Homeಮುಖಪುಟಮಹಾರಾಷ್ಟ್ರ: ಗೋಮಾಂಸ ಸಾಗಣೆ ಶಂಕೆ ಮೇಲೆ ಮುಸ್ಲಿಂ ವ್ಯಕ್ತಿಯನ್ನು ಕೊಂದ ಹಿಂದುತ್ವ ಸಂಘಟನೆಯ ಗುಂಪು

ಮಹಾರಾಷ್ಟ್ರ: ಗೋಮಾಂಸ ಸಾಗಣೆ ಶಂಕೆ ಮೇಲೆ ಮುಸ್ಲಿಂ ವ್ಯಕ್ತಿಯನ್ನು ಕೊಂದ ಹಿಂದುತ್ವ ಸಂಘಟನೆಯ ಗುಂಪು

- Advertisement -
- Advertisement -

ಗೋಮಾಂಸವನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಶಂಕೆಯ ಮೇಲೆ ಗೋರಕ್ಷಕರ ಗುಂಪೊಂದು ಶನಿವಾರ ರಾತ್ರಿ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿಯಾಗಿದೆ.

ಮುಂಬೈನ ಕುರ್ಲಾದ ಖುರೇಷಿ ನಗರದ ನಿವಾಸಿ ಅಫಾನ್ ಅಬ್ದುಲ್ ಮಜಿದ್ ಅನ್ಸಾರಿ ಎಂಬಾತ ಬಲಿಯಾದ ವ್ಯಕ್ತಿ. ಅನ್ಸಾರಿ ಮತ್ತು ಆತನ ಸ್ನೇಹಿತ ನಾಸಿರ್ ಹುಸೇನ್ ಶೇಖ್ ಅಹ್ಮದ್‌ನಗರದಿಂದ ಮುಂಬೈಗೆ ಕಾರಿನಲ್ಲಿ 450 ಕೆಜಿ ಮಾಂಸವನ್ನು ಸಾಗಿಸುತ್ತಿದ್ದರು. ಈ ವೇಳೆ ಗೋರಕ್ಷಕರು ಅವರನ್ನು ಅಡ್ಡಗಟ್ಟಿ ಥಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಫಾನ್ ಅಬ್ದುಲ್ ಮಜಿದ್ ಅನ್ಸಾರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ನಾಸಿಕ್ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಶಹಾಜಿ ಉಮಾಪ್ ಟೈಮ್ಸ್ ಆಫ್ ಇಂಡಿಯಾಗೆ ಮಾಹಿತಿ ನೀಡಿದ್ದು, ”ಶೇಖ್‌ ಅವರು ಸಿನ್ನಾರ್ ಪಟ್ಟಣದ ಟೋಲ್ ಗೇಟ್ ತಲುಪಿದಾಗ, ಕಾರಿನಲ್ಲಿ ಮಾಂಸವನ್ನು ಯಾರೋ ನೋಡಿದ್ದಾರೆ. ಆಗ ಯಾರೋ ದಾಳಿಕೋರರಿಗೆ ಮಾಹಿತಿ ನೀಡಿದ್ದಾರೆ. ನಾವು ಆ ಬಗ್ಗೆ ತನಿಖೆ ನಡೆಸುತ್ತಿದ್ದೇವೆ” ಎಂದು ಉಮಾಪ್ ಹೇಳಿದ್ದಾರೆ.

ಸಬ್ ಇನ್ಸ್‌ಪೆಕ್ಟರ್ ಸುನಿಲ್ ಭಮ್ರೆ ಮಾತನಾಡಿ, ”ಘಟನಾ ಸ್ಥಳವನ್ನು ತಲುಪಿದಾಗ, ಕಾರು ಸಂಪೂರ್ಣವಾಗಿ ಹಾನಿಗೊಳಗಾದ ಸ್ಥಿತಿಯಲ್ಲಿ ಇದ್ದದ್ದು ಗಮನಕ್ಕೆ ಬಂದಿದೆ. ಇಬ್ಬರು ಗಾಯಾಳುಗಳು ಕಾರಿನೊಳಗೆ ಇದ್ದರು. ತಕ್ಷಣ ನಾವು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದೇವೆ. ಆದರೆ, ಚಿಕಿತ್ಸೆ ವೇಳೆ ಅವರಲ್ಲಿ ಒಬ್ಬರು ಸಾವನ್ನಪ್ಪಿದರು” ಎಂದು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿರುವ ನಾಸಿರ್ ಹುಸೇನ್ ಶೇಖ್ ಅವರು ತಮ್ಮ ಮೇಲೆ ದಾಳಿ ನಡೆದ ಬಗ್ಗೆ ದೂರು ನೀಡಿದ್ದಾರೆ. ಅವರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಇದುವರೆಗೆ 11 ಜನರನ್ನು ಬಂಧಿಸಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

ಪೊಲೀಸರು ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಸ್ಕ್ಯಾನ್ ಮಾಡಿದ್ದಾರೆ ಮತ್ತು ಅವರ ಮೊಬೈಲ್ ಫೋನ್ ಲೊಕೇಶನ್ ಆಧರಿಸಿ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಮಾಪ್ ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿದರು.

”ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಹತ್ತು ಜನರನ್ನು ಬಂಧಿಸಲಾಗಿದೆ. ಗಾಯಾಳು ನೀಡಿದ ದೂರಿನ ಮೇರೆಗೆ ಕೊಲೆ ಮತ್ತು ಗಲಭೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಸಂತ್ರಸ್ತರು ನಿಜವಾಗಿಯೂ ಗೋಮಾಂಸ ಸಾಗಿಸುತ್ತಿದ್ದಾರೋ ಇಲ್ಲವೋ ಎಂಬುದು ಪ್ರಯೋಗಾಲಯದ ವರದಿ ಬಂದ ನಂತರವಷ್ಟೇ ತಿಳಿಯಲಿದೆ” ಎಂದು ಪೊಲೀಸರು ಹೇಳಿದ್ದಾರೆ.

ಕಳೆದ ವಾರ ಇದೇ ನಾಸಿಕ್ ಜಿಲ್ಲಯಲ್ಲಿ ಜಾನುವಾರುಗಳನ್ನು ಸಾಯಿಸಲು ಸಾಗಿಸುತ್ತಿದ್ದಾರೆ ಎನ್ನುವ ಶಂಕೆಯ ಮೇರೆಗೆ ಮುಸ್ಲಿಂ ವ್ಯಕ್ತಿಯನ್ನು ಕೊಲ್ಲಲಾಗಿತ್ತು. ಲುಕ್ಮಾನ್ ಅನ್ಸಾರಿಯನ್ನು ಕೊಂದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ, ಅವರಲ್ಲಿ ಕೆಲವರು ಹಿಂದುತ್ವ ಸಂಘಟನೆಯಾದ ರಾಷ್ಟ್ರೀಯ ಬಜರಂಗದಳದೊಂದಿಗೆ ಸಂಬಂಧ ಹೊಂದಿದ್ದಾರೆ.

ಜೂನ್ 8 ರಂದು ಅನ್ಸಾರಿ ಮತ್ತು ಅವರ ಇಬ್ಬರು ಸಹಚರರಾದ ಅಕ್ವೀಲ್ ಗವಂಡಿ ಮತ್ತು ಪಪ್ಪು ಪಡ್ಡಿ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಈ ಘಟನೆ ನಡೆದಿತ್ತು. ನಾಸಿಕ್‌ನ ಇಗತ್‌ಪುರಿ ಪ್ರದೇಶದಲ್ಲಿ ಹಿಂದುತ್ವ ಸಂಘಟನೆಯ 10ರಿಂದ 15 ಮಂದಿ ಅವರನ್ನು ಅಡ್ಡಗಟ್ಟಿದ್ದರು. ಗವಂಡಿ ಓಡಿಹೋದರು, ಉಳಿದ ಇಬ್ಬರನ್ನು ಗೋರಕ್ಷಕರು ಥಳಿಸಿದ್ದರು. ಈ ಘಟನೆ ಬೆನ್ನಲ್ಲೇ ಇದೀಗ ಗೋಮಾಂಸ ಕಳ್ಳಸಾಗಣೆ ಆರೋಪದ ಮೇಲೆ ನಾಸಿಕ್ ಜಿಲ್ಲೆಯಲ್ಲಿಹಿಂದುತ್ವ ಸಂಘಟನೆಯವರು ಗೋರಕ್ಷಣೆಯ ಹೆಸರಿನಲ್ಲಿ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...