Homeಕರ್ನಾಟಕರಾಜ್ಯದಲ್ಲಿ ಬಿಜೆಪಿ ಸೋಲಿಗೆ ಒಳಒಪ್ಪಂದವೇ ಕಾರಣ ಎಂದ ಸದಾನಂದಗೌಡ

ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಒಳಒಪ್ಪಂದವೇ ಕಾರಣ ಎಂದ ಸದಾನಂದಗೌಡ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದರಿಂದ ನಮ್ಮ ಪಕ್ಷದ ಅಭ್ಯರ್ಥಿಗಳ ಸೋಲಿಗೆ ಕಾರಣವಾಯಿತು. ಇನ್ನು ಕೆಲವು ಕಡೆ ನಮ್ಮ ಪಕ್ಷದಲ್ಲಿ ಒಳಒಪ್ಪಂದಗಳು ನಡೆದಿವೆ ಎಂದು ಬಿಜೆಪಿ ಸಂಸದ ಡಿ ವಿ ಸದಾನಂದಗೌಡ ಹೇಳಿದ್ದಾರೆ.

ಬಿಜೆಪಿಯು ವಿಧಾನಸಭಾ ಚುನಾವಣೆಯಲ್ಲಿ ಬಹಳ ಹೀನಾಯವಾಗಿ ಸೋತ ಬಳಿಕ, ಪಕ್ಷದ ನಾಯಕರು ಜಿಲ್ಲಾ ಕೇಂದ್ರಗಳಲ್ಲಿ ಸೋಲಿನ ಪರಾಮರ್ಶೆ ನಡೆಸುತ್ತಿದ್ದಾರೆ. ಎಲ್ಲ ಕಡೆಗಳಲ್ಲೂ ಹೊಂದಾಣಿಕೆ ರಾಜಕಾರಣವೇ ಸೋಲಿಗೆ ಕಾರಣ ಎಂದು ಹೇಳಿಕೊಂಡಿದ್ದಾರೆ. ಇದೀಗ ಸದಾನಂದಗೌಡ ಕೂಡ ಅದೇ ಮಾತನ್ನು ಮುಂದುವರೆಸಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ”ಹಾಸನ ಮತ್ತು ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿರುವುದು ಎಲ್ಲರಿಗೂ ತಿಳಿದಿದೆ ಎಂದು ಹೇಳಿದರು.

”ಹೊಂದಾಣಿಕೆ ರಾಜಕಾರಣಕ್ಕೆ ಹಾಸನದಲ್ಲಿ ನಮ್ಮ ಅಭ್ಯರ್ಥಿ ಸೋಲಬೇಕಾಯಿತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮತಗಳನ್ನು ನೋಡಿದರೆ ಹೊಂದಾಣಿಕೆ ರಾಜಕಾರಣ ಅರ್ಥವಾಗುತ್ತದೆ” ಎಂದರು.

”ಸಿಟಿ ರವಿ ಚಿಕ್ಕಮಗಳೂರು ಕ್ಷೇತ್ರದಲ್ಲೂ ಈ ಹೊಂದಾಣಿಕೆ ರಾಜಕಾರಣ ನೋಡಬಹುದು. ಇಲ್ಲಿ ಜೆಡಿಎಸ್‌ ಅಧಿಕೃತವಾಗಿ ಘೋಷಣೆ ಮಾಡಿದೆ. ಇದಲ್ಲದೇ ಬೇರೆ ಬೇರೆ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ನಾಯಕರು ಅಧಿಕೃತವಾಗಿ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಇದು ಒಳ ಒಪ್ಪಂದದ ರಾಜಕಾರಣಕ್ಕೆ ಉಂಟಾದ ಸೋಲು ನಮ್ಮದು” ಎಂದು ಹೇಳಿದ್ದಾರೆ.

”ನಮ್ಮ ಪಕ್ಷದಲ್ಲಿ ಒಳಒಪ್ಪಂದ ಆಗಿಯೇ ಇಲ್ಲ ಎಂದು ಹೇಳುವುದಿಲ್ಲ. ಕೆಲವರು ವೈಯಕ್ತಿಕ ದ್ವೇಷಕ್ಕಾಗಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಅಂತವರ ಬಗ್ಗೆ ಈಗಾಗಲೇ ಪಕ್ಷ ಒಂದು ನಿರ್ಧಾರಕ್ಕೆ ಬಂದಿದೆ. ಈಗ ರಾಜ್ಯಾದ್ಯಂತ ಜಿಲ್ಲಾ ಮಟ್ಟದ ಸಭೆಗಳು ನಡೆಯುತ್ತಿವೆ. ಈ ಸಭೆಯಲ್ಲಿ ಸೋಲಿನ ಪರಾಮರ್ಶೆ ನಡೆಯುತ್ತಿದೆ. ಒಳ ಒಪ್ಪಂದ ಮಾಡಿಕೊಂಡವರ ಬಗ್ಗೆ ಪಕ್ಷ ಖಂಡಿತ ನಿರ್ಧಾರ ತೆಗೆದುಕೊಳ್ಳುತ್ತದೆ. ಸಂಘಟನೆಯಲ್ಲಿ ತಪ್ಪು ಮಾಡಿದವರನ್ನು ತಿದ್ದುವ ಕೆಲಸವನ್ನು ಮಾಡುತ್ತೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅನ್ನ ಭಾಗ್ಯ ಅಕ್ಕಿ ಕಡಿತ ಮಾಡಿ ಸೋತೆವು: ಬಿಜೆಪಿ ಸೋಲಿಗೆ 8 ಕಾರಣ ನೀಡಿದ ರೇಣುಕಾಚಾರ್ಯ

ಬಾಗಲಕೋಟೆ: ಬೊಮ್ಮಾಯಿ ಭಾಗಿಯಾಗಿದ್ದ ಬಿಜೆಪಿ ಸಭೆಯಲ್ಲಿ ಗಲಾಟೆ

ಒಳ ಒಪ್ಪಂದದಿಂದ ಜಿಲ್ಲೆಯಲ್ಲಿ ಬಿಜೆಪಿಗೆ ಸೋಲು: ಮುಖಂಡರ ಆರೋಪ

ಸೋಮವಾರ ಬಾಗಲಕೋಟೆಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿದ್ದ ವೀರಣ್ಣ ಚರಂತಿಮಠ ಸೋಲಿಗೆ ಎರಡು ಬಣಗಳು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡು ದೊಡ್ಡ ಗಲಾಟೆಯೇ ನಡೆಯಿತು.

ಜಿಲ್ಲಾ ಮುಖಂಡರ ಸಭೆಯಲ್ಲಿ ಗದ್ದಲ-ಗಲಾಟೆ ನಡೆದು ಬಿಗುವಿನ ವಾತಾವರಣ ನಿರ್ಮಾಣವಾಯಿತು. ಮಾಜಿ ಸಚಿವರಾದ ಗೋವಿಂದ್ ಕಾರಜೋಳ ಹಾಗೂ ಮುರುಗೇಶ್ ನಿರಾಣಿ ಅವರ ಎದುರೇ ಈ ಘಟನೆ ನಡೆದಿದೆ. ಬಿಜೆಪಿ ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಮುಂದಿನ ಲೋಕಸಭೆ ಚುನಾವಣೆಗೆ ಸಿದ್ಧತೆಗಾಗಿ ಮತ್ತು ಕೇಂದ್ರದ ನರೇಂದ್ರ ಮೋದಿ ಸರ್ಕಾರ 9 ವರ್ಷ ಪೂರೈಸಿದ ಸಂಭ್ರಮಾಚರಣೆಗಾಗಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಭಾಗವಹಿಸಿದ್ದರು.

ಪ್ರಮುಖರು ಸ್ಥಳಕ್ಕೆ ಆಗಮಿಸುವ ಮುನ್ನವೇ ಬಿಜೆಪಿ ಅಭ್ಯರ್ಥಿ ಸೋಲಿಗೆ ಎರಡು ಗುಂಪುಗಳು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಂಡವು. ಇದರಿಂದ ಗದ್ದಲದ ವಾತಾವರಣ ಸೃಷ್ಟಿಯಾಯಿತು.

ಬಿಜೆಪಿ ನಾಮನಿರ್ದೇಶಿತ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಬಿಜೆಪಿ ಎಂಎಲ್‌ಸಿ ಪಿಎಚ್ ಪೂಜಾರ ಬೆಂಬಲಿಗರು ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದಕ್ಕೆ ಪೂಜಾರ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದ್ದು, ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯಿತು.

ಪೂಜಾರ ಪಾಳಯದ ಕೆಲವು ಬೆಂಬಲಿಗರನ್ನು ಸಭೆಯಿಂದ ಹೊರಗಿಡುವಂತೆ ಚರಂತಿಮಠ ಬೆಂಬಲಿಗರು ಒತ್ತಾಯಿಸಿದರು. ಚರಂತಿಮಠ ಅವರೇ ಪದೇ ಪದೇ ಮನವಿ ಮಾಡಿದರೂ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಸ್ಥಳೀಯ ಮುಖಂಡರು ಮಧ್ಯಪ್ರವೇಶಿಸಿದರು ಮತ್ತು ಎರಡೂ ಬಣಗಳ ಕೆಲವು ಬೆಂಬಲಿಗರನ್ನು ಸ್ಥಳದಿಂದ ಹೊರಹೋಗುವಂತೆ ಕೇಳಲಾಯಿತು. ಸ್ವಲ್ಪ ಸಮಯದ ನಂತರ ಬೊಮ್ಮಾಯಿ ಮತ್ತು ಯತ್ನಾಳ್ ಸ್ಥಳಕ್ಕೆ ಆಗಮಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...