Homeಮುಖಪುಟದೇಶದಲ್ಲಿ ಏನಾಗುತ್ತಿದೆ ಎಂದು ತಿಳಿಯಲು ಮಧ್ಯಪ್ರದೇಶದ ಚುನಾವಣಾ ಪ್ರವಾಸದ ಬದಲು ಮಣಿಪುರಕ್ಕೆ ಹೋಗಿ: ಮೋದಿಗೆ ಖೇರಾ...

ದೇಶದಲ್ಲಿ ಏನಾಗುತ್ತಿದೆ ಎಂದು ತಿಳಿಯಲು ಮಧ್ಯಪ್ರದೇಶದ ಚುನಾವಣಾ ಪ್ರವಾಸದ ಬದಲು ಮಣಿಪುರಕ್ಕೆ ಹೋಗಿ: ಮೋದಿಗೆ ಖೇರಾ ಸಲಹೆ

- Advertisement -
- Advertisement -

ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ಸೋಮವಾರ ದೇಶಕ್ಕೆ ಆಗಮಿಸುತ್ತಿದ್ದಂತೆ ಪ್ರಧಾನಿ ಮೋದಿಯವರ ‘ದೇಶ್ ಮೇ ಕ್ಯಾ ಚಲ್ ರಹಾ ಹೈ’ ಪ್ರಶ್ನೆ ಮಾಡಿದ್ದರು. ಮೋದಿ ಅವರ ಈ ಪ್ರಶ್ನೆಗೆ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಉತ್ತರಿಸುವ ವೀಡಿಯೊವನ್ನು ಮಂಗಳವಾರ ಬಿಡುಗಡೆ ಮಾಡಿದ್ದಾರೆ. ”ಭಾರತದಲ್ಲಿ ಏನಾಗುತ್ತಿದೆ ಎಂದು ತಿಳಿಯಬೇಕಾದರೆ ಮಧ್ಯಪ್ರದೇಶದ ಚುನಾವಣಾ ಪ್ರವಾಸದ ಬದಲು ಮಣಿಪುರಕ್ಕೆ ಹೋಗಿ” ಎಂದು ಪವನ್ ಖೇರಾ ವಿಡಿಯೋದಲ್ಲಿ ಹೇಳಿದ್ದಾರೆ.

”ಮಣಿಪುರ ಹೊತ್ತಿ ಉರಿಯುತ್ತಿದೆ. ಬಾಲಸೋರ್ ಟ್ರೈನ್ ಅಪಘಾತದ ಹೊಣೆಯನ್ನು ಮುಸ್ಲಿಂ ಸಮುದಾಯದ ಮೇಲೆ ಹೊರಿಸಲು ನಿಮ್ಮ ಐಟಿ ಸೆಲ್ ಪ್ರಯತ್ನಿಸುತ್ತಿದೆ… ಪತ್ರಕರ್ತೆ ಸಬ್ರಿನಾ ಸಿದ್ದಿಕಿ ಅವರು ನಿಮಗೆ ಪ್ರಶ್ನೆ ಕೇಳಿದ ನಂತರ ಅವರನ್ನು ಟ್ರೋಲ್ ಮಾಡಿದವರನ್ನು ಶ್ವೇತಭವನ ಖಂಡಿಸಿದೆ” ಎಂದು ಪವನ್ ಖೇರಾ ಹೇಳಿದ್ದಾರೆ.

ಸೋಮವಾರ, ಪ್ರಧಾನಿ ಮೋದಿ ತಮ್ಮ ಆರು ದಿನಗಳ ಯುಎಸ್ ಮತ್ತು ಈಜಿಪ್ಟ್ ಪ್ರವಾಸವನ್ನು ಮುಗಿಸಿ ಭಾರತಕ್ಕೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಅವರನ್ನು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಮತ್ತು ಇತರ ಬಿಜೆಪಿ ನಾಯಕರು ಬರಮಾಡಿಕೊಂಡರು. ಈ ವೇಳೆ ಭಾರತದಲ್ಲಿ ಏನಾಗುತ್ತಿದೆ ಎಂದು ಪ್ರಧಾನಿ ಮೋದಿ ನಡ್ಡಾ ಅವರನ್ನು ವಿಚಾರಿಸಿದರು ಎಂದು ವರದಿಯಾಗಿದೆ.

ಮೋದಿ ಪ್ರಶ್ನೆಗೆ ಉತ್ತರಿಸಿದ ನಡ್ಡಾ, ”ತಮ್ಮ ಒಂಬತ್ತು ವರ್ಷಗಳ ಆಡಳಿತ ಅವಧಿಯ ರಿಪೋರ್ಟ್ ಕಾರ್ಡ್ಅನ್ನು ಪಕ್ಷದ ನಾಯಕರು ಜನರಿಗೆ ತಲುಪಿಸುತ್ತಿದ್ದಾರೆ ಮತ್ತು ದೇಶದ ಜನರು ಸಂತೋಷವಾಗಿದ್ದಾರೆ” ಎಂದು ಹೇಳಿರುವುದಾಗಿ ಬಿಜೆಪಿ ಸಂಸದ ಮನೋಜ್ ತಿವಾರಿ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: ಮೋದಿಗೆ ಪ್ರಶ್ನೆ ಮಾಡಿದ್ದ ಪತ್ರಕರ್ತೆಗೆ ಹಿಂದುತ್ವವಾದಿಗಳಿಂದ ನಿಂದನೆ; ಅಮೆರಿಕ ಶ್ವೇತಭವನದಿಂದ ಖಂಡನೆ

ಮೋದಿಗೆ ಪ್ರಶ್ನೆ ಮಾಡಿದ ಪತ್ರಕರ್ತೆಗೆ ಹಿಂದುತ್ವದವಾದಿಗಳಿಂದ ನಿಂದನೆ

ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿಯ ಸಂದರ್ಭದಲ್ಲಿ ಭಾರತದಲ್ಲಿ ಅಲ್ಪಸಂಖ್ಯಾತರ ತಾರತಮ್ಯದ ಕುರಿತು ವಾಲ್ ಸ್ಟ್ರೀಟ್ ಜರ್ನಲ್‌ನ ಶ್ವೇತಭವನದ ವರದಿಗಾರ್ತಿ ಸಬ್ರಿನಾ ಸಿದ್ದಿಕಿ ಅವರು ಪ್ರಶ್ನೆಯನ್ನು ಕೇಳಿದ್ದರು. ಆ ಬಳಿಕ ಅವರ ಮೇಲೆ ಹಿಂದುತ್ವದವಾದಿಗಳು, ಬಿಜೆಪಿ ಸದಸ್ಯರು ಟ್ವಿಟರ್‌ನಲ್ಲಿ ದಾಳಿ ನಡೆಸಿದರು. ಇದನ್ನು ಅಮೆರಿಕ ಶ್ವೇತಭವನ ಖಂಡಿಸಿದೆ.

ಸಬ್ರಿನಾ ಸಿದ್ದಿಕಿ ಮೋದಿಯವರನ್ನು ಕೇಳಿದ ಪ್ರಶ್ನೆ:

”ಭಾರತವು ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ಎಂದು ದೀರ್ಘಕಾಲ ಹೆಮ್ಮೆಪಡುತ್ತಿದೆ, ಆದರೆ ನಿಮ್ಮ ಸರ್ಕಾರವು ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ತಾರತಮ್ಯ ಮಾಡಿದೆ ಮತ್ತು ಸರ್ಕಾರದ ವಿರುದ್ಧ ಟೀಕೆ ಮಾಡುವವರನ್ನು ಮೌನಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಅನೇಕ ಮಾನವ ಹಕ್ಕುಗಳ ಗುಂಪುಗಳು ಹೇಳಿವೆ. ನಿಮ್ಮ ದೇಶದಲ್ಲಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ಹಕ್ಕುಗಳನ್ನು ಸುಧಾರಿಸಲು ಮತ್ತು ಎತ್ತಿಹಿಡಿಯಲು ನೀವು ಮತ್ತು ನಿಮ್ಮ ಸರ್ಕಾರವು ಯಾವ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧರಿದ್ದೀರಿ?” ಎಂದು ಪ್ರಶ್ನೆ ಮಾಡಿದ್ದರು.

ಭಾರತದಲ್ಲಿ ಮೋದಿಯವರು ಪ್ರಧಾನಿಯಾದ ಅವಧಿಯಲ್ಲಿ ಅಲ್ಪಸಂಖ್ಯಾತರ ಮೇಲೆ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪತ್ರಕರ್ತೆ ಸಬ್ರಿನಾ ಸಿದ್ದಿಕಿ ಆರೋಪ ಮಾಡಿದರು.

ಪತ್ರಕರ್ತೆ ಮೋದಿಗೆ ಪ್ರಶ್ನೆ ಕೇಳಿದ ಕೆಲವೇ ಗಂಟೆಗಳಲ್ಲಿ ಹಿಂದುತ್ವಾದಿಗಳು ಹಾಗೂ ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ನೇತೃತ್ವದಲ್ಲಿ ಪತ್ರಕರ್ತೆ ಸಿದ್ದಿಕಿ ಅವರ ಮೇಲೆ ಆನ್‌ಲೈನ್ ದಾಳಿ ನಡೆಯಿತು. ”ಸಬ್ರಿನಾ ಸಿದ್ದಿಕಿ ಮುಸ್ಲಿಂ ಸಮುದಾಯದವಳಾಗಿದ್ದು, ಪಾಕಿಸ್ತಾನದೊಂದಿಗಿನ ಸಂಪರ್ಕವನ್ನು ಹೊಂದಿದ್ದಾಳೆ. ಅವರು ಟೂಲ್‌ಕಿಟ್ ಗ್ಯಾಂಗ್‌ನ ಭಾಗವಾಗಿದ್ದಾರೆ” ಎಂದು ಮಾಳವಿಯ ಟ್ವೀಟ್ ಮಾಡಿದರು.

ಇನ್ನೂ ಕೆಲವು ಹಿಂದುತ್ವವಾದಿಗಳು ಸಿದ್ದಿಕಿ ಅವರನ್ನು ‘ಪಾಕಿಸ್ತಾನಿ ಇಸ್ಲಾಮಿಸ್ಟ್’ ಎಂದು ಲೇಬಲ್ ಮಾಡಿದರು. ಈ ಪ್ರಶ್ನೆಯನ್ನು ಮೋದಿಯ ಮುಂದೆ ಕೇಳಲು ಆಕೆಗೆ ಉದ್ಯೋಗದಾತ ಅವಕಾಶ ನೀಡುವ ಪಿತೂರಿ ಎಂದಿದ್ದಾರೆ. ”ಅವಳು ಭಾರತದ ಮೇಲೆ ಮಾತ್ರ ದಾಳಿ ಮಾಡುತ್ತಾಳೆ. ದ್ವೇಷವು ಪಾಕಿಸ್ತಾನಿಗಳ ಡಿಎನ್‌ಎಯಲ್ಲಿದೆ” ಎಂದು ಟ್ವೀಟ್ ಮಾಡಿದ್ದಾರೆ.

”ಭಾರತದಲ್ಲಿ ಮುಸ್ಲಿಮರ ಮೇಲಿನ ಕಿರುಕುಳವನ್ನು ಆರೋಪಿಸಿದ ಪತ್ರಕರ್ತೆ ಸಬ್ರಿನಾ ಸಿದ್ದಿಕ್ ಬೇರೆ ಯಾರೂ ಅಲ್ಲ … ಪಾಕಿಸ್ತಾನಿ ಪೋಷಕರ ಮಗಳು” ಎಂದು ಟ್ವೀಟ್ ಮಾಡಿದ್ದಾರೆ.

ತನ್ನನ್ನು ‘ಭಾರತ ವಿರೋಧಿ’ ಎಂದು ಕರೆಯುವ ಆನ್‌ಲೈನ್ ದಾಳಿಗೆ ಸಿದ್ದಿಕಿ ಪ್ರತ್ಯತ್ತರವಾಗಿ ಟ್ವೀಟ್ ಮಾಡಿದ್ದಾರೆ. ತನ್ನ ತಂದೆಯೊಂದಿಗೆ ಭಾರತೀಯ ಕ್ರಿಕೆಟ್ ತಂಡವನ್ನು ಬೆಂಬಲಿಸುತ್ತಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ”ಕೆಲವರು ನನ್ನ ವೈಯಕ್ತಿಕ ಹಿನ್ನೆಲೆಯನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ. ಹಾಗಾಗಿ ಸಂಪೂರ್ಣ ಚಿತ್ರವನ್ನು ಒದಗಿಸುವುದು ಸರಿ ಎನಿಸುತ್ತದೆ” ಎಂದು ಅವರು ಟ್ವಿಟರ್‌ನಲ್ಲಿ ಬರೆದಿದ್ದರು.

ಇದಾದ ಬಳಿಕ ಅಮೆರಿಕ ಶ್ವೇತಭವನವು ಪತ್ರಕರ್ತೆಯ ಬೆಂಬಲಕ್ಕೆ ನಿಂತು, ”ಇದು ಸ್ವೀಕಾರಾರ್ಹವಲ್ಲ ಮತ್ತು ಯಾವುದೇ ಸಂದರ್ಭದಲ್ಲೂ ಪತ್ರಕರ್ತರಿಗೆ ಯಾವುದೇ ಕಿರುಕುಳ ನೀಡುವುದನ್ನು ನಾವು ಸಂಪೂರ್ಣವಾಗಿ ಖಂಡಿಸುತ್ತೇವೆ. ಅದು … ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಮತ್ತು ಇದು ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿದೆ …” ಎಂದು ಹೇಳುವ ಮೂಲಕ ಹಿಂದುತ್ವವಾದಿಗಳ ಮತ್ತು ಬಿಜೆಪಿ ಸದಸ್ಯರ ದಾಳಿಯನ್ನು ಖಂಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...