Homeಕರ್ನಾಟಕಬೆಂಗಳೂರು-ಧಾರವಾಡ 'ವಂದೇ ಭಾರತ್' ಎಕ್ಸ್‌ಪ್ರೆಸ್ ರೈಲು ಪ್ರಯಾಣ ದರ ದುಬಾರಿ: ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ವಿರೋಧ

ಬೆಂಗಳೂರು-ಧಾರವಾಡ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲು ಪ್ರಯಾಣ ದರ ದುಬಾರಿ: ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ವಿರೋಧ

- Advertisement -
- Advertisement -

ಬೆಂಗಳೂರು-ಧಾರವಾಡ ನಡುವೆ ಸಂಚರಿಸಲಿರುವ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜೂನ್ 27ರಂದು) ಚಾಲನೆ ನೀಡಿದ್ದಾರೆ. ಈ ರೈಲಿನ ಪ್ರಯಾಣ ದರ ದುಬಾರಿಯಾಗಿದ್ದು, ರಾಜ್ಯದ ಸಾಮಾನ್ಯ ಜನರು ಈ ರೈಲಿನಿಂದ ದೂರ ಉಳಿಯಬೇಕಾದ ಅನಿವಾರ್ಯತೆ ಇದೆ ಎನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಧಾರವಾಡದಿಂದ ಹೊರಡಲಿರುವ ‘ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಜೂನ್ 27ರಂದು ಬೆಳಿಗ್ಗೆ 10ಕ್ಕೆ ವಿಡಿಯೊ ಸಂವಾದದ ಮೂಲಕ ಚಾಲನೆ ನೀಡಲಿದರು. ಉದ್ಘಾಟನೆಯ ದಿನದಂದು ಧಾರವಾಡದಿಂದ ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ತಲುಪುವ ನಡುವೆ 14 ರೈಲು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ. ಸಂಜೆ 5.05ಕ್ಕೆ ಬೆಂಗಳೂರಿಗೆ ಬರುವುದರಿಂದ ಮತ್ತೆ ಧಾರವಾಡಕ್ಕೆ ಅಂದು ಹಿಂದಿರುಗುವುದಿಲ್ಲ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ದೇಶದ ವಿವಿಧೆಡೆ ಐದು ‘ವಂದೇ ಭಾರತ್’ ರೈಲುಗಳಿಗೆ ಅಂದು ಏಕಕಾಲಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಬೆಳಗ್ಗೆ 5.45 ಕ್ಕೆ ಹೊರಡಲಿದ್ದು, ಮಧ್ಯಾಹ್ನ 12.10 ಕ್ಕೆ ಧಾರವಾಡ ತಲುಪಲಿದೆ. ಧಾರವಾಡದಿಂದ ಮಧ್ಯಾಹ್ನ 1.15ಕ್ಕೆ ಹೊರಟು ರಾತ್ರಿ 7.45ಕ್ಕೆ ಬೆಂಗಳೂರು ತಲುಪಲಿದೆ.

ಬೆಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡ ನಡುವಿನ ಪ್ರಯಾಣದ ಸಮಯ ಸರಿಸುಮಾರು 6 ಗಂಟೆ 30 ನಿಮಿಷಗಳು. ಈ ಹೊಸ ರೈಲು ಮಂಗಳವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಕಾರ್ಯನಿರ್ವಹಿಸುತ್ತದೆ.

ಬೆಂಗಳೂರು-ಧಾರವಾಡ ಸಂಚರಿಸುವ ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲಿನ ದರ ಪಟ್ಟಿ ನೋಡಿದರೆ ನೀವು ಶಾಕ್ ಆಗುವುದು ನಿಶ್ಚಿತ. ಎರಡು ವಿಭಾಗ, ಪ್ರತ್ಯೇಕ ದರ- ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಎಕ್ಸಿಕ್ಯೂಟಿವ್ ಚೇರ್ (EC) ಮತ್ತು AC ಚೇರ್ ಕಾರ್ (CC) ಎಂಬ ಎರಡು ವಿಭಾಗಗಳನ್ನು ಒಳಗೊಂಡಿದೆ.

ಬೆಂಗಳೂರಿನಿಂದ ಧಾರವಾಡಕ್ಕೆ ಎಕ್ಸಿಕ್ಯೂಟಿವ್ ಚೇರ್ ಟಿಕೆಟ್ ದರ ರೂ. 2010 ಆದರೆ ಚೇರ್ ಕಾರ್ ಟಿಕೆಟ್ ಬೆಲೆ ರೂ. 1165. ಆಗಿದೆ.

ಧಾರವಾಡದಿಂದ ಬೆಂಗಳೂರಿಗೆ ಎಕ್ಸಿಕ್ಯೂಟಿವ್ ಚೇರ್ ಟಿಕೆಟ್ ದರ ರೂ. 2440 ಆದರೆ AC ಚೇರ್ ಕಾರ್ ಟಿಕೆಟ್ ದರ ರೂ. 1330. ಆಗಿದೆ.

ಧಾರವಾಡ- ಬೆಂಗಳೂರು ದರ ತುಟ್ಟಿ ಏಕೆ?

ಧಾರವಾಡ – ಬೆಂಗಳೂರು ಪ್ರಯಾಣಿಕರಿಗೆ ತಮ್ಮ ಪ್ರಯಾಣದ ಸಮಯದಲ್ಲಿ ತಿಂಡಿ, ಊಟವನ್ನು ನೀಡಲಾಗುತ್ತದೆ. ಹೀಗಾಗಿ ಧಾರವಾಡದಿಂದ ಬೆಂಗಳೂರಿಗೆ ಆಗಮಿಸುವ ಟಿಕೆಟ್ ದರ ಹೆಚ್ಚಾಗಿದೆ. ಆದರೆ ಬೆಂಗಳೂರು – ಧಾರವಾಡ ಪ್ರಯಾಣಿಕರಿಗೆ ಉಪಹಾರ ಮತ್ತು ತಿಂಡಿ ಮಾತ್ರ ಸಿಗುತ್ತದೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಪಕ್ಕದ ಯಶವಂತಪುರ ರೈಲು ನಿಲ್ದಾಣಕ್ಕೆ ಎಕ್ಸಿಕ್ಯೂಟಿವ್ ಚೇರ್ ಟಿಕೆಟ್ ದರ ರೂ. 545 ಆದರೆ ಚೇರ್ ಕಾರ್ ಟಿಕೆಟ್ ಬೆಲೆ ರೂ.410 ಆಗಿದೆ.

ಇನ್ನು ಧಾರವಾಡದಿಂದ ಪಕ್ಕದ ಹುಬ್ಬಳ್ಳಿಗೆ ಎಕ್ಸಿಕ್ಯೂಟಿವ್ ಚೇರ್ ಟಿಕೆಟ್ ದರ ರೂ. 545 ಆದರೆ ಚೇರ್ ಕಾರ್ ಟಿಕೆಟ್ ಬೆಲೆ ರೂ.410 ಆಗಿದೆ.

 

ಧಾರವಾಡ- ಬೆಂಗಳೂರು ಪ್ರಯಾಣ ದರ ದುಬಾರಿ: ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ವಿರೋಧ

ಫೇಸ್‌ಬುಕ್‌ನಲ್ಲಿ ಧಾರವಾಡ- ಬೆಂಗಳೂರು ಪ್ರಯಾಣ ದರದ ಪಟ್ಟಿ ಹಂಚಿಕೊಂಡಿರುವ ಬಳಕೆದಾರರು, ”ಇದೇನು ರೈಲು ಸಾರಿಗೆಯೋ ಅಥವಾ ವಿಮಾನ ಸಾರಿಗೆಯೋ.?” ಎಂದು ಪ್ರಶ್ನೆ ಮಾಡಿದ್ದಾರೆ.

ಮತ್ತೋರ್ವ ಫೇಸ್‌ಬುಕ್ ಬಳಕೆದಾರರು, ”ಇಡೀ ನಮ್ಮ ದೇಶದ ಸಾರಿಗೆ ವ್ಯವಸ್ಥೆಯಲ್ಲಿ ಅತ್ಯಂತ ಕಡಿಮೆ ಸಾರಿಗೆ ಪ್ರಯಾಣ ದರ ಅಂದರೆ ರೈಲು ದರ ಇತ್ತು. ಈಗ ವಂದೆ ಮಾತರಂ ರೈಲಿನ ಹೆಸರಿನಲ್ಲಿ ಇಲ್ಲೂ ಹಗಲು ದರೋಡೆ ಶುರು ಮಾಡಿದ್ದಾರೆ ನೋಡಿ 15-20 ಕಿಮಿ ಗೆ 410 ರೂ, ಅಂದರೆ ಏನು… ಇದರಲ್ಲಿ ಬಡ ಮತ್ತು ಮಧ್ಯಮ ವರ್ಗದವರು ಪ್ರಯಾಣಿಸಲು ಸಾಧ್ಯವೇ.? #ಆಚೇದೀನ್.‌..” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದರದ ಬಗ್ಗೆ ಅಸಮಧಾನ ವ್ಯಕ್ತಪಡಿಸುವ ಮತ್ತೋರ್ವ ಫೇಸ್‌ಬುಕ್‌ ಬಳಕೆದಾರರು, ”ಇದು ವಂದೇ ಭಾರತ ಎಕ್ಸ್‌ಪ್ರೆಸ್‌ ರೈಲು…ಕಣ್ರಪ್ಪ ನಮ್ಮಂತವರಿಗಲ್ಲ.. ಮೆಜೆಸ್ಟಿಕ್ ನಿಂದ ಯಶವಂತಪುರಕ್ಕೆ 410 ರುಪಾಯಿ. ಹುಬ್ಬಳ್ಳಿಯಿಂದ ಧಾರವಾಡಕ್ಕೆ 410 ರುಪಾಯಿ. ಬೋಲೋ ಭಾರತ್ ಮಾತಾ ಕಿ.ಜೈ” ಎಂದು ಪೋಸ್ಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...