Homeಮುಖಪುಟಮೋದಿಗೆ ಪ್ರಶ್ನೆ ಮಾಡಿದ್ದ ಪತ್ರಕರ್ತೆಗೆ ಹಿಂದುತ್ವವಾದಿಗಳಿಂದ ನಿಂದನೆ; ಅಮೆರಿಕ ಶ್ವೇತಭವನದಿಂದ ಖಂಡನೆ

ಮೋದಿಗೆ ಪ್ರಶ್ನೆ ಮಾಡಿದ್ದ ಪತ್ರಕರ್ತೆಗೆ ಹಿಂದುತ್ವವಾದಿಗಳಿಂದ ನಿಂದನೆ; ಅಮೆರಿಕ ಶ್ವೇತಭವನದಿಂದ ಖಂಡನೆ

- Advertisement -
- Advertisement -

ಅಮೆರಿಕದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರಶ್ನೆ ಕೇಳಿದ ಪತ್ರಕರ್ತೆ ಸಬ್ರಿನಾ ಸಿದ್ದಿಕಿ ಅವರಿಗೆ ಹಿಂದುತ್ವವಾದಿಗಳು ಹಾಗೂ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸೇರಿದಂತೆ ಬಿಜೆಪಿ ಸದಸ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಕಿರುಕುಳ ನೀಡಿದ್ದಾರೆ. ಇದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದು ಶ್ವೇತಭವನ ಸೋಮವಾರ ಖಂಡನೆ ವ್ಯಕ್ತಪಡಿಸಿದೆ.

ಜೂನ್ 23ರಂದು, ವಾಷಿಂಗ್ಟನ್‌ನ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡನ್ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಮೋದಿ ಅವರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ವಾಲ್ ಸ್ಟ್ರೀಟ್ ಜರ್ನಲ್ ವರದಿಗಾರ್ತಿ, ”ಹಲವಾರು ಮಾನವ ಹಕ್ಕುಗಳ ಗುಂಪುಗಳು ಮೋದಿ ಸರ್ಕಾರವು ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ತಾರತಮ್ಯ ಮಾಡುತ್ತಿದೆ ಮತ್ತು ಸರ್ಕಾರದ ವಿರುದ್ಧ ಟೀಕೆ ಮಾಡುವವರನ್ನು ಮೌನಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಆರೋಪಿಸಿದೆ” ಎಂದು ಹೇಳುವ ಮೂಲಕ ಗಮನ ಸೆಳೆದಿದ್ದರು.

ಪತ್ರಿಕಾಗೋಷ್ಠಿಯ ನಂತರ ಸಿದ್ಧಿಕಿಯ ಮೇಲೆ ಹಿಂದುತ್ವ ಬೆಂಬಲಿಗರು ಮತ್ತು ಆಡಳಿತಾರೂಢ ಬಿಜೆಪಿ ಸದಸ್ಯರು ಆನ್ಲೈನ್‌ನಲ್ಲಿ ಮುಗಿಬಿದ್ದು, ಅವರನ್ನು ”ಪಾಕಿಸ್ತಾನದ ಪೋಷಕರ ಮಗಳು” ಮತ್ತು ”ಇಸ್ಲಾಮಿಸ್ಟ್‌” ಎಂದು ದಾಳಿ ಮಾಡಿದರು.

ಹಿಂದುತ್ವವಾದಿಗಳ ಮತ್ತು ಬಿಜೆಪಿ ಸದಸ್ಯರ ದಾಳಿಗೆ ಉತ್ತರವಾಗಿ ಟ್ವೀಟ್ ಮಾಡಿದ ಸಿದ್ದಿಕಿ, ತನ್ನ ತಂದೆಯೊಂದಿಗೆ ಭಾರತ ಕ್ರಿಕೆಟ್ ತಂಡವನ್ನು ಬೆಂಬಲಿಸುತ್ತಿರುವ ಫೋಟೋಗಳನ್ನು ಟ್ವೀಟ್ ಮಾಡಿದರು. ಈ ಮೂಲಕ ತಾನು ಭಾರತದ ವಿರೋಧಿಯಲ್ಲ, ಭಾರತದ ಪರವಾಗಿರುವವಳು ಎಂದು ಸ್ಪಷ್ಟಪಡಿಸಿದಳು.

ಈ ಬಗ್ಗೆ ಸೋಮವಾರ, ಸ್ಟ್ರಾಟೆಜಿಕ್ ಕಮ್ಯುನಿಕೇಷನ್ಸ್‌ನ ರಾಷ್ಟ್ರೀಯ ಭದ್ರತಾ ಮಂಡಳಿಯ ಸಂಯೋಜಕ ಜಾನ್ ಕಿರ್ಬಿಯನ್ನು ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತೆ ಸಿದ್ದಿಕಿ ಮೇಲೆ ನಡೆದ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದರು. ಆ ಕಿರುಕುಳದ ವರದಿಗಳ ಬಗ್ಗೆ ನಮಗೆ ತಿಳಿದಿದೆ. ಇದು ಸ್ವೀಕಾರಾರ್ಹವಲ್ಲ ಮತ್ತು ಯಾವುದೇ ಸಂದರ್ಭದಲ್ಲೂ ಪತ್ರಕರ್ತರಿಗೆ ಯಾವುದೇ ಕಿರುಕುಳ ನೀಡುವುದನ್ನು ನಾವು ಸಂಪೂರ್ಣವಾಗಿ ಖಂಡಿಸುತ್ತೇವೆ. ಅದು … ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಮತ್ತು ಇದು ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿದೆ … ಎಂದು ಹೇಳುವ ಮೂಲಕ ಹಿಂದುತ್ವವಾದಿಗಳ ಮತ್ತು ಬಿಜೆಪಿ ಸದಸ್ಯರ ದಾಳಿಯನ್ನು ಖಂಡಿಸಿದ್ದಾರೆ.

”ಅಮೆರಿಕಾ ಸರ್ಕಾರವು ಪತ್ರಿಕಾ ಸ್ವಾತಂತ್ರ್ಯಕ್ಕೆ ಬದ್ಧವಾಗಿದೆ. ಪತ್ರಕರ್ತರು ತಮ್ಮ ಕೆಲಸವನ್ನು ಅವರು ಮಾಡುತ್ತಿರುವಾಗ ಅವರಿಗೆ ಬೆದರಿಕೆ ಅಥವಾ ಕಿರುಕುಳ ನೀಡುವಿದನ್ನು ನಾವು ಖಂಡಿತವಾಗಿಯೂ ಖಂಡಿಸುತ್ತೇವೆ” ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ಹೇಳಿದರು.

ಜೂನ್ 24 ರಂದು, ಸಿದ್ದಿಕಿ ಆನ್‌ಲೈನ್ ಕಿರುಕುಳವನ್ನು ಎದುರಿಸಿದ ನಂತರ ದಕ್ಷಿಣ ಏಷ್ಯಾದ ಪತ್ರಕರ್ತರ ಸಂಘವೂ ಸಹ ಬೆಂಬಲವನ್ನು ನೀಡಿತ್ತು. ”ನಮ್ಮ ಸಹೋದ್ಯೋಗಿ ಸಬ್ರಿನಾ ಸಿದ್ದಿಕಿ ಅವರಿಗೆ ಬೆಂಬಲವನ್ನು ವ್ಯಕ್ತಪಡಿಸಲು ನಾವು ಬಯಸುತ್ತೇವೆ, ಅವರು ಅನೇಕ ದಕ್ಷಿಣ ಏಷ್ಯಾದ ಮತ್ತು ಮಹಿಳಾ ಪತ್ರಕರ್ತರಂತೆ, ತಮ್ಮ ಕೆಲಸವನ್ನು ಸರಳವಾಗಿ ಮಾಡುವುದಕ್ಕಾಗಿ ಕಿರುಕುಳವನ್ನು ಅನುಭವಿಸುತ್ತಿದ್ದಾರೆ. ಪತ್ರಿಕಾ ಸ್ವಾತಂತ್ರ್ಯವು ಯಾವುದೇ ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣವಾಗಿದೆ ಮತ್ತು ಪಿಎಂ ಮೋದಿ ಅವರು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವನ್ನು ಮುನ್ನಡೆಸುತ್ತಿದ್ದಾರೆ. ಅವರಿಗೆ ಪ್ರಶ್ನೆ ಮಾಡುವುದು ನಮ್ಮ ಕರ್ತವ್ಯ ನಾವು ಅದನ್ನು ಮಾಡಿದ್ದೇವೆ” ಎಂದು ಅಸೋಸಿಯೇಷನ್ ಹೇಳಿದೆ.

ಇದನ್ನೂ ಓದಿ: ಅಮೆರಿಕಾದಲ್ಲಿ ಮೋದಿಗೆ ಪ್ರಶ್ನೆ ಕೇಳಿದ ಪತ್ರಕರ್ತೆಗೆ ಟ್ವಿಟರ್‌ನಲ್ಲಿ ಹಿಂದುತ್ವವಾದಿಗಳಿಂದ ನಿಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...