Homeಮುಖಪುಟಹಿಂಸಾಚಾರ ಪೀಡಿತ ಮಣಿಪುರಕ್ಕೆ ನಾಳೆ ರಾಹುಲ್ ಭೇಟಿ; ವಿವಿಧ ಸಮುದಾಯಗಳೊಂದಿಗೆ ಸಂವಾದ

ಹಿಂಸಾಚಾರ ಪೀಡಿತ ಮಣಿಪುರಕ್ಕೆ ನಾಳೆ ರಾಹುಲ್ ಭೇಟಿ; ವಿವಿಧ ಸಮುದಾಯಗಳೊಂದಿಗೆ ಸಂವಾದ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜೂನ್ 29 ಮತ್ತು 30ರಂದು ಹಿಂಸಾಚಾರದಿಂದ ಕೂಡಿರುವ ಮಣಿಪುರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷ ಮಂಗಳವಾರ ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ”ರಾಹುಲ್ ಗಾಂಧಿ ಅವರು ಮಣಿಪುರ ಭೇಟಿಯ ಸಮಯದಲ್ಲಿ ಅವರು ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ. ಇಂಫಾಲ್ ಮತ್ತು ಚುರಾಚಂದಪುರದಲ್ಲಿ ವಿವಿಧ ಸಮುದಾಯಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ” ಎಂದು ಟ್ವೀಟ್‌ ಮಾಡಿದ್ದಾರೆ.

”ಮಣಿಪುರವು ಸುಮಾರು ಎರಡು ತಿಂಗಳುಗಳಿಂದ ಹೊತ್ತಿ ಉರಿಯುತ್ತಿದೆ. ಸಮಾಜವು ಸಂಘರ್ಷದಿಂದ ಶಾಂತಿಯತ್ತ ಸಾಗಬೇಕಿದೆ. ಅದಕ್ಕೆ ಸಂತೈಸುವ ಸ್ಪರ್ಶ ಬೇಕಿದೆ. ಆ ಮೂಲಕ ಗಾಯವನ್ನು ಗುಣಪಡಿಸುವ ಅಗತ್ಯವಿದೆ. ಇದು ಮಾನವೀಯ ದುರಂತವಾಗಿದೆ. ದ್ವೇಷವಲ್ಲವನ್ನಲ್ಲ, ಪ್ರೀತಿಯನ್ನು ಶಕ್ತಿಯನ್ನಾಗಿಸುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಅವರು ಬರೆದುಕೊಂಡಿದ್ದಾರೆ.

ಮೇ 3 ರಂದು ಈಶಾನ್ಯ ರಾಜ್ಯದಲ್ಲಿ ಭುಗಿಲೆದ್ದ ಹಿಂಸಾಚಾರದಿಂದ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಮೈತಿ ಸಮುದಾಯದ ಬೇಡಿಕೆಯ ವಿರುದ್ಧ ಪ್ರತಿಭಟಿಸಲು ಗುಡ್ಡಗಾಡು ಜಿಲ್ಲೆಗಳಲ್ಲಿ ‘ಬುಡಕಟ್ಟು ಸಮುದಾಯದವರು ಒಗ್ಗಟ್ಟಿನ ಮೆರವಣಿಗೆ’ಯ ಸಂದರ್ಭದಲ್ಲಿ ಘರ್ಷಣೆಗಳು ಭುಗಿಲೆದ್ದವು.

ಈ ಜನಾಂಗೀಯ ಹಿಂಸಾಚಾರದಿಂದ ರಾಜ್ಯ ಅಕ್ಷರಶಃ ತತ್ತರಿಸಿಹೋಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಈ ವರೆಗೂ ಮಣಿಪುರಕ್ಕೆ ಭೇಟಿ ನೀಡಿಲ್ಲ, ಒಂದೇ ಒಂದು ಮಾತು ಕೂಡ ಆಡುತ್ತಿಲ್ಲ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿವೆ.

ಕೇಂದ್ರದ ಮೋದಿ ಸರ್ಕಾರ ಮತ್ತು ರಾಜ್ಯದಲ್ಲಿ ಎನ್ ಬಿರೇನ್ ಸಿಂಗ್ ನೇತೃತ್ವದ-ಬಿಜೆಪಿ ಸರ್ಕಾರದಿಂದ ಹಿಂಸಾಚಾರವನ್ನು ತಡೆಯಲು ವಿಫಲವಾಗಿದೆ ಎಂಬ ಟೀಕೆಗೆ ಗುರಿಯಾಗಿವೆ.

”ರಾಜ್ಯ ಸರ್ಕಾರವು ತನ್ನ ನೌಕರರಿಗೆ ” ನೋ ವರ್ಕ್, ನೋ ಪೇ” ನೀತಿಯನ್ನು ಜಾರಿಗೊಳಿಸಿರುವ ನಿರ್ಧಾರವು ಬಲವಂತದ ಶಾಂತಿಯನ್ನು ಸಾಧಿಸುವ “ಭಯೋತ್ಪಾದಕ ತಂತ್ರ”ವಾಗಿದೆ ಎಂದು ಬುಡಕಟ್ಟು ಗುಂಪಿನ ಉನ್ನತ ಸಂಸ್ಥೆಯಾದ ಕುಕಿ ಇನ್ಪಿ ಮಂಗಳವಾರ ಹೇಳಿದೆ.

ರಾಜ್ಯದಲ್ಲಿ ಹಿಂಸಾಚಾರದಿಂದಾಗಿ ಅನಧಿಕೃತ ರಜೆಯಲ್ಲಿರುವ ನೌಕರರ ಪಟ್ಟಿಯನ್ನು ಸಿದ್ಧಪಡಿಸುವಂತೆ ಸರ್ಕಾರ ತನ್ನ ಎಲ್ಲಾ ಇಲಾಖೆಗಳಿಗೆ ಮಂಗಳವಾರ ಸೂಚಿಸಿದೆ.

”ಅಧಿಕೃತ ರಜೆಯಿಲ್ಲದೆ ತಮ್ಮ ಕರ್ತವ್ಯಕ್ಕೆ ಹಾಜರಾಗದ ಎಲ್ಲಾ ಉದ್ಯೋಗಿಗಳಿಗೆ ಯಾವುದೇ ಕೆಲಸ ಅಥವಾ ವೇತನವನ್ನು ನೀಡಲಾಗುವುದಿಲ್ಲ ಎಂದು ಮಣಿಪುರ ಸರ್ಕಾರ ತನ್ನ ಉದ್ಯೋಗಿಗಳಿಗೆ ತಿಳಿಸಲಾಗಿದೆ” ಎಂದು ಸರ್ಕಾರ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

”ಮಣಿಪುರ ಸರ್ಕಾರದ ಸುಮಾರು ಒಂದು ಲಕ್ಷ ಉದ್ಯೋಗಿಗಳಲ್ಲಿ 65,000 ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ ಮತ್ತು ಪರಿಹಾರ ಶಿಬಿರಗಳಲ್ಲಿದ್ದಾರೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಕಿ ಇನ್ಪಿ ಪ್ರಧಾನ ಕಾರ್ಯದರ್ಶಿ ಖೈಖೋಹೌಹ್ ಗಂಗ್ಟೆ ಅವರು ಸಮುದಾಯದ ಜನರು ಇಂಫಾಲ್‌ಗೆ ಹಿಂತಿರುಗಿದರೆ ಅದು ”ಸಾವಿನ ಬಲೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರದ ಗಮನ ಬೇರೆಡೆ ಸೆಳೆಯಲು ಏಕರೂಪ ನಾಗರಿಕ ಸಂಹಿತೆ ಹೇಳಿಕೆ ನೀಡಿದ ಮೋದಿ: ಪ್ರತಿಪಕ್ಷಗಳ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...