Homeಕರ್ನಾಟಕಬಾಂಬೆ ಟೀಮ್‌ನಿಂದಾಗಿ ಬಿಜೆಪಿಯಲ್ಲಿ ಶಿಸ್ತು ಮಾಯವಾಗಿದೆ: ಕೆಎಸ್‌ ಈಶ್ವರಪ್ಪ ಗರಂ

ಬಾಂಬೆ ಟೀಮ್‌ನಿಂದಾಗಿ ಬಿಜೆಪಿಯಲ್ಲಿ ಶಿಸ್ತು ಮಾಯವಾಗಿದೆ: ಕೆಎಸ್‌ ಈಶ್ವರಪ್ಪ ಗರಂ

- Advertisement -
- Advertisement -

ಬಾಂಬೆ ಟೀಮ್‌ಅನ್ನು ಬಿಜೆಪಿಗೆ ಕರೆ ತಂದಿರುವುದೇ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಲು ಕಾರಣವಾಯಿತು ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಹೀನಾಯವಾಗಿ ಸೋತಿರುವುದಕ್ಕೆ ಪಕ್ಷದ ನಾಯಕರು ಆತ್ಮಾವಲೋಕನ ಸಭೆ ನಡೆಸುತ್ತಿದ್ದು, ಇಂದು ಹುಬ್ಬಳ್ಳಿಯಲ್ಲಿ ಕೆ.ಎಸ್.ಈಶ್ವರಪ್ಪ ಮಾತನಾಡುತ್ತಾ, ”ಬಿಜೆಪಿಯಲ್ಲಿ ಸದ್ಯ ಅಶಿಸ್ತು ಮೂಡಿದೆ, ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸಿಗರು ಬಂದ ನಂತರ ಪಕ್ಷದಲ್ಲಿ ಅಲ್ಪಸ್ವಲ್ಪ ಅಶಿಸ್ತು ಮೂಡಿದ್ದು, ಅಶಿಸ್ತು ತೋರುವವರ ಬಾಲವನ್ನು ಕಟ್‌ ಮಾಡುತ್ತೇವೆ” ಎಂದು ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ.

”ಬಿಜೆಪಿಯಲ್ಲಿ ಬಹಿರಂಗವಾಗಿ ಅಡ್ಜೆಸ್ಟ್​ಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗುತ್ತಿರುವುದು ದುರ್ದೈವದ ಸಂಗತಿ. ಇಂತಹದ್ದೆನ್ನಲ್ಲ ನಾಲ್ಕು ಗೋಡೆ ಮಧ್ಯೆ ಕೂತು ಮಾತನಾಡಬೇಕು. ಬಹಿರಂಗ ಹೇಳಿಕೆ ಕೊಡುವ ಬಗ್ಗೆ ಪಕ್ಷದ ನಾಯಕರೊಂದಿಗೆ ನಾನು ಮಾತನಾಡುತ್ತೇನೆ” ಎಂದರು.

”ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಆಪರೇಷನ್ ಕಮಲ ಮುಳುವಾಯ್ತು. ಕಾಂಗ್ರೆಸ್ ನಾಯಕರನ್ನು ಪಕ್ಷಕ್ಕೆ ಕರೆದುಕೊಂಡು ಬಂದಿರುವುದಕ್ಕೆ ಸಮಸ್ಯೆ ಅನುಭವಿಸುತ್ತಿದ್ದೇವೆ” ಎನ್ನುತ್ತಾ ಪರೋಕ್ಷವಾಗಿ ಆಪರೇಷನ್ ಕಮಲದ ವಿರುದ್ದ ಈಶ್ವರಪ್ಪ ಗರಂ ಆದರು.

2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡವಲು ಬಿಜೆಪಿ ಪಕ್ಷವು ಕಾಂಗ್ರೆಸ್-ಜೆಡಿಎಸ್ ಪಕ್ಷದ 16 ಶಾಸಕರ ರಾಜೀನಾಮೆ ಕೊಡಿಸಿ, ಆಪರೇಷನ್ ಕಮಲ ನಡೆಸಿತ್ತು. ಆನಂತರ ನಡೆದಿದ್ದ ಉಪ ಚುನಾವಣೆಯಲ್ಲಿ 14 ಕಡೆ ಬಿಜೆಪಿ ಗೆಲುವು ಕಂಡಿತ್ತು.

”ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ನಂತರ ಕಾರ್ಯಕರ್ತರು ನಿರಾಶೆಯಲ್ಲಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಏಳು ತಂಡಗಳಲ್ಲಿ ಪ್ರವಾಸ ಕೈಗೊಂಡು ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವ ಕೆಲಸ ಮಾಡಲಾಗುತ್ತಿದೆ. ಈ ಮೂಲಕ ಲೋಕಸಭೆ ಚುನಾವಣೆಗೆ ಬಿಜೆಪಿ ಸಕಲ ರೀತಿಯಲ್ಲಿ ಸಿದ್ದತೆ ನಡೆಸುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ: ನನ್ನ ಮಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ: ಕೆ.ಎಸ್ ಈಶ್ವರಪ್ಪ ಹೇಳಿಕೆ

ಕಾಂಗ್ರೆಸ್‌ ಸುಳ್ಳು ಹೇಳಿ ಮೋಸ ಮಾಡಿದೆ!

ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಗ್ಯಾರಂಟಿ ಅನುಷ್ಟಾನಕ್ಕೆ ಎಲ್ಲಿಂದ ಹಣ ಹೊಂದಿಸುತ್ತದೆ ಎಂಬುದನ್ನು ಶೀಘ್ರ ಮುಖ್ಯಮಂತ್ರಿಗಳು ಶ್ವೇತಪತ್ರ ಹೊರಡಿಸಬೇಕು. ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆ ಪೂರ್ವ ತನ್ನ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿ, ಅಧಿಕಾರಕ್ಕೆ ಬಂದ ಮೊದಲ‌ ಕ್ಯಾಬಿನೆಟ್‌ನಲ್ಲಿ ಎಲ್ಲವನ್ನೂ ಜಾರಿಗೆ ತರುತ್ತೇವೆ ಎಂದು ಹೇಳಿ, ಒಂದುವರೆ ತಿಂಗಳು ಕಳೆಯುತ್ತಾ ಬಂದರೂ ಈವರೆಗೆ ಜಾರಿಗೆ ತರದೇ ರಾಜ್ಯದ ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಇದೀಗ ಕೇವಲ ಮಾಧ್ಯಮಗಳ ಮುಂದೆ ಉಡಾಫೆ ಹೇಳಿಕೆ ಕೊಡುತ್ತಾ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

”ಈ ಐದು ಗ್ಯಾರಂಟಿಗಳನ್ನು ಮೊದಲ ಕ್ಯಾಬಿನೆಟ್‌ನಲ್ಲಿ ಜಾರಿಗೆ ತರುವುದಾಗಿ ಕಾಂಗ್ರೆಸ್ ನಾಯಕರು ಹೇಳಿದ್ದರು. ಕಾಂಗ್ರೆಸ್‌ನವರು ಸುಳ್ಳು ಹೇಳಿ ರಾಜ್ಯದ ಜನರಿಗೆ ಮೋಸ ಮಾಡಿದ್ದಾರೆ. ಈಗ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಅಲ್ಲದೆ ನಿರುದ್ಯೋಗಿ ಯುವಕರಿಗೆ ಮೋಸ ಮಾಡಿದ್ದಾರೆ. ಒಬ್ಬರಿಗೂ ಒಂದು ರೂಪಾಯಿಯೂ ಕೊಟ್ಟಿಲ್ಲ” ಎಂದು ಆರೋಪ ಮಾಡಿದ್ದಾರೆ.

”ಮತ್ತೊಂದೆಡೆ ಕೇಂದ್ರ ಸರ್ಕಾರ ಕೊಡುವ 5 ಕೆಜಿ ಉಚಿತ ಅಕ್ಕಿಯ ಬಗ್ಗೆ ರಾಜ್ಯದ ಜನರಿಗೆ ಗೊತ್ತಿದೆ. ಕಾಂಗ್ರೆಸ್ ನಾಯಕರು ಬಡ ಜನರಿಗೆ ಟೋಪಿ ಹಾಕಿ ಸರ್ಕಾರ ನಡೆಸುತ್ತಿದ್ದಾರೆ” ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...