Homeಮುಖಪುಟತೆಲಂಗಾಣ ಚುನಾವಣಾ ಹೊಸ್ತಿಲಲ್ಲಿ ಕೆಸಿಆರ್‌ಗೆ ಆಘಾತ; ಬಿಆರ್‌ಎಸ್‌ನ 35 ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಸಿದ್ದತೆ

ತೆಲಂಗಾಣ ಚುನಾವಣಾ ಹೊಸ್ತಿಲಲ್ಲಿ ಕೆಸಿಆರ್‌ಗೆ ಆಘಾತ; ಬಿಆರ್‌ಎಸ್‌ನ 35 ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಸಿದ್ದತೆ

- Advertisement -
- Advertisement -

ತೆಲಂಗಾಣ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ರಾಜ್ಯದಲ್ಲಿ ಭಾರೀ ಬದಲಾವಣೆ ನಡೆಯುತ್ತಿದೆ. 35 ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕರು ಕಾಂಗ್ರೆಸ್ ಸೇರಲು ಸಿದ್ದರಾಗಿದ್ದಾರೆ. ಈ ವರ್ಷಾಂತ್ಯದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಮಧ್ಯೆ ಬಿಆರ್‌ಎಸ್ ನಾಯಕರು ಕೆಸಿಆರ್‌ಗೆ ಬಿಗ್‌ ಶಾಕ್ ನೀಡಿದ್ದಾರೆ.

ಮಾಜಿ ಸಂಸದ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ತೆಲಂಗಾಣ ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್ ಸೇರಿದಂತೆ 35 ಬಿಆರ್‌ಎಸ್ ನಾಯಕರು ಕಾಂಗ್ರೆಸ್ ಸೇರಲಿದ್ದು ಸೋಮವಾರ ಪಕ್ಷದ ಉನ್ನತ ನಾಯಕರನ್ನು ಭೇಟಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜುಲೈ ಮೊದಲ ವಾರದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಉಪಸ್ಥಿತಿಯೊಂದಿಗೆ ತೆಲಂಗಾಣದ ಖಮ್ಮಮ್‌ನಲ್ಲಿ ನಡೆಯಲಿರುವ ಸಾರ್ವಜನಿಕ ರ್ಯಾಲಿಯಲ್ಲಿ ಬಿಆರ್‌ಎಸ್ ನಾಯಕರು ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರಲಿದ್ದಾರೆ. ರೆಡ್ಡಿ ಅವರು ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಖಮ್ಮಂನಿಂದ ಬಿಆರ್‌ಎಸ್ ಸಂಸದರಾಗಿದ್ದರು.

ಕಾಂಗ್ರೆಸ್ ಸೇರಲಿರುವ ಮಾಜಿ ಸಂಸದ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್ ಅವರು ಸೋಮವಾರ ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಕೆಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿದರು.

35 Bharat Rashtra Samithi leaders join Congress months ahead of Telangana polls

ಕಾಂಗ್ರೆಸ್ ನಾಯಕ ಪವನ್ ಖೇರಾ ಈ ಬೆಳವಣಿಗೆಯನ್ನು “ಬದಲಾವಣೆಯ ಗಾಳಿ” ಎಂದು ಬಣ್ಣಿಸಿದ್ದಾರೆ. ”ಈ ಬದಲಾವಣೆಯ ಗಾಳಿಯು ‘ಭಾರತ್ ಜೋಡೋ ಯಾತ್ರೆ’ಯಿಂದ ಪ್ರಾರಂಭವಾಯಿತು, ಅದರ ಪರಿಣಾಮವನ್ನು ನೀವು ಕರ್ನಾಟಕದಲ್ಲಿ ನೋಡಿದ್ದೀರಿ. ಇಂದು, ತೆಲಂಗಾಣದ ಹಲವು ಪ್ರಮುಖ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ ಮತ್ತು ಅವರೆಲ್ಲರೂ ಪಕ್ಷದ ಉನ್ನತ ನಾಯಕರನ್ನು ಭೇಟಿಯಾದ ನಂತರ ಸುದೀರ್ಘ ಮಾತುಕತೆ ನಡೆಸಿದ್ದಾರೆ” ಎಂದು ಖೇರಾ ಹೇಳಿದರು.

ಈ ಬೆಳವಣಿಗೆಯನ್ನು ಸ್ವಾಗತಿಸಿದ ರಾಹುಲ್ ಗಾಂಧಿ, ”ಕರ್ನಾಟಕದಂತೆ ತೆಲಂಗಾಣದಲ್ಲೂ ಕಾಂಗ್ರೆಸ್ ತನ್ನ ಯಶಸ್ಸನ್ನು ಮುಂದುವರೆಸುತ್ತದೆ” ಎಂದು ಹೇಳಿದರು.

