು.

ರಮೇಶ್ ಜಿಗಜಿಣಗಿ, ವಿಜಯಪುರ ಸಂಸದ

ನನಗಿಂತ ಬುದ್ಧಿವಂತರು ಇದ್ದರೆ ಅವರಿಗೆ ಅಧ್ಯಕ್ಷ ಸ್ಥಾನ ನೀಡಲಿ: ಸೋಮಣ್ಣ

”ಪಕ್ಷ ನೀಡಿದ ಕೆಲಸ ಒಪ್ಪಿಕೊಂಡ ಕಾರಣಕ್ಕಾಗಿ ನಾನು ಈಗ ನಿರುದ್ಯೋಗಿಯಾಗಿದ್ದೇನೆ. ಆದರೆ, ಸುಮ್ಮನೆ ಕೂರುವವನಲ್ಲ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿರ್ವಹಿಸಲು ಸಿದ್ಧ” ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದರು.

ಬಿಜೆಪಿ ರಾಜ್ಯ ಘಟಕದ ಕಚೇರಿಯಲ್ಲಿ ಭಾನುವಾರ ನಡೆದ ಪಕ್ಷದ ಕಾನೂನು ಪ್ರಕೋಷ್ಠದ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ”ಬಿಜೆಪಿ ಸೇರಿದ ಬಳಿಕ ಅನೇಕ ಸವಾಲುಗಳನ್ನು ಎದುರಿಸಿದ್ದೇನೆ. ಯಾವುದಕ್ಕೂ ವಿಚಲಿತನಾಗಿಲ್ಲ. ನಾನು ಸನ್ಯಾಸಿ ಅಲ್ಲ ಎಂದು ಈಗಾಗಲೇ ಹೇಳಿರುವೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೂ ಹೌದು ಎಂಬುದನ್ನು ಬಹಿರಂಗಪಡಿಸಿದ್ದೇನೆ” ಎಂದರು.

”ಅಧಿಕಾರ ಇರಲಿ, ಇಲ್ಲದಿರಲಿ ಜನರ ಜತೆಗಿದ್ದು ಕೆಲಸ ಮಾಡುತ್ತೇನೆ. ಒಳಗೊಂದು, ಹೊರಗೊಂದು ಮಾತನಾಡಲು ನನಗೆ ಬರುವುದಿಲ್ಲ. ಹಿಂದೆ, ಮುಂದೆ ಮಾತನಾಡಿದವರ ನೀತಿಪಾಠ ನನಗೆ ಗೊತ್ತಿದೆ. ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳುವವರೆಗೆ ಕಾಯೋಣ. ನನಗಿಂತ ಬುದ್ಧಿವಂತರು ಯಾರಾದರೂ ಇದ್ದರೆ ಅವರಿಗೆ ಅಧ್ಯಕ್ಷ ಸ್ಥಾನ ನೀಡಲಿ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

”ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರೆ ನಾನು ನಿರಾಯಾಸವಾಗಿ ಗೆಲ್ಲುತ್ತಿದ್ದೆ. ಪಕ್ಷದ ವರಿಷ್ಠರ ಸೂಚನೆಯಂತೆ ‘ಫೋರ್’, ‘ಸೆಕ್ಸ್’ ಹೊಡೆಯಲು ಹೋಗಿ ಎರಡೂ ಕಡೆ ಸೋತು, ನಿರುದ್ಯೋಗಿಯಾಗಿದ್ದೇನೆ” ಎಂದು ಬೇಸರ ವ್ಯಕ್ತಪಡಿಸಿದರು.

ವಿ ಸೋಮಣ್ಣ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...