Homeಮುಖಪುಟಅನ್ನ ಭಾಗ್ಯ ಅಕ್ಕಿ ಕಡಿತ ಮಾಡಿ ಸೋತೆವು: ಬಿಜೆಪಿ ಸೋಲಿಗೆ 8 ಕಾರಣ ನೀಡಿದ ರೇಣುಕಾಚಾರ್ಯ

ಅನ್ನ ಭಾಗ್ಯ ಅಕ್ಕಿ ಕಡಿತ ಮಾಡಿ ಸೋತೆವು: ಬಿಜೆಪಿ ಸೋಲಿಗೆ 8 ಕಾರಣ ನೀಡಿದ ರೇಣುಕಾಚಾರ್ಯ

ಡಾ.ಕೆ.ಸುಧಾಕರ್​ ಕೆಲಸಕ್ಕೆ ಬಾರದ ಪ್ರಣಾಳಿಕೆ ಮಾಡಿದ್ದರು. ಅರ್ಧ ಲೀಟರ್ ಹಾಲು ಯಾರಿಗೆ ಬೇಕು ಹೇಳಿ?

- Advertisement -
- Advertisement -

ಬಡವರು ತಿನ್ನುವ ಅನ್ನ ಕಡಿತ ಮಾಡಿ, ಹೊಟ್ಟೆ ಮೇಲೆ ಹೊಡೆದರು. ಅನ್ನ ಭಾಗ್ಯ ಅಕ್ಕಿ ಕಡಿತ ಮಾಡಿದ್ದರಿಂದ ಕರ್ನಾಟಕದ ವಿಧಾನಸಭೆ ಚುನಾವಣೆ ಸೋತೆವು ಎಂದು ಹೊನ್ನಾಳಿಯ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಅಭಿಪ್ರಾಯಪಟ್ಟಿದ್ದಾರೆ.

ಕೇವಲ ರೇಣುಕಾಚಾರ್ಯ ಒಬ್ಬರು ಮಾತ್ರ ಸೋತಿಲ್ಲ. ಇಡೀ ಬಿಜೆಪಿಗೆ ಹೀನಾಯ ಸೋಲಾಗಿದೆ. ಸರ್ಕಾರದ ತಪ್ಪು ನಿರ್ಧಾರಗಳಿಂದ ಸೋಲು ಕಂಡಿದ್ದೇವೆ ಎಂದು ಬಿಜೆಪಿ ಸೋಲಿಗೆ ಎಂಟು ಕಾರಣಗಳನ್ನು ಪಟ್ಟಿ ಮಾಡಿದ್ದಾರೆ.

ನಮ್ಮ ಸರ್ಕಾರ ಎನ್‌ಪಿಎಸ್‌ ನೌಕರರ ಮನವಿ ಸ್ವೀಕರಿಸಲಿಲ್ಲ. ಅವರು ಬಂದು ನನ್ನನ್ನು ಭೇಟಿ ಮಾಡಿದ್ದರು. ನಾನು ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಲು ಅವಕಾಶ ನೀಡಲಿಲ್ಲ. ಅವರೆಲ್ಲರೂ ಬಿಜೆಪಿ ವಿರುದ್ಧ ಸಿಡಿದೆದ್ದರು.

ಒಳಮೀಸಲಾತಿ ಕೊಡಬ್ಯಾಡ್ರಿ ಅಂತ ಹೇಳಿದ್ದೆ. ಆದರೂ ಚುನಾವಣೆಗೆ ಮುಂಚೆ ಒಳಮೀಸಲಾತಿ ಘೋಷಣೆ ಮಾಡಿದರು. ಅದು ಬೇಕಿರಲಿಲ್ಲ, ಮೀಸಲಾತಿಗೆ ಕೈಹಾಕಿದರು. ಹಾಗಾಗಿ ನಮಗೆ ಉಲ್ಟಾ ಹೊಡೆಯಿತು.

ಹಿರಿಯ ನಾಯಕರಾದ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಇಳಿಸಿದ್ರು. ಹಾಗಾಗಿ ನಮಗೆ ಮುಳುವಾಯಿತು.

ಅಷ್ಟು ಮಾತ್ರವಲ್ಲದೇ 70 ಜನರಿಗೆ ಟಿಕೆಟ್ ತಪ್ಪಿಸಿದರು. ಜಗದೀಶ್ ಶೆಟ್ಟರ್, ಈಶ್ವರಪ್ಪನವರಿಗೆ ಟಿಕೆಟ್ ಕೊಡಲಿಲ್ಲ. ಇದು ನಮ್ಮ ಸೋಲಿಗೆ ಕಾರಣವಾಯಿತು. ಜಗದೀಶ್ ಶೆಟ್ಟರ್ ಸೋತಿರಬಹುದು. ಆದರೆ ಬಿಜೆಪಿಗೆ ಪೆಟ್ಟಾಗಿದೆ. ಉತ್ತರ ಕರ್ನಾಟಕದಲ್ಲಿ ಬಹಳಷ್ಟು ಜನ ಬಿಜೆಪಿ ವಿರುದ್ಧ ತಿರುಗಿಬಿದ್ದರು.

ಈಶ್ವರಪ್ಪನವರು ಕುರುಬ ಸಮಾಜದ ಏಕೈಕ ಬಿಜೆಪಿ ನಾಯಕರಾಗಿದ್ದರು. ಅವರಿಗೂ ಟಿಕೆಟ್ ಕೊಡದೇ ತಪ್ಪು ಮಾಡಲಾಯಿತು.

ಕಾಂಗ್ರೆಸ್‌ನವರು ಭರವಸೆಗಳನ್ನು ನೀಡಿದರು. ಆದರೆ ನಮ್ಮಲ್ಲಿ ಸುಧಾಕರ್‌ನನ್ನು ಪ್ರಣಾಳಿಕೆ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಲಾಯಿತು. ಬಹಳ ಜನ ಹಿರಿಯರಿದ್ರು ಸಹ ಕಡೆಗಣಿಸಲಾಯಿತು. ಡಾ.ಕೆ.ಸುಧಾಕರ್​ ಕೆಲಸಕ್ಕೆ ಬಾರದ ಪ್ರಣಾಳಿಕೆ ಮಾಡಿದ್ದರು. ಅರ್ಧ ಲೀಟರ್ ಹಾಲು ಯಾರಿಗೆ ಬೇಕು ಹೇಳಿ ಎಂದು ರೇಣುಕಾಚಾರ್ಯ ಪ್ರಶ್ನಿಸಿದರು.

ನಮ್ಮ ರಾಜ್ಯದ ಅಧ್ಯಕ್ಷರು ಅರ್ಥ ಮಾಡಿಕೊಳ್ಳಲಿಲ್ಲ. ಗೊಂದಲಕಾರಿ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಈಗಲೂ ರಾಜೀನಾಮೆ ಕೊಡ್ತಿವಿ ಅಂತಾರೆ, ಇಲ್ಲ ಅಂತಾರೆ. ಇದೆಲ್ಲವೂ ಬಿಜೆಪಿ ಸೋಲಿಗೆ ಕಾರಣ ಎಂದು ಅವರು ವಿವರಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷನಾಗಲು ನಾನು ಸಮರ್ಥನಿದ್ದೀನಿ. ಶಾಸಕನಾಗಿ, ಸಚಿವನಾಗಿ ಅನುಭವ ಇದೆ. ಅದರೆ ಒತ್ತಡ ಮಾಡೋದಿಲ್ಲ. ಸೋಮಣ್ಣ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಕೇಳಿದ್ದು ನನಗೆ ಗೊತ್ತಿಲ್ಲ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ಕಡೆ ನನಗೆ ಎಂಪಿ ಚುನಾವಣೆಗೆ ಸ್ಪರ್ಧೆ ಮಾಡಿ ಎಂದು ಒತ್ತಡ ಹಾಕುತ್ತಿದ್ದಾರೆ. ಒತ್ತಡ ಹೆಚ್ಚಾದ ಕಾರಣ ನಾನು ಕೂಡ ದಾವಣಗೆರೆ ಎಂಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಆದರೆ ಯಡಿಯೂರಪ್ಪನವರು ಜಿ.ಎಂ ಸಿದ್ದೇಶ್ವರ್ ಗೆ ಎಂಪಿ ಟಿಕೆಟ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ನಾನು ಕೂಡ ಎಂಪಿ ಚುನಾವಣೆಯ ಪ್ರಬಲ ಅಕಾಂಕ್ಷಿ. ಹಿರಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನು ಜೈಲಿಗೆ ಕಳುಹಿಸಿದರು. ಮಾಡಾಳ್ ಪುತ್ರ ಮಾಡಾಳ್ ಮಲ್ಲಿಕಾರ್ಜುನ್‌ಗೆ ಟಿಕೆಟ್ ಕೊಡಬೇಕಿತ್ತು, ಅಲ್ಲಿ ಕೂಡ ತಪ್ಪು ಮಾಡಿದ್ರು. ಈಗ ನನಗೆ ಟಿಕೆಟ್ ಕೊಡದಿದ್ದರೆ ಮತ್ತೆ ತಪ್ಪಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಮೇಲೆ ಅವ್ಯವ್ಯಹಾರಗಳ ಆರೋಪ: ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...