Homeಕರ್ನಾಟಕಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಮೇಲೆ ಅವ್ಯವ್ಯಹಾರಗಳ ಆರೋಪ: ತನಿಖೆಗೆ ಆದೇಶ

ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಮೇಲೆ ಅವ್ಯವ್ಯಹಾರಗಳ ಆರೋಪ: ತನಿಖೆಗೆ ಆದೇಶ

ಸಂಘದ ಯಾವುದೇ ಸಭೆಗಳಲ್ಲಿ ನಿರ್ಣಯ ಮಾಡದೇ 35.02 ಲಕ್ಷ ರೂ ಹಣ ವ್ಯಯಿಸಿ ಕಿಯಾ ಕಾರ್ನಿವಾಲ್ ಎಂಬ ಐಷರಾಮಿ ಕಾರು ಖರೀದಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

- Advertisement -
- Advertisement -

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅವ್ಯವಹಾರ, ಭ್ರಷ್ಟಾಚಾರ, ಹಣ ದುರುಪಯೋಗ ಹಾಗೂ ಇತರ ಚಟುವಟಿಕೆಗಳ ವಿಚಾರಣೆ ನಡೆಸಿ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕೆಂದು ಸಹಕಾರ ಇಲಾಖೆಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

ವಾರ್ಷಿಕ ರೂ 20 ಕೋಟಿಗೂ ಅಧಿಕ ವಹಿವಾಟು ನಡೆಸುವ, ರಾಜ್ಯದ 5 ಲಕ್ಷಕ್ಕೂ ಹೆಚ್ಚು ಎಲ್ಲಾ ವೃಂದದ ರಾಜ್ಯ ಸರಕಾರಿ ನೌಕರರು ಸದಸ್ಯರಾಗಿರುವ ಮತ್ತು ಕರ್ನಾಟಕ ಸರಕಾರದಿಂದ ಪ್ರತಿ ವರ್ಷ ಕೋಟ್ಯಾಂತರ ರೂ ಸಹಾಯಾನುದಾನ ಪಡೆಯುತ್ತಿರುವ ಕರ್ನಾಟಕ ಸಂಘಗಳ ನೊಂದಣಿ ಅದಿನಿಯಮ 1960 ರಡಿ ನೊಂದಾಯಿತ ಹಾಗು ಸರಕಾರದಿಂದ ಮಾನ್ಯತೆ ಪಡೆದ ಸಂಘ ಆಗಿರುವ, ‘ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು’ ಸಂಘವು, ಆದಾಯ ತೆರಿಗೆ ಕಾಯ್ದೆ 1961, ಕರ್ನಾಟಕ ಮುನಿಸಿಪಲ್ ಕಾಯ್ದೆ 1964, ಭಾರತೀಯ ದಂಡ ಸಂಹಿತೆ 1860, ಕರ್ನಾಟಕ ಸಂಘಗಳ ನೊಂದಣಿ ಆದಿನಿಯಮ 1960, ಕರ್ನಾಟಕ ನಾಗರೀಕ ಸೇವಾ ನಿಯಮಗಳು, ಸಂಘದ ಬೈಲಾ ನಿಯಮ ಉಲ್ಲಂಘಿಸಿ ತೆರಿಗೆಗಳ್ಳತನ ದಂಥಹ ಗಂಭೀರ ಸ್ವರೂಪದ ಅರ್ಥಿಕ ಅಪರಾಧಗಳು, ಭ್ರಷ್ಟಾಚಾರ, ಹಣ ದುರುಪಯೋಗ, ವಂಚನೆ, ಅವ್ಯವಸ್ಥಿತ ವ್ಯವಸ್ಥಾಪನೆ & ಕಾರ್ಯ ನಿರ್ವಹಣೆಯಂಥಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ನಿರತವಾಗಿದೆ ಎಂದು ಐವರು ಸರ್ಕಾರಿ ನೌಕರರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಈ ತಿಂಗಳ ಆರಂಭದಲ್ಲಿ ದೂರು ನೀಡಿದ್ದರು.

ಈ ಹಿಂದೆಯೇ ಸಂಘದ ಸದಸ್ಯರು, ಪದಾಧಿಕಾರಿಗಳು ಸೂಕ್ತ ದಾಖಲೆಗಳೊಂದಿಗೆ ಸಂಘಗಳ ನೊಂದಣಾಧಿಕಾರಿಗಳು, ನಾಲ್ಕನೆ ವಲಯ, ಬೆಂಗಳೂರು ನಗರ ಜಿಲ್ಲೆ, ಮಲ್ಲೇಶ್ವರಂ, ಬೆಂಗಳೂರು ಇವರಿಗೆ ದಿನಾಂಕ 24.10.2020, 30.12.2020, 24/02/2022 ಮತ್ತು ವಿವಿದ ದಿನಾಂಕಗಳಲ್ಲಿ ಈ ಬಗ್ಗೆ ದೂರು ಸಲ್ಲಿಸಿ ಶಾಸನಾತ್ಮಕ ವಿಚಾರಣೆ ಜರುಗಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಕೋರಲಾಗಿದ್ದರೂ ಯಾವುದೇ ಕ್ರಮ ಆಗಿರುವುದಿಲ್ಲ. ಸರಕಾರದ ವಿವಿಧ ಪ್ರಾಧಿಕಾರಿಗಳಿಗೆ ಸಲ್ಲಿಸಿದ ದೂರಿಗೂ ಕ್ರಮ ಆಗಿರುವುದಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹೀಗಾಗಿ ಸಂಘದಲ್ಲಿನ ಕಾನೂನು ಬಾಹಿರ ಚಟುವಟಿಕೆಗಳು, ಅರ್ಥಿಕ ಅಪರಾಧಗಳು, ಅಪ್ರಜಾಸತ್ತಾತ್ಮಕ, ನಿರಂಕುಶಾಡಳಿತ ಮತ್ತು  ಅವ್ಯವಸ್ಥಿತ ಕಾರ್ಯ ನಿರ್ವಹಣೆ ಮುಂದುವರೆದಿದೆ. ಅರ್ಥಿಕ ಅಪರಾಧ, ಭಷ್ಟಾಚಾರ, ಹಣ ದುರುಪಯೋಗ, ವಂಚನೆ ಮೂಲಕ ಸರಕಾರದ ಬೊಕ್ಕಸಕ್ಕೆ ಮತ್ತು ಸಂಘಕ್ಕೆ ಹಾನಿ ಉಂಟು ಮಾಡಿದ್ದಲ್ಲದೇ, ಖೊಟ್ಟಿ ದಾಖಲೆ ಸೃಷ್ಟಿಸಿ ಸರಕಾರಕ್ಕೆ ನೀಡಿದ ಸುಳ್ಳು ಮಾಹಿತಿ ಆಧರಿಸಿ ಹೊರಡಿಸಲ್ಪಟ್ಟ ಸರಕಾರಿ ಆದೇಶದಿಂದ ರಾಜ್ಯದ 3 ಲಕ್ಷಕ್ಕೂ ಹೆಚ್ಚಿನ ಸಂಘದ ಸದಸ್ಯರಿಗೆ ಪ್ರತಿ ವರ್ಷ 3 ಕೋಟಿಗೂ ಅಧಿಕ ಅರ್ಥಿಕ ನಷ್ಟ ಉಂಟು ಮಾಡಿರುವ ರಾಜ್ಯಾಧ್ಯಕ್ಷರ ವಿರುದ್ಧ ಸೂಕ್ತ ಕಾನೂನುಗಳಡಿ ಕ್ರಮ ಕೈಗೊಂಡು ಸದಸ್ಯರ ಸಾಮಾನ್ಯ ಹಿತಾಸಕ್ತಿ ಕಾಪಾಡಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ. ಅದರೊಟ್ಟಿಗೆ ಮೇಲ್ನೋಟಕ್ಕೆ ಸಾಬೀತಾಗುವಂಥಹ 5 ಪ್ರಮುಖ ಸಾಕ್ಷ್ಯ ಪುರಾವೆಗಳನ್ನು ದೂರಿನೊಂದಿಗೆ ಲಗತ್ತಿಸಲಾಗಿದೆ.

ಸಂಘದ ಅಧ್ಯಕ್ಷರು ಸಂಘದ ಸದಸ್ಯರಲ್ಲದವರಿಂದ ರೂ 83 ಲಕ್ಷಕ್ಕೂ ಅಧಿಕ ಹಣವನ್ನು ಜಾಹೀರಾತು ರೂಪದಲ್ಲಿ ಸಂಗ್ರಹಿಸಿದ್ದಾರೆ. ಆದರೆ ಆ ಹಣಕ್ಕೆ ಆದಾಯ ತೆರಿಗೆ ಪಾವತಿಸಿಲ್ಲ. ಸರ್ಕಾರದಿಂದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 2 ಕೋಟಿ ರೂ ಅನುದಾನ ಪಡೆಯಲಾಗಿದೆ ಮತ್ತು ಜಾಹೀರಾತಿನಿಂದ 1 ಕೋಟಿ ರೂ ಸಂಗ್ರಹಿಸಲಾಗಿದೆ. ಆದರೆ ಸಂಘದ ಖಾತೆಗೆ 55,95,000 ರೂ ಗಳನ್ನು ಮಾತ್ರ ಹಾಕಿದ್ದು ಉಳಿದ ಹಣವನ್ನು ಹಾಕಿಲ್ಲ. ಅಲ್ಲದೇ ಸಂಘದ ಯಾವುದೇ ಸಭೆಗಳಲ್ಲಿ ನಿರ್ಣಯ ಮಾಡದೇ 35.02 ಲಕ್ಷ ರೂ ಹಣ ವ್ಯಯಿಸಿ ಕಿಯಾ ಕಾರ್ನಿವಾಲ್ ಎಂಬ ಐಷರಾಮಿ ಕಾರು ಖರೀದಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಖೊಟ್ಟಿ ದಾಖಲೆ ಸೃಷ್ಟಿಸಿ ಸರ್ಕಾರದಿಂದ ಸದಸ್ಯರ ಸದಸ್ಯತ್ವ ಶುಲ್ಕವನ್ನು 100 ರೂ ನಿಂದ 200 ರೂಗೆ ಏರಿಸುವಂತೆ ಆದೇಶ ಹೊರಡಿಸಲಾಗಿದೆ. ಆ ಮೂಲಕ ಸರ್ವಸದಸ್ಯರ ಮಹಾಸಭೆ ನಡೆಸದೇ ಸದಸ್ಯತ್ವ ಶುಲ್ಕ ಹೆಚ್ಚಿಸುವ ಮೂಲಕ ಸಂಘದ ಬೈಲಾವನ್ನು ಉಲ್ಲಂಘಿಸಲಾಗಿದೆ. ಸಂಘದ ಅಧ್ಯಕ್ಷರಿಗೆ ಶಿವಮೊಗ್ಗದಲ್ಲಿ ವಾಸಕ್ಕೆ ಮನೆ ಪಡೆದಿದ್ದರೂ ಸಹ ಬೆಂಗಳೂರಿನಲ್ಲಿ ಸರ್ಕಾರಿ ವಸತಿಗೃಹದಲ್ಲಿನ ಎರಡು ಮನೆಗಳನ್ನು ಒಂದೆಂದು ತೋರಿಸಿ ಬಾಡಿಗೆಗೆ ಪಡೆಯಲಾಗಿದೆ. ಇದಕ್ಕೆ ಸಂಘದಿಂದಲೇ ಬಾಡಿಗೆ ಕಟ್ಟಲಾಗುತ್ತಿದೆ. ಈ ಮೂಲಕ ಕಾನೂನು ಉಲ್ಲಂಘಿಸಲಾಗಿದೆ. ಅಲ್ಲದೇ ಕೋವಿಡ್ ಸಾಂಕ್ರಾಮಿಕ ಇದ್ದಾಗಲೂ ಕಾನೂನುಬಾಹಿರವಾಗಿ 300ಕ್ಕೂ ಅಧಿಕ ಸಂಘದ ಪರಿಷತ್ ಸದಸ್ಯರು ಸಭೆ ಸೇರಿ ಬೈಲಾಗಿ ತಿದ್ದುಪಡಿ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್ ಷಡಾಕ್ಷರಿಯವರ ವಿರುದ್ಧ ಈ ರೀತಿಯ ಆರೋಪಗಳು ಬಂದಿರುವ ಹಿನ್ನೆಲೆಯಲ್ಲಿ ಸಹಕಾರ ಸಂಘಗಳ ಉಪ ನಿಬಂಧಕರು ಮತ್ತು ಸಂಘಗಳ ಜಿಲ್ಲಾ ನೊಂದಣಾಧಿಕಾರಿಗಳು ತನಿಖೆ ನಡೆಸಬೇಕೆಂದು ಜೂನ್ 20 ರಂದು ಸಹಕಾರ ಇಲಾಖೆಯ ಅಧೀನ ಕಾರ್ಯದರ್ಶಿ ರಾಘವನ್ ಆರ್‌.ವಿ ಆದೇಶಿಸಿದ್ದಾರೆ.

ಕಳೆದ ತಿಂಗಳು ಆರ್‌ಟಿಐ ಕಾರ್ಯಕರ್ತನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಷಡಾಕ್ಷರಿಯವರ ವಿರುದ್ಧ ಸಾಗದಲ್ಲಿ ಎಫ್‌ಐಆರ್ ದಾಖಲಾಗಿದೆ. ಆ ಬೆನ್ನಲ್ಲೇ ಅವರ ಮೇಲೆ ಭ್ರಷ್ಟಾಚಾರದ ತನಿಖೆಗೆ ಆದೇಶ ನೀಡಲಾಗಿದೆ.

ಇದನ್ನೂ ಓದಿ: ಮರುಕಳಿಸಿದ ಸರ್ವಾಧಿಪತ್ಯದ ಅಪಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...