Homeಕರ್ನಾಟಕಈ ಬಾರಿಯ ಬಜೆಟ್ ಗಾತ್ರ 3.35 ಲಕ್ಷ ಕೋಟಿಗೆ ಏರಿಕೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ ಬಜೆಟ್ ಗಾತ್ರ 3.35 ಲಕ್ಷ ಕೋಟಿಗೆ ಏರಿಕೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಬಜೆಟ್ ಮಂಡನೆಗೆ ತಯಾರಿ ಮಾಡಿಕೊಳ್ಳುತ್ತಿದೆ. ಈ ಕುರಿತು ಆರ್ಥಿಕ ಇಲಾಖೆಯ ಜವಾಬ್ದಾರಿ ನಿರ್ವಹಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರೇ ಕೆಲ ಸುಳಿವುಗಳನ್ನು ಖುದ್ದು ಬಿಟ್ಟುಕೊಟ್ಟಿದ್ದಾರೆ. ಈ ಬಾರಿ ಬಜೆಟ್ ಗಾತ್ರ 3.35 ಲಕ್ಷ ಕೋಟಿಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

”ಕೆಂಗಲ್ ಹನುಮಂತಯ್ಯ ಬಜೆಟ್ ಮಂಡಿಸುವಾಗ ಕರ್ನಾಟಕದ ಬಜೆಟ್ ಗಾತ್ರ 21 ಕೋಟಿ ರೂಪಾಯಿ ಇತ್ತು. ಇತ್ತೀಚೆಗೆ ಮಂಡಿಸಲಾಗ ಬಜೆಟ್ ಗಾತ್ರ 3.9 ಲಕ್ಷ ಕೋಟಿ ರೂಪಾಯಿ. ಆದರೆ ಈ ಬಾರಿ ಮಂಡಿಸಲಿರುವ ಬಜೆಟ್ ಗಾತ್ರ 30 ರಿಂದ 35 ಸಾವಿರ ಕೋಟಿ ರೂಪಾಯಿ ಹೆಚ್ಚಾಗಲಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

”ನಾವು 5 ಗ್ಯಾರೆಂಟಿ ಘೋಷಣೆ ಮಾಡಿದ್ದೇವೆ. ಇದಕ್ಕಾಗಿ ಹಣ ಹೊಂದಿಸಬೇಕಿದೆ. ಹೀಗಾಗಿ ಬಜೆಟ್ ಗಾತ್ರ ವಿಸ್ತರಣೆಯಾಗಲಿದೆ. 5 ಗ್ಯಾರಂಟಿ ಜಾರಿಗೆ ಸುಮಾರು 59-60 ಸಾವಿರ ಕೋಟಿ ರೂಪಾಯಿ ಹಣ ಬೇಕಾಗಲಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

”ಆದಾಯದ ವೃದ್ಧಿಗೆ ಸಾಮಾನ್ಯ ಜನರಿಗೆ ಹೊರೆಯಾಗದಂತೆ ಹೇಗೆ ತೆರಿಗೆ ವಿಧಿಸಬೇಕು ಎನ್ನುವುದನ್ನು ಮಹಾಭಾರತದ ಭೀಷ್ಮ, ಯುಧಿಷ್ಠರನಿಗೆ ಬೋಧಿಸಿದ್ದಾರೆ. ರಾಜ್ಯ ಸರ್ಕಾರವೂ ತೆರಿಗೆ ಭರಿಸುವ ಶಕ್ತಿ ಇರುವವರಿಂದ ತೆರಿಗೆ ಸಂಗ್ರಹಿಸಲು ಆದ್ಯತೆ ನೀಡಲಿದೆ. ಬಸವಣ್ಣನವರು ಹೇಳಿದಂತೆ ಕಾಯಕ ಮತ್ತು ದಾಸೋಹ ಬಜೆಟ್‌ನ ಪ್ರಮುಖ ಸಂಗತಿಗಳು. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ಹಂಚಿಕೆ” ಎಂದು ವಿಶ್ಲೇಷಿಸಿದರು.

”1994ರಲ್ಲಿ ಮೊದಲ ಬಾರಿ ಹಣಕಾಸು ಸಚಿವನಾಗಿ ಬಜೆಟ್ ಮಂಡಿಸುವಾಗ ಪತ್ರಿಕೆಯೊಂದು ಲೇವಡಿ ಮಾಡಿತ್ತು. 100 ಕುರಿ ಎಣಿಸಲು ಬಾರದವರು ಬಜೆಟ್‌ ಮಂಡಿಸಲಿದ್ದಾರೆ ಎಂಬ ಟೀಕೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಆರ್ಥಿಕ ತಜ್ಞರು, ಚಿಂತಕರ ಸಲಹೆ, ಸಹಕಾರ ಪಡೆದು ರಾಜ್ಯದ ಆರ್ಥಿಕತೆಯನ್ನು ಯಶಸ್ವಿಯಾಗಿ ನಿಭಾಯಿಸಿದೆ. ಇನ್ನೊಂದು ಪತ್ರಿಕೆ ಅತ್ಯುತ್ತಮ ಬಜೆಟ್ ಎಂದು ಶ್ಲಾಘಿಸಿ ಸಂಪಾದಕೀಯ ಬರೆಯಿತು. ಆ ಸಮಯದಲ್ಲಿ ವಾಟಾಳ್, ಜಯಪ್ರಕಾಶ್ ರೆಡ್ಡಿ, ಮಾಧುಸ್ವಾಮಿ ಕೂಡ ಇದ್ದರು” ಎಂದು ಹಿಂದಿನ ಘಟನೆಗಳನ್ನು ಮೆಲುಕು ಹಾಕಿದರು.

ಜುಲೈ ತಿಂಗಳಲ್ಲಿ ನೂತನ ಬಜೆಟ್ ಮಂಡಿಸಲಾಗುತ್ತದೆ. ಅದು ಆಗಸ್ಟ್ 1ರಿಂದ ಜಾರಿಯಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದೇ ವೇಳೆ ಸದನದಲ್ಲಿನ ಹಾಜರಾತಿ, ನೂತನ ಶಾಸಕರ ಕಾರ್ಯಗಳು, ಜನಸ್ಪಂದನೆ, ಕೆಲಸಗಳ ಅಚ್ಚಕಟ್ಟಾಗಿ ಮಾಡುವ ರೀತಿ ಕುರಿತು ಸಲಹೆ ನೀಡಿದ್ದಾರೆ.

”ನಾನು ಸಿಎಂ ಆಗಿ ಕಾರ್ಯನಿರ್ವಹಿಸಿದ್ದೇನೆ,ವಿರೋಧ ಪಕ್ಷದ ನಾಯಕನಾಗಿಯೂ ಸೇವೆ ಸಲ್ಲಿಸಿದ್ದೇನೆ. ಈ ಅನುಭವದ ಮೂಲಕ ಹೇಳುತ್ತೇನೆ. ನನ್ನ ಮಾತು ಯಾವಾಗಲು ಒರಟು, ಆದರೆ ಸತ್ಯವಾಗಿರುತ್ತದೆ ಎಂದು ಸಿದ್ದು ಹೇಳಿದ್ದಾರೆ. ನೂತನ ಶಾಸಕರಿಗೆ ವಾಟಾಳ್ ನಾಗರಾಜ್ ಶಾಸಕರಾಗಿ ಸದನದಲ್ಲಿ ನಡೆದುಕೊಂಡ ರೀತಿಯನ್ನು ಹೇಳಿದ್ದಾರೆ. ವಾಟಾಳ್ ನಾಗರಾಜ್ ಯಾವಾಗಲೂ ಸದನ ಬಿಟ್ಟು ಹೋಗುತ್ತಿರಲ್ಲಿಲ್ಲ. ನಾನು ಇಷ್ಟು ದಿನ ಶಾಸಕನಾಗಿದ್ದೇನೆ ಅಲ್ವಾ ಕೇವಲ 4-5 ದಿನ ಮಾತ್ರ ಬಂದಿರಲಿಲ್ಲ. ಎಲ್ಲರೂ ಸದನಕ್ಕೆ ತಪ್ಪದೆ ಬರಬೇಕು. ಸರ್ಕಾರದ ಕೆಲಸದಲ್ಲಿ ನಿರಂತರವಾಗಿ ಸ್ಪಂದಿಸಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...