Homeಮುಖಪುಟಬ್ರಿಜ್‌ಭೂಷಣ್ ವಿರುದ್ಧದ ಹೋರಾಟವು ಇನ್ಮುಂದೆ ಬೀದಿಗಳಲ್ಲಿ ಅಲ್ಲ, ನ್ಯಾಯಾಲಯದಲ್ಲಿ ಮುಂದುವರಿಯುತ್ತದೆ: ಕುಸ್ತಿಪಟುಗಳು

ಬ್ರಿಜ್‌ಭೂಷಣ್ ವಿರುದ್ಧದ ಹೋರಾಟವು ಇನ್ಮುಂದೆ ಬೀದಿಗಳಲ್ಲಿ ಅಲ್ಲ, ನ್ಯಾಯಾಲಯದಲ್ಲಿ ಮುಂದುವರಿಯುತ್ತದೆ: ಕುಸ್ತಿಪಟುಗಳು

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕುಸ್ತಿಪಟುಗಳು ತಮ್ಮ ಹೋರಾಟವನ್ನು ಮುಂದುವರೆಸಲಿದ್ದಾರೆ. ಈ ಬಾರಿಯ ಹೋರಾಟ ಬೀದಿಗಳಲ್ಲಿ ಅಲ್ಲ, ನ್ಯಾಯಾಲಯದಲ್ಲಿ ಎಂದು ಭಾನುವಾರ ಹೇಳಿದ್ದಾರೆ.

ಲೈಂಗಿಕ ಕಿರುಕುಳದ ಆರೋಪಿ ಸಿಂಗ್‌ನನ್ನು ಬಂಧಿಸುವಂತೆ ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಮತ್ತು ಎರಡು ಬಾರಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಭಾರತದ ಅಗ್ರ ಕುಸ್ತಿಪಟುಗಳು ಏಪ್ರಿಲ್‌ನಿಂದ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.

ಜೂನ್ 7ರಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿಯಾದ ಕುಸ್ತಿಪಟುಗಳು ಸಿಂಗ್ ವಿರುದ್ಧದ ತನಿಖೆಯನ್ನು ಜೂನ್ 15 ರೊಳಗೆ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು. ಅದರಂತೆ ಜೂನ್ 15 ರಂದು, ದೆಹಲಿ ಪೊಲೀಸರು ಉತ್ತರ ಪ್ರದೇಶದ ಬಿಜೆಪಿ ಸಂಸದರೂ ಆಗಿರುವ ಕ್ರೀಡಾ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷ ಬ್ರಿಜ್ಭೂ ವಿರುದ್ಧ ಆರೋಪಪಟ್ಟಿ ಸಲ್ಲಿಸಿದರು.

ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳದ ದೂರುಗಳ ವಿಷಯದಲ್ಲಿ ಸರ್ಕಾರವು ಮಾತುಕತೆಯ ಸಮಯದಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನೀಡಿದ ಭರವಸೆಗಳಿಗೆ ಅನುಗುಣವಾಗಿ, ದೆಹಲಿ ಪೊಲೀಸರು ಆರು ಮಹಿಳಾ ಕುಸ್ತಿಪಟುಗಳು ದಾಖಲಿಸಿದ ಎಫ್‌ಐಆರ್‌ಗಳ ಆಧಾರದ ಮೇಲೆ ತನಿಖೆಯನ್ನು ಪೂರ್ಣಗೊಳಿಸಿದರು ಮತ್ತು ಆರೋಪಪಟ್ಟಿ ಸಲ್ಲಿಸಿದರು. ”ನಮಗೆ ಈಗ ನ್ಯಾಯ ಸಿಗುವವರೆಗೂ ಈ ಹೋರಾಟವು ನ್ಯಾಯಾಲಯದಲ್ಲಿ ಮುಂದುವರಿಯುತ್ತದೆ ಬೀದಿಗಳಲ್ಲಿ ಅಲ್ಲ” ಎಂದು ಜೂನ್ 15ರಂದು ಫೋಗಟ್, ಪುನಿಯಾ ಮತ್ತು ಮಲಿಕ್ ಒಂದೇ ರೀತಿಯ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.

”ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಹೊಸ ಅಧ್ಯಕ್ಷ ಮತ್ತು ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲು ಚುನಾವಣೆ ನಡೆಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ. ಜುಲೈ 11ರಂದು ಚುನಾವಣೆಗಳು ನಡೆಯಲಿವೆ ಮತ್ತು ಈ ನಿಟ್ಟಿನಲ್ಲಿ ಸರ್ಕಾರದ ಭರವಸೆಗಳ ಅನುಷ್ಠಾನಕ್ಕಾಗಿ ನಾವು ಕಾಯುತ್ತಿದ್ದೇವೆ” ಎಂದು ಕುಸ್ತಿಪಟುಗಳು ಹೇಳಿದ್ದಾರೆ.

ಬಿಜೆಪಿ ಸಂಸದ ಸಿಂಗ್ ವಿರುದ್ಧದ ಎಫ್‌ಐಆರ್‌ಗಳ ವಿವರಗಳು ಅವರು ಕನಿಷ್ಠ ಇಬ್ಬರು ಮಹಿಳಾ ಕುಸ್ತಿಪಟುಗಳಿಗೆ ವೃತ್ತಿಪರ ಸಹಾಯ ಮಾಡುವುದಾಗಿ ಲೈಂಗಿಕತೆಗೆ ಸಹಕರಿಸುವ ಬೇಡಿಕೆಯಿಟ್ಟಿದ್ದಾರೆ ಮತ್ತು ಅರ್ಧ ಡಜನ್‌ಗಿಂತಲೂ ಹೆಚ್ಚು ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ತೋರಿಸುತ್ತದೆ.

ಆಪಾದನೆ ಮಾಡಿದ್ದ ದೂರುದಾರರಲ್ಲಿ ಒಬ್ಬರು ಅಪ್ರಾಪ್ತರಾಗಿದ್ದ ಕಾರಣಕ್ಕೆ ದೆಹಲಿ ಪೊಲೀಸರು ಈ ಹಿಂದೆ ಸಿಂಗ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಆದರೆ ಜೂನ್ 15 ರಂದು, ”ಸಿಂಗ್ ವಿರುದ್ಧ ಯಾವುದೇ ಪುರಾವೆಗಳಿಲ್ಲ” ಎಂದು ಹೇಳಿ ಪ್ರಕರಣವನ್ನು ರದ್ದುಗೊಳಿಸಲು ಪೊಲೀಸರು ಶಿಫಾರಸು ಮಾಡಿದರು.

”ಅಪ್ರಾಪ್ತ ಬಾಲಕಿ ಮತ್ತು ಆಕೆಯ ತಂದೆಯ ಹೇಳಿಕೆಗಳ ಆಧಾರದ ಮೇಲೆ ಪೋಕ್ಸೋ ಪ್ರಕರಣದ ರದ್ದತಿ ವರದಿಯನ್ನು ದಾಖಲಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಜುಲೈ 4 ರಂದು ದೆಹಲಿ ನ್ಯಾಯಾಲಯವು ವಿಚಾರಣೆ ನಡೆಸಲಿದೆ.

ಜೂನ್ 18 ರಂದು, ಅಪ್ರಾಪ್ತ ಕ್ರೀಡಾಪಟು ತನ್ನ ಕುಟುಂಬಕ್ಕೆ ಬೆದರಿಕೆ ಹಾಕಿದ್ದರಿಂದ ತನ್ನ ಹೇಳಿಕೆಯನ್ನು ಬದಲಾಯಿಸಿದ್ದಾರೆ ಎಂದು ಮಲಿಕ್ ಹೇಳಿದ್ದರು.

”ಕುಸ್ತಿಯಲ್ಲಿ ತೊಡಗುವವರೆಲ್ಲರೂ ಬಡ ಕುಟುಂಬದಿಂದ ಬಂದವರು. ವ್ಯವಸ್ಥೆಯ ವಿರುದ್ಧ ಮತ್ತು ಅಂತಹ ಶಕ್ತಿಯುತ ವ್ಯಕ್ತಿಯ ವಿರುದ್ಧ ಮಾತನಾಡಲು ಅವರಿಗೆ ಸಾಧ್ಯವಿಲ್ಲ” ಎಂದು ಮಲಿಕ್ ಹೇಳಿದರು.

ದೆಹಲಿ ನ್ಯಾಯಾಲಯವು ಗುರುವಾರ ಸಿಂಗ್ ವಿರುದ್ಧದ ಪ್ರಕರಣವನ್ನು ಸಂಸದರು ಮತ್ತು ಶಾಸಕರ ಪ್ರಕರಣಗಳನ್ನು ವ್ಯವಹರಿಸುವ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರ ನ್ಯಾಯಾಲಯಕ್ಕೆ ವರ್ಗಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...