Homeಮುಖಪುಟಮಹಾರಾಷ್ಟ್ರ: ಗೋಮಾಂಸ ಸಾಗಣೆ ಶಂಕೆ ಮೇಲೆ ಮುಸ್ಲಿಂ ವ್ಯಕ್ತಿಯನ್ನು ಕೊಂದ ಹಿಂದುತ್ವ ಸಂಘಟನೆಯ ಗುಂಪು

ಮಹಾರಾಷ್ಟ್ರ: ಗೋಮಾಂಸ ಸಾಗಣೆ ಶಂಕೆ ಮೇಲೆ ಮುಸ್ಲಿಂ ವ್ಯಕ್ತಿಯನ್ನು ಕೊಂದ ಹಿಂದುತ್ವ ಸಂಘಟನೆಯ ಗುಂಪು

- Advertisement -
- Advertisement -

ಗೋಮಾಂಸವನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಶಂಕೆಯ ಮೇಲೆ ಗೋರಕ್ಷಕರ ಗುಂಪೊಂದು ಶನಿವಾರ ರಾತ್ರಿ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿಯಾಗಿದೆ.

ಮುಂಬೈನ ಕುರ್ಲಾದ ಖುರೇಷಿ ನಗರದ ನಿವಾಸಿ ಅಫಾನ್ ಅಬ್ದುಲ್ ಮಜಿದ್ ಅನ್ಸಾರಿ ಎಂಬಾತ ಬಲಿಯಾದ ವ್ಯಕ್ತಿ. ಅನ್ಸಾರಿ ಮತ್ತು ಆತನ ಸ್ನೇಹಿತ ನಾಸಿರ್ ಹುಸೇನ್ ಶೇಖ್ ಅಹ್ಮದ್‌ನಗರದಿಂದ ಮುಂಬೈಗೆ ಕಾರಿನಲ್ಲಿ 450 ಕೆಜಿ ಮಾಂಸವನ್ನು ಸಾಗಿಸುತ್ತಿದ್ದರು. ಈ ವೇಳೆ ಗೋರಕ್ಷಕರು ಅವರನ್ನು ಅಡ್ಡಗಟ್ಟಿ ಥಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಫಾನ್ ಅಬ್ದುಲ್ ಮಜಿದ್ ಅನ್ಸಾರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ನಾಸಿಕ್ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಶಹಾಜಿ ಉಮಾಪ್ ಟೈಮ್ಸ್ ಆಫ್ ಇಂಡಿಯಾಗೆ ಮಾಹಿತಿ ನೀಡಿದ್ದು, ”ಶೇಖ್‌ ಅವರು ಸಿನ್ನಾರ್ ಪಟ್ಟಣದ ಟೋಲ್ ಗೇಟ್ ತಲುಪಿದಾಗ, ಕಾರಿನಲ್ಲಿ ಮಾಂಸವನ್ನು ಯಾರೋ ನೋಡಿದ್ದಾರೆ. ಆಗ ಯಾರೋ ದಾಳಿಕೋರರಿಗೆ ಮಾಹಿತಿ ನೀಡಿದ್ದಾರೆ. ನಾವು ಆ ಬಗ್ಗೆ ತನಿಖೆ ನಡೆಸುತ್ತಿದ್ದೇವೆ” ಎಂದು ಉಮಾಪ್ ಹೇಳಿದ್ದಾರೆ.

ಸಬ್ ಇನ್ಸ್‌ಪೆಕ್ಟರ್ ಸುನಿಲ್ ಭಮ್ರೆ ಮಾತನಾಡಿ, ”ಘಟನಾ ಸ್ಥಳವನ್ನು ತಲುಪಿದಾಗ, ಕಾರು ಸಂಪೂರ್ಣವಾಗಿ ಹಾನಿಗೊಳಗಾದ ಸ್ಥಿತಿಯಲ್ಲಿ ಇದ್ದದ್ದು ಗಮನಕ್ಕೆ ಬಂದಿದೆ. ಇಬ್ಬರು ಗಾಯಾಳುಗಳು ಕಾರಿನೊಳಗೆ ಇದ್ದರು. ತಕ್ಷಣ ನಾವು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದೇವೆ. ಆದರೆ, ಚಿಕಿತ್ಸೆ ವೇಳೆ ಅವರಲ್ಲಿ ಒಬ್ಬರು ಸಾವನ್ನಪ್ಪಿದರು” ಎಂದು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿರುವ ನಾಸಿರ್ ಹುಸೇನ್ ಶೇಖ್ ಅವರು ತಮ್ಮ ಮೇಲೆ ದಾಳಿ ನಡೆದ ಬಗ್ಗೆ ದೂರು ನೀಡಿದ್ದಾರೆ. ಅವರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಇದುವರೆಗೆ 11 ಜನರನ್ನು ಬಂಧಿಸಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

ಪೊಲೀಸರು ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಸ್ಕ್ಯಾನ್ ಮಾಡಿದ್ದಾರೆ ಮತ್ತು ಅವರ ಮೊಬೈಲ್ ಫೋನ್ ಲೊಕೇಶನ್ ಆಧರಿಸಿ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಮಾಪ್ ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿದರು.

”ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಹತ್ತು ಜನರನ್ನು ಬಂಧಿಸಲಾಗಿದೆ. ಗಾಯಾಳು ನೀಡಿದ ದೂರಿನ ಮೇರೆಗೆ ಕೊಲೆ ಮತ್ತು ಗಲಭೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಸಂತ್ರಸ್ತರು ನಿಜವಾಗಿಯೂ ಗೋಮಾಂಸ ಸಾಗಿಸುತ್ತಿದ್ದಾರೋ ಇಲ್ಲವೋ ಎಂಬುದು ಪ್ರಯೋಗಾಲಯದ ವರದಿ ಬಂದ ನಂತರವಷ್ಟೇ ತಿಳಿಯಲಿದೆ” ಎಂದು ಪೊಲೀಸರು ಹೇಳಿದ್ದಾರೆ.

ಕಳೆದ ವಾರ ಇದೇ ನಾಸಿಕ್ ಜಿಲ್ಲಯಲ್ಲಿ ಜಾನುವಾರುಗಳನ್ನು ಸಾಯಿಸಲು ಸಾಗಿಸುತ್ತಿದ್ದಾರೆ ಎನ್ನುವ ಶಂಕೆಯ ಮೇರೆಗೆ ಮುಸ್ಲಿಂ ವ್ಯಕ್ತಿಯನ್ನು ಕೊಲ್ಲಲಾಗಿತ್ತು. ಲುಕ್ಮಾನ್ ಅನ್ಸಾರಿಯನ್ನು ಕೊಂದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ, ಅವರಲ್ಲಿ ಕೆಲವರು ಹಿಂದುತ್ವ ಸಂಘಟನೆಯಾದ ರಾಷ್ಟ್ರೀಯ ಬಜರಂಗದಳದೊಂದಿಗೆ ಸಂಬಂಧ ಹೊಂದಿದ್ದಾರೆ.

ಜೂನ್ 8 ರಂದು ಅನ್ಸಾರಿ ಮತ್ತು ಅವರ ಇಬ್ಬರು ಸಹಚರರಾದ ಅಕ್ವೀಲ್ ಗವಂಡಿ ಮತ್ತು ಪಪ್ಪು ಪಡ್ಡಿ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಈ ಘಟನೆ ನಡೆದಿತ್ತು. ನಾಸಿಕ್‌ನ ಇಗತ್‌ಪುರಿ ಪ್ರದೇಶದಲ್ಲಿ ಹಿಂದುತ್ವ ಸಂಘಟನೆಯ 10ರಿಂದ 15 ಮಂದಿ ಅವರನ್ನು ಅಡ್ಡಗಟ್ಟಿದ್ದರು. ಗವಂಡಿ ಓಡಿಹೋದರು, ಉಳಿದ ಇಬ್ಬರನ್ನು ಗೋರಕ್ಷಕರು ಥಳಿಸಿದ್ದರು. ಈ ಘಟನೆ ಬೆನ್ನಲ್ಲೇ ಇದೀಗ ಗೋಮಾಂಸ ಕಳ್ಳಸಾಗಣೆ ಆರೋಪದ ಮೇಲೆ ನಾಸಿಕ್ ಜಿಲ್ಲೆಯಲ್ಲಿಹಿಂದುತ್ವ ಸಂಘಟನೆಯವರು ಗೋರಕ್ಷಣೆಯ ಹೆಸರಿನಲ್ಲಿ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...