Homeಕರ್ನಾಟಕಈ ಬಾರಿಯ ಬಜೆಟ್ ಗಾತ್ರ 3.35 ಲಕ್ಷ ಕೋಟಿಗೆ ಏರಿಕೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ ಬಜೆಟ್ ಗಾತ್ರ 3.35 ಲಕ್ಷ ಕೋಟಿಗೆ ಏರಿಕೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಬಜೆಟ್ ಮಂಡನೆಗೆ ತಯಾರಿ ಮಾಡಿಕೊಳ್ಳುತ್ತಿದೆ. ಈ ಕುರಿತು ಆರ್ಥಿಕ ಇಲಾಖೆಯ ಜವಾಬ್ದಾರಿ ನಿರ್ವಹಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರೇ ಕೆಲ ಸುಳಿವುಗಳನ್ನು ಖುದ್ದು ಬಿಟ್ಟುಕೊಟ್ಟಿದ್ದಾರೆ. ಈ ಬಾರಿ ಬಜೆಟ್ ಗಾತ್ರ 3.35 ಲಕ್ಷ ಕೋಟಿಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

”ಕೆಂಗಲ್ ಹನುಮಂತಯ್ಯ ಬಜೆಟ್ ಮಂಡಿಸುವಾಗ ಕರ್ನಾಟಕದ ಬಜೆಟ್ ಗಾತ್ರ 21 ಕೋಟಿ ರೂಪಾಯಿ ಇತ್ತು. ಇತ್ತೀಚೆಗೆ ಮಂಡಿಸಲಾಗ ಬಜೆಟ್ ಗಾತ್ರ 3.9 ಲಕ್ಷ ಕೋಟಿ ರೂಪಾಯಿ. ಆದರೆ ಈ ಬಾರಿ ಮಂಡಿಸಲಿರುವ ಬಜೆಟ್ ಗಾತ್ರ 30 ರಿಂದ 35 ಸಾವಿರ ಕೋಟಿ ರೂಪಾಯಿ ಹೆಚ್ಚಾಗಲಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

”ನಾವು 5 ಗ್ಯಾರೆಂಟಿ ಘೋಷಣೆ ಮಾಡಿದ್ದೇವೆ. ಇದಕ್ಕಾಗಿ ಹಣ ಹೊಂದಿಸಬೇಕಿದೆ. ಹೀಗಾಗಿ ಬಜೆಟ್ ಗಾತ್ರ ವಿಸ್ತರಣೆಯಾಗಲಿದೆ. 5 ಗ್ಯಾರಂಟಿ ಜಾರಿಗೆ ಸುಮಾರು 59-60 ಸಾವಿರ ಕೋಟಿ ರೂಪಾಯಿ ಹಣ ಬೇಕಾಗಲಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

”ಆದಾಯದ ವೃದ್ಧಿಗೆ ಸಾಮಾನ್ಯ ಜನರಿಗೆ ಹೊರೆಯಾಗದಂತೆ ಹೇಗೆ ತೆರಿಗೆ ವಿಧಿಸಬೇಕು ಎನ್ನುವುದನ್ನು ಮಹಾಭಾರತದ ಭೀಷ್ಮ, ಯುಧಿಷ್ಠರನಿಗೆ ಬೋಧಿಸಿದ್ದಾರೆ. ರಾಜ್ಯ ಸರ್ಕಾರವೂ ತೆರಿಗೆ ಭರಿಸುವ ಶಕ್ತಿ ಇರುವವರಿಂದ ತೆರಿಗೆ ಸಂಗ್ರಹಿಸಲು ಆದ್ಯತೆ ನೀಡಲಿದೆ. ಬಸವಣ್ಣನವರು ಹೇಳಿದಂತೆ ಕಾಯಕ ಮತ್ತು ದಾಸೋಹ ಬಜೆಟ್‌ನ ಪ್ರಮುಖ ಸಂಗತಿಗಳು. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ಹಂಚಿಕೆ” ಎಂದು ವಿಶ್ಲೇಷಿಸಿದರು.

”1994ರಲ್ಲಿ ಮೊದಲ ಬಾರಿ ಹಣಕಾಸು ಸಚಿವನಾಗಿ ಬಜೆಟ್ ಮಂಡಿಸುವಾಗ ಪತ್ರಿಕೆಯೊಂದು ಲೇವಡಿ ಮಾಡಿತ್ತು. 100 ಕುರಿ ಎಣಿಸಲು ಬಾರದವರು ಬಜೆಟ್‌ ಮಂಡಿಸಲಿದ್ದಾರೆ ಎಂಬ ಟೀಕೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಆರ್ಥಿಕ ತಜ್ಞರು, ಚಿಂತಕರ ಸಲಹೆ, ಸಹಕಾರ ಪಡೆದು ರಾಜ್ಯದ ಆರ್ಥಿಕತೆಯನ್ನು ಯಶಸ್ವಿಯಾಗಿ ನಿಭಾಯಿಸಿದೆ. ಇನ್ನೊಂದು ಪತ್ರಿಕೆ ಅತ್ಯುತ್ತಮ ಬಜೆಟ್ ಎಂದು ಶ್ಲಾಘಿಸಿ ಸಂಪಾದಕೀಯ ಬರೆಯಿತು. ಆ ಸಮಯದಲ್ಲಿ ವಾಟಾಳ್, ಜಯಪ್ರಕಾಶ್ ರೆಡ್ಡಿ, ಮಾಧುಸ್ವಾಮಿ ಕೂಡ ಇದ್ದರು” ಎಂದು ಹಿಂದಿನ ಘಟನೆಗಳನ್ನು ಮೆಲುಕು ಹಾಕಿದರು.

ಜುಲೈ ತಿಂಗಳಲ್ಲಿ ನೂತನ ಬಜೆಟ್ ಮಂಡಿಸಲಾಗುತ್ತದೆ. ಅದು ಆಗಸ್ಟ್ 1ರಿಂದ ಜಾರಿಯಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದೇ ವೇಳೆ ಸದನದಲ್ಲಿನ ಹಾಜರಾತಿ, ನೂತನ ಶಾಸಕರ ಕಾರ್ಯಗಳು, ಜನಸ್ಪಂದನೆ, ಕೆಲಸಗಳ ಅಚ್ಚಕಟ್ಟಾಗಿ ಮಾಡುವ ರೀತಿ ಕುರಿತು ಸಲಹೆ ನೀಡಿದ್ದಾರೆ.

”ನಾನು ಸಿಎಂ ಆಗಿ ಕಾರ್ಯನಿರ್ವಹಿಸಿದ್ದೇನೆ,ವಿರೋಧ ಪಕ್ಷದ ನಾಯಕನಾಗಿಯೂ ಸೇವೆ ಸಲ್ಲಿಸಿದ್ದೇನೆ. ಈ ಅನುಭವದ ಮೂಲಕ ಹೇಳುತ್ತೇನೆ. ನನ್ನ ಮಾತು ಯಾವಾಗಲು ಒರಟು, ಆದರೆ ಸತ್ಯವಾಗಿರುತ್ತದೆ ಎಂದು ಸಿದ್ದು ಹೇಳಿದ್ದಾರೆ. ನೂತನ ಶಾಸಕರಿಗೆ ವಾಟಾಳ್ ನಾಗರಾಜ್ ಶಾಸಕರಾಗಿ ಸದನದಲ್ಲಿ ನಡೆದುಕೊಂಡ ರೀತಿಯನ್ನು ಹೇಳಿದ್ದಾರೆ. ವಾಟಾಳ್ ನಾಗರಾಜ್ ಯಾವಾಗಲೂ ಸದನ ಬಿಟ್ಟು ಹೋಗುತ್ತಿರಲ್ಲಿಲ್ಲ. ನಾನು ಇಷ್ಟು ದಿನ ಶಾಸಕನಾಗಿದ್ದೇನೆ ಅಲ್ವಾ ಕೇವಲ 4-5 ದಿನ ಮಾತ್ರ ಬಂದಿರಲಿಲ್ಲ. ಎಲ್ಲರೂ ಸದನಕ್ಕೆ ತಪ್ಪದೆ ಬರಬೇಕು. ಸರ್ಕಾರದ ಕೆಲಸದಲ್ಲಿ ನಿರಂತರವಾಗಿ ಸ್ಪಂದಿಸಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...