HomeUncategorizedಬಿಜೆಪಿ ವಿರುದ್ಧ ಅಭೂತಪೂರ್ವ ಗೆಲುವು: ಸಿದ್ದರಾಮಯ್ಯರನ್ನು ''ಗೇಮ್ ಚೇಂಜರ್'' ಎಂದು ಶ್ಲಾಘಿಸಿದ ಎನ್‌ಸಿಪಿ

ಬಿಜೆಪಿ ವಿರುದ್ಧ ಅಭೂತಪೂರ್ವ ಗೆಲುವು: ಸಿದ್ದರಾಮಯ್ಯರನ್ನು ”ಗೇಮ್ ಚೇಂಜರ್” ಎಂದು ಶ್ಲಾಘಿಸಿದ ಎನ್‌ಸಿಪಿ

- Advertisement -
- Advertisement -

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಅಭೂತಪೂರ್ವ ಗೆಲುವಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಹಾರಾಷ್ಟ್ರ ಕಾಂಗ್ರೆಸ್ ಘಟಕ ಮತ್ತು ಅದರ ಮಿತ್ರ ಪಕ್ಷ ಎನ್‌ಸಿಪಿ ಭಾನುವಾರ ಶ್ಲಾಘಿಸಿದೆ.

ಇಂದೋರ್‌ನ 18 ನೇ ಶತಮಾನದ ಆಡಳಿತಗಾರ್ತಿ ಮತ್ತು ಧನಗರ್ ಸಮುದಾಯದ (ಕರ್ನಾಟಕದ ಕುರುಬ ಸಮುದಾಯದ) ಪ್ರಮುಖ ಮುಖ ಅಹಲ್ಯಾ ದೇವಿ ಹೋಳ್ಕರ್ ಅವರ ಜನ್ಮದಿನವನ್ನು ಆಚರಿಸಲು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಹಾಗಾಗಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರಕ್ಕೆ ಭಾನುವಾರ ಭೇಟಿ ನೀಡಿದ್ದರು.

ಈ ವೇಳೆ ಎನ್‌ಸಿಪಿ ಪ್ರಧಾನ ಕಾರ್ಯದರ್ಶಿ ಮತ್ತು ಲೋಕಸಭೆಯ ಸಂಸದೆ ಸುಪ್ರಿಯಾ ಸುಳೆ ಅವರು – ಸಿದ್ದರಾಮಯ್ಯ ಅವರನ್ನು ”ಗೇಮ್ ಚೇಂಜರ್” ಎಂದು ಶ್ಲಾಘಿಸಿದ್ದಾರೆ. ”ನೀವು ಈ ಯುದ್ಧವನ್ನು [ಚುನಾವಣೆಯಲ್ಲಿ] ಹೋರಾಡಿದ ರೀತಿ ನೋಡಿ ನಮಗೆ ಹೆಮ್ಮೆ ಎನಿಸುತ್ತದೆ ಎಂದು ಸುಪ್ರಿಯಾ ಸುಳೆ ಹೇಳಿದರು.

”ಕರ್ನಾಟಕದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಅಭೂತಪೂರ್ವವಾಗಿ ಗೆಲುವು ಕಂಡಿರುವುದು ನಮಗೆ ಹೆಚ್ಚಿನ ವಿಶ್ವಾಸವನ್ನು ಮೂಡಿಸಿದೆ. ಏಕೆಂದರೆ ಕರ್ನಾಟಕದಲ್ಲಿ ಬಿಜೆಪಿ ಸೋಲಿಸಲು ಸಾಧ್ಯವಾಗಿದೆ ಎಂದಾದರೆ, ಮುಂದೆ ಮಹಾರಾಷ್ಟ್ರ ಮತ್ತು ಇಡೀ ದೇಶದಲ್ಲಿ ಬಿಜೆಪಿಯನ್ನು ಸೋಲಿಸಬಹುದು ಎನ್ನುವ ವಿಶ್ವಾಸ ಮೂಡಿದೆ. ನೀವು ನಿಜವಾಗಿಯೂ ಗೇಮ್ ಚೇಂಜರ್ ಆಗಿದ್ದೀರಿ” ಎಂದು ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ.

ಸುಪ್ರಿಯಾ ಸುಳೆ ಅವರ ಮಾತುಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ”ಮುಂದಿನ ವರ್ಷ ನಡೆಯಲಿರುವ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್-ಎನ್‌ಸಿಪಿ ಮೈತ್ರಿಕೂಟ ಗೆಲುವು ಸಾಧಿಸಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

”ರಾಜ್ಯದಲ್ಲಿ ಉಚಿತ ಬಸ್ ಯೋಜನೆ [ಗುರ್ಹಾ ಶಕ್ತಿ] ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ಕುಟುಂಬದ ಮುಖ್ಯಸ್ಥರಿಗೆ [ಗೃಹ ಲಕ್ಷ್ಮಿ] ತಿಂಗಳಿಗೆ 2,000 ರೂ.ಗಳನ್ನು ನೀಡುವ ಕರ್ನಾಟಕದ ಯೋಜನೆಗಳನ್ನು ಅನುಕರಿಸುವಂತೆ ನಾನು ಶರದ್ ಪವಾರ್ ಅವರನ್ನು ಒತ್ತಾಯಿಸುತ್ತೇನೆ” ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ವಾಸ್ತು ಧಿಕ್ಕರಿಸಿ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರ ತೆರೆಸಿದ ಸಿದ್ದರಾಮಯ್ಯ

ಮಹಾರಾಷ್ಟ್ರದಲ್ಲಿ ಕನ್ನಡದಲ್ಲೇ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ

ಮಹಾರಾಷ್ಟ್ರದಲ್ಲಿ ರವಿವಾರ ನಡೆದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ ಅವರು ಕನ್ನಡದಲ್ಲಿಯೇ ಮಾತನಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಸಾಂಗ್ಲಿಯಲ್ಲಿ ಮಾತನಾಡಿ, ”ಈ ಭಾಗದಲ್ಲಿ ಸಾಕಷ್ಟು ಕನ್ನಡ ಮಾತನಾಡುವವರಿದ್ದೀರಿ ಮಹಾರಾಷ್ಟ್ರ ಕಾಂಗ್ರೆಸ್ ಅನ್ನು ಒಗ್ಗೂಡಿಸಿ ರಾಜ್ಯದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಮತ್ತು ಕೇಂದ್ರದಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಕರೆ ಕೊಟ್ಟರು.

”1947ರಲ್ಲಿ ಸಾಧಿಸಿದ ಸ್ವಾತಂತ್ರ್ಯಕ್ಕಾಗಿ ನಾವು ಕಾಂಗ್ರೆಸ್ ಸದಸ್ಯರಾಗಿದ್ದೆವು. ಇಂದು ನಾವು ಕೋಮುವಾದಿ ಮತ್ತು ಭ್ರಷ್ಟ ಬಿಜೆಪಿಯ ಹಿಡಿತದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಬೇಕಾಗಿದೆ ಎಂದು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹೇಳಿದರು.

ಏಕನಾಥ್ ಶಿಂಧೆ-ದೇವೇಂದ್ರ ಫಡ್ನವೀಸ್ ಸರ್ಕಾರ ಭ್ರಷ್ಟಾಚಾರದಿಂದ ಕೂಡಿದೆ. ಅವರನ್ನು ಮಹಾರಾಷ್ಟ್ರದಿಂದ ಬೇರು ಸಮೇತ ಕಿತ್ತೊಗೆಯಬೇಕು ಎಂದು ಸಿದ್ದರಾಮಯ್ಯ ಟೀಕಿಸಿದರು.

”ಕರ್ನಾಟಕದಲ್ಲಿ ಬಿಜೆಪಿಯ 40% ಕಮಿಷನ್ ಪಡೆಯುತ್ತಿದ್ದ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿಚಾರವನ್ನು ನಾನು ಮತ್ತು ಡಿಕೆ ಶಿವಕುಮಾರ್ ಅವರು ಪ್ರತಿ ಹಳ್ಳಿಗೆ ತಲುಪಿಸಿದೆವು.ಹಾಗಾಗಿ ಕರ್ನಾಟಕದ ಜನತೆ ಬಿಜೆಪಿಯನ್ನು ಬೇರುಸಹಿತ ಕಿತ್ತೊಗೆದು, ಕಾಂಗ್ರೆಸ್ ಅನ್ನು ಮರಳಿ ಅಧಿಕಾರಕ್ಕೆ ತರಲು ನಿರ್ಧರಿಸಿದರು. ಫಡ್ನವಿಸ್ ಶಿಂಧೆ ಸರ್ಕಾರ ಕೂಡ ಅಷ್ಟೇ ಭ್ರಷ್ಟವಾಗಿದೆ. ಹಾಗಾಗಿ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕಿದೆ” ಎಂದು ಸಿದ್ದರಾಮಯ್ಯ ಗುಡಗಿದರು.

”ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರಕ್ಕೆ ಬಂದರೆ, ಕರ್ನಾಟಕದ ಜನರು ಬಿಜೆಪಿಗೆ ಮತ ಹಾಕುತ್ತಾರೆ ಎಂದು ಕರ್ನಾಟಕ ಬಿಜೆಪಿ ನಂಬಿತ್ತು. ಆದರೆ ಜನರು ಬುದ್ದಿವಂತರು, ಅವರು ನಮಗೆ ಮತ ನೀಡಿದರು. ವಾಸ್ತವವಾಗಿ, ಮೋದಿ ರ್ಯಾಲಿ ಅಥವಾ ರೋಡ್‌ಶೋ ನಡೆಸಿದ ಪ್ರತಿಯೊಂದು ಸ್ಥಳದಲ್ಲೂ ಕಾಂಗ್ರೆಸ್ ಗೆದ್ದಿದೆ. ಇದು ಮೋದಿ ಮ್ಯಾಜಿಕ್ ಮರೆಯಾಗುತ್ತಿರುವುದನ್ನು ತೋರಿಸುತ್ತದೆ” ಎಂದು ಸಿದ್ದರಾಮಯ್ಯ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...