”ಒಗ್ಗೂಡಿದ ಕಾಂಗ್ರೆಸ್ ಅನ್ನು ತಡೆಯಲಾಗದು” ಎಂದು ಗಾಂಧಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಕರ್ನಾಟಕದಲ್ಲಿ 224 ವಿಧಾನಸಭಾ ಸ್ಥಾನಗಳ ಪೈಕಿ 136 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಸ್ಪಷ್ಟ ಬಹುಮತವನ್ನು ಪಡೆದುಕೊಂಡಿತ್ತು. ತೆಲಂಗಾಣದಲ್ಲಿ, 2014 ರಿಂದ ರಾಜ್ಯವನ್ನು ಆಳುತ್ತಿರುವ ಭಾರತ್ ರಾಷ್ಟ್ರ ಸಮಿತಿಯಿಂದ ಅಧಿಕಾರವನ್ನು ಕಸಿದುಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.

ಮೂಲಗಳ ಪ್ರಕಾರ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ಜೂಪಲ್ಲಿ ಕೃಷ್ಣರಾವ್ ಇಬ್ಬರೂ ತಮ್ಮ ಬೆಂಬಲಿಗರೊಂದಿಗೆ ಜುಲೈ ಮೊದಲ ವಾರದಲ್ಲಿ ಔಪಚಾರಿಕವಾಗಿ ಕಾಂಗ್ರೆಸ್ ಸೇರಲಿದ್ದಾರೆ. ಖಮ್ಮಂನಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಲ್ಲೇ ಕಾಂಗ್ರೆಸ್ ಮುಖಂಡ ಭಟ್ಟಿ ವಿಕ್ರಮಾರ್ಕ ತಮ್ಮ ಪಾದಯಾತ್ರೆಯನ್ನು ಮುಕ್ತಾಯಗೊಳಿಸಲಿದ್ದಾರೆ. ಏಪ್ರಿಲ್‌ನಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ಜೂಪಲ್ಲಿ ಕೃಷ್ಣರಾವ್ ಅವರನ್ನು ಬಿಆರ್‌ಎಸ್‌ನಿಂದ ಅಮಾನತುಗೊಳಿಸಲಾಗಿತ್ತು. ಇದಾದ ನಂತರ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಇವರಿಬ್ಬರನ್ನು ಓಲೈಸಲು ಪ್ರಯತ್ನಿಸಿದ್ದವು. ಆದರೂ ಇಬ್ಬರೂ ಕಾಂಗ್ರೆಸ್ ಆಯ್ಕೆ ಮಾಡಿದ್ದಕ್ಕೆ ಅವರದ್ದೇ ಆದ ರಾಜಕೀಯ ಕಾರಣಗಳಿವೆ.

ಜೂಪಲ್ಲಿ ಕೃಷ್ಣರಾವ್ ಕೊಲ್ಲೂರಿನಿಂದ ಐದು ಬಾರಿ ಶಾಸಕರಾಗಿದ್ದು ಮಹೆಬೂಬ್‌ನಗರದಿಂದ ಮಾಜಿ ಸಚಿವರಾಗಿದ್ದಾರೆ, ಅಲ್ಲಿ ಅವರ ದೀರ್ಘಕಾಲದ ರಾಜಕೀಯ ಪ್ರತಿಸ್ಪರ್ಧಿ ಡಿಕೆ ಅರುಣಾ ರಾಜ್ಯ ಬಿಜೆಪಿಯಲ್ಲಿ ಉದಯೋನ್ಮುಖ ತಾರೆಯಾಗಿದ್ದಾರೆ. ಹಾಗಾಗಿ ಬಿಜೆಪಿಗೆ ಹೋಗುವುದು ಸೂಕ್ತವಲ್ಲ.

ಬಿಆರ್‌ಎಸ್ ದುರ್ಬಲವಾಗಿರುವ ಖಮ್ಮಂನಲ್ಲಿ ರೆಡ್ಡಿ ಪ್ರಬಲ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಅವರು 2014ರಲ್ಲಿ ವೈಎಸ್‌ಆರ್‌ಸಿಪಿ ಸಂಸದರಾಗಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮೂರು ಎಂಎಲ್‌ಎ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡಿದರು. ಆದರೆ 2018ರ ಚುನಾವಣೆಯಲ್ಲಿ ಸಚಿವ ಪುವ್ವಾಡ ಅಜಯ್ ಕುಮಾರ್ ಅವರನ್ನು ಸೋಲಿಸಲು ಅವರು ಕೆಲಸ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಇದಾದ ನಂತರ ಅವರಿಗೆ ಸಂಸದ ಟಿಕೆಟ್ ನಿರಾಕರಿಸಲಾಗಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಸುಳಿವು ನೀಡುತ್ತಿರುವ ಬಿಎಸ್‌ಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